Homeಮುಖಪುಟಪಠ್ಯ ಬದಲಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ಪಠ್ಯ ಬದಲಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ವಚನ ಕ್ರಾಂತಿ ಮೂಲಕ ಸಮಾನತೆಯ ಕನಸು ಕಂಡ ಬಸವಣ್ಣನವರ ಚರಿತ್ರೆಯನ್ನು ತಿರುಚುವುದು ಮಕ್ಕಳಿಗೆ ಅಷ್ಟೇ ಅಲ್ಲದೇ, ಇಡೀ ಸಮಾಜಕ್ಕೆ ಮಾಡಿದ ಮೋಸ.

- Advertisement -
- Advertisement -

ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಮುಗ್ಧ ಮಕ್ಕಳ ಹಾಗೂ ಪೋಷಕರ ಮನಸ್ಸಿನಲ್ಲಿ ತಪ್ಪು ಅಭಿಪ್ರಾಯ ಬಿತ್ತಿ, ತಪ್ಪು ಭಾವನೆಗಳು ಮೂಡಿಸಿರುವುದು ಖಂಡನೀಯ. ಕೂಡಲೇ ಪಠ್ಯಪುಸ್ತಕ ಬದಲಾವಣೆ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ ನೀಡಿದ್ದಾರೆ.

ಬೀದರ್‌ನಲ್ಲಿ ಜಿಲ್ಲಾ ಕಸಾಪ ಹಾಗೂ ಬಸವಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಒಂದಲ್ಲ ಎರಡಲ್ಲ ಬಹಳಷ್ಟು ಬದಲಾವಣೆ ಮಾಡಿದ್ದಾರೆ, ಬಸವಣ್ಣನವರ ವಿಚಾರಧಾರೆಯಲ್ಲಿ ಅನೇಕ ತಪ್ಪು ಮಾಡಿದ್ದಾರೆ, ಅದೇ ರಾಷ್ಟ್ರಕವಿ ಕುವೆಂಪು ಅವರಿಗೂ ಅಪಚಾರ ಆಗಿದೆ. ಹೀಗಾಗಿ ಈ ಬಗ್ಗೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು ಕೂಡಲೇ ತಪ್ಪನ್ನು ಸರಿಪಡಿಸಬೇಕು. ತಪ್ಪು ಮಾಡಿರುವುದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಂಡು ತಿದ್ದಿಕೊಳ್ಳಬೇಕು. ಒಂದು ವೇಳೆ ತಿದ್ದಿಕೊಳ್ಳದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಿರಂತರವಾಗಿ ನಡೆಸಲಾಗುವುದು ಎಂದರು.

ಬೀದರ್ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ ಮಾತನಾಡಿ, ‘ಕನ್ನಡದ ದಿಗ್ಗಜ ಸಾಹಿತಿ ಕುವೆಂಪು ರಚನೆಯ ನಾಡಗೀತೆಗೆ ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ಎಂಬುವನನ್ನು ಗಡಿಪಾರು ಮಾಡಬೇಕು. ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಯಾವುದೇ ಕಾರಣಕ್ಕೂ ಪಠ್ಯ ಪುಸ್ತಕ ಪರಿಷ್ಕರಣೆ ಹಿಂಪಡೆಯುವುದಿಲ್ಲ ಎಂದು ಹೇಳುವ ಮೂಲಕ ಉದ್ಧಟತನ ಪ್ರದರ್ಶಿಸಿದ್ದಾರೆ. ಅವರಿಗೆ ನೈತಿಕತೆ ಇದ್ರೆ ರಾಜಿನಾಮೆ ಕೊಡಬೇಕು, ಇಲ್ಲದಿದ್ದರೆ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

ಸನಾತನ ಧರ್ಮ, ಶೈವ ಪರಂಪರೆ ಜಾರಿಗೊಳಿಸಿದರೂ ಲಿಂಗಾಯತರು ಏನು ಅನ್ನುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಮತ್ತೆ ಬಿಜೆಪಿಗೆ ಮತ ಹಾಕುತ್ತಾರೆ ಎಂಬ ಭಾವನೆ ಈಗಿನ ರಾಜ್ಯ ಸರ್ಕಾರಕ್ಕಿದೆ. ಲಿಂಗಾಯತರು ಎಚ್ಚರಗೊಂಡು ಮೂಲ ಇತಿಹಾಸ ತಿರುಚಲು ಹೊರಟಿದವರಿಗೆ ಪಾಠ ಕಲಿಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ ಆನಂದ ದೇವಪ್ಪ ಹೇಳಿದರು.

ಸಾಹಿತಿಗಳು, ಕಲಾವಿದರು ನಾಡಿನ ಅನಭಿಷಿಕ್ತ ಶಾಸಕರು ಇದ್ದಂತೆ, ಅವರನ್ನು ಅಪಮಾನಗೊಳಿಸುವುದು ಅಥವಾ ಅವರ ಚರಿತ್ರೆಯನ್ನು ತಿರುಚಿ ಬರೆಯುವುದು ಅಕ್ಷಮ್ಯ ಅಪರಾಧವಾಗುತ್ತದೆ. ಆದರೆ ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರ ಸಾಹಿತಿಗಳನ್ನು ಅಪಮಾನಗೊಳಿಸಿರುವುದು ಮತ್ತು ಅವರ ಚರಿತ್ರೆಯನ್ನು ತಿರುಚಿ ಬರೆಸುವ ಮೂಲಕ ನಾಡಿನಲ್ಲಿ ಅರಾಜಕತೆ ಹುಟ್ಟು ಹಾಕಿದಂತಾಗಿದೆ. ನಾಡಗೀತೆ ತಿರುಚಿ ಬರೆದವರ ವಿರುದ್ಧ ಸರ್ಕಾರ ವಾರದೊಳಗೆ ಕ್ರಮಕೈಗೊಳ್ಳಬೇಕು ಎಂದು ಯುವ ಹೋರಾಟಗಾರ ವಿರುಪಾಕ್ಷ ಗಾದಗಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

ವಚನ ಕ್ರಾಂತಿ ಮೂಲಕ ಸಮಾನತೆಯ ಸಮಾಜದ ಕನಸು ಕಂಡ ಬಸವಣ್ಣನವರ ಚರಿತ್ರೆಯನ್ನು ತಿರುಚುವುದು ಮಕ್ಕಳಿಗೆ ಅಷ್ಟೇ ಅಲ್ಲದೇ, ಇಡೀ ಸಮಾಜಕ್ಕೆ ಮಾಡಿದ ಮೋಸ. ಪಠ್ಯ ಪುಸ್ತಕ ಸಮಿತಿ ಕಾರ್ಯ ಅಕ್ಷಮ್ಯ ಅಪರಾಧ. ಇದು ರಾಜ್ಯ ಸರ್ಕಾರ ಪೋಷಿತ ಕೆಲಸವೇ ಆಗಿದೆ. ಇದಕ್ಕೆ ದಿಕ್ಕಾರ ಹೇಳಲೇಬೇಕು ಎಂದು ಹುಲಸೂರು ಶ್ರೀಗಳು ಹೇಳಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ಶ್ರೀಕಾಂತ ಸ್ವಾಮಿ, ಶರಣಪ್ಪಾ ಮಿಠಾರೆ, ವಿಜಯಕುಮಾರ್ ಸೋನಾರೆ, ಎಂ.ಎಸ್.ಮನೋಹರ್, ವಿದ್ಯಾವತಿ ಬಲ್ಲೂರು, ರಜಿಯಾ ಬಳಬಟ್ಟಿ, ರೂಪಾ ಪಾಟೀಲ್, ಸುನೀಲ್ ಭಾವಿಕಟ್ಟಿ, ಮಹೇಶ್ ಗೊರನಾಳಕರ್ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು, ಬಸವಪರ ವಿವಿಧ ಸಂಘಟನೆಗಳ ಅನುಯಾಯಿಗಳು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...