Homeಕರ್ನಾಟಕಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

- Advertisement -
- Advertisement -

ಕರ್ನಾಟಕದಲ್ಲಿ ದ್ವೇ‍ಷ ಭಾಷಣಗಳು ಹೆಚ್ಚುತ್ತಿವೆ. ಧಾರ್ಮಿಕ ಅಲ್ಪಸಂಖ್ಯಾತರ ಆರಾಧನಾ ಸ್ಥಳಗಳ ಮೇಲೆ ಸಾರ್ವಜನಿಕ ಬೆದರಿಕೆ ಮತ್ತು ದಾಳಿಗಳು ನಡೆದಿವೆ. ಮಾನಗೇಡಿ ಹತ್ಯೆಗಳು, ಅನೈತಿಕ ಪೋಲೀಸ್‌ ಗಿರಿ,  ಮಹಿಳೆಯರ ಮೇಲೆ ಶಾಸಕರೇ ಅವಮಾನಕಾರಿ ಹೇಳಿಕೆ ನೀಡುವಂಥಹ ವಿದ್ಯಾಮಾನಗಳು ನಡೆದಿವೆ. ಇದಕ್ಕೆ ಕೆಲ ಶಾಸಕರ ಸಂವಿಧಾನ ಬಾಹಿರ ಹೇಳಿಕೆ ಮತ್ತು ರಾಜ್ಯ ಸರ್ಕಾರಿ ಯಂತ್ರಾಂಗದ ನಿಷ್ಕ್ರಿಯತೆಯೇ ಕಾರಣವೆಂದು ಆರೋಪಿಸಿರುವ ಹಿರಿಯ ವಿಜ್ಞಾನಿಗಳು, ಬರಹಗಾರರು ಮತ್ತು ಕಲಾವಿದರು ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ ಎಂದು ಒತ್ತಾಯಿಸಿ ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಭೂ-ಭೌತಶಾಸ್ತ್ರಜ್ಞ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಮಾಜಿ ಕಾರ್ಯದರ್ಶಿ ಪ್ರೊ. ವಿನೋದ್ ಗೌರ್, ವಕೀಲರು ಮತ್ತು ಲೇಖಕರಾದ ಫ್ಲಾವಿಯಾ ಆಗ್ನೆಸ್, ಇತಿಹಾಸಕಾರರಾದ ಪ್ರೊ. ಜಾನಕಿ ನಾಯರ್, ಇತಿಹಾಸಕಾರ ಡಾ. ರಾಮಚಂದ್ರ ಗುಹಾ, ಪರಸರವಾದಿ ನಾಗೇಶ್ ಹೆಗಡೆ ಮುಂತಾದವರು ಬಿಡುಗಡೆಗೊಳಿಸಿರುವ ಪತ್ರಕ್ಕೆ ಸಹಿ ಹಾಕಿದ್ದಾರೆ.

ಈ ರೀತಿಯ ಘಟನಾವಳಿಗಳು ಪ್ರಗತಿಪರ ರಾಜ್ಯವೆಂಬ ಕರ್ನಾಟಕದ ಸುದೀರ್ಘ ಚರಿತ್ರೆಗೇ ಕಳಂಕವಾಗಿದೆ.  ಕರ್ನಾಟಕವು ಬಹುತ್ವದ ಸಮಾಜವೊಂದರ ಸೌಹಾರ್ದಯುತ ಬಾಳ್ವೆಗೆ ನೀರೆರೆದ ರಾಜ್ಯ. ಎಲ್ಲಾ ವರ್ಗಗಳ ಅಭ್ಯುದಯಕ್ಕೆ  ಮಾದರಿ ಕಲ್ಯಾಣ ಕಾರ್ಯಕ್ರಮಗಳನ್ನೂ ಆರಂಭಿಸಿದ ರಾಜ್ಯ. ಬಸವಣ್ಣ, ಅಕ್ಕಮಹಾದೇವಿ, ಕನಕದಾಸ, ಪುರಂದರದಾಸ, ಶೀಶುನಾಳ ಶರೀಫ ಮುಂತಾದವರೇ ನಮ್ಮ ನಾಯಕರು. ಬೇಂದ್ರೆ, ಕುವೆಂಪು ಸಹಿತ ನಮ್ಮ ಸಾಹಿತಿಗಳು ಬಹು ಸಂಸ್ಕೃತಿಯ ಚಹರೆಗಳನ್ನೇ ಆಧಾರವಾಗಿಟ್ಟುಕೊಂಡ ಕರ್ನಾಟಕತ್ವವನ್ನು ಸಂಭ್ರಮಿಸಿದವರು. ಈ  ಸಹಿಷ್ಣುತೆ ಮತ್ತು ಹಂಚಿಕೊಂಡ ಸಹಬಾಳ್ವೆಯ ಪರಂಪರೆ ಈಗ ಛಿದ್ರವಾಗುತ್ತಿದೆ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಆರ್ಥಿಕ, ಆಡಳಿತಾತ್ಮಕ ಮತ್ತು ರಾಜಕೀಯ ಆಯಾಮಗಳಲ್ಲಿ ಕರ್ನಾಟಕವು ತನ್ನ ಒಕ್ಕೂಟ ಭಾಗಿದಾರಿಯ ಶಕ್ತಿಯನ್ನು ಕಳೆದುಕೊಳ್ಳುತ್ತಿದೆ. ಇತ್ತೀಚೆಗಿನ ದಮನಕಾರಿ ಗೋ ಸಂರಕ್ಷಣಾ ಕಾಯಿದೆ ಮತ್ತು ಮತಾಂತರ ನಿಷೇಧ ಕಾಯಿದೆಗಳು ಧಾರ್ಮಿಕ ಅಲ್ಪಸಂಖ್ಯಾತರ ಆರ್ಥಿಕ ಮತ್ತು ಧಾರ್ಮಿಕ ಹಕ್ಕುಗಳನ್ನು  ದಮನಿಸುವ ಕಾಯಿದೆಗಳಾಗಿವೆ. ಈ ಸಮಸ್ಯೆಗಳನ್ನು ಪರಿಹರಿಸದಿದ್ದರೆ, ಹೂಡಿಕೆ, ಮತ್ತು ಉದ್ಯಮಗಳ ತಾಣವಾಗಿ ಕರ್ನಾಟಕಕ್ಕಿರುವ ಖ್ಯಾತಿಯೂ ಕೆಡುವುದರಲ್ಲಿ ಸಂಶಯವಿಲ್ಲ. ಹಾಗಾಗಿ ಸಂಕುಚಿತ ಕೋಮು ಹಿತಾಸಕ್ತಿಯ  ಅಜೆಂಡಾಗಳನ್ನು, ಯಾರಿಂದಲೋ ಪಡೆದ ಸಲಹೆಗಳನ್ನು ಅನುಷ್ಠಾನಗೊಳಿಸುವುದು ರಾಜ್ಯದ ಮತ್ತು ರಾಜ್ಯದ ಪ್ರಜೆಗಳ ಹಿತಾಸಕ್ತಿಗೆ ಮಾರಕ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಮಾನವ ಹಕ್ಕುಗಳ ಕಾರ್ಯಕರ್ತ ಬೆಜವಾಡ ವಿಲ್ಸನ್, ಲೇಖಕರಾದ ಪುರುಷೋತ್ತಮ ಬಿಳಿಮಲೆ, ಸಮಾಜಶಾಸ್ತ್ರಜ್ಞೆ ಪ್ರೊ. ಎ.ಆರ್.ವಾಸವಿ, ಡಾ. ಯಲ್ಲಪ್ಪ ರೆಡ್ಡಿ, ವಿವೇಕ್ ಶಾನಭಾಗ್ ಸೇರಿ 30ಕ್ಕೂ ಹೆಚ್ಚು ಜನರು ಪತ್ರಕ್ಕೆ ಸಹಿ ಹಾಕಿದವರಲ್ಲಿ ಸೇರಿದ್ದಾರೆ.


ಇದನ್ನೂ ಓದಿ: ಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What bull shit. Where were these people when some Muslim leaders like Owaisi and SDFI were giving provoking speeches. Even now, the Hijab controversy in Udupi and the namaz controversy of Kolar refuse to die down. During my 55 years I have never heard muslim girl students wearing Hijab in schools and colleges. And there was no uniform dress at that time. And namaz is not allowed in any educational institution. Why are these people silent on these issues. It shows that these people would like to be citizens of a muslim State and support it. Shame on you.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....