Homeಕರ್ನಾಟಕಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

- Advertisement -
- Advertisement -

ಕರ್ನಾಟಕದಲ್ಲಿ ದ್ವೇ‍ಷ ಭಾಷಣಗಳು ಹೆಚ್ಚುತ್ತಿವೆ. ಧಾರ್ಮಿಕ ಅಲ್ಪಸಂಖ್ಯಾತರ ಆರಾಧನಾ ಸ್ಥಳಗಳ ಮೇಲೆ ಸಾರ್ವಜನಿಕ ಬೆದರಿಕೆ ಮತ್ತು ದಾಳಿಗಳು ನಡೆದಿವೆ. ಮಾನಗೇಡಿ ಹತ್ಯೆಗಳು, ಅನೈತಿಕ ಪೋಲೀಸ್‌ ಗಿರಿ,  ಮಹಿಳೆಯರ ಮೇಲೆ ಶಾಸಕರೇ ಅವಮಾನಕಾರಿ ಹೇಳಿಕೆ ನೀಡುವಂಥಹ ವಿದ್ಯಾಮಾನಗಳು ನಡೆದಿವೆ. ಇದಕ್ಕೆ ಕೆಲ ಶಾಸಕರ ಸಂವಿಧಾನ ಬಾಹಿರ ಹೇಳಿಕೆ ಮತ್ತು ರಾಜ್ಯ ಸರ್ಕಾರಿ ಯಂತ್ರಾಂಗದ ನಿಷ್ಕ್ರಿಯತೆಯೇ ಕಾರಣವೆಂದು ಆರೋಪಿಸಿರುವ ಹಿರಿಯ ವಿಜ್ಞಾನಿಗಳು, ಬರಹಗಾರರು ಮತ್ತು ಕಲಾವಿದರು ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ ಎಂದು ಒತ್ತಾಯಿಸಿ ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಭೂ-ಭೌತಶಾಸ್ತ್ರಜ್ಞ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಮಾಜಿ ಕಾರ್ಯದರ್ಶಿ ಪ್ರೊ. ವಿನೋದ್ ಗೌರ್, ವಕೀಲರು ಮತ್ತು ಲೇಖಕರಾದ ಫ್ಲಾವಿಯಾ ಆಗ್ನೆಸ್, ಇತಿಹಾಸಕಾರರಾದ ಪ್ರೊ. ಜಾನಕಿ ನಾಯರ್, ಇತಿಹಾಸಕಾರ ಡಾ. ರಾಮಚಂದ್ರ ಗುಹಾ, ಪರಸರವಾದಿ ನಾಗೇಶ್ ಹೆಗಡೆ ಮುಂತಾದವರು ಬಿಡುಗಡೆಗೊಳಿಸಿರುವ ಪತ್ರಕ್ಕೆ ಸಹಿ ಹಾಕಿದ್ದಾರೆ.

ಈ ರೀತಿಯ ಘಟನಾವಳಿಗಳು ಪ್ರಗತಿಪರ ರಾಜ್ಯವೆಂಬ ಕರ್ನಾಟಕದ ಸುದೀರ್ಘ ಚರಿತ್ರೆಗೇ ಕಳಂಕವಾಗಿದೆ.  ಕರ್ನಾಟಕವು ಬಹುತ್ವದ ಸಮಾಜವೊಂದರ ಸೌಹಾರ್ದಯುತ ಬಾಳ್ವೆಗೆ ನೀರೆರೆದ ರಾಜ್ಯ. ಎಲ್ಲಾ ವರ್ಗಗಳ ಅಭ್ಯುದಯಕ್ಕೆ  ಮಾದರಿ ಕಲ್ಯಾಣ ಕಾರ್ಯಕ್ರಮಗಳನ್ನೂ ಆರಂಭಿಸಿದ ರಾಜ್ಯ. ಬಸವಣ್ಣ, ಅಕ್ಕಮಹಾದೇವಿ, ಕನಕದಾಸ, ಪುರಂದರದಾಸ, ಶೀಶುನಾಳ ಶರೀಫ ಮುಂತಾದವರೇ ನಮ್ಮ ನಾಯಕರು. ಬೇಂದ್ರೆ, ಕುವೆಂಪು ಸಹಿತ ನಮ್ಮ ಸಾಹಿತಿಗಳು ಬಹು ಸಂಸ್ಕೃತಿಯ ಚಹರೆಗಳನ್ನೇ ಆಧಾರವಾಗಿಟ್ಟುಕೊಂಡ ಕರ್ನಾಟಕತ್ವವನ್ನು ಸಂಭ್ರಮಿಸಿದವರು. ಈ  ಸಹಿಷ್ಣುತೆ ಮತ್ತು ಹಂಚಿಕೊಂಡ ಸಹಬಾಳ್ವೆಯ ಪರಂಪರೆ ಈಗ ಛಿದ್ರವಾಗುತ್ತಿದೆ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಆರ್ಥಿಕ, ಆಡಳಿತಾತ್ಮಕ ಮತ್ತು ರಾಜಕೀಯ ಆಯಾಮಗಳಲ್ಲಿ ಕರ್ನಾಟಕವು ತನ್ನ ಒಕ್ಕೂಟ ಭಾಗಿದಾರಿಯ ಶಕ್ತಿಯನ್ನು ಕಳೆದುಕೊಳ್ಳುತ್ತಿದೆ. ಇತ್ತೀಚೆಗಿನ ದಮನಕಾರಿ ಗೋ ಸಂರಕ್ಷಣಾ ಕಾಯಿದೆ ಮತ್ತು ಮತಾಂತರ ನಿಷೇಧ ಕಾಯಿದೆಗಳು ಧಾರ್ಮಿಕ ಅಲ್ಪಸಂಖ್ಯಾತರ ಆರ್ಥಿಕ ಮತ್ತು ಧಾರ್ಮಿಕ ಹಕ್ಕುಗಳನ್ನು  ದಮನಿಸುವ ಕಾಯಿದೆಗಳಾಗಿವೆ. ಈ ಸಮಸ್ಯೆಗಳನ್ನು ಪರಿಹರಿಸದಿದ್ದರೆ, ಹೂಡಿಕೆ, ಮತ್ತು ಉದ್ಯಮಗಳ ತಾಣವಾಗಿ ಕರ್ನಾಟಕಕ್ಕಿರುವ ಖ್ಯಾತಿಯೂ ಕೆಡುವುದರಲ್ಲಿ ಸಂಶಯವಿಲ್ಲ. ಹಾಗಾಗಿ ಸಂಕುಚಿತ ಕೋಮು ಹಿತಾಸಕ್ತಿಯ  ಅಜೆಂಡಾಗಳನ್ನು, ಯಾರಿಂದಲೋ ಪಡೆದ ಸಲಹೆಗಳನ್ನು ಅನುಷ್ಠಾನಗೊಳಿಸುವುದು ರಾಜ್ಯದ ಮತ್ತು ರಾಜ್ಯದ ಪ್ರಜೆಗಳ ಹಿತಾಸಕ್ತಿಗೆ ಮಾರಕ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಮಾನವ ಹಕ್ಕುಗಳ ಕಾರ್ಯಕರ್ತ ಬೆಜವಾಡ ವಿಲ್ಸನ್, ಲೇಖಕರಾದ ಪುರುಷೋತ್ತಮ ಬಿಳಿಮಲೆ, ಸಮಾಜಶಾಸ್ತ್ರಜ್ಞೆ ಪ್ರೊ. ಎ.ಆರ್.ವಾಸವಿ, ಡಾ. ಯಲ್ಲಪ್ಪ ರೆಡ್ಡಿ, ವಿವೇಕ್ ಶಾನಭಾಗ್ ಸೇರಿ 30ಕ್ಕೂ ಹೆಚ್ಚು ಜನರು ಪತ್ರಕ್ಕೆ ಸಹಿ ಹಾಕಿದವರಲ್ಲಿ ಸೇರಿದ್ದಾರೆ.


ಇದನ್ನೂ ಓದಿ: ಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What bull shit. Where were these people when some Muslim leaders like Owaisi and SDFI were giving provoking speeches. Even now, the Hijab controversy in Udupi and the namaz controversy of Kolar refuse to die down. During my 55 years I have never heard muslim girl students wearing Hijab in schools and colleges. And there was no uniform dress at that time. And namaz is not allowed in any educational institution. Why are these people silent on these issues. It shows that these people would like to be citizens of a muslim State and support it. Shame on you.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...