Homeಮುಖಪುಟಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

- Advertisement -
- Advertisement -

ಸಂಸತ್ತಿನ ಭದ್ರತಾಲೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳ ಮೇಲೆ ಯುಎಪಿಎ ಕಾನೂನಿನಡಿ ಪ್ರಕರಣ ದಾಖಲಿಸಿರುವುದನ್ನು ಪಿಯುಸಿಎಲ್‌( PEOPLE’S UNION FOR CIVIL LIBERTIES) ಖಂಡಿಸಿದ್ದು, ಯುಎಪಿಎ ಪ್ರಕರಣವನ್ನು ಕೈಬಿಡುವಂತೆ ಆಗ್ರಹಿಸಿದೆ.

ಈ ಕುರಿತು ಪಿಯುಸಿಎಲ್‌ ಅಧ್ಯಕ್ಷರಾದ ಕವಿತಾ ಶ್ರೀವತ್ಸವ್‌ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿ,ಸುರೇಶ್‌ ಅವರು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಸಂಸತ್ತಿನಲ್ಲಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಡಬ್ಬಗಳಿಂದ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿ  ಇಂಕ್ವಿಲಾಬ್ ಜಿಂದಾಬಾದ್ ಮತ್ತು ಭಗತ್ ಸಿಗ್ ಅಮರ್‌ ರಹೇ ಎಂದು ಘೋಷಣೆಗಳನ್ನು ಕೂಗಿದ್ದಕ್ಕಾಗಿ ಲಕ್ನೋದ ಸಾಗರ್ ಶರ್ಮಾ(26) ಮತ್ತು ಬೆಂಗಳೂರಿನ ಇಂಜಿನಿಯರಿಂಗ್ ಪದವೀಧರ ಮನೋರಂಜನ್ ಡಿ(35) ಮತ್ತು ಸದನದ ಹೊರಗೆ ಗ್ಯಾಸ್ ಸ್ಪೇ ಮಾಡಿ ಸರ್ವಾಧಿಕಾರ, ನಿರುದ್ಯೋಗ, ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಹಾಗೂ ಜೈ ಭೀಮ್‌ ಘೋಷಣೆಗಳನ್ನು ಕೂಗಿದ ಅಮೋಲ್ ಶಿಂಧೆ (25) ಮತ್ತು ನೀಲಮ್ ದೇವಿ (42) ಮತ್ತು ವಿರುದ್ಧದ ಯುಎಪಿಎ ಪ್ರಕರಣವನ್ನು ಕೈಬಿಡಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ವಿಶಾಲ್‌ ಶರ್ಮಾ, ಲಲಿತ್‌ ಝಾ ಸೇರಿ ಬಂಧಿತ 6 ಮಂದಿ ‘ಭಗತ್ ಸಿಂಗ್ ಫ್ಯಾನ್ ಕ್ಲಬ್’ ಜೊತೆ ಸಂಬಂಧ ಹೊಂದಿದ್ದರು. ಅವರು ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಮತ್ತು ಶಿವರಾಮ ರಾಜಗುರು ಅವರ ಮೇಲಿನ ಅಭಿಮಾನ ಹೊಂದಿದ್ದರು ಎಂದು ಹೇಳಿದ್ದಾರೆ. ಎಲ್ಲಾ 6 ಆರೋಪಿಗಳ ವಿರುದ್ಧ ಸೆಕ್ಷನ್ 120B , 452 , 153 , 186, 353ರಡಿ ಪ್ರಕರಣ  ದಾಖಲಿಸಲಾಗಿದೆ. ಇದಲ್ಲದೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆಯ ಸೆಕ್ಷನ್ 16 ಮತ್ತು 18ರಡಿಯಲ್ಲಿ ಭಯೋತ್ಪಾದಕ ಕೃತ್ಯದ ಆರೋಪವನ್ನು ಹೊರಿಸಲಾಗಿದೆ. ಇದು ಸರಿಯಲ್ಲ ಎಂದು ಪಿಯುಸಿಎಲ್‌ ಹೇಳಿದೆ.

ಕಳೆದ 9 ವರ್ಷಗಳಿಂದ ನಿರುದ್ಯೋಗದ ಸಮಸ್ಯೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದೆ ಇರುವುದು ವಾಸ್ತವವಾಗಿ 6 ಯುವಕರ ಕೃತ್ಯಕ್ಕೆ ಪ್ರಚೋದನೆಯಂತೆ ಕಂಡು ಬರುತ್ತಿದೆ. 2023ರಲ್ಲಿ ನಿರುದ್ಯೋಗ ದರವು 7.6% ಆಗಿದೆ. ಇದು ಸಾಂಕ್ರಾಮಿಕದ ಪೂರ್ವ ದರಗಳಿಗಿಂತ ಹೆಚ್ಚಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳದೆ ಇರುವುದರಿಂದ ಭಗತ್ ಸಿಂಗ್ ಅವರಂತೆಯೇ ಅವರು ಕಿವುಡರನ್ನು ಕೇಳುವಂತೆ ಮಾಡಲು ಮತ್ತು ಅಜಾಗರೂಕರಿಗೆ ಎಚ್ಚರಿಕೆಯನ್ನು ನೀಡಲು ಪ್ರಯತ್ನಿಸಿದರು ಎಂದು ಪಿಯುಸಿಎಲ್‌ ಹೇಳಿದೆ.

ಬಂಧಿತ ಯುವಕರ ವಿರುದ್ಧ ಯುಎಪಿಎಯಂತಹ ಕಠೋರ ಕಾನೂನನ್ನು ಬಳಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಲ್ಲದೇ ಮತ್ತೇನೂ ಅಲ್ಲ. ಯುಎಪಿಎ ಸೆಕ್ಷನ್ 15ರ ಅಡಿಯಲ್ಲಿ ಒಂದು ಕೃತ್ಯವನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಬೇಕಾದರೆ ಭಾರತದ ಏಕತೆ ಮತ್ತು ಸಮಗ್ರತೆಗೆ ಬೆದರಿಕೆ ಹಾಕುವ ಭಯೋತ್ಪದಾಕ ಕೃತ್ಯವಾಗಿರಬೇಕು. ಬಾಂಬ್‌ಗಳು ಅಥವಾ ಇತರ ಸ್ಫೋಟಕ ವಸ್ತುಗಳ ಬಳಕೆ ಮತ್ತು ಸಾವು, ನೋವುಗಳು ಸಂಭವಿಸರಬೇಕು. ಅಂತಹ ಸಂದರ್ಭಗಳಲ್ಲಿ ಮಾತ್ರ ಕಠೋರ ಕಾನೂನನ್ನು ಬಳಸಬೇಕು ಎಂದಿದೆ ಎಂದು ಪಿಯುಸಿಎಲ್‌ ಹೇಳಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪಿಯುಸಿಎಲ್‌ ಕರ್ನಾಟಕ ರಾಜ್ಯಾಧ್ಯಕ್ಷರಾದ ಅರವಿಂದ್‌ ನಾರಾಯಣ್, ಯುವಕರ ಮೇಲೆ ಯುಎಪಿಎ ಕೇಸ್ ಹಾಕಲಾಗಿದೆ. ಯುಎಪಿಎ ನಿಯಮಾವಳಿಗಳನ್ನು ಓದಬೇಕು. ಉದ್ದೇಶ ಪೂರ್ವಕವಾಗಿ ಹಾನಿ ಮಾಡಿದರೆ ಮಾತ್ರ ಈ ಪ್ರಕರಣ ದಾಖಲಿಸಬೇಕು ಎಂದಿದೆ. ಇಲ್ಲಿ ಉದ್ದೇಶಪೂರ್ವಕ ಕೃತ್ಯವೆಂದು ಕಂಡು ಬಂದಿಲ್ಲ. ನಿರುದ್ಯೋಗ, ಸರ್ವಾಧಿಕಾರ, ಮಣಿಪುರ ವಿಚಾರದಲ್ಲಿ ಎಚ್ಚರಿಕೆ ನೀಡಲು ಈ ಕೃತ್ಯ ಮಾಡಿದ್ದಾರೆ. ಇನ್ನು ಕ್ರಿಯೆಯನ್ನು ನೋಡಿದಾಗ ಬಾಂಬ್‌ ಸ್ಪೋಟದಂತಹ ಕೃತ್ಯ ನಡೆದಿಲ್ಲ. ಖಾಲಿ ಹೊಗೆ ಮಾತ್ರ ಸ್ಪ್ರೇ ಮಾಡಿದ್ದಾರೆ. ಇದನ್ನು ನೋಡಿದಾಗ ಯುಎಪಿಎ ದಾಖಲಿಸಿರುವುದು ಕಾನೂನಿನ ದುರುಪಯೋಗ ಎಂದು ಹೇಳಿದ್ದಾರೆ.

ನಿರುದ್ಯೋಗ ಯುವಜನರಲ್ಲಿ ದೊಡ್ಡ ಸಮಸ್ಯೆಯಾಗಿದೆ. ಈ ಅಭಿಪ್ರಾಯವನ್ನು ಯುಎಪಿಎ ಬಳಸಿ ತಡೆಯಲು ಸಾಧ್ಯವಿಲ್ಲ. ಭಗತ್‌ ಸಿಂಗ್ ಅವರ ಮಾತನ್ನು ನಾವು ನೆನಪಿಸಬಹುದು. ಅವರು ಯುಎಪಿಎ ಕಾಯ್ದೆಯಂತಿದ್ದ ಪಬ್ಲಿಕ್‌ ಸೇಪ್ಟಿ ಮೂಲಕ ಸಮಸ್ಯೆಯ ಬಗ್ಗೆ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಯುಎಪಿಎ ದುರ್ಬಳಕೆ ಇದೊಂದೇ ಘಟನೆಯಲ್ಲ. ಇಂಡಿಯಾ- ಆಸ್ಟ್ರೇಲಿಯಾ ಫೈನಲ್‌ ಪಂದ್ಯದ ವೇಳೆ ಯುಎಪಿಎ ಕೇಸ್ ದಾಖಲಿಸಿದ್ದಾರೆ. ಭಾರತದ ಸೋಲನ್ನು ಸಂಭ್ರಮಿಸಿದರು ಎಂದು ವಿದ್ಯಾರ್ಥಿಗಳ ಮೇಲೆ ಈ ಕೇಸ್ ದಾಖಲು ಮಾಡಿದ್ದಾರೆ. ಇದು ಎಷ್ಟು ಸಮಂಜಸ? ಇತ್ತೀಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯುಎಪಿಎ ಕೇಸ್ ದಾಖಲು ಮಾಡಲಾಗುತ್ತಿದೆ. ಸರಕಾರ ಯುಎಪಿಎಯನ್ನು ಅಸ್ತ್ರವಾಗಿ ಬಳಸುತ್ತಿದೆ. ಆದ್ದರಿಂದ ಯುಎಪಿಎ ರದ್ದು ಮಾಡಬೇಕು. ಇಂತಹ ಕೇಸ್ ಎಲ್ಲರ ಮೇಲೂ ಫೈಲ್‌ ಮಾಡಬಾರದು. ಸಂಸತ್ತಿನ ಭದ್ರತಲೋಪದ ಪ್ರಕರಣದಲ್ಲಿನ ಆರೋಪಿಗಳ ಮೇಲಿನ ಯುಎಪಿಎ ಪ್ರಕರಣವನ್ನು ಕೈಬಿಡಬೇಕು ಮತ್ತು ಅವರನ್ನು ಬಂಧನದಿಂದ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...