Homeಮುಖಪುಟಪಠ್ಯಪುಸ್ತಕಗಳಲ್ಲಿ ನಮ್ಮ ಹೆಸರು ಕೈಬಿಡಿ: ಎನ್‌ಸಿಇಆರ್‌ಟಿಗೆ ಪತ್ರ ಬರೆದ 33 ತಜ್ಞರು

ಪಠ್ಯಪುಸ್ತಕಗಳಲ್ಲಿ ನಮ್ಮ ಹೆಸರು ಕೈಬಿಡಿ: ಎನ್‌ಸಿಇಆರ್‌ಟಿಗೆ ಪತ್ರ ಬರೆದ 33 ತಜ್ಞರು

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಇಆರ್‌ಟಿ) ರಾಜ್ಯಶಾಸ್ತ್ರದ ಪಠ್ಯಗಳನ್ನು “ಗುರುತಿಸಲಾಗದಷ್ಟು ವಿರೂಪಗೊಳಿಸಲಾಗಿದೆ” ಹಾಗಾಗಿ ತಮ್ಮ ಹೆಸರನ್ನು ಕೈಬಿಡುವಂತೆ ದೇಶದ ಪ್ರತಿಷ್ಠಿತ ವಿವಿಗಳ 33 ವಿದ್ವಾಂಸರ ಗುಂಪು ಒತ್ತಾಯಿಸಿದೆ.

ಇತ್ತೀಚೆಗೆ ತಾನೇ ಮುಖ್ಯ ಸಲಹೆಗಾರರ ಮಂಡಳಿಯಿಂದ ಕೈಬಿಡುವಂತೆ ಶಿಕ್ಷಣ ತಜ್ಞ ಸುಹಾಸ್ ಪಾಲ್ಶಿಕರ್ ಮತ್ತು ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಸಹ ಒತ್ತಾಯಿಸಿದ್ದರು. ಸದ್ಯ ಪತ್ರ ಬರೆದ 33 ಶಿಕ್ಷಣ ತಜ್ಞರಲ್ಲಿ ಮೈಸೂರು ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಮುಜಾಫರ್ ಅಸ್ಸಾದಿ, ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯದ ಶೈಕ್ಷಣಿಕ ನಿರ್ದೇಶಕ ಸಂದೀಪ್‌ ಶಾಸ್ತ್ರಿ ಕೂಡ ಸೇರಿದ್ದಾರೆ.

‘ವಿಭಿನ್ನ ದೃಷ್ಟಿಕೋನಗಳ ಹೊರತಾಗಿಯೂ ನಾವೆಲ್ಲರೂ ಶಾಲಾ ಪಠ್ಯಪುಸ್ತಕಗಳ ರಾಜಕೀಯ ಶಾಸ್ತ್ರದಲ್ಲಿ ಗಮನಾರ್ಹವಾದ ಪಠ್ಯ ರಚಿಸುವಿಕೆಗೆ ಒಟ್ಟಾಗಿ ಕೆಲಸ ಮಾಡಿದ್ದೇವೆ. ಆದಾಗ್ಯೂ, ಎನ್‌ಸಿಇಆರ್‌ಟಿ ಈಗ ಈ ಪಠ್ಯಪುಸ್ತಕಗಳಲ್ಲಿ ಹಲವು ನಿರ್ಣಾಯಕ ಬದಲಾವಣೆಗಳನ್ನು, ತಿರುಚುವಿಕೆ ಮತ್ತು ಅಳಿಸುವಿಕೆಗಳನ್ನು ಮಾಡಿದೆ. ಇವುಗಳು ಯಾವುದೂ ಸ್ವೀಕಾರಾರ್ಹವಲ್ಲ ಮತ್ತು ಅಪೇಕ್ಷಣೀಯ ವಿಷಯಗಳನ್ನು ಯಾವುದೇ ಪ್ರಮುಖ ಕಾರಣ ನೀಡದೆ ಮುದ್ರಿಸಲಾಗಿದೆ. ಇವು ಶೈಕ್ಷಣಿಕ ಜ್ಞಾನ ಉತ್ಪಾದನೆಗೆ ಆಧಾರವಾಗಿರುವ ಪಾರದರ್ಶಕತೆಯನ್ನು ಉಲ್ಲಂಘಿಸುವುದರ ಜೊತೆ ವಿವಾದವನ್ನು ಸೃಷ್ಟಿಸುತ್ತದೆ’ ಎಂದು ಪತ್ರದಲ್ಲಿ ವಿವರಿಸಲಾಗಿದೆ.

‘ಮೂಲ ಪಠ್ಯಗಳಲ್ಲಿ ಹಲವಾರು ವಿಷಯಾಧಾರಿತ ಪರಿಷ್ಕರಣೆಗಳು ಇರುವುದರಿಂದ, ಅವುಗಳನ್ನು ವಿಭಿನ್ನ ಪುಸ್ತಕಗಳಾಗಿ ಮಾಡುವುದರಿಂದ ನಾವು ತಯಾರಿಸಿದ ಪುಸ್ತಕಗಳು ಎಂದು ಹೇಳಿಕೊಳ್ಳುವುದು ಮತ್ತು ನಮ್ಮ ಹೆಸರನ್ನು ಅವುಗಳೊಂದಿಗೆ ಸಂಯೋಜಿಸುವುದು ನಮಗೆ ಕಷ್ಟಕರವಾಗಿದೆ. ಬದಲಾವಣೆಯಿಂದ ಪಠ್ಯಪುಸ್ತಕಗಳನ್ನು ಗುರುತಿಸಲಾಗದಷ್ಟು ವಿರೂಪಗೊಳಿಸಲಾಗಿದೆ ಮತ್ತು ಅವುಗಳನ್ನು ಶೈಕ್ಷಣಿಕವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಈಗ ಕೈಗೊಂಡಿರುವ ಸೃಜನಾತ್ಮಕ ಸಾಮೂಹಿಕ ಪ್ರಯತ್ನವು ಅಪಾಯದಲ್ಲಿದೆ ಎಂದು ನಾವು ಈಗ ನಂಬುತ್ತೇವೆ’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸ್ವರಾಜ್ ಅಭಿಯಾನದ ರಾಜಕೀಯ ಪಕ್ಷದ ಸಂಸ್ಥಾಪಕರಾದ ಪಾಲ್ಶಿಕರ್ ಮತ್ತು ಯಾದವ್ ಅವರನ್ನು 9 ರಿಂದ 12 ನೇ ತರಗತಿಯ NCERT ಯ ರಾಜ್ಯಶಾಸ್ತ್ರ ಪಠ್ಯಪುಸ್ತಕಗಳಿಗೆ ಮುಖ್ಯ ಸಲಹೆಗಾರರಾಗಿ ಹೆಸರು ಸೇರಿಸಲಾಗಿದೆ.

ಕರೋನವೈರಸ್ ಸಾಂಕ್ರಾಮಿಕ ರೋಗದಿಂದ ಮಕ್ಕಳಿಗೆ ಪಠ್ಯ ಹೊರೆಯಾಗಬಾರದೆಂದು ಕಡಿಮೆ ಮಾಡುವು ಉದ್ದೇಶದಿಂದ ಎನ್‌ಸಿಇಆರ್‌ಟಿಯು ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಆದರೆ ಆ ಸಂದರ್ಭದಲ್ಲಿ ಭಾರತದ ಇತಿಹಾಸದ ಪ್ರಮುಖ ವಿವರಗಳನ್ನು ಕೈಬಿಟ್ಟಿದೆ.

ಮೋಹನ್‌ದಾಸ್ ಕರಮಚಂದ್ ಗಾಂಧಿ ಅವರನ್ನು ಹತ್ಯೆ ಮಾಡಲು ಹಿಂದೂ ಉಗ್ರಗಾಮಿಗಳು ನಡೆಸಿದ ಪ್ರಯತ್ನಗಳು ಮತ್ತು ಅವರ ಹತ್ಯೆಯ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ವಿಧಿಸಲಾದ ನಿಷೇಧದ ಪ್ಯಾರಾಗಳನ್ನು ಎನ್‌ಸಿಇಆರ್‌ಟಿ ಪಠ್ಯದಿಂದ ಕೈಬಿಡಲಾಗಿದೆ.

ಕಳೆದ ವರ್ಷ, NCERT 2002ರ ಗುಜರಾತ್ ಗಲಭೆಗಳು, ಭಾರತದಲ್ಲಿ ಮೊಘಲ್ ಆಳ್ವಿಕೆ ಮತ್ತು 1975ರಲ್ಲಿ ಹೇರಲಾದ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ವಿಷಯವನ್ನು ಸಹ ಕೈಬಿಟ್ಟಿತು. ಈಗ NCERT ಪಠ್ಯಪುಸ್ತಕದಲ್ಲಿ ಗುಜರಾತ್ ಗಲಭೆಯ ಬಗ್ಗೆ ಯಾವುದೇ ಉಲ್ಲೇಖಗಳು ಇಲ್ಲದಂತಾಗಿದೆ.

ಎನ್‌ಸಿಇಆರ್‌ಟಿ ನಿರ್ದೇಶಕ ದಿನೇಶ್ ಸಕ್ಲಾನಿ ಅವರಿಗೆ ಗುರುವಾರ ಪಾಲ್ಶಿಕರ್ ಮತ್ತು ಯಾದವ್ ಅವರು ಪತ್ರ ಬರೆದಿದ್ದು, ”ತಮ್ಮ ಜೊತೆ ಯಾವುದೇ ಚರ್ಚೆನಡೆಸದೇ ಅಥವಾ ಪಠ್ಯ ಕೈಬಿಡುವ ವಿಚಾರ ತಿಳಿಸಿಲ್ಲ” ಎಂದು ಅವರು ಹೇಳಿದರು.

ಎನ್‌ಸಿಇಆರ್‌ಟಿಯು ಈ ರೀತಿ ಪಠ್ಯ ಕೈಬಿಡುವುದರ ಹಿಂದೆ ಯಾವುದೇ ಶೈಕ್ಷಣಿಕ ತಾರ್ಕಿಕತೆಯನ್ನು ನೋಡಲಾಗಿಲ್ಲ ಎಂದು ಪಾಲ್ಶಿಕರ್ ಮತ್ತು ಯಾದವ್ ಅವರು ಹೇಳಿದ್ದಾರೆ.

”ಪಠ್ಯಪುಸ್ತಕಗಳು ಪಕ್ಷಪಾತದ ರೀತಿಯಲ್ಲಿ ರೂಪಿಸಬಾರದು ಮತ್ತು ಸಮಾಜ ವಿಜ್ಞಾನದ ವಿದ್ಯಾರ್ಥಿಗಳಲ್ಲಿ ವಿಮರ್ಶೆ ಮತ್ತು ಪ್ರಶ್ನಿಸುವ ಮನೋಭಾವವನ್ನು ತಗ್ಗಿಸಬಾರದು” ಎಂದು ಪತ್ರದಲ್ಲಿ ಸೇರಿಸಲಾಗಿದೆ.

“ವಿರೂಪಗೊಂಡ ಮತ್ತು ಶೈಕ್ಷಣಿಕವಾಗಿ ಕಾರ್ಯನಿರ್ವಹಿಸದ ಪಠ್ಯಪುಸ್ತಕಗಳಿಗೆ” ತಮ್ಮ ಹೆಸರುಗಳನ್ನು ಮುಖ್ಯ ಸಲಹೆಗಾರರಾಗಿ ಉಲ್ಲೇಖಿಸಿರುವುದು “ಮುಜುಗರ” ಎಂದು ಶಿಕ್ಷಣತಜ್ಞ ಮತ್ತು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಇದನ್ನೂ ಓದಿ; ಸಿಎಎ, ಎನ್‌ಆರ್‌ಸಿ ಟೀಕಿಸಿ ನಾಟಕ ಪ್ರದರ್ಶನ: ಬೀದರ್‌ನ ಶಾಹೀನ್ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣ… ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...