Homeಕರ್ನಾಟಕಅಂಬೇಡ್ಕರ್‌ ಕುರಿತ ಪದ್ಯ ತೆರವು; ಕೆದಕಿದಷ್ಟೂ ಸಿಗುತ್ತಿವೆ ಚಕ್ರತೀರ್ಥ ಸಮಿತಿಯ ಹುಳುಕು!

ಅಂಬೇಡ್ಕರ್‌ ಕುರಿತ ಪದ್ಯ ತೆರವು; ಕೆದಕಿದಷ್ಟೂ ಸಿಗುತ್ತಿವೆ ಚಕ್ರತೀರ್ಥ ಸಮಿತಿಯ ಹುಳುಕು!

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ನಡೆದಿರುವ ಪಠ್ಯಪುಸ್ತಕ ಪರಿಶೀಲನೆಯಲ್ಲಿ ಹಲವಾರು ತಪ್ಪುಗಳು ಕಂಡು ಬರುತ್ತಿವೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಸಂಬಂಧಿಸಿದ ಪಠ್ಯಗಳ ವಿಚಾರದಲ್ಲಿ ಸಮಿತಿ ಅಸಡ್ಡೆಯ ತೋರಿರುವುದು ಸ್ಪಷ್ಟವಾಗುತ್ತಿದೆ.

ಚೆನ್ನಣ್ಣ ವಾಲೀಕಾರ ಅವರು ಬರೆದಿರುವ ‘ನೀ ಹೋದ ಮರುದಿನ’ ಎಂಬ ಪದ್ಯವನ್ನು ಆರನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪರಿಶೀಲನಾ ಸಮಿತಿ ಅಳವಡಿಸಿತ್ತು. ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತ ಈ ಪದ್ಯವನ್ನು ನೂತನ ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯು ತೆಗೆದುಹಾಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಶೋಷಿತ ಸಮುದಾಯಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಆದರೆ ಶೋಷಿತ ಸಮುದಾಯ ಎದುರಿಸುತ್ತಿರುವ ಅವಮಾನ, ಅನ್ಯಾಯ, ಅಸ್ಪಶ್ಯತೆಯೇನೂ ಬಾಬಾ ಸಾಹೇಬರು ತೀರಿಕೊಂಡ ಬಳಿಕ ಕಡಿಮೆಯಾಗಿಲ್ಲ. ಅದು ಮುಂದುವರಿಯುತ್ತಲೇ ಇದೆ. ಸಂವಿಧಾನದ ವಿಧಿ 17ರ ಪ್ರಕಾರ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಿದ್ದರೂ ಅದು ಇನ್ನೂ ಸಮಾಜದಲ್ಲಿ ಜೀವಂತವಿದೆ. ಇಳೆಯ ಮಕ್ಕಳಲ್ಲಿ ಆರಂಭದಲ್ಲೇ ಈ ಜಾತಿ ವ್ಯವಸ್ಥೆಯ ನೋವು, ಅಸಮಾನತೆ, ಸಾಮಾಜಿಕ ನ್ಯಾಯದ ಅರಿವುಗಳನ್ನು ತುಂಬುತ್ತಾ ಹೋದರೆ ಶೋಷಿತ ಸಮುದಾಯ ಈ ಕಷ್ಟಗಳಿಂದ ಹೊರಬರಬಹುದು” ಎಂಬುದು ಎಂಥವರಿಗೂ ಅರ್ಥವಾಗುವ ಸಂಗತಿ. ಆದರೆ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಬಾಬಾ ಸಾಹೇಬರ ಕುರಿತ ಈ ಕಾವ್ಯವನ್ನೇ ತೆಗೆದುಹಾಕಿ ಅಸ್ಪಶ್ಯತೆಯನ್ನು ಆಚರಿಸಿದಂತೆ ಕಾಣುತ್ತಿದೆ!

ಬಾಬಾ ಸಾಹೇಬರ ವಿಷಯದಲ್ಲಿ ಹಲವು ತಿರುಚುವಿಕೆ

‘ಡಾ.ಬಿ.ಆರ್‌.ಅಂಬೇಡ್ಕರ್’ ಅವರಿಗೆ ಸಂವಿಧಾನ ಶಿಲ್ಪಿ ಎಂಬ ಬಿರುದು ಇರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಆದರೆ ಅದನ್ನು ಚಕ್ರತೀರ್ಥ ಸಮಿತಿ ಮರೆಮಾಚಿದೆ.

‘ಕರಡು ರಚನಾ ಸಮಿತಿ’ ಉಪಶೀರ್ಷಿಕೆಯಲ್ಲಿ ನೀಡಲಾಗಿದ್ದ ಹಳೆಯ ಪಠ್ಯದಲ್ಲಿ ಹೀಗಿತ್ತು: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು 22 ಸಮಿತಿಗಳನ್ನು, 5 ಉಪಸಮಿತಿಗಳನ್ನು ಹೊಂದಿತ್ತು. ಇವುಗಳಲ್ಲಿ ಪ್ರಮುಖವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ರವರು ಇದರ ಅಧ್ಯಕ್ಷರಾಗಿದ್ದರು. ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ. ಈ ಕರಡು ಸಮಿತಿಯಲ್ಲಿ ಎನ್.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ, ಮಹಮ್ಮದ್‌ ಸಾದುಲ್ಲಾ, ಸಿ.ಮಾಧವರಾವ್‌ ಅವರು ಸದಸ್ಯರಾಗಿದ್ದರು.”

ಇದನ್ನೂ ಓದಿರಿ: ‘ಕನ್ನಡ ರಾಜ್ಯೋತ್ಸವ’ ಕುರಿತ ಪಾಠವನ್ನೇ ಕಿತ್ತುಬಿಸಾಡಿದ ಚಕ್ರತೀರ್ಥ ಸಮಿತಿ!

ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿಯು ‘ಕರಡು ಸಮಿತಿ’ ಉಪಶೀರ್ಷಿಕೆಯಲ್ಲಿದ ವಿಷಯಗಳನ್ನು ಹೀಗೆ ಪರಿಷ್ಕರಣೆ ಮಾಡಿದೆ: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು ಅನೇಕ ಸಮಿತಿಗಳನ್ನು ರಚಿಸಿತು. ಅವುಗಳಲ್ಲಿ ಮುಖ್ಯವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ ಅದರ ಅಧ್ಯಕ್ಷರಾಗಿದ್ದರು. ಈ ಸಮಿತಿಯಲ್ಲಿ ಎನ್‌.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾದಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ ಮುಂತಾದ ಮುಸ್ಸದ್ಧಿಗಳು ಸದಸ್ಯರುಗಳಾಗಿದ್ದರು”- ಇಷ್ಟು ಮಾತ್ರ ಉಳಿಸಿಕೊಂಡು “ಇವರು (ಅಂಬೇಡ್ಕರ್‌) ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ” ಎಂಬ ಸಾಲನ್ನು ಕಿತ್ತುಹಾಕಲಾಗಿದೆ. ಇಲ್ಲಿ ಮಹಮ್ಮದ್‌ ಸಾದುಲ್ಲಾ, ಸಿ.ಮಾಧವರಾವ್‌ ಅವರ ಹೆಸರನ್ನು ಚಕ್ರತೀರ್ಥ ನಮೂದಿಸದೇ ಇರುವುದು ಏತಕ್ಕೆ ಎಂಬುದೂ ಚರ್ಚೆಯಾಗುತ್ತಿದೆ.

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹಿಂದೂ ಧರ್ಮದಲ್ಲಿನ ಜಾತಿ ವ್ಯವಸ್ಥೆಯಿಂದ ನೊಂದು, ಜಾತಿ ವ್ಯವಸ್ಥೆಯನ್ನು ವಿರೋಧಿಸಿದ ಬೌದ್ಧಧರ್ಮಕ್ಕೆ ಮರುಳುತ್ತಾರೆ. ಈ ವಿಷಯವನ್ನು ಹಳೆಯ ಪಠ್ಯದಲ್ಲಿ ಸೇರಿಸಲಾಗಿತ್ತು. ಆದರೆ ಹೊಸ ಪಠ್ಯದಲ್ಲಿ ಈ ವಿಷಯವನ್ನು ತೆರವು ಮಾಡಲಾಗಿದೆ. ಹೀಗೆ ಅಂಬೇಡ್ಕರ್‌ ಅವರಿಗೆ ಸಂಬಂಧಿಸಿದ ವಿಷಯಗಳನ್ನು ತಿರುಚುವ ಅಥವಾ ಪಠ್ಯದಿಂದಲೇ ಕೈಬಿಡುವ ಕೆಲಸವನ್ನು ಚಕ್ರತೀರ್ಥ ಸಮಿತಿ ಮಾಡಿದೆ. ಹುಡುಕಿದಷ್ಟೂ ಹುಳುಕುಗಳು ಕಣ್ಣಿಗೆ ರಾಚತೊಡಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...