Homeಚಳವಳಿಸರ್ಕಾರದಿಂದ ಮಹಿಳಾ ಸಂಕುಲಕ್ಕೆ ಅವಮಾನ: ಪಠ್ಯದಿಂದ ತಮ್ಮ ಕವಿತೆ ಕೈಬಿಡುವಂತೆ ಲೇಖಕಿ ರೂಪ ಹಾಸನ ಪತ್ರ

ಸರ್ಕಾರದಿಂದ ಮಹಿಳಾ ಸಂಕುಲಕ್ಕೆ ಅವಮಾನ: ಪಠ್ಯದಿಂದ ತಮ್ಮ ಕವಿತೆ ಕೈಬಿಡುವಂತೆ ಲೇಖಕಿ ರೂಪ ಹಾಸನ ಪತ್ರ

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ವಿರೋಧಿಸಿ ತಮ್ಮ ಪಠ್ಯವನ್ನು ಸೇರಿಸಬೇಡಿ ಎಂದು ಪತ್ರ ಬರೆಯುವ ಲೇಖಕ-ಲೇಖಕಿಯರ ಸಂಖ್ಯೆ ಏರತೊಡಗಿದೆ. ಈ ಅಭಿಯಾನಕ್ಕೆ ಕೈಜೋಡಿಸಿರುವ ಕನ್ನಡದ ಕವಯತ್ರಿ, ಲೇಖಕಿ ರೂಪ ಹಾಸನರವರು ಪರಿಷ್ಕೃತ 9 ನೆಯ ತರಗತಿಯ ಪಠ್ಯದಿಂದ ನನ್ನ “ಅಮ್ಮನಾಗುವುದೆಂದರೆ” ಕವಿತೆ ಕೈಬಿಡಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ಗೆ ಪತ್ರ ಬರೆದಿದ್ದಾರೆ.

“ಈ ವರ್ಷ ಶಾಲಾ ಪಠ್ಯಪುಸ್ತಕಗಳು ಪಕ್ಷದ ತತ್ವ, ಸಿದ್ಧಾಂತಕ್ಕೆ ಅನುಗುಣವಾಗಿ ಮರುಪರಿಷ್ಕರಣೆಗೊಂಡಿರುವುದು ಖೇದನೀಯ. ಅದನ್ನು ಈಗಾಗಲೇ ಕೆಲವು ಹಿರಿಯ ಗೌರವಾನ್ವಿತ ಸಾಹಿತಿಗಳು ಖಂಡಿಸಿ, ಪಠ್ಯದಲ್ಲಿ ತಮ್ಮ ಬರಹವನ್ನು ಸೇರ್ಪಡೆಗೊಳಿಸಲು ಹಿಂದಿನ ಸಮಿತಿಗೆ ಕೊಟ್ಟ ಅನುಮತಿಯನ್ನು ಹಿಂಪಡೆಯುವ ಮೂಲಕ ತಮ್ಮ ನೈತಿಕ ಹಾಗೂ ಸಾತ್ವಿಕ ಪ್ರತಿರೋಧ ತೋರಿದ್ದಾರೆ. ಆದರೆ ಆದ ತಪ್ಪನ್ನು ಸರಿಪಡಿಸಿ, ತಕ್ಷಣವೇ ಕ್ರಮ ಕೈಗೊಳ್ಳಬೇಕಾದ ಸರ್ಕಾರ, ಈ ಕುರಿತು ನಿರ್ಲಕ್ಷ್ಯ ವಹಿಸಿರುವುದು ಹಾಗೂ ಸರ್ಕಾರದ ಜನಪ್ರತಿನಿಧಿಗಳಿಂದಲೇ ಅಂತಹ ಘನತೆಯುತ ಸಾಹಿತಿಗಳನ್ನು ಇನ್ನಷ್ಟು ಅವಮಾನಿಸುವ ಸಂಗತಿಗಳು ನಡೆಯುತ್ತಿರುವುದು ಖಂಡನೀಯ” ಎಂದು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಈಗಿನ ಪಠ್ಯ ಮರು ಪರಿಷ್ಕರಣಾ ಸಮಿತಿಯಲ್ಲಿ ಒಬ್ಬೇ ಒಬ್ಬ ಮಹಿಳಾ ಸದಸ್ಯರಿಲ್ಲದಿರುವುದು, ಹತ್ತನೆಯ ತರಗತಿಯ ಕನ್ನಡ ಪಠ್ಯದಲ್ಲಿ ಒಬ್ಬ ಮಹಿಳೆಯದೂ ಗದ್ಯ-ಪದ್ಯವಿಲ್ಲದಿರುವುದೂ, ಒಬ್ಬೇ ಒಬ್ಬ ಸಾಧಕಿಯ ಕುರಿತೂ ಪಠ್ಯವಿಲ್ಲದಿರುವುದೂ ಸರ್ಕಾರ ಮಹಿಳಾ ಸಂಕುಲಕ್ಕೆ ಮಾಡಿದ ಅವಮಾನವೆಂಬುದು ನೋವಿನ ಸಂಗತಿಯಾಗಿದೆ” ಎಂದು ರೂಪ ಹಾಸನರವರು ಬರೆದಿದ್ದಾರೆ.

“ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005″ ಸಂವಿಧಾನದ ಮೂಲತತ್ವಗಳಿಗೆ ಬದ್ಧವಾಗಿ ರೂಪುಗೊಂಡಿದೆ. ಪ್ರಜಾಪ್ರಭುತ್ವದ ಆಶಯಗಳನ್ನೊಳಗೊಂಡು ಸಮಾನತೆ, ಧರ್ಮನಿರಪೇಕ್ಷತೆ, ಲಿಂಗಸಮಾನತೆ, ಸಾಮಾಜಿಕ ನ್ಯಾಯ, ತಾರತಮ್ಯ ನಿರ್ಮೂಲನೆ, ಹಕ್ಕುಗಳ ಬಗ್ಗೆ ಗೌರವವನ್ನು ಪಠ್ಯದ ಆದ್ಯತೆಯಾಗಿ ಪರಿಗಣಿಸಬೇಕೆಂದು ಅದು ಘೋಷಿಸಿದೆ. ಆದರೆ ಪರಿಷ್ಕೃತ ಪಠ್ಯಗಳು ಆ ನೀತಿ ನಿಯಮಗಳಿಗೆ ಅನುಗುಣವಾಗಿ ರೂಪಿತವಾಗಿಲ್ಲದಿರುವುದು ಎದ್ದು ಕಾಣುತ್ತಿದೆ” ಎಂದು ಅವರು ಹೇಳಿದ್ದಾರೆ.

ಮಗುವಿನ ಬುದ್ಧಿ ಮತ್ತು ಮನಸುಗಳು ನಮ್ಮ ಬಹುತ್ವ ಭಾರತದ ಬಹುಸಂಸ್ಕೃತಿಗಳ ಬಹು ಆಯಾಮಗಳನ್ನು ಒಳಗೊಳ್ಳುವಂತಿರಬೇಕು. ಪಠ್ಯಗಳು ವಿಶಾಲ, ಉದಾತ್ತ, ವೈಚಾರಿಕ, ವೈಜ್ಞಾನಿಕ, ಸಹಬಾಳ್ವೆ, ಸಾಮರಸ್ಯದ ಉದ್ದೇಶ ಹೊಂದಿರಬೇಕು. ಪ್ರತಿ ಮಗುವೂ ಪ್ರೀತಿ, ಆಹಿಂಸೆ ಮತ್ತು ಐಕ್ಯತೆದಿಂದ ಬೆಳೆಯುವಂತೆ, ಮುಕ್ತಚಿಂತನೆಯಿಂದ ಕೂಡಿದ ಸಮಚಿತ್ತದ ಪಠ್ಯವನ್ನು ರೂಪಿಸಲು ಆದ್ಯತೆ ನೀಡಬೇಕಿದ್ದುದು ಅತ್ಯಂತ ಮುಖ್ಯವಾಗಿತ್ತು. ಆದರೆ ಈ ಚೌಕಟ್ಟಿನ ಆಶಯಕ್ಕನುಗುಣವಾಗಿ ಮರು ಪರಿಷ್ಕರಣೆ ನಡೆದಿಲ್ಲವೆಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಕಾರಣಗಳಿಂದಾಗಿ ಒಂಬತ್ತನೆಯ ತರಗತಿ ತೃತೀಯ ಭಾಷಾ ಕನ್ನಡ ಪಠ್ಯಪುಸ್ತಕ ‘ನುಡಿಕನ್ನಡ’ ಪಠ್ಯದಲ್ಲಿ ಅಳವಡಿಕೆಯಾಗಿದ್ದ ನನ್ನ “ಅಮ್ಮನಾಗುವುದೆಂದರೆ” ಕವಿತೆಯನ್ನು ಬೋಧಿಸಲು ಹಿಂದಿನ ಸಮಿತಿಗೆ ನೀಡಿದ್ದ ಅನುಮತಿಯನ್ನು ಈ ಮೂಲಕ ಹಿಂಪಡೆಯುತ್ತಿದ್ದೇನೆ ಎಂದು ಘೋಷಿಸಿದ್ದಾರೆ.

ದೇವನೂರು ಮಹಾದೇವರವರು ಆರಂಭಿಸಿದ ಈ ಪಠ್ಯ ವಾಪ್ಸಿ ಚಳವಳಿಗೆ ವ್ಯಾಪಕ ಬೆಂಬಲ ದೊರಕಿದೆ. ಅವರ ಹಾದಿಯಲ್ಲಿದೇ ಹಿರಿಯ ಸಾಹಿತಿಗಳಾದ ಜಿ.ರಾಮಕೃಷ್ಣ, ಎಸ್‌.ಜಿ ಸಿದ್ದರಾಮಯ್ಯ, ಮೂಡ್ನಾಕೂಡು ಚಿನ್ನಸ್ವಾಮಿ, ಈರಪ್ಪ ಕಂಬಳಿ,ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನರವರ ಸೇರ್ಪಡೆಗೊಂಡಿದ್ದರು. ಇದೀಗ ರೂಪ ಹಾಸನರವರು ಅದೇ ಹಾದಿ ತುಳಿದಿದ್ದಾರೆ. ಇದು ಸರ್ಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

ಇದನ್ನೂ ಓದಿ: ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...