Homeಚಳವಳಿಸರ್ಕಾರದಿಂದ ಮಹಿಳಾ ಸಂಕುಲಕ್ಕೆ ಅವಮಾನ: ಪಠ್ಯದಿಂದ ತಮ್ಮ ಕವಿತೆ ಕೈಬಿಡುವಂತೆ ಲೇಖಕಿ ರೂಪ ಹಾಸನ ಪತ್ರ

ಸರ್ಕಾರದಿಂದ ಮಹಿಳಾ ಸಂಕುಲಕ್ಕೆ ಅವಮಾನ: ಪಠ್ಯದಿಂದ ತಮ್ಮ ಕವಿತೆ ಕೈಬಿಡುವಂತೆ ಲೇಖಕಿ ರೂಪ ಹಾಸನ ಪತ್ರ

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ವಿರೋಧಿಸಿ ತಮ್ಮ ಪಠ್ಯವನ್ನು ಸೇರಿಸಬೇಡಿ ಎಂದು ಪತ್ರ ಬರೆಯುವ ಲೇಖಕ-ಲೇಖಕಿಯರ ಸಂಖ್ಯೆ ಏರತೊಡಗಿದೆ. ಈ ಅಭಿಯಾನಕ್ಕೆ ಕೈಜೋಡಿಸಿರುವ ಕನ್ನಡದ ಕವಯತ್ರಿ, ಲೇಖಕಿ ರೂಪ ಹಾಸನರವರು ಪರಿಷ್ಕೃತ 9 ನೆಯ ತರಗತಿಯ ಪಠ್ಯದಿಂದ ನನ್ನ “ಅಮ್ಮನಾಗುವುದೆಂದರೆ” ಕವಿತೆ ಕೈಬಿಡಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ಗೆ ಪತ್ರ ಬರೆದಿದ್ದಾರೆ.

“ಈ ವರ್ಷ ಶಾಲಾ ಪಠ್ಯಪುಸ್ತಕಗಳು ಪಕ್ಷದ ತತ್ವ, ಸಿದ್ಧಾಂತಕ್ಕೆ ಅನುಗುಣವಾಗಿ ಮರುಪರಿಷ್ಕರಣೆಗೊಂಡಿರುವುದು ಖೇದನೀಯ. ಅದನ್ನು ಈಗಾಗಲೇ ಕೆಲವು ಹಿರಿಯ ಗೌರವಾನ್ವಿತ ಸಾಹಿತಿಗಳು ಖಂಡಿಸಿ, ಪಠ್ಯದಲ್ಲಿ ತಮ್ಮ ಬರಹವನ್ನು ಸೇರ್ಪಡೆಗೊಳಿಸಲು ಹಿಂದಿನ ಸಮಿತಿಗೆ ಕೊಟ್ಟ ಅನುಮತಿಯನ್ನು ಹಿಂಪಡೆಯುವ ಮೂಲಕ ತಮ್ಮ ನೈತಿಕ ಹಾಗೂ ಸಾತ್ವಿಕ ಪ್ರತಿರೋಧ ತೋರಿದ್ದಾರೆ. ಆದರೆ ಆದ ತಪ್ಪನ್ನು ಸರಿಪಡಿಸಿ, ತಕ್ಷಣವೇ ಕ್ರಮ ಕೈಗೊಳ್ಳಬೇಕಾದ ಸರ್ಕಾರ, ಈ ಕುರಿತು ನಿರ್ಲಕ್ಷ್ಯ ವಹಿಸಿರುವುದು ಹಾಗೂ ಸರ್ಕಾರದ ಜನಪ್ರತಿನಿಧಿಗಳಿಂದಲೇ ಅಂತಹ ಘನತೆಯುತ ಸಾಹಿತಿಗಳನ್ನು ಇನ್ನಷ್ಟು ಅವಮಾನಿಸುವ ಸಂಗತಿಗಳು ನಡೆಯುತ್ತಿರುವುದು ಖಂಡನೀಯ” ಎಂದು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಈಗಿನ ಪಠ್ಯ ಮರು ಪರಿಷ್ಕರಣಾ ಸಮಿತಿಯಲ್ಲಿ ಒಬ್ಬೇ ಒಬ್ಬ ಮಹಿಳಾ ಸದಸ್ಯರಿಲ್ಲದಿರುವುದು, ಹತ್ತನೆಯ ತರಗತಿಯ ಕನ್ನಡ ಪಠ್ಯದಲ್ಲಿ ಒಬ್ಬ ಮಹಿಳೆಯದೂ ಗದ್ಯ-ಪದ್ಯವಿಲ್ಲದಿರುವುದೂ, ಒಬ್ಬೇ ಒಬ್ಬ ಸಾಧಕಿಯ ಕುರಿತೂ ಪಠ್ಯವಿಲ್ಲದಿರುವುದೂ ಸರ್ಕಾರ ಮಹಿಳಾ ಸಂಕುಲಕ್ಕೆ ಮಾಡಿದ ಅವಮಾನವೆಂಬುದು ನೋವಿನ ಸಂಗತಿಯಾಗಿದೆ” ಎಂದು ರೂಪ ಹಾಸನರವರು ಬರೆದಿದ್ದಾರೆ.

“ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005″ ಸಂವಿಧಾನದ ಮೂಲತತ್ವಗಳಿಗೆ ಬದ್ಧವಾಗಿ ರೂಪುಗೊಂಡಿದೆ. ಪ್ರಜಾಪ್ರಭುತ್ವದ ಆಶಯಗಳನ್ನೊಳಗೊಂಡು ಸಮಾನತೆ, ಧರ್ಮನಿರಪೇಕ್ಷತೆ, ಲಿಂಗಸಮಾನತೆ, ಸಾಮಾಜಿಕ ನ್ಯಾಯ, ತಾರತಮ್ಯ ನಿರ್ಮೂಲನೆ, ಹಕ್ಕುಗಳ ಬಗ್ಗೆ ಗೌರವವನ್ನು ಪಠ್ಯದ ಆದ್ಯತೆಯಾಗಿ ಪರಿಗಣಿಸಬೇಕೆಂದು ಅದು ಘೋಷಿಸಿದೆ. ಆದರೆ ಪರಿಷ್ಕೃತ ಪಠ್ಯಗಳು ಆ ನೀತಿ ನಿಯಮಗಳಿಗೆ ಅನುಗುಣವಾಗಿ ರೂಪಿತವಾಗಿಲ್ಲದಿರುವುದು ಎದ್ದು ಕಾಣುತ್ತಿದೆ” ಎಂದು ಅವರು ಹೇಳಿದ್ದಾರೆ.

ಮಗುವಿನ ಬುದ್ಧಿ ಮತ್ತು ಮನಸುಗಳು ನಮ್ಮ ಬಹುತ್ವ ಭಾರತದ ಬಹುಸಂಸ್ಕೃತಿಗಳ ಬಹು ಆಯಾಮಗಳನ್ನು ಒಳಗೊಳ್ಳುವಂತಿರಬೇಕು. ಪಠ್ಯಗಳು ವಿಶಾಲ, ಉದಾತ್ತ, ವೈಚಾರಿಕ, ವೈಜ್ಞಾನಿಕ, ಸಹಬಾಳ್ವೆ, ಸಾಮರಸ್ಯದ ಉದ್ದೇಶ ಹೊಂದಿರಬೇಕು. ಪ್ರತಿ ಮಗುವೂ ಪ್ರೀತಿ, ಆಹಿಂಸೆ ಮತ್ತು ಐಕ್ಯತೆದಿಂದ ಬೆಳೆಯುವಂತೆ, ಮುಕ್ತಚಿಂತನೆಯಿಂದ ಕೂಡಿದ ಸಮಚಿತ್ತದ ಪಠ್ಯವನ್ನು ರೂಪಿಸಲು ಆದ್ಯತೆ ನೀಡಬೇಕಿದ್ದುದು ಅತ್ಯಂತ ಮುಖ್ಯವಾಗಿತ್ತು. ಆದರೆ ಈ ಚೌಕಟ್ಟಿನ ಆಶಯಕ್ಕನುಗುಣವಾಗಿ ಮರು ಪರಿಷ್ಕರಣೆ ನಡೆದಿಲ್ಲವೆಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಕಾರಣಗಳಿಂದಾಗಿ ಒಂಬತ್ತನೆಯ ತರಗತಿ ತೃತೀಯ ಭಾಷಾ ಕನ್ನಡ ಪಠ್ಯಪುಸ್ತಕ ‘ನುಡಿಕನ್ನಡ’ ಪಠ್ಯದಲ್ಲಿ ಅಳವಡಿಕೆಯಾಗಿದ್ದ ನನ್ನ “ಅಮ್ಮನಾಗುವುದೆಂದರೆ” ಕವಿತೆಯನ್ನು ಬೋಧಿಸಲು ಹಿಂದಿನ ಸಮಿತಿಗೆ ನೀಡಿದ್ದ ಅನುಮತಿಯನ್ನು ಈ ಮೂಲಕ ಹಿಂಪಡೆಯುತ್ತಿದ್ದೇನೆ ಎಂದು ಘೋಷಿಸಿದ್ದಾರೆ.

ದೇವನೂರು ಮಹಾದೇವರವರು ಆರಂಭಿಸಿದ ಈ ಪಠ್ಯ ವಾಪ್ಸಿ ಚಳವಳಿಗೆ ವ್ಯಾಪಕ ಬೆಂಬಲ ದೊರಕಿದೆ. ಅವರ ಹಾದಿಯಲ್ಲಿದೇ ಹಿರಿಯ ಸಾಹಿತಿಗಳಾದ ಜಿ.ರಾಮಕೃಷ್ಣ, ಎಸ್‌.ಜಿ ಸಿದ್ದರಾಮಯ್ಯ, ಮೂಡ್ನಾಕೂಡು ಚಿನ್ನಸ್ವಾಮಿ, ಈರಪ್ಪ ಕಂಬಳಿ,ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನರವರ ಸೇರ್ಪಡೆಗೊಂಡಿದ್ದರು. ಇದೀಗ ರೂಪ ಹಾಸನರವರು ಅದೇ ಹಾದಿ ತುಳಿದಿದ್ದಾರೆ. ಇದು ಸರ್ಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

ಇದನ್ನೂ ಓದಿ: ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...