Homeಮುಖಪುಟಪಠ್ಯ ಬದಲಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ಪಠ್ಯ ಬದಲಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ

ವಚನ ಕ್ರಾಂತಿ ಮೂಲಕ ಸಮಾನತೆಯ ಕನಸು ಕಂಡ ಬಸವಣ್ಣನವರ ಚರಿತ್ರೆಯನ್ನು ತಿರುಚುವುದು ಮಕ್ಕಳಿಗೆ ಅಷ್ಟೇ ಅಲ್ಲದೇ, ಇಡೀ ಸಮಾಜಕ್ಕೆ ಮಾಡಿದ ಮೋಸ.

- Advertisement -
- Advertisement -

ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಮುಗ್ಧ ಮಕ್ಕಳ ಹಾಗೂ ಪೋಷಕರ ಮನಸ್ಸಿನಲ್ಲಿ ತಪ್ಪು ಅಭಿಪ್ರಾಯ ಬಿತ್ತಿ, ತಪ್ಪು ಭಾವನೆಗಳು ಮೂಡಿಸಿರುವುದು ಖಂಡನೀಯ. ಕೂಡಲೇ ಪಠ್ಯಪುಸ್ತಕ ಬದಲಾವಣೆ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ಪಟ್ಟದ್ದೇವರು ಎಚ್ಚರಿಕೆ ನೀಡಿದ್ದಾರೆ.

ಬೀದರ್‌ನಲ್ಲಿ ಜಿಲ್ಲಾ ಕಸಾಪ ಹಾಗೂ ಬಸವಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಒಂದಲ್ಲ ಎರಡಲ್ಲ ಬಹಳಷ್ಟು ಬದಲಾವಣೆ ಮಾಡಿದ್ದಾರೆ, ಬಸವಣ್ಣನವರ ವಿಚಾರಧಾರೆಯಲ್ಲಿ ಅನೇಕ ತಪ್ಪು ಮಾಡಿದ್ದಾರೆ, ಅದೇ ರಾಷ್ಟ್ರಕವಿ ಕುವೆಂಪು ಅವರಿಗೂ ಅಪಚಾರ ಆಗಿದೆ. ಹೀಗಾಗಿ ಈ ಬಗ್ಗೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು ಕೂಡಲೇ ತಪ್ಪನ್ನು ಸರಿಪಡಿಸಬೇಕು. ತಪ್ಪು ಮಾಡಿರುವುದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಂಡು ತಿದ್ದಿಕೊಳ್ಳಬೇಕು. ಒಂದು ವೇಳೆ ತಿದ್ದಿಕೊಳ್ಳದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಿರಂತರವಾಗಿ ನಡೆಸಲಾಗುವುದು ಎಂದರು.

ಬೀದರ್ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ ಮಾತನಾಡಿ, ‘ಕನ್ನಡದ ದಿಗ್ಗಜ ಸಾಹಿತಿ ಕುವೆಂಪು ರಚನೆಯ ನಾಡಗೀತೆಗೆ ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ಎಂಬುವನನ್ನು ಗಡಿಪಾರು ಮಾಡಬೇಕು. ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಯಾವುದೇ ಕಾರಣಕ್ಕೂ ಪಠ್ಯ ಪುಸ್ತಕ ಪರಿಷ್ಕರಣೆ ಹಿಂಪಡೆಯುವುದಿಲ್ಲ ಎಂದು ಹೇಳುವ ಮೂಲಕ ಉದ್ಧಟತನ ಪ್ರದರ್ಶಿಸಿದ್ದಾರೆ. ಅವರಿಗೆ ನೈತಿಕತೆ ಇದ್ರೆ ರಾಜಿನಾಮೆ ಕೊಡಬೇಕು, ಇಲ್ಲದಿದ್ದರೆ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

ಸನಾತನ ಧರ್ಮ, ಶೈವ ಪರಂಪರೆ ಜಾರಿಗೊಳಿಸಿದರೂ ಲಿಂಗಾಯತರು ಏನು ಅನ್ನುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಮತ್ತೆ ಬಿಜೆಪಿಗೆ ಮತ ಹಾಕುತ್ತಾರೆ ಎಂಬ ಭಾವನೆ ಈಗಿನ ರಾಜ್ಯ ಸರ್ಕಾರಕ್ಕಿದೆ. ಲಿಂಗಾಯತರು ಎಚ್ಚರಗೊಂಡು ಮೂಲ ಇತಿಹಾಸ ತಿರುಚಲು ಹೊರಟಿದವರಿಗೆ ಪಾಠ ಕಲಿಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ ಆನಂದ ದೇವಪ್ಪ ಹೇಳಿದರು.

ಸಾಹಿತಿಗಳು, ಕಲಾವಿದರು ನಾಡಿನ ಅನಭಿಷಿಕ್ತ ಶಾಸಕರು ಇದ್ದಂತೆ, ಅವರನ್ನು ಅಪಮಾನಗೊಳಿಸುವುದು ಅಥವಾ ಅವರ ಚರಿತ್ರೆಯನ್ನು ತಿರುಚಿ ಬರೆಯುವುದು ಅಕ್ಷಮ್ಯ ಅಪರಾಧವಾಗುತ್ತದೆ. ಆದರೆ ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರ ಸಾಹಿತಿಗಳನ್ನು ಅಪಮಾನಗೊಳಿಸಿರುವುದು ಮತ್ತು ಅವರ ಚರಿತ್ರೆಯನ್ನು ತಿರುಚಿ ಬರೆಸುವ ಮೂಲಕ ನಾಡಿನಲ್ಲಿ ಅರಾಜಕತೆ ಹುಟ್ಟು ಹಾಕಿದಂತಾಗಿದೆ. ನಾಡಗೀತೆ ತಿರುಚಿ ಬರೆದವರ ವಿರುದ್ಧ ಸರ್ಕಾರ ವಾರದೊಳಗೆ ಕ್ರಮಕೈಗೊಳ್ಳಬೇಕು ಎಂದು ಯುವ ಹೋರಾಟಗಾರ ವಿರುಪಾಕ್ಷ ಗಾದಗಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

ವಚನ ಕ್ರಾಂತಿ ಮೂಲಕ ಸಮಾನತೆಯ ಸಮಾಜದ ಕನಸು ಕಂಡ ಬಸವಣ್ಣನವರ ಚರಿತ್ರೆಯನ್ನು ತಿರುಚುವುದು ಮಕ್ಕಳಿಗೆ ಅಷ್ಟೇ ಅಲ್ಲದೇ, ಇಡೀ ಸಮಾಜಕ್ಕೆ ಮಾಡಿದ ಮೋಸ. ಪಠ್ಯ ಪುಸ್ತಕ ಸಮಿತಿ ಕಾರ್ಯ ಅಕ್ಷಮ್ಯ ಅಪರಾಧ. ಇದು ರಾಜ್ಯ ಸರ್ಕಾರ ಪೋಷಿತ ಕೆಲಸವೇ ಆಗಿದೆ. ಇದಕ್ಕೆ ದಿಕ್ಕಾರ ಹೇಳಲೇಬೇಕು ಎಂದು ಹುಲಸೂರು ಶ್ರೀಗಳು ಹೇಳಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ಶ್ರೀಕಾಂತ ಸ್ವಾಮಿ, ಶರಣಪ್ಪಾ ಮಿಠಾರೆ, ವಿಜಯಕುಮಾರ್ ಸೋನಾರೆ, ಎಂ.ಎಸ್.ಮನೋಹರ್, ವಿದ್ಯಾವತಿ ಬಲ್ಲೂರು, ರಜಿಯಾ ಬಳಬಟ್ಟಿ, ರೂಪಾ ಪಾಟೀಲ್, ಸುನೀಲ್ ಭಾವಿಕಟ್ಟಿ, ಮಹೇಶ್ ಗೊರನಾಳಕರ್ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು, ಬಸವಪರ ವಿವಿಧ ಸಂಘಟನೆಗಳ ಅನುಯಾಯಿಗಳು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...