Homeಕರ್ನಾಟಕಅಂಬೇಡ್ಕರ್‌ ಕುರಿತ ಪದ್ಯ ತೆರವು; ಕೆದಕಿದಷ್ಟೂ ಸಿಗುತ್ತಿವೆ ಚಕ್ರತೀರ್ಥ ಸಮಿತಿಯ ಹುಳುಕು!

ಅಂಬೇಡ್ಕರ್‌ ಕುರಿತ ಪದ್ಯ ತೆರವು; ಕೆದಕಿದಷ್ಟೂ ಸಿಗುತ್ತಿವೆ ಚಕ್ರತೀರ್ಥ ಸಮಿತಿಯ ಹುಳುಕು!

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ನಡೆದಿರುವ ಪಠ್ಯಪುಸ್ತಕ ಪರಿಶೀಲನೆಯಲ್ಲಿ ಹಲವಾರು ತಪ್ಪುಗಳು ಕಂಡು ಬರುತ್ತಿವೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಸಂಬಂಧಿಸಿದ ಪಠ್ಯಗಳ ವಿಚಾರದಲ್ಲಿ ಸಮಿತಿ ಅಸಡ್ಡೆಯ ತೋರಿರುವುದು ಸ್ಪಷ್ಟವಾಗುತ್ತಿದೆ.

ಚೆನ್ನಣ್ಣ ವಾಲೀಕಾರ ಅವರು ಬರೆದಿರುವ ‘ನೀ ಹೋದ ಮರುದಿನ’ ಎಂಬ ಪದ್ಯವನ್ನು ಆರನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪರಿಶೀಲನಾ ಸಮಿತಿ ಅಳವಡಿಸಿತ್ತು. ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತ ಈ ಪದ್ಯವನ್ನು ನೂತನ ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯು ತೆಗೆದುಹಾಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಶೋಷಿತ ಸಮುದಾಯಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಆದರೆ ಶೋಷಿತ ಸಮುದಾಯ ಎದುರಿಸುತ್ತಿರುವ ಅವಮಾನ, ಅನ್ಯಾಯ, ಅಸ್ಪಶ್ಯತೆಯೇನೂ ಬಾಬಾ ಸಾಹೇಬರು ತೀರಿಕೊಂಡ ಬಳಿಕ ಕಡಿಮೆಯಾಗಿಲ್ಲ. ಅದು ಮುಂದುವರಿಯುತ್ತಲೇ ಇದೆ. ಸಂವಿಧಾನದ ವಿಧಿ 17ರ ಪ್ರಕಾರ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಿದ್ದರೂ ಅದು ಇನ್ನೂ ಸಮಾಜದಲ್ಲಿ ಜೀವಂತವಿದೆ. ಇಳೆಯ ಮಕ್ಕಳಲ್ಲಿ ಆರಂಭದಲ್ಲೇ ಈ ಜಾತಿ ವ್ಯವಸ್ಥೆಯ ನೋವು, ಅಸಮಾನತೆ, ಸಾಮಾಜಿಕ ನ್ಯಾಯದ ಅರಿವುಗಳನ್ನು ತುಂಬುತ್ತಾ ಹೋದರೆ ಶೋಷಿತ ಸಮುದಾಯ ಈ ಕಷ್ಟಗಳಿಂದ ಹೊರಬರಬಹುದು” ಎಂಬುದು ಎಂಥವರಿಗೂ ಅರ್ಥವಾಗುವ ಸಂಗತಿ. ಆದರೆ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಬಾಬಾ ಸಾಹೇಬರ ಕುರಿತ ಈ ಕಾವ್ಯವನ್ನೇ ತೆಗೆದುಹಾಕಿ ಅಸ್ಪಶ್ಯತೆಯನ್ನು ಆಚರಿಸಿದಂತೆ ಕಾಣುತ್ತಿದೆ!

ಬಾಬಾ ಸಾಹೇಬರ ವಿಷಯದಲ್ಲಿ ಹಲವು ತಿರುಚುವಿಕೆ

‘ಡಾ.ಬಿ.ಆರ್‌.ಅಂಬೇಡ್ಕರ್’ ಅವರಿಗೆ ಸಂವಿಧಾನ ಶಿಲ್ಪಿ ಎಂಬ ಬಿರುದು ಇರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಆದರೆ ಅದನ್ನು ಚಕ್ರತೀರ್ಥ ಸಮಿತಿ ಮರೆಮಾಚಿದೆ.

‘ಕರಡು ರಚನಾ ಸಮಿತಿ’ ಉಪಶೀರ್ಷಿಕೆಯಲ್ಲಿ ನೀಡಲಾಗಿದ್ದ ಹಳೆಯ ಪಠ್ಯದಲ್ಲಿ ಹೀಗಿತ್ತು: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು 22 ಸಮಿತಿಗಳನ್ನು, 5 ಉಪಸಮಿತಿಗಳನ್ನು ಹೊಂದಿತ್ತು. ಇವುಗಳಲ್ಲಿ ಪ್ರಮುಖವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ರವರು ಇದರ ಅಧ್ಯಕ್ಷರಾಗಿದ್ದರು. ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ. ಈ ಕರಡು ಸಮಿತಿಯಲ್ಲಿ ಎನ್.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ, ಮಹಮ್ಮದ್‌ ಸಾದುಲ್ಲಾ, ಸಿ.ಮಾಧವರಾವ್‌ ಅವರು ಸದಸ್ಯರಾಗಿದ್ದರು.”

ಇದನ್ನೂ ಓದಿರಿ: ‘ಕನ್ನಡ ರಾಜ್ಯೋತ್ಸವ’ ಕುರಿತ ಪಾಠವನ್ನೇ ಕಿತ್ತುಬಿಸಾಡಿದ ಚಕ್ರತೀರ್ಥ ಸಮಿತಿ!

ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿಯು ‘ಕರಡು ಸಮಿತಿ’ ಉಪಶೀರ್ಷಿಕೆಯಲ್ಲಿದ ವಿಷಯಗಳನ್ನು ಹೀಗೆ ಪರಿಷ್ಕರಣೆ ಮಾಡಿದೆ: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು ಅನೇಕ ಸಮಿತಿಗಳನ್ನು ರಚಿಸಿತು. ಅವುಗಳಲ್ಲಿ ಮುಖ್ಯವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ ಅದರ ಅಧ್ಯಕ್ಷರಾಗಿದ್ದರು. ಈ ಸಮಿತಿಯಲ್ಲಿ ಎನ್‌.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾದಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ ಮುಂತಾದ ಮುಸ್ಸದ್ಧಿಗಳು ಸದಸ್ಯರುಗಳಾಗಿದ್ದರು”- ಇಷ್ಟು ಮಾತ್ರ ಉಳಿಸಿಕೊಂಡು “ಇವರು (ಅಂಬೇಡ್ಕರ್‌) ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ” ಎಂಬ ಸಾಲನ್ನು ಕಿತ್ತುಹಾಕಲಾಗಿದೆ. ಇಲ್ಲಿ ಮಹಮ್ಮದ್‌ ಸಾದುಲ್ಲಾ, ಸಿ.ಮಾಧವರಾವ್‌ ಅವರ ಹೆಸರನ್ನು ಚಕ್ರತೀರ್ಥ ನಮೂದಿಸದೇ ಇರುವುದು ಏತಕ್ಕೆ ಎಂಬುದೂ ಚರ್ಚೆಯಾಗುತ್ತಿದೆ.

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹಿಂದೂ ಧರ್ಮದಲ್ಲಿನ ಜಾತಿ ವ್ಯವಸ್ಥೆಯಿಂದ ನೊಂದು, ಜಾತಿ ವ್ಯವಸ್ಥೆಯನ್ನು ವಿರೋಧಿಸಿದ ಬೌದ್ಧಧರ್ಮಕ್ಕೆ ಮರುಳುತ್ತಾರೆ. ಈ ವಿಷಯವನ್ನು ಹಳೆಯ ಪಠ್ಯದಲ್ಲಿ ಸೇರಿಸಲಾಗಿತ್ತು. ಆದರೆ ಹೊಸ ಪಠ್ಯದಲ್ಲಿ ಈ ವಿಷಯವನ್ನು ತೆರವು ಮಾಡಲಾಗಿದೆ. ಹೀಗೆ ಅಂಬೇಡ್ಕರ್‌ ಅವರಿಗೆ ಸಂಬಂಧಿಸಿದ ವಿಷಯಗಳನ್ನು ತಿರುಚುವ ಅಥವಾ ಪಠ್ಯದಿಂದಲೇ ಕೈಬಿಡುವ ಕೆಲಸವನ್ನು ಚಕ್ರತೀರ್ಥ ಸಮಿತಿ ಮಾಡಿದೆ. ಹುಡುಕಿದಷ್ಟೂ ಹುಳುಕುಗಳು ಕಣ್ಣಿಗೆ ರಾಚತೊಡಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...