Homeಮುಖಪುಟಪಠ್ಯ ಬದಲಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ಪಠ್ಯ ಬದಲಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ವಚನ ಕ್ರಾಂತಿ ಮೂಲಕ ಸಮಾನತೆಯ ಕನಸು ಕಂಡ ಬಸವಣ್ಣನವರ ಚರಿತ್ರೆಯನ್ನು ತಿರುಚುವುದು ಮಕ್ಕಳಿಗೆ ಅಷ್ಟೇ ಅಲ್ಲದೇ, ಇಡೀ ಸಮಾಜಕ್ಕೆ ಮಾಡಿದ ಮೋಸ.

- Advertisement -
- Advertisement -

ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಮುಗ್ಧ ಮಕ್ಕಳ ಹಾಗೂ ಪೋಷಕರ ಮನಸ್ಸಿನಲ್ಲಿ ತಪ್ಪು ಅಭಿಪ್ರಾಯ ಬಿತ್ತಿ, ತಪ್ಪು ಭಾವನೆಗಳು ಮೂಡಿಸಿರುವುದು ಖಂಡನೀಯ. ಕೂಡಲೇ ಪಠ್ಯಪುಸ್ತಕ ಬದಲಾವಣೆ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ ನೀಡಿದ್ದಾರೆ.

ಬೀದರ್‌ನಲ್ಲಿ ಜಿಲ್ಲಾ ಕಸಾಪ ಹಾಗೂ ಬಸವಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಒಂದಲ್ಲ ಎರಡಲ್ಲ ಬಹಳಷ್ಟು ಬದಲಾವಣೆ ಮಾಡಿದ್ದಾರೆ, ಬಸವಣ್ಣನವರ ವಿಚಾರಧಾರೆಯಲ್ಲಿ ಅನೇಕ ತಪ್ಪು ಮಾಡಿದ್ದಾರೆ, ಅದೇ ರಾಷ್ಟ್ರಕವಿ ಕುವೆಂಪು ಅವರಿಗೂ ಅಪಚಾರ ಆಗಿದೆ. ಹೀಗಾಗಿ ಈ ಬಗ್ಗೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು ಕೂಡಲೇ ತಪ್ಪನ್ನು ಸರಿಪಡಿಸಬೇಕು. ತಪ್ಪು ಮಾಡಿರುವುದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಂಡು ತಿದ್ದಿಕೊಳ್ಳಬೇಕು. ಒಂದು ವೇಳೆ ತಿದ್ದಿಕೊಳ್ಳದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಿರಂತರವಾಗಿ ನಡೆಸಲಾಗುವುದು ಎಂದರು.

ಬೀದರ್ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ ಮಾತನಾಡಿ, ‘ಕನ್ನಡದ ದಿಗ್ಗಜ ಸಾಹಿತಿ ಕುವೆಂಪು ರಚನೆಯ ನಾಡಗೀತೆಗೆ ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ಎಂಬುವನನ್ನು ಗಡಿಪಾರು ಮಾಡಬೇಕು. ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಯಾವುದೇ ಕಾರಣಕ್ಕೂ ಪಠ್ಯ ಪುಸ್ತಕ ಪರಿಷ್ಕರಣೆ ಹಿಂಪಡೆಯುವುದಿಲ್ಲ ಎಂದು ಹೇಳುವ ಮೂಲಕ ಉದ್ಧಟತನ ಪ್ರದರ್ಶಿಸಿದ್ದಾರೆ. ಅವರಿಗೆ ನೈತಿಕತೆ ಇದ್ರೆ ರಾಜಿನಾಮೆ ಕೊಡಬೇಕು, ಇಲ್ಲದಿದ್ದರೆ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

ಸನಾತನ ಧರ್ಮ, ಶೈವ ಪರಂಪರೆ ಜಾರಿಗೊಳಿಸಿದರೂ ಲಿಂಗಾಯತರು ಏನು ಅನ್ನುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಮತ್ತೆ ಬಿಜೆಪಿಗೆ ಮತ ಹಾಕುತ್ತಾರೆ ಎಂಬ ಭಾವನೆ ಈಗಿನ ರಾಜ್ಯ ಸರ್ಕಾರಕ್ಕಿದೆ. ಲಿಂಗಾಯತರು ಎಚ್ಚರಗೊಂಡು ಮೂಲ ಇತಿಹಾಸ ತಿರುಚಲು ಹೊರಟಿದವರಿಗೆ ಪಾಠ ಕಲಿಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ ಆನಂದ ದೇವಪ್ಪ ಹೇಳಿದರು.

ಸಾಹಿತಿಗಳು, ಕಲಾವಿದರು ನಾಡಿನ ಅನಭಿಷಿಕ್ತ ಶಾಸಕರು ಇದ್ದಂತೆ, ಅವರನ್ನು ಅಪಮಾನಗೊಳಿಸುವುದು ಅಥವಾ ಅವರ ಚರಿತ್ರೆಯನ್ನು ತಿರುಚಿ ಬರೆಯುವುದು ಅಕ್ಷಮ್ಯ ಅಪರಾಧವಾಗುತ್ತದೆ. ಆದರೆ ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರ ಸಾಹಿತಿಗಳನ್ನು ಅಪಮಾನಗೊಳಿಸಿರುವುದು ಮತ್ತು ಅವರ ಚರಿತ್ರೆಯನ್ನು ತಿರುಚಿ ಬರೆಸುವ ಮೂಲಕ ನಾಡಿನಲ್ಲಿ ಅರಾಜಕತೆ ಹುಟ್ಟು ಹಾಕಿದಂತಾಗಿದೆ. ನಾಡಗೀತೆ ತಿರುಚಿ ಬರೆದವರ ವಿರುದ್ಧ ಸರ್ಕಾರ ವಾರದೊಳಗೆ ಕ್ರಮಕೈಗೊಳ್ಳಬೇಕು ಎಂದು ಯುವ ಹೋರಾಟಗಾರ ವಿರುಪಾಕ್ಷ ಗಾದಗಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

ವಚನ ಕ್ರಾಂತಿ ಮೂಲಕ ಸಮಾನತೆಯ ಸಮಾಜದ ಕನಸು ಕಂಡ ಬಸವಣ್ಣನವರ ಚರಿತ್ರೆಯನ್ನು ತಿರುಚುವುದು ಮಕ್ಕಳಿಗೆ ಅಷ್ಟೇ ಅಲ್ಲದೇ, ಇಡೀ ಸಮಾಜಕ್ಕೆ ಮಾಡಿದ ಮೋಸ. ಪಠ್ಯ ಪುಸ್ತಕ ಸಮಿತಿ ಕಾರ್ಯ ಅಕ್ಷಮ್ಯ ಅಪರಾಧ. ಇದು ರಾಜ್ಯ ಸರ್ಕಾರ ಪೋಷಿತ ಕೆಲಸವೇ ಆಗಿದೆ. ಇದಕ್ಕೆ ದಿಕ್ಕಾರ ಹೇಳಲೇಬೇಕು ಎಂದು ಹುಲಸೂರು ಶ್ರೀಗಳು ಹೇಳಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ಶ್ರೀಕಾಂತ ಸ್ವಾಮಿ, ಶರಣಪ್ಪಾ ಮಿಠಾರೆ, ವಿಜಯಕುಮಾರ್ ಸೋನಾರೆ, ಎಂ.ಎಸ್.ಮನೋಹರ್, ವಿದ್ಯಾವತಿ ಬಲ್ಲೂರು, ರಜಿಯಾ ಬಳಬಟ್ಟಿ, ರೂಪಾ ಪಾಟೀಲ್, ಸುನೀಲ್ ಭಾವಿಕಟ್ಟಿ, ಮಹೇಶ್ ಗೊರನಾಳಕರ್ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು, ಬಸವಪರ ವಿವಿಧ ಸಂಘಟನೆಗಳ ಅನುಯಾಯಿಗಳು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...