Homeಮುಖಪುಟರಾಸಾಯನಿಕ ಹೊತ್ತ ಹಡಗಿನ ಮೇಲೆ ಇರಾನ್‌ನಿಂದ ಡ್ರೋನ್‌ ದಾಳಿ: ಗುಜರಾತ್‌ ಬಳಿ ಘಟನೆ

ರಾಸಾಯನಿಕ ಹೊತ್ತ ಹಡಗಿನ ಮೇಲೆ ಇರಾನ್‌ನಿಂದ ಡ್ರೋನ್‌ ದಾಳಿ: ಗುಜರಾತ್‌ ಬಳಿ ಘಟನೆ

- Advertisement -
- Advertisement -

ಇರಾನ್‌ನಿಂದ ಉಡಾವಣೆಯಾದ ಡ್ರೋನ್‌ ಹಿಂದೂ ಮಹಾಸಾಗರದಲ್ಲಿ ರಾಸಾಯನಿಕ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ ಎಂದು ಯುಎಸ್ ರಕ್ಷಣಾ ಇಲಾಖೆ ಆರೋಪಿಸಿದ್ದು, ಇಸ್ರೇಲ್‌- ಗಾಝಾ ಮೇಲೆ ನಡೆಸುತ್ತಿರುವ ಯುದ್ಧ ಅಪರಾಧ ಪ್ರಾದೇಶಿಕ ಉದ್ವಿಗ್ನತೆ ಮತ್ತು ಜಲ ಮಾರ್ಗಗಳಲ್ಲಿನ ಹೊಸ ಅಪಾಯವನ್ನು ಎತ್ತಿ ತೋರಿಸುತ್ತಿದೆ.

ಲೈಬೀರಿಯಾ-ಧ್ವಜವನ್ನು ಹೊಂದಿದ್ದ ಜಪಾನೀಸ್ ಒಡೆತನದ ಮತ್ತು ನೆದರ್ಲ್ಯಾಂಡ್ಸ್-ಚಾಲಿತ ರಾಸಾಯನಿಕ ಟ್ಯಾಂಕರ್ ಮೋಟಾರು ನೌಕೆ CHEM PLUTO ಮೇಲೆ ನಿನ್ನೆ ಸ್ಥಳೀಯ ಕಾಲಮಾನ ಸುಮಾರು 10 ಗಂಟೆಗೆ ಹಿಂದೂ ಮಹಾಸಾಗರದಲ್ಲಿ ಭಾರತದ ಕರಾವಳಿಯಿಂದ 200 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಡ್ರೋನ್‌ ಅಪ್ಪಳಿಸಿದೆ. ಇರಾನ್‌ ಡ್ರೋನ್‌ನ್ನು ದಾಳಿ ಮಾಡಿದೆ ಎಂದು ಅಮೆರಿಕ ಆರೋಪಿಸಿರುವ ಬಗ್ಗೆ ರಾಯಿಟರ್ಸ್‌ ವರದಿ ಮಾಡಿದೆ.

2021ರಿಂದ ವಾಣಿಜ್ಯ ಹಡಗುಗಳ ಮೇಲೆ ಇರಾನ್‌ ನಡೆಸುತ್ತಿರುವ 7ನೇ ದಾಳಿ ಇದು ಎಂದು ಅಮೆರಿಕ ಆರೋಪಿಸಿದೆ. ದಾಳಿಯ ಪರಿಣಾಮವಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಟ್ಯಾಂಕರ್‌ಗೆ ಸ್ವಲ್ಪ  ಬೆಂಕಿ ಕಾಣಿಸಿಕೊಂಡಿದೆ. ಭಾರತದ ಕರಾವಳಿಯಿಂದ ಕೇವಲ 200 ನಾಟಿಕಲ್ ಮೈಲು ದೂರದಲ್ಲಿ ಈ ಘಟನೆ ನಡೆದಿದೆ ಎಂದು ಅಮೆರಿಕ ಆರೋಪಿಸಿದೆ. ಆದರೆ ಅಮೆರಿಕದ ಆರೋಪಕ್ಕೆ ಇರಾನ್ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಭಾರತೀಯ ರಕ್ಷಣಾಧಿಕಾರಿಗಳು ಹೇಳುವುದೇನು?

ಭಾರತೀಯ ಕೋಸ್ಟ್ ಗಾರ್ಡ್ ಹಡಗು ಐಸಿಜಿಎಸ್ ವಿಕ್ರಮ್, ಡ್ರೋನ್ ದಾಳಿಯಿಂದ ಬೆಂಕಿ ಕಾಣಿಸಿಕೊಂಡ ಎಂವಿ CHEM PLUTO ಹಡಗಿನ ರಕ್ಷಣೆಗೆ ತೆರಳಿದೆ. ಪೋರಬಂದರ್ ಕರಾವಳಿಯಿಂದ 217 ನಾಟಿಕಲ್ ಮೈಲಿ ದೂರದಲ್ಲಿರುವ ಅರಬ್ಬಿ ಸಮುದ್ರದಲ್ಲಿ ಘಟನೆ ನಡೆದಿದೆ ಎಂದು ಭಾರತೀಯ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ನಾವು ಸ್ವೀಕರಿಸಿದ ಮಾಹಿತಿ ಪ್ರಕಾರ ಹಡಗಿನ ಬೆಂಕಿಯನ್ನು ನಂದಿಸಲಾಗಿದೆ ಆದರೆ ಬೆಂಕಿಯು ಹಡಗಿನ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದೆ. ಹಡಗಿನಲ್ಲಿದ್ದ ಸುಮಾರು 20 ಭಾರತೀಯರನ್ನು ಒಳಗೊಂಡಂತೆ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

20 ಭಾರತೀಯ ಮತ್ತು ಒಬ್ಬ ವಿಯೆಟ್ನಾಂ ಸಿಬ್ಬಂದಿಯನ್ನು ಹೊಂದಿರುವ ಹಡಗು ಡಿಸೆಂಬರ್ 19 ರಂದು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಹೊರಟು ಡಿ.25 ರಂದು ಮಂಗಳೂರು ಬಂದರನ್ನು ತಲುಪುವ ನಿರೀಕ್ಷೆಯಿತ್ತು ಎನ್ನಲಾಗಿದೆ.

ಅ.7ರಂದು ಇಸ್ರೇಲ್ ಮೇಲೆ ಗಾಝಾ ಮೇಲೆ ನಡೆಸುವ ಯುದ್ಧ ಅಪರಾಧದ ಮಧ್ಯೆ ಈ ಘಟನೆ ನಡೆದಿದೆ. ಇರಾನ್ ಸರ್ಕಾರ ಮತ್ತು ಯೆಮನ್‌ನಲ್ಲಿರುವ ಅದರ ಮಿತ್ರ ಪಡೆಗಳು ಗಾಝಾದ ಮೇಲೆ ಇಸ್ರೇಲ್‌ ಸರ್ಕಾರ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ಬಲವಾಗಿ ವಿರೋಧಿಸುತ್ತಿದೆ. ನಿನ್ನೆಯಷ್ಠೇ ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚಲಾಗುವುದು ಎಂದು ಇರಾನ್‌ನ ಕಮಾಂಡರ್ ಮೊಹಮ್ಮದ್ ರೆಜಾ ನಕ್ದಿ ಬೆದರಿಕೆ ಹಾಕಿದ್ದರು.

ಹೌತಿ ಗುಂಪು ಕಳೆದ ತಿಂಗಳು ಗಾಝಾದ ಮೇಲೆ ಇಸ್ರೇಲ್‌ನ ದಾಳಿಗೆ ಪ್ರತೀಕಾರವಾಗಿ ಕೆಂಪು ಸಮುದ್ರದ ಮೂಲಕ ತೆರಳುತ್ತಿದ್ದ ವ್ಯಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡಿದೆ. ಈ ದಾಳಿ ಕೆಲವು ಹಡಗುಗಳು ಮಾರ್ಗಗಳನ್ನು ಬದಲಾಯಿಸಲು ಕಾರಣವಾಗಿತ್ತು.

ಇದನ್ನು ಓದಿ: ಗಾಝಾ ಮೇಲಿನ ಯುದ್ಧ ನಿಲ್ಲಿಸದಿದ್ದರೆ ಮೆಡಿಟರೇನಿಯನ್ ಸಮುದ್ರ ಮಾರ್ಗಗಳನ್ನು ಬಂದ್‌ ಮಾಡುತ್ತೇವೆ: ಇರಾನ್ ಎಚ್ಚರಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...