Homeಮುಖಪುಟಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

- Advertisement -
- Advertisement -

ಸಂಸತ್ತಿನ ಭದ್ರತಾಲೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳ ಮೇಲೆ ಯುಎಪಿಎ ಕಾನೂನಿನಡಿ ಪ್ರಕರಣ ದಾಖಲಿಸಿರುವುದನ್ನು ಪಿಯುಸಿಎಲ್‌( PEOPLE’S UNION FOR CIVIL LIBERTIES) ಖಂಡಿಸಿದ್ದು, ಯುಎಪಿಎ ಪ್ರಕರಣವನ್ನು ಕೈಬಿಡುವಂತೆ ಆಗ್ರಹಿಸಿದೆ.

ಈ ಕುರಿತು ಪಿಯುಸಿಎಲ್‌ ಅಧ್ಯಕ್ಷರಾದ ಕವಿತಾ ಶ್ರೀವತ್ಸವ್‌ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿ,ಸುರೇಶ್‌ ಅವರು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಸಂಸತ್ತಿನಲ್ಲಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಡಬ್ಬಗಳಿಂದ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿ  ಇಂಕ್ವಿಲಾಬ್ ಜಿಂದಾಬಾದ್ ಮತ್ತು ಭಗತ್ ಸಿಗ್ ಅಮರ್‌ ರಹೇ ಎಂದು ಘೋಷಣೆಗಳನ್ನು ಕೂಗಿದ್ದಕ್ಕಾಗಿ ಲಕ್ನೋದ ಸಾಗರ್ ಶರ್ಮಾ(26) ಮತ್ತು ಬೆಂಗಳೂರಿನ ಇಂಜಿನಿಯರಿಂಗ್ ಪದವೀಧರ ಮನೋರಂಜನ್ ಡಿ(35) ಮತ್ತು ಸದನದ ಹೊರಗೆ ಗ್ಯಾಸ್ ಸ್ಪೇ ಮಾಡಿ ಸರ್ವಾಧಿಕಾರ, ನಿರುದ್ಯೋಗ, ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಹಾಗೂ ಜೈ ಭೀಮ್‌ ಘೋಷಣೆಗಳನ್ನು ಕೂಗಿದ ಅಮೋಲ್ ಶಿಂಧೆ (25) ಮತ್ತು ನೀಲಮ್ ದೇವಿ (42) ಮತ್ತು ವಿರುದ್ಧದ ಯುಎಪಿಎ ಪ್ರಕರಣವನ್ನು ಕೈಬಿಡಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ವಿಶಾಲ್‌ ಶರ್ಮಾ, ಲಲಿತ್‌ ಝಾ ಸೇರಿ ಬಂಧಿತ 6 ಮಂದಿ ‘ಭಗತ್ ಸಿಂಗ್ ಫ್ಯಾನ್ ಕ್ಲಬ್’ ಜೊತೆ ಸಂಬಂಧ ಹೊಂದಿದ್ದರು. ಅವರು ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಮತ್ತು ಶಿವರಾಮ ರಾಜಗುರು ಅವರ ಮೇಲಿನ ಅಭಿಮಾನ ಹೊಂದಿದ್ದರು ಎಂದು ಹೇಳಿದ್ದಾರೆ. ಎಲ್ಲಾ 6 ಆರೋಪಿಗಳ ವಿರುದ್ಧ ಸೆಕ್ಷನ್ 120B , 452 , 153 , 186, 353ರಡಿ ಪ್ರಕರಣ  ದಾಖಲಿಸಲಾಗಿದೆ. ಇದಲ್ಲದೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆಯ ಸೆಕ್ಷನ್ 16 ಮತ್ತು 18ರಡಿಯಲ್ಲಿ ಭಯೋತ್ಪಾದಕ ಕೃತ್ಯದ ಆರೋಪವನ್ನು ಹೊರಿಸಲಾಗಿದೆ. ಇದು ಸರಿಯಲ್ಲ ಎಂದು ಪಿಯುಸಿಎಲ್‌ ಹೇಳಿದೆ.

ಕಳೆದ 9 ವರ್ಷಗಳಿಂದ ನಿರುದ್ಯೋಗದ ಸಮಸ್ಯೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದೆ ಇರುವುದು ವಾಸ್ತವವಾಗಿ 6 ಯುವಕರ ಕೃತ್ಯಕ್ಕೆ ಪ್ರಚೋದನೆಯಂತೆ ಕಂಡು ಬರುತ್ತಿದೆ. 2023ರಲ್ಲಿ ನಿರುದ್ಯೋಗ ದರವು 7.6% ಆಗಿದೆ. ಇದು ಸಾಂಕ್ರಾಮಿಕದ ಪೂರ್ವ ದರಗಳಿಗಿಂತ ಹೆಚ್ಚಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳದೆ ಇರುವುದರಿಂದ ಭಗತ್ ಸಿಂಗ್ ಅವರಂತೆಯೇ ಅವರು ಕಿವುಡರನ್ನು ಕೇಳುವಂತೆ ಮಾಡಲು ಮತ್ತು ಅಜಾಗರೂಕರಿಗೆ ಎಚ್ಚರಿಕೆಯನ್ನು ನೀಡಲು ಪ್ರಯತ್ನಿಸಿದರು ಎಂದು ಪಿಯುಸಿಎಲ್‌ ಹೇಳಿದೆ.

ಬಂಧಿತ ಯುವಕರ ವಿರುದ್ಧ ಯುಎಪಿಎಯಂತಹ ಕಠೋರ ಕಾನೂನನ್ನು ಬಳಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಲ್ಲದೇ ಮತ್ತೇನೂ ಅಲ್ಲ. ಯುಎಪಿಎ ಸೆಕ್ಷನ್ 15ರ ಅಡಿಯಲ್ಲಿ ಒಂದು ಕೃತ್ಯವನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಬೇಕಾದರೆ ಭಾರತದ ಏಕತೆ ಮತ್ತು ಸಮಗ್ರತೆಗೆ ಬೆದರಿಕೆ ಹಾಕುವ ಭಯೋತ್ಪದಾಕ ಕೃತ್ಯವಾಗಿರಬೇಕು. ಬಾಂಬ್‌ಗಳು ಅಥವಾ ಇತರ ಸ್ಫೋಟಕ ವಸ್ತುಗಳ ಬಳಕೆ ಮತ್ತು ಸಾವು, ನೋವುಗಳು ಸಂಭವಿಸರಬೇಕು. ಅಂತಹ ಸಂದರ್ಭಗಳಲ್ಲಿ ಮಾತ್ರ ಕಠೋರ ಕಾನೂನನ್ನು ಬಳಸಬೇಕು ಎಂದಿದೆ ಎಂದು ಪಿಯುಸಿಎಲ್‌ ಹೇಳಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪಿಯುಸಿಎಲ್‌ ಕರ್ನಾಟಕ ರಾಜ್ಯಾಧ್ಯಕ್ಷರಾದ ಅರವಿಂದ್‌ ನಾರಾಯಣ್, ಯುವಕರ ಮೇಲೆ ಯುಎಪಿಎ ಕೇಸ್ ಹಾಕಲಾಗಿದೆ. ಯುಎಪಿಎ ನಿಯಮಾವಳಿಗಳನ್ನು ಓದಬೇಕು. ಉದ್ದೇಶ ಪೂರ್ವಕವಾಗಿ ಹಾನಿ ಮಾಡಿದರೆ ಮಾತ್ರ ಈ ಪ್ರಕರಣ ದಾಖಲಿಸಬೇಕು ಎಂದಿದೆ. ಇಲ್ಲಿ ಉದ್ದೇಶಪೂರ್ವಕ ಕೃತ್ಯವೆಂದು ಕಂಡು ಬಂದಿಲ್ಲ. ನಿರುದ್ಯೋಗ, ಸರ್ವಾಧಿಕಾರ, ಮಣಿಪುರ ವಿಚಾರದಲ್ಲಿ ಎಚ್ಚರಿಕೆ ನೀಡಲು ಈ ಕೃತ್ಯ ಮಾಡಿದ್ದಾರೆ. ಇನ್ನು ಕ್ರಿಯೆಯನ್ನು ನೋಡಿದಾಗ ಬಾಂಬ್‌ ಸ್ಪೋಟದಂತಹ ಕೃತ್ಯ ನಡೆದಿಲ್ಲ. ಖಾಲಿ ಹೊಗೆ ಮಾತ್ರ ಸ್ಪ್ರೇ ಮಾಡಿದ್ದಾರೆ. ಇದನ್ನು ನೋಡಿದಾಗ ಯುಎಪಿಎ ದಾಖಲಿಸಿರುವುದು ಕಾನೂನಿನ ದುರುಪಯೋಗ ಎಂದು ಹೇಳಿದ್ದಾರೆ.

ನಿರುದ್ಯೋಗ ಯುವಜನರಲ್ಲಿ ದೊಡ್ಡ ಸಮಸ್ಯೆಯಾಗಿದೆ. ಈ ಅಭಿಪ್ರಾಯವನ್ನು ಯುಎಪಿಎ ಬಳಸಿ ತಡೆಯಲು ಸಾಧ್ಯವಿಲ್ಲ. ಭಗತ್‌ ಸಿಂಗ್ ಅವರ ಮಾತನ್ನು ನಾವು ನೆನಪಿಸಬಹುದು. ಅವರು ಯುಎಪಿಎ ಕಾಯ್ದೆಯಂತಿದ್ದ ಪಬ್ಲಿಕ್‌ ಸೇಪ್ಟಿ ಮೂಲಕ ಸಮಸ್ಯೆಯ ಬಗ್ಗೆ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಯುಎಪಿಎ ದುರ್ಬಳಕೆ ಇದೊಂದೇ ಘಟನೆಯಲ್ಲ. ಇಂಡಿಯಾ- ಆಸ್ಟ್ರೇಲಿಯಾ ಫೈನಲ್‌ ಪಂದ್ಯದ ವೇಳೆ ಯುಎಪಿಎ ಕೇಸ್ ದಾಖಲಿಸಿದ್ದಾರೆ. ಭಾರತದ ಸೋಲನ್ನು ಸಂಭ್ರಮಿಸಿದರು ಎಂದು ವಿದ್ಯಾರ್ಥಿಗಳ ಮೇಲೆ ಈ ಕೇಸ್ ದಾಖಲು ಮಾಡಿದ್ದಾರೆ. ಇದು ಎಷ್ಟು ಸಮಂಜಸ? ಇತ್ತೀಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯುಎಪಿಎ ಕೇಸ್ ದಾಖಲು ಮಾಡಲಾಗುತ್ತಿದೆ. ಸರಕಾರ ಯುಎಪಿಎಯನ್ನು ಅಸ್ತ್ರವಾಗಿ ಬಳಸುತ್ತಿದೆ. ಆದ್ದರಿಂದ ಯುಎಪಿಎ ರದ್ದು ಮಾಡಬೇಕು. ಇಂತಹ ಕೇಸ್ ಎಲ್ಲರ ಮೇಲೂ ಫೈಲ್‌ ಮಾಡಬಾರದು. ಸಂಸತ್ತಿನ ಭದ್ರತಲೋಪದ ಪ್ರಕರಣದಲ್ಲಿನ ಆರೋಪಿಗಳ ಮೇಲಿನ ಯುಎಪಿಎ ಪ್ರಕರಣವನ್ನು ಕೈಬಿಡಬೇಕು ಮತ್ತು ಅವರನ್ನು ಬಂಧನದಿಂದ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...