Homeಚಳವಳಿಸರ್ಕಾರದಿಂದ ಮಹಿಳಾ ಸಂಕುಲಕ್ಕೆ ಅವಮಾನ: ಪಠ್ಯದಿಂದ ತಮ್ಮ ಕವಿತೆ ಕೈಬಿಡುವಂತೆ ಲೇಖಕಿ ರೂಪ ಹಾಸನ ಪತ್ರ

ಸರ್ಕಾರದಿಂದ ಮಹಿಳಾ ಸಂಕುಲಕ್ಕೆ ಅವಮಾನ: ಪಠ್ಯದಿಂದ ತಮ್ಮ ಕವಿತೆ ಕೈಬಿಡುವಂತೆ ಲೇಖಕಿ ರೂಪ ಹಾಸನ ಪತ್ರ

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ವಿರೋಧಿಸಿ ತಮ್ಮ ಪಠ್ಯವನ್ನು ಸೇರಿಸಬೇಡಿ ಎಂದು ಪತ್ರ ಬರೆಯುವ ಲೇಖಕ-ಲೇಖಕಿಯರ ಸಂಖ್ಯೆ ಏರತೊಡಗಿದೆ. ಈ ಅಭಿಯಾನಕ್ಕೆ ಕೈಜೋಡಿಸಿರುವ ಕನ್ನಡದ ಕವಯತ್ರಿ, ಲೇಖಕಿ ರೂಪ ಹಾಸನರವರು ಪರಿಷ್ಕೃತ 9 ನೆಯ ತರಗತಿಯ ಪಠ್ಯದಿಂದ ನನ್ನ “ಅಮ್ಮನಾಗುವುದೆಂದರೆ” ಕವಿತೆ ಕೈಬಿಡಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ಗೆ ಪತ್ರ ಬರೆದಿದ್ದಾರೆ.

“ಈ ವರ್ಷ ಶಾಲಾ ಪಠ್ಯಪುಸ್ತಕಗಳು ಪಕ್ಷದ ತತ್ವ, ಸಿದ್ಧಾಂತಕ್ಕೆ ಅನುಗುಣವಾಗಿ ಮರುಪರಿಷ್ಕರಣೆಗೊಂಡಿರುವುದು ಖೇದನೀಯ. ಅದನ್ನು ಈಗಾಗಲೇ ಕೆಲವು ಹಿರಿಯ ಗೌರವಾನ್ವಿತ ಸಾಹಿತಿಗಳು ಖಂಡಿಸಿ, ಪಠ್ಯದಲ್ಲಿ ತಮ್ಮ ಬರಹವನ್ನು ಸೇರ್ಪಡೆಗೊಳಿಸಲು ಹಿಂದಿನ ಸಮಿತಿಗೆ ಕೊಟ್ಟ ಅನುಮತಿಯನ್ನು ಹಿಂಪಡೆಯುವ ಮೂಲಕ ತಮ್ಮ ನೈತಿಕ ಹಾಗೂ ಸಾತ್ವಿಕ ಪ್ರತಿರೋಧ ತೋರಿದ್ದಾರೆ. ಆದರೆ ಆದ ತಪ್ಪನ್ನು ಸರಿಪಡಿಸಿ, ತಕ್ಷಣವೇ ಕ್ರಮ ಕೈಗೊಳ್ಳಬೇಕಾದ ಸರ್ಕಾರ, ಈ ಕುರಿತು ನಿರ್ಲಕ್ಷ್ಯ ವಹಿಸಿರುವುದು ಹಾಗೂ ಸರ್ಕಾರದ ಜನಪ್ರತಿನಿಧಿಗಳಿಂದಲೇ ಅಂತಹ ಘನತೆಯುತ ಸಾಹಿತಿಗಳನ್ನು ಇನ್ನಷ್ಟು ಅವಮಾನಿಸುವ ಸಂಗತಿಗಳು ನಡೆಯುತ್ತಿರುವುದು ಖಂಡನೀಯ” ಎಂದು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಈಗಿನ ಪಠ್ಯ ಮರು ಪರಿಷ್ಕರಣಾ ಸಮಿತಿಯಲ್ಲಿ ಒಬ್ಬೇ ಒಬ್ಬ ಮಹಿಳಾ ಸದಸ್ಯರಿಲ್ಲದಿರುವುದು, ಹತ್ತನೆಯ ತರಗತಿಯ ಕನ್ನಡ ಪಠ್ಯದಲ್ಲಿ ಒಬ್ಬ ಮಹಿಳೆಯದೂ ಗದ್ಯ-ಪದ್ಯವಿಲ್ಲದಿರುವುದೂ, ಒಬ್ಬೇ ಒಬ್ಬ ಸಾಧಕಿಯ ಕುರಿತೂ ಪಠ್ಯವಿಲ್ಲದಿರುವುದೂ ಸರ್ಕಾರ ಮಹಿಳಾ ಸಂಕುಲಕ್ಕೆ ಮಾಡಿದ ಅವಮಾನವೆಂಬುದು ನೋವಿನ ಸಂಗತಿಯಾಗಿದೆ” ಎಂದು ರೂಪ ಹಾಸನರವರು ಬರೆದಿದ್ದಾರೆ.

“ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005″ ಸಂವಿಧಾನದ ಮೂಲತತ್ವಗಳಿಗೆ ಬದ್ಧವಾಗಿ ರೂಪುಗೊಂಡಿದೆ. ಪ್ರಜಾಪ್ರಭುತ್ವದ ಆಶಯಗಳನ್ನೊಳಗೊಂಡು ಸಮಾನತೆ, ಧರ್ಮನಿರಪೇಕ್ಷತೆ, ಲಿಂಗಸಮಾನತೆ, ಸಾಮಾಜಿಕ ನ್ಯಾಯ, ತಾರತಮ್ಯ ನಿರ್ಮೂಲನೆ, ಹಕ್ಕುಗಳ ಬಗ್ಗೆ ಗೌರವವನ್ನು ಪಠ್ಯದ ಆದ್ಯತೆಯಾಗಿ ಪರಿಗಣಿಸಬೇಕೆಂದು ಅದು ಘೋಷಿಸಿದೆ. ಆದರೆ ಪರಿಷ್ಕೃತ ಪಠ್ಯಗಳು ಆ ನೀತಿ ನಿಯಮಗಳಿಗೆ ಅನುಗುಣವಾಗಿ ರೂಪಿತವಾಗಿಲ್ಲದಿರುವುದು ಎದ್ದು ಕಾಣುತ್ತಿದೆ” ಎಂದು ಅವರು ಹೇಳಿದ್ದಾರೆ.

ಮಗುವಿನ ಬುದ್ಧಿ ಮತ್ತು ಮನಸುಗಳು ನಮ್ಮ ಬಹುತ್ವ ಭಾರತದ ಬಹುಸಂಸ್ಕೃತಿಗಳ ಬಹು ಆಯಾಮಗಳನ್ನು ಒಳಗೊಳ್ಳುವಂತಿರಬೇಕು. ಪಠ್ಯಗಳು ವಿಶಾಲ, ಉದಾತ್ತ, ವೈಚಾರಿಕ, ವೈಜ್ಞಾನಿಕ, ಸಹಬಾಳ್ವೆ, ಸಾಮರಸ್ಯದ ಉದ್ದೇಶ ಹೊಂದಿರಬೇಕು. ಪ್ರತಿ ಮಗುವೂ ಪ್ರೀತಿ, ಆಹಿಂಸೆ ಮತ್ತು ಐಕ್ಯತೆದಿಂದ ಬೆಳೆಯುವಂತೆ, ಮುಕ್ತಚಿಂತನೆಯಿಂದ ಕೂಡಿದ ಸಮಚಿತ್ತದ ಪಠ್ಯವನ್ನು ರೂಪಿಸಲು ಆದ್ಯತೆ ನೀಡಬೇಕಿದ್ದುದು ಅತ್ಯಂತ ಮುಖ್ಯವಾಗಿತ್ತು. ಆದರೆ ಈ ಚೌಕಟ್ಟಿನ ಆಶಯಕ್ಕನುಗುಣವಾಗಿ ಮರು ಪರಿಷ್ಕರಣೆ ನಡೆದಿಲ್ಲವೆಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಕಾರಣಗಳಿಂದಾಗಿ ಒಂಬತ್ತನೆಯ ತರಗತಿ ತೃತೀಯ ಭಾಷಾ ಕನ್ನಡ ಪಠ್ಯಪುಸ್ತಕ ‘ನುಡಿಕನ್ನಡ’ ಪಠ್ಯದಲ್ಲಿ ಅಳವಡಿಕೆಯಾಗಿದ್ದ ನನ್ನ “ಅಮ್ಮನಾಗುವುದೆಂದರೆ” ಕವಿತೆಯನ್ನು ಬೋಧಿಸಲು ಹಿಂದಿನ ಸಮಿತಿಗೆ ನೀಡಿದ್ದ ಅನುಮತಿಯನ್ನು ಈ ಮೂಲಕ ಹಿಂಪಡೆಯುತ್ತಿದ್ದೇನೆ ಎಂದು ಘೋಷಿಸಿದ್ದಾರೆ.

ದೇವನೂರು ಮಹಾದೇವರವರು ಆರಂಭಿಸಿದ ಈ ಪಠ್ಯ ವಾಪ್ಸಿ ಚಳವಳಿಗೆ ವ್ಯಾಪಕ ಬೆಂಬಲ ದೊರಕಿದೆ. ಅವರ ಹಾದಿಯಲ್ಲಿದೇ ಹಿರಿಯ ಸಾಹಿತಿಗಳಾದ ಜಿ.ರಾಮಕೃಷ್ಣ, ಎಸ್‌.ಜಿ ಸಿದ್ದರಾಮಯ್ಯ, ಮೂಡ್ನಾಕೂಡು ಚಿನ್ನಸ್ವಾಮಿ, ಈರಪ್ಪ ಕಂಬಳಿ,ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನರವರ ಸೇರ್ಪಡೆಗೊಂಡಿದ್ದರು. ಇದೀಗ ರೂಪ ಹಾಸನರವರು ಅದೇ ಹಾದಿ ತುಳಿದಿದ್ದಾರೆ. ಇದು ಸರ್ಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

ಇದನ್ನೂ ಓದಿ: ಮುಂದುವರಿದ ಪಠ್ಯ ಅನುಮತಿ ನಿರಾಕರಣೆ ಪರ್ವ: ಪಠ್ಯ ಕೈಬಿಡಿ ಹೋರಾಟಕ್ಕೆ ಚಂದ್ರಶೇಖರ ತಾಳ್ಯ, ಪ್ರೊ.ಮಧುಸೂದನ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....