Homeಮುಖಪುಟಪಠ್ಯ ಬದಲಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ಪಠ್ಯ ಬದಲಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ವಚನ ಕ್ರಾಂತಿ ಮೂಲಕ ಸಮಾನತೆಯ ಕನಸು ಕಂಡ ಬಸವಣ್ಣನವರ ಚರಿತ್ರೆಯನ್ನು ತಿರುಚುವುದು ಮಕ್ಕಳಿಗೆ ಅಷ್ಟೇ ಅಲ್ಲದೇ, ಇಡೀ ಸಮಾಜಕ್ಕೆ ಮಾಡಿದ ಮೋಸ.

- Advertisement -
- Advertisement -

ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಮುಗ್ಧ ಮಕ್ಕಳ ಹಾಗೂ ಪೋಷಕರ ಮನಸ್ಸಿನಲ್ಲಿ ತಪ್ಪು ಅಭಿಪ್ರಾಯ ಬಿತ್ತಿ, ತಪ್ಪು ಭಾವನೆಗಳು ಮೂಡಿಸಿರುವುದು ಖಂಡನೀಯ. ಕೂಡಲೇ ಪಠ್ಯಪುಸ್ತಕ ಬದಲಾವಣೆ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ ನೀಡಿದ್ದಾರೆ.

ಬೀದರ್‌ನಲ್ಲಿ ಜಿಲ್ಲಾ ಕಸಾಪ ಹಾಗೂ ಬಸವಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಒಂದಲ್ಲ ಎರಡಲ್ಲ ಬಹಳಷ್ಟು ಬದಲಾವಣೆ ಮಾಡಿದ್ದಾರೆ, ಬಸವಣ್ಣನವರ ವಿಚಾರಧಾರೆಯಲ್ಲಿ ಅನೇಕ ತಪ್ಪು ಮಾಡಿದ್ದಾರೆ, ಅದೇ ರಾಷ್ಟ್ರಕವಿ ಕುವೆಂಪು ಅವರಿಗೂ ಅಪಚಾರ ಆಗಿದೆ. ಹೀಗಾಗಿ ಈ ಬಗ್ಗೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು ಕೂಡಲೇ ತಪ್ಪನ್ನು ಸರಿಪಡಿಸಬೇಕು. ತಪ್ಪು ಮಾಡಿರುವುದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಂಡು ತಿದ್ದಿಕೊಳ್ಳಬೇಕು. ಒಂದು ವೇಳೆ ತಿದ್ದಿಕೊಳ್ಳದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಿರಂತರವಾಗಿ ನಡೆಸಲಾಗುವುದು ಎಂದರು.

ಬೀದರ್ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ ಮಾತನಾಡಿ, ‘ಕನ್ನಡದ ದಿಗ್ಗಜ ಸಾಹಿತಿ ಕುವೆಂಪು ರಚನೆಯ ನಾಡಗೀತೆಗೆ ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ಎಂಬುವನನ್ನು ಗಡಿಪಾರು ಮಾಡಬೇಕು. ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಯಾವುದೇ ಕಾರಣಕ್ಕೂ ಪಠ್ಯ ಪುಸ್ತಕ ಪರಿಷ್ಕರಣೆ ಹಿಂಪಡೆಯುವುದಿಲ್ಲ ಎಂದು ಹೇಳುವ ಮೂಲಕ ಉದ್ಧಟತನ ಪ್ರದರ್ಶಿಸಿದ್ದಾರೆ. ಅವರಿಗೆ ನೈತಿಕತೆ ಇದ್ರೆ ರಾಜಿನಾಮೆ ಕೊಡಬೇಕು, ಇಲ್ಲದಿದ್ದರೆ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

ಸನಾತನ ಧರ್ಮ, ಶೈವ ಪರಂಪರೆ ಜಾರಿಗೊಳಿಸಿದರೂ ಲಿಂಗಾಯತರು ಏನು ಅನ್ನುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಮತ್ತೆ ಬಿಜೆಪಿಗೆ ಮತ ಹಾಕುತ್ತಾರೆ ಎಂಬ ಭಾವನೆ ಈಗಿನ ರಾಜ್ಯ ಸರ್ಕಾರಕ್ಕಿದೆ. ಲಿಂಗಾಯತರು ಎಚ್ಚರಗೊಂಡು ಮೂಲ ಇತಿಹಾಸ ತಿರುಚಲು ಹೊರಟಿದವರಿಗೆ ಪಾಠ ಕಲಿಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ ಆನಂದ ದೇವಪ್ಪ ಹೇಳಿದರು.

ಸಾಹಿತಿಗಳು, ಕಲಾವಿದರು ನಾಡಿನ ಅನಭಿಷಿಕ್ತ ಶಾಸಕರು ಇದ್ದಂತೆ, ಅವರನ್ನು ಅಪಮಾನಗೊಳಿಸುವುದು ಅಥವಾ ಅವರ ಚರಿತ್ರೆಯನ್ನು ತಿರುಚಿ ಬರೆಯುವುದು ಅಕ್ಷಮ್ಯ ಅಪರಾಧವಾಗುತ್ತದೆ. ಆದರೆ ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರ ಸಾಹಿತಿಗಳನ್ನು ಅಪಮಾನಗೊಳಿಸಿರುವುದು ಮತ್ತು ಅವರ ಚರಿತ್ರೆಯನ್ನು ತಿರುಚಿ ಬರೆಸುವ ಮೂಲಕ ನಾಡಿನಲ್ಲಿ ಅರಾಜಕತೆ ಹುಟ್ಟು ಹಾಕಿದಂತಾಗಿದೆ. ನಾಡಗೀತೆ ತಿರುಚಿ ಬರೆದವರ ವಿರುದ್ಧ ಸರ್ಕಾರ ವಾರದೊಳಗೆ ಕ್ರಮಕೈಗೊಳ್ಳಬೇಕು ಎಂದು ಯುವ ಹೋರಾಟಗಾರ ವಿರುಪಾಕ್ಷ ಗಾದಗಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

ವಚನ ಕ್ರಾಂತಿ ಮೂಲಕ ಸಮಾನತೆಯ ಸಮಾಜದ ಕನಸು ಕಂಡ ಬಸವಣ್ಣನವರ ಚರಿತ್ರೆಯನ್ನು ತಿರುಚುವುದು ಮಕ್ಕಳಿಗೆ ಅಷ್ಟೇ ಅಲ್ಲದೇ, ಇಡೀ ಸಮಾಜಕ್ಕೆ ಮಾಡಿದ ಮೋಸ. ಪಠ್ಯ ಪುಸ್ತಕ ಸಮಿತಿ ಕಾರ್ಯ ಅಕ್ಷಮ್ಯ ಅಪರಾಧ. ಇದು ರಾಜ್ಯ ಸರ್ಕಾರ ಪೋಷಿತ ಕೆಲಸವೇ ಆಗಿದೆ. ಇದಕ್ಕೆ ದಿಕ್ಕಾರ ಹೇಳಲೇಬೇಕು ಎಂದು ಹುಲಸೂರು ಶ್ರೀಗಳು ಹೇಳಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ಶ್ರೀಕಾಂತ ಸ್ವಾಮಿ, ಶರಣಪ್ಪಾ ಮಿಠಾರೆ, ವಿಜಯಕುಮಾರ್ ಸೋನಾರೆ, ಎಂ.ಎಸ್.ಮನೋಹರ್, ವಿದ್ಯಾವತಿ ಬಲ್ಲೂರು, ರಜಿಯಾ ಬಳಬಟ್ಟಿ, ರೂಪಾ ಪಾಟೀಲ್, ಸುನೀಲ್ ಭಾವಿಕಟ್ಟಿ, ಮಹೇಶ್ ಗೊರನಾಳಕರ್ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು, ಬಸವಪರ ವಿವಿಧ ಸಂಘಟನೆಗಳ ಅನುಯಾಯಿಗಳು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...