Homeಮುಖಪುಟರಾಸಾಯನಿಕ ಹೊತ್ತ ಹಡಗಿನ ಮೇಲೆ ಇರಾನ್‌ನಿಂದ ಡ್ರೋನ್‌ ದಾಳಿ: ಗುಜರಾತ್‌ ಬಳಿ ಘಟನೆ

ರಾಸಾಯನಿಕ ಹೊತ್ತ ಹಡಗಿನ ಮೇಲೆ ಇರಾನ್‌ನಿಂದ ಡ್ರೋನ್‌ ದಾಳಿ: ಗುಜರಾತ್‌ ಬಳಿ ಘಟನೆ

- Advertisement -
- Advertisement -

ಇರಾನ್‌ನಿಂದ ಉಡಾವಣೆಯಾದ ಡ್ರೋನ್‌ ಹಿಂದೂ ಮಹಾಸಾಗರದಲ್ಲಿ ರಾಸಾಯನಿಕ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ ಎಂದು ಯುಎಸ್ ರಕ್ಷಣಾ ಇಲಾಖೆ ಆರೋಪಿಸಿದ್ದು, ಇಸ್ರೇಲ್‌- ಗಾಝಾ ಮೇಲೆ ನಡೆಸುತ್ತಿರುವ ಯುದ್ಧ ಅಪರಾಧ ಪ್ರಾದೇಶಿಕ ಉದ್ವಿಗ್ನತೆ ಮತ್ತು ಜಲ ಮಾರ್ಗಗಳಲ್ಲಿನ ಹೊಸ ಅಪಾಯವನ್ನು ಎತ್ತಿ ತೋರಿಸುತ್ತಿದೆ.

ಲೈಬೀರಿಯಾ-ಧ್ವಜವನ್ನು ಹೊಂದಿದ್ದ ಜಪಾನೀಸ್ ಒಡೆತನದ ಮತ್ತು ನೆದರ್ಲ್ಯಾಂಡ್ಸ್-ಚಾಲಿತ ರಾಸಾಯನಿಕ ಟ್ಯಾಂಕರ್ ಮೋಟಾರು ನೌಕೆ CHEM PLUTO ಮೇಲೆ ನಿನ್ನೆ ಸ್ಥಳೀಯ ಕಾಲಮಾನ ಸುಮಾರು 10 ಗಂಟೆಗೆ ಹಿಂದೂ ಮಹಾಸಾಗರದಲ್ಲಿ ಭಾರತದ ಕರಾವಳಿಯಿಂದ 200 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಡ್ರೋನ್‌ ಅಪ್ಪಳಿಸಿದೆ. ಇರಾನ್‌ ಡ್ರೋನ್‌ನ್ನು ದಾಳಿ ಮಾಡಿದೆ ಎಂದು ಅಮೆರಿಕ ಆರೋಪಿಸಿರುವ ಬಗ್ಗೆ ರಾಯಿಟರ್ಸ್‌ ವರದಿ ಮಾಡಿದೆ.

2021ರಿಂದ ವಾಣಿಜ್ಯ ಹಡಗುಗಳ ಮೇಲೆ ಇರಾನ್‌ ನಡೆಸುತ್ತಿರುವ 7ನೇ ದಾಳಿ ಇದು ಎಂದು ಅಮೆರಿಕ ಆರೋಪಿಸಿದೆ. ದಾಳಿಯ ಪರಿಣಾಮವಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಟ್ಯಾಂಕರ್‌ಗೆ ಸ್ವಲ್ಪ  ಬೆಂಕಿ ಕಾಣಿಸಿಕೊಂಡಿದೆ. ಭಾರತದ ಕರಾವಳಿಯಿಂದ ಕೇವಲ 200 ನಾಟಿಕಲ್ ಮೈಲು ದೂರದಲ್ಲಿ ಈ ಘಟನೆ ನಡೆದಿದೆ ಎಂದು ಅಮೆರಿಕ ಆರೋಪಿಸಿದೆ. ಆದರೆ ಅಮೆರಿಕದ ಆರೋಪಕ್ಕೆ ಇರಾನ್ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಭಾರತೀಯ ರಕ್ಷಣಾಧಿಕಾರಿಗಳು ಹೇಳುವುದೇನು?

ಭಾರತೀಯ ಕೋಸ್ಟ್ ಗಾರ್ಡ್ ಹಡಗು ಐಸಿಜಿಎಸ್ ವಿಕ್ರಮ್, ಡ್ರೋನ್ ದಾಳಿಯಿಂದ ಬೆಂಕಿ ಕಾಣಿಸಿಕೊಂಡ ಎಂವಿ CHEM PLUTO ಹಡಗಿನ ರಕ್ಷಣೆಗೆ ತೆರಳಿದೆ. ಪೋರಬಂದರ್ ಕರಾವಳಿಯಿಂದ 217 ನಾಟಿಕಲ್ ಮೈಲಿ ದೂರದಲ್ಲಿರುವ ಅರಬ್ಬಿ ಸಮುದ್ರದಲ್ಲಿ ಘಟನೆ ನಡೆದಿದೆ ಎಂದು ಭಾರತೀಯ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ನಾವು ಸ್ವೀಕರಿಸಿದ ಮಾಹಿತಿ ಪ್ರಕಾರ ಹಡಗಿನ ಬೆಂಕಿಯನ್ನು ನಂದಿಸಲಾಗಿದೆ ಆದರೆ ಬೆಂಕಿಯು ಹಡಗಿನ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದೆ. ಹಡಗಿನಲ್ಲಿದ್ದ ಸುಮಾರು 20 ಭಾರತೀಯರನ್ನು ಒಳಗೊಂಡಂತೆ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

20 ಭಾರತೀಯ ಮತ್ತು ಒಬ್ಬ ವಿಯೆಟ್ನಾಂ ಸಿಬ್ಬಂದಿಯನ್ನು ಹೊಂದಿರುವ ಹಡಗು ಡಿಸೆಂಬರ್ 19 ರಂದು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಹೊರಟು ಡಿ.25 ರಂದು ಮಂಗಳೂರು ಬಂದರನ್ನು ತಲುಪುವ ನಿರೀಕ್ಷೆಯಿತ್ತು ಎನ್ನಲಾಗಿದೆ.

ಅ.7ರಂದು ಇಸ್ರೇಲ್ ಮೇಲೆ ಗಾಝಾ ಮೇಲೆ ನಡೆಸುವ ಯುದ್ಧ ಅಪರಾಧದ ಮಧ್ಯೆ ಈ ಘಟನೆ ನಡೆದಿದೆ. ಇರಾನ್ ಸರ್ಕಾರ ಮತ್ತು ಯೆಮನ್‌ನಲ್ಲಿರುವ ಅದರ ಮಿತ್ರ ಪಡೆಗಳು ಗಾಝಾದ ಮೇಲೆ ಇಸ್ರೇಲ್‌ ಸರ್ಕಾರ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ಬಲವಾಗಿ ವಿರೋಧಿಸುತ್ತಿದೆ. ನಿನ್ನೆಯಷ್ಠೇ ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚಲಾಗುವುದು ಎಂದು ಇರಾನ್‌ನ ಕಮಾಂಡರ್ ಮೊಹಮ್ಮದ್ ರೆಜಾ ನಕ್ದಿ ಬೆದರಿಕೆ ಹಾಕಿದ್ದರು.

ಹೌತಿ ಗುಂಪು ಕಳೆದ ತಿಂಗಳು ಗಾಝಾದ ಮೇಲೆ ಇಸ್ರೇಲ್‌ನ ದಾಳಿಗೆ ಪ್ರತೀಕಾರವಾಗಿ ಕೆಂಪು ಸಮುದ್ರದ ಮೂಲಕ ತೆರಳುತ್ತಿದ್ದ ವ್ಯಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡಿದೆ. ಈ ದಾಳಿ ಕೆಲವು ಹಡಗುಗಳು ಮಾರ್ಗಗಳನ್ನು ಬದಲಾಯಿಸಲು ಕಾರಣವಾಗಿತ್ತು.

ಇದನ್ನು ಓದಿ: ಗಾಝಾ ಮೇಲಿನ ಯುದ್ಧ ನಿಲ್ಲಿಸದಿದ್ದರೆ ಮೆಡಿಟರೇನಿಯನ್ ಸಮುದ್ರ ಮಾರ್ಗಗಳನ್ನು ಬಂದ್‌ ಮಾಡುತ್ತೇವೆ: ಇರಾನ್ ಎಚ್ಚರಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...