Homeಮುಖಪುಟರಾಸಾಯನಿಕ ಹೊತ್ತ ಹಡಗಿನ ಮೇಲೆ ಇರಾನ್‌ನಿಂದ ಡ್ರೋನ್‌ ದಾಳಿ: ಗುಜರಾತ್‌ ಬಳಿ ಘಟನೆ

ರಾಸಾಯನಿಕ ಹೊತ್ತ ಹಡಗಿನ ಮೇಲೆ ಇರಾನ್‌ನಿಂದ ಡ್ರೋನ್‌ ದಾಳಿ: ಗುಜರಾತ್‌ ಬಳಿ ಘಟನೆ

- Advertisement -
- Advertisement -

ಇರಾನ್‌ನಿಂದ ಉಡಾವಣೆಯಾದ ಡ್ರೋನ್‌ ಹಿಂದೂ ಮಹಾಸಾಗರದಲ್ಲಿ ರಾಸಾಯನಿಕ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ ಎಂದು ಯುಎಸ್ ರಕ್ಷಣಾ ಇಲಾಖೆ ಆರೋಪಿಸಿದ್ದು, ಇಸ್ರೇಲ್‌- ಗಾಝಾ ಮೇಲೆ ನಡೆಸುತ್ತಿರುವ ಯುದ್ಧ ಅಪರಾಧ ಪ್ರಾದೇಶಿಕ ಉದ್ವಿಗ್ನತೆ ಮತ್ತು ಜಲ ಮಾರ್ಗಗಳಲ್ಲಿನ ಹೊಸ ಅಪಾಯವನ್ನು ಎತ್ತಿ ತೋರಿಸುತ್ತಿದೆ.

ಲೈಬೀರಿಯಾ-ಧ್ವಜವನ್ನು ಹೊಂದಿದ್ದ ಜಪಾನೀಸ್ ಒಡೆತನದ ಮತ್ತು ನೆದರ್ಲ್ಯಾಂಡ್ಸ್-ಚಾಲಿತ ರಾಸಾಯನಿಕ ಟ್ಯಾಂಕರ್ ಮೋಟಾರು ನೌಕೆ CHEM PLUTO ಮೇಲೆ ನಿನ್ನೆ ಸ್ಥಳೀಯ ಕಾಲಮಾನ ಸುಮಾರು 10 ಗಂಟೆಗೆ ಹಿಂದೂ ಮಹಾಸಾಗರದಲ್ಲಿ ಭಾರತದ ಕರಾವಳಿಯಿಂದ 200 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಡ್ರೋನ್‌ ಅಪ್ಪಳಿಸಿದೆ. ಇರಾನ್‌ ಡ್ರೋನ್‌ನ್ನು ದಾಳಿ ಮಾಡಿದೆ ಎಂದು ಅಮೆರಿಕ ಆರೋಪಿಸಿರುವ ಬಗ್ಗೆ ರಾಯಿಟರ್ಸ್‌ ವರದಿ ಮಾಡಿದೆ.

2021ರಿಂದ ವಾಣಿಜ್ಯ ಹಡಗುಗಳ ಮೇಲೆ ಇರಾನ್‌ ನಡೆಸುತ್ತಿರುವ 7ನೇ ದಾಳಿ ಇದು ಎಂದು ಅಮೆರಿಕ ಆರೋಪಿಸಿದೆ. ದಾಳಿಯ ಪರಿಣಾಮವಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಟ್ಯಾಂಕರ್‌ಗೆ ಸ್ವಲ್ಪ  ಬೆಂಕಿ ಕಾಣಿಸಿಕೊಂಡಿದೆ. ಭಾರತದ ಕರಾವಳಿಯಿಂದ ಕೇವಲ 200 ನಾಟಿಕಲ್ ಮೈಲು ದೂರದಲ್ಲಿ ಈ ಘಟನೆ ನಡೆದಿದೆ ಎಂದು ಅಮೆರಿಕ ಆರೋಪಿಸಿದೆ. ಆದರೆ ಅಮೆರಿಕದ ಆರೋಪಕ್ಕೆ ಇರಾನ್ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಭಾರತೀಯ ರಕ್ಷಣಾಧಿಕಾರಿಗಳು ಹೇಳುವುದೇನು?

ಭಾರತೀಯ ಕೋಸ್ಟ್ ಗಾರ್ಡ್ ಹಡಗು ಐಸಿಜಿಎಸ್ ವಿಕ್ರಮ್, ಡ್ರೋನ್ ದಾಳಿಯಿಂದ ಬೆಂಕಿ ಕಾಣಿಸಿಕೊಂಡ ಎಂವಿ CHEM PLUTO ಹಡಗಿನ ರಕ್ಷಣೆಗೆ ತೆರಳಿದೆ. ಪೋರಬಂದರ್ ಕರಾವಳಿಯಿಂದ 217 ನಾಟಿಕಲ್ ಮೈಲಿ ದೂರದಲ್ಲಿರುವ ಅರಬ್ಬಿ ಸಮುದ್ರದಲ್ಲಿ ಘಟನೆ ನಡೆದಿದೆ ಎಂದು ಭಾರತೀಯ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ನಾವು ಸ್ವೀಕರಿಸಿದ ಮಾಹಿತಿ ಪ್ರಕಾರ ಹಡಗಿನ ಬೆಂಕಿಯನ್ನು ನಂದಿಸಲಾಗಿದೆ ಆದರೆ ಬೆಂಕಿಯು ಹಡಗಿನ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದೆ. ಹಡಗಿನಲ್ಲಿದ್ದ ಸುಮಾರು 20 ಭಾರತೀಯರನ್ನು ಒಳಗೊಂಡಂತೆ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

20 ಭಾರತೀಯ ಮತ್ತು ಒಬ್ಬ ವಿಯೆಟ್ನಾಂ ಸಿಬ್ಬಂದಿಯನ್ನು ಹೊಂದಿರುವ ಹಡಗು ಡಿಸೆಂಬರ್ 19 ರಂದು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಹೊರಟು ಡಿ.25 ರಂದು ಮಂಗಳೂರು ಬಂದರನ್ನು ತಲುಪುವ ನಿರೀಕ್ಷೆಯಿತ್ತು ಎನ್ನಲಾಗಿದೆ.

ಅ.7ರಂದು ಇಸ್ರೇಲ್ ಮೇಲೆ ಗಾಝಾ ಮೇಲೆ ನಡೆಸುವ ಯುದ್ಧ ಅಪರಾಧದ ಮಧ್ಯೆ ಈ ಘಟನೆ ನಡೆದಿದೆ. ಇರಾನ್ ಸರ್ಕಾರ ಮತ್ತು ಯೆಮನ್‌ನಲ್ಲಿರುವ ಅದರ ಮಿತ್ರ ಪಡೆಗಳು ಗಾಝಾದ ಮೇಲೆ ಇಸ್ರೇಲ್‌ ಸರ್ಕಾರ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ಬಲವಾಗಿ ವಿರೋಧಿಸುತ್ತಿದೆ. ನಿನ್ನೆಯಷ್ಠೇ ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚಲಾಗುವುದು ಎಂದು ಇರಾನ್‌ನ ಕಮಾಂಡರ್ ಮೊಹಮ್ಮದ್ ರೆಜಾ ನಕ್ದಿ ಬೆದರಿಕೆ ಹಾಕಿದ್ದರು.

ಹೌತಿ ಗುಂಪು ಕಳೆದ ತಿಂಗಳು ಗಾಝಾದ ಮೇಲೆ ಇಸ್ರೇಲ್‌ನ ದಾಳಿಗೆ ಪ್ರತೀಕಾರವಾಗಿ ಕೆಂಪು ಸಮುದ್ರದ ಮೂಲಕ ತೆರಳುತ್ತಿದ್ದ ವ್ಯಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡಿದೆ. ಈ ದಾಳಿ ಕೆಲವು ಹಡಗುಗಳು ಮಾರ್ಗಗಳನ್ನು ಬದಲಾಯಿಸಲು ಕಾರಣವಾಗಿತ್ತು.

ಇದನ್ನು ಓದಿ: ಗಾಝಾ ಮೇಲಿನ ಯುದ್ಧ ನಿಲ್ಲಿಸದಿದ್ದರೆ ಮೆಡಿಟರೇನಿಯನ್ ಸಮುದ್ರ ಮಾರ್ಗಗಳನ್ನು ಬಂದ್‌ ಮಾಡುತ್ತೇವೆ: ಇರಾನ್ ಎಚ್ಚರಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...