Homeಕರ್ನಾಟಕಅಂಬೇಡ್ಕರ್‌ ಕುರಿತ ಪದ್ಯ ತೆರವು; ಕೆದಕಿದಷ್ಟೂ ಸಿಗುತ್ತಿವೆ ಚಕ್ರತೀರ್ಥ ಸಮಿತಿಯ ಹುಳುಕು!

ಅಂಬೇಡ್ಕರ್‌ ಕುರಿತ ಪದ್ಯ ತೆರವು; ಕೆದಕಿದಷ್ಟೂ ಸಿಗುತ್ತಿವೆ ಚಕ್ರತೀರ್ಥ ಸಮಿತಿಯ ಹುಳುಕು!

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ನಡೆದಿರುವ ಪಠ್ಯಪುಸ್ತಕ ಪರಿಶೀಲನೆಯಲ್ಲಿ ಹಲವಾರು ತಪ್ಪುಗಳು ಕಂಡು ಬರುತ್ತಿವೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಸಂಬಂಧಿಸಿದ ಪಠ್ಯಗಳ ವಿಚಾರದಲ್ಲಿ ಸಮಿತಿ ಅಸಡ್ಡೆಯ ತೋರಿರುವುದು ಸ್ಪಷ್ಟವಾಗುತ್ತಿದೆ.

ಚೆನ್ನಣ್ಣ ವಾಲೀಕಾರ ಅವರು ಬರೆದಿರುವ ‘ನೀ ಹೋದ ಮರುದಿನ’ ಎಂಬ ಪದ್ಯವನ್ನು ಆರನೇ ತರಗತಿಯ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ‘ಸಿರಿ ಕನ್ನಡ’ದಲ್ಲಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪರಿಶೀಲನಾ ಸಮಿತಿ ಅಳವಡಿಸಿತ್ತು. ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತ ಈ ಪದ್ಯವನ್ನು ನೂತನ ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯು ತೆಗೆದುಹಾಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಶೋಷಿತ ಸಮುದಾಯಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಆದರೆ ಶೋಷಿತ ಸಮುದಾಯ ಎದುರಿಸುತ್ತಿರುವ ಅವಮಾನ, ಅನ್ಯಾಯ, ಅಸ್ಪಶ್ಯತೆಯೇನೂ ಬಾಬಾ ಸಾಹೇಬರು ತೀರಿಕೊಂಡ ಬಳಿಕ ಕಡಿಮೆಯಾಗಿಲ್ಲ. ಅದು ಮುಂದುವರಿಯುತ್ತಲೇ ಇದೆ. ಸಂವಿಧಾನದ ವಿಧಿ 17ರ ಪ್ರಕಾರ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಿದ್ದರೂ ಅದು ಇನ್ನೂ ಸಮಾಜದಲ್ಲಿ ಜೀವಂತವಿದೆ. ಇಳೆಯ ಮಕ್ಕಳಲ್ಲಿ ಆರಂಭದಲ್ಲೇ ಈ ಜಾತಿ ವ್ಯವಸ್ಥೆಯ ನೋವು, ಅಸಮಾನತೆ, ಸಾಮಾಜಿಕ ನ್ಯಾಯದ ಅರಿವುಗಳನ್ನು ತುಂಬುತ್ತಾ ಹೋದರೆ ಶೋಷಿತ ಸಮುದಾಯ ಈ ಕಷ್ಟಗಳಿಂದ ಹೊರಬರಬಹುದು” ಎಂಬುದು ಎಂಥವರಿಗೂ ಅರ್ಥವಾಗುವ ಸಂಗತಿ. ಆದರೆ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಬಾಬಾ ಸಾಹೇಬರ ಕುರಿತ ಈ ಕಾವ್ಯವನ್ನೇ ತೆಗೆದುಹಾಕಿ ಅಸ್ಪಶ್ಯತೆಯನ್ನು ಆಚರಿಸಿದಂತೆ ಕಾಣುತ್ತಿದೆ!

ಬಾಬಾ ಸಾಹೇಬರ ವಿಷಯದಲ್ಲಿ ಹಲವು ತಿರುಚುವಿಕೆ

‘ಡಾ.ಬಿ.ಆರ್‌.ಅಂಬೇಡ್ಕರ್’ ಅವರಿಗೆ ಸಂವಿಧಾನ ಶಿಲ್ಪಿ ಎಂಬ ಬಿರುದು ಇರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಆದರೆ ಅದನ್ನು ಚಕ್ರತೀರ್ಥ ಸಮಿತಿ ಮರೆಮಾಚಿದೆ.

‘ಕರಡು ರಚನಾ ಸಮಿತಿ’ ಉಪಶೀರ್ಷಿಕೆಯಲ್ಲಿ ನೀಡಲಾಗಿದ್ದ ಹಳೆಯ ಪಠ್ಯದಲ್ಲಿ ಹೀಗಿತ್ತು: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು 22 ಸಮಿತಿಗಳನ್ನು, 5 ಉಪಸಮಿತಿಗಳನ್ನು ಹೊಂದಿತ್ತು. ಇವುಗಳಲ್ಲಿ ಪ್ರಮುಖವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ರವರು ಇದರ ಅಧ್ಯಕ್ಷರಾಗಿದ್ದರು. ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ. ಈ ಕರಡು ಸಮಿತಿಯಲ್ಲಿ ಎನ್.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ, ಮಹಮ್ಮದ್‌ ಸಾದುಲ್ಲಾ, ಸಿ.ಮಾಧವರಾವ್‌ ಅವರು ಸದಸ್ಯರಾಗಿದ್ದರು.”

ಇದನ್ನೂ ಓದಿರಿ: ‘ಕನ್ನಡ ರಾಜ್ಯೋತ್ಸವ’ ಕುರಿತ ಪಾಠವನ್ನೇ ಕಿತ್ತುಬಿಸಾಡಿದ ಚಕ್ರತೀರ್ಥ ಸಮಿತಿ!

ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿಯು ‘ಕರಡು ಸಮಿತಿ’ ಉಪಶೀರ್ಷಿಕೆಯಲ್ಲಿದ ವಿಷಯಗಳನ್ನು ಹೀಗೆ ಪರಿಷ್ಕರಣೆ ಮಾಡಿದೆ: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು ಅನೇಕ ಸಮಿತಿಗಳನ್ನು ರಚಿಸಿತು. ಅವುಗಳಲ್ಲಿ ಮುಖ್ಯವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ ಅದರ ಅಧ್ಯಕ್ಷರಾಗಿದ್ದರು. ಈ ಸಮಿತಿಯಲ್ಲಿ ಎನ್‌.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾದಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ ಮುಂತಾದ ಮುಸ್ಸದ್ಧಿಗಳು ಸದಸ್ಯರುಗಳಾಗಿದ್ದರು”- ಇಷ್ಟು ಮಾತ್ರ ಉಳಿಸಿಕೊಂಡು “ಇವರು (ಅಂಬೇಡ್ಕರ್‌) ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ” ಎಂಬ ಸಾಲನ್ನು ಕಿತ್ತುಹಾಕಲಾಗಿದೆ. ಇಲ್ಲಿ ಮಹಮ್ಮದ್‌ ಸಾದುಲ್ಲಾ, ಸಿ.ಮಾಧವರಾವ್‌ ಅವರ ಹೆಸರನ್ನು ಚಕ್ರತೀರ್ಥ ನಮೂದಿಸದೇ ಇರುವುದು ಏತಕ್ಕೆ ಎಂಬುದೂ ಚರ್ಚೆಯಾಗುತ್ತಿದೆ.

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹಿಂದೂ ಧರ್ಮದಲ್ಲಿನ ಜಾತಿ ವ್ಯವಸ್ಥೆಯಿಂದ ನೊಂದು, ಜಾತಿ ವ್ಯವಸ್ಥೆಯನ್ನು ವಿರೋಧಿಸಿದ ಬೌದ್ಧಧರ್ಮಕ್ಕೆ ಮರುಳುತ್ತಾರೆ. ಈ ವಿಷಯವನ್ನು ಹಳೆಯ ಪಠ್ಯದಲ್ಲಿ ಸೇರಿಸಲಾಗಿತ್ತು. ಆದರೆ ಹೊಸ ಪಠ್ಯದಲ್ಲಿ ಈ ವಿಷಯವನ್ನು ತೆರವು ಮಾಡಲಾಗಿದೆ. ಹೀಗೆ ಅಂಬೇಡ್ಕರ್‌ ಅವರಿಗೆ ಸಂಬಂಧಿಸಿದ ವಿಷಯಗಳನ್ನು ತಿರುಚುವ ಅಥವಾ ಪಠ್ಯದಿಂದಲೇ ಕೈಬಿಡುವ ಕೆಲಸವನ್ನು ಚಕ್ರತೀರ್ಥ ಸಮಿತಿ ಮಾಡಿದೆ. ಹುಡುಕಿದಷ್ಟೂ ಹುಳುಕುಗಳು ಕಣ್ಣಿಗೆ ರಾಚತೊಡಗಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...