Homeಕರ್ನಾಟಕಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

- Advertisement -
- Advertisement -

ಕರ್ನಾಟಕದಲ್ಲಿ ದ್ವೇ‍ಷ ಭಾಷಣಗಳು ಹೆಚ್ಚುತ್ತಿವೆ. ಧಾರ್ಮಿಕ ಅಲ್ಪಸಂಖ್ಯಾತರ ಆರಾಧನಾ ಸ್ಥಳಗಳ ಮೇಲೆ ಸಾರ್ವಜನಿಕ ಬೆದರಿಕೆ ಮತ್ತು ದಾಳಿಗಳು ನಡೆದಿವೆ. ಮಾನಗೇಡಿ ಹತ್ಯೆಗಳು, ಅನೈತಿಕ ಪೋಲೀಸ್‌ ಗಿರಿ,  ಮಹಿಳೆಯರ ಮೇಲೆ ಶಾಸಕರೇ ಅವಮಾನಕಾರಿ ಹೇಳಿಕೆ ನೀಡುವಂಥಹ ವಿದ್ಯಾಮಾನಗಳು ನಡೆದಿವೆ. ಇದಕ್ಕೆ ಕೆಲ ಶಾಸಕರ ಸಂವಿಧಾನ ಬಾಹಿರ ಹೇಳಿಕೆ ಮತ್ತು ರಾಜ್ಯ ಸರ್ಕಾರಿ ಯಂತ್ರಾಂಗದ ನಿಷ್ಕ್ರಿಯತೆಯೇ ಕಾರಣವೆಂದು ಆರೋಪಿಸಿರುವ ಹಿರಿಯ ವಿಜ್ಞಾನಿಗಳು, ಬರಹಗಾರರು ಮತ್ತು ಕಲಾವಿದರು ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ ಎಂದು ಒತ್ತಾಯಿಸಿ ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಭೂ-ಭೌತಶಾಸ್ತ್ರಜ್ಞ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಮಾಜಿ ಕಾರ್ಯದರ್ಶಿ ಪ್ರೊ. ವಿನೋದ್ ಗೌರ್, ವಕೀಲರು ಮತ್ತು ಲೇಖಕರಾದ ಫ್ಲಾವಿಯಾ ಆಗ್ನೆಸ್, ಇತಿಹಾಸಕಾರರಾದ ಪ್ರೊ. ಜಾನಕಿ ನಾಯರ್, ಇತಿಹಾಸಕಾರ ಡಾ. ರಾಮಚಂದ್ರ ಗುಹಾ, ಪರಸರವಾದಿ ನಾಗೇಶ್ ಹೆಗಡೆ ಮುಂತಾದವರು ಬಿಡುಗಡೆಗೊಳಿಸಿರುವ ಪತ್ರಕ್ಕೆ ಸಹಿ ಹಾಕಿದ್ದಾರೆ.

ಈ ರೀತಿಯ ಘಟನಾವಳಿಗಳು ಪ್ರಗತಿಪರ ರಾಜ್ಯವೆಂಬ ಕರ್ನಾಟಕದ ಸುದೀರ್ಘ ಚರಿತ್ರೆಗೇ ಕಳಂಕವಾಗಿದೆ.  ಕರ್ನಾಟಕವು ಬಹುತ್ವದ ಸಮಾಜವೊಂದರ ಸೌಹಾರ್ದಯುತ ಬಾಳ್ವೆಗೆ ನೀರೆರೆದ ರಾಜ್ಯ. ಎಲ್ಲಾ ವರ್ಗಗಳ ಅಭ್ಯುದಯಕ್ಕೆ  ಮಾದರಿ ಕಲ್ಯಾಣ ಕಾರ್ಯಕ್ರಮಗಳನ್ನೂ ಆರಂಭಿಸಿದ ರಾಜ್ಯ. ಬಸವಣ್ಣ, ಅಕ್ಕಮಹಾದೇವಿ, ಕನಕದಾಸ, ಪುರಂದರದಾಸ, ಶೀಶುನಾಳ ಶರೀಫ ಮುಂತಾದವರೇ ನಮ್ಮ ನಾಯಕರು. ಬೇಂದ್ರೆ, ಕುವೆಂಪು ಸಹಿತ ನಮ್ಮ ಸಾಹಿತಿಗಳು ಬಹು ಸಂಸ್ಕೃತಿಯ ಚಹರೆಗಳನ್ನೇ ಆಧಾರವಾಗಿಟ್ಟುಕೊಂಡ ಕರ್ನಾಟಕತ್ವವನ್ನು ಸಂಭ್ರಮಿಸಿದವರು. ಈ  ಸಹಿಷ್ಣುತೆ ಮತ್ತು ಹಂಚಿಕೊಂಡ ಸಹಬಾಳ್ವೆಯ ಪರಂಪರೆ ಈಗ ಛಿದ್ರವಾಗುತ್ತಿದೆ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಆರ್ಥಿಕ, ಆಡಳಿತಾತ್ಮಕ ಮತ್ತು ರಾಜಕೀಯ ಆಯಾಮಗಳಲ್ಲಿ ಕರ್ನಾಟಕವು ತನ್ನ ಒಕ್ಕೂಟ ಭಾಗಿದಾರಿಯ ಶಕ್ತಿಯನ್ನು ಕಳೆದುಕೊಳ್ಳುತ್ತಿದೆ. ಇತ್ತೀಚೆಗಿನ ದಮನಕಾರಿ ಗೋ ಸಂರಕ್ಷಣಾ ಕಾಯಿದೆ ಮತ್ತು ಮತಾಂತರ ನಿಷೇಧ ಕಾಯಿದೆಗಳು ಧಾರ್ಮಿಕ ಅಲ್ಪಸಂಖ್ಯಾತರ ಆರ್ಥಿಕ ಮತ್ತು ಧಾರ್ಮಿಕ ಹಕ್ಕುಗಳನ್ನು  ದಮನಿಸುವ ಕಾಯಿದೆಗಳಾಗಿವೆ. ಈ ಸಮಸ್ಯೆಗಳನ್ನು ಪರಿಹರಿಸದಿದ್ದರೆ, ಹೂಡಿಕೆ, ಮತ್ತು ಉದ್ಯಮಗಳ ತಾಣವಾಗಿ ಕರ್ನಾಟಕಕ್ಕಿರುವ ಖ್ಯಾತಿಯೂ ಕೆಡುವುದರಲ್ಲಿ ಸಂಶಯವಿಲ್ಲ. ಹಾಗಾಗಿ ಸಂಕುಚಿತ ಕೋಮು ಹಿತಾಸಕ್ತಿಯ  ಅಜೆಂಡಾಗಳನ್ನು, ಯಾರಿಂದಲೋ ಪಡೆದ ಸಲಹೆಗಳನ್ನು ಅನುಷ್ಠಾನಗೊಳಿಸುವುದು ರಾಜ್ಯದ ಮತ್ತು ರಾಜ್ಯದ ಪ್ರಜೆಗಳ ಹಿತಾಸಕ್ತಿಗೆ ಮಾರಕ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಮಾನವ ಹಕ್ಕುಗಳ ಕಾರ್ಯಕರ್ತ ಬೆಜವಾಡ ವಿಲ್ಸನ್, ಲೇಖಕರಾದ ಪುರುಷೋತ್ತಮ ಬಿಳಿಮಲೆ, ಸಮಾಜಶಾಸ್ತ್ರಜ್ಞೆ ಪ್ರೊ. ಎ.ಆರ್.ವಾಸವಿ, ಡಾ. ಯಲ್ಲಪ್ಪ ರೆಡ್ಡಿ, ವಿವೇಕ್ ಶಾನಭಾಗ್ ಸೇರಿ 30ಕ್ಕೂ ಹೆಚ್ಚು ಜನರು ಪತ್ರಕ್ಕೆ ಸಹಿ ಹಾಕಿದವರಲ್ಲಿ ಸೇರಿದ್ದಾರೆ.


ಇದನ್ನೂ ಓದಿ: ಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What bull shit. Where were these people when some Muslim leaders like Owaisi and SDFI were giving provoking speeches. Even now, the Hijab controversy in Udupi and the namaz controversy of Kolar refuse to die down. During my 55 years I have never heard muslim girl students wearing Hijab in schools and colleges. And there was no uniform dress at that time. And namaz is not allowed in any educational institution. Why are these people silent on these issues. It shows that these people would like to be citizens of a muslim State and support it. Shame on you.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...