Homeಮುಖಪುಟಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

- Advertisement -
- Advertisement -

ಸಂಸತ್ತಿನ ಭದ್ರತಾಲೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳ ಮೇಲೆ ಯುಎಪಿಎ ಕಾನೂನಿನಡಿ ಪ್ರಕರಣ ದಾಖಲಿಸಿರುವುದನ್ನು ಪಿಯುಸಿಎಲ್‌( PEOPLE’S UNION FOR CIVIL LIBERTIES) ಖಂಡಿಸಿದ್ದು, ಯುಎಪಿಎ ಪ್ರಕರಣವನ್ನು ಕೈಬಿಡುವಂತೆ ಆಗ್ರಹಿಸಿದೆ.

ಈ ಕುರಿತು ಪಿಯುಸಿಎಲ್‌ ಅಧ್ಯಕ್ಷರಾದ ಕವಿತಾ ಶ್ರೀವತ್ಸವ್‌ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿ,ಸುರೇಶ್‌ ಅವರು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಸಂಸತ್ತಿನಲ್ಲಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಡಬ್ಬಗಳಿಂದ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿ  ಇಂಕ್ವಿಲಾಬ್ ಜಿಂದಾಬಾದ್ ಮತ್ತು ಭಗತ್ ಸಿಗ್ ಅಮರ್‌ ರಹೇ ಎಂದು ಘೋಷಣೆಗಳನ್ನು ಕೂಗಿದ್ದಕ್ಕಾಗಿ ಲಕ್ನೋದ ಸಾಗರ್ ಶರ್ಮಾ(26) ಮತ್ತು ಬೆಂಗಳೂರಿನ ಇಂಜಿನಿಯರಿಂಗ್ ಪದವೀಧರ ಮನೋರಂಜನ್ ಡಿ(35) ಮತ್ತು ಸದನದ ಹೊರಗೆ ಗ್ಯಾಸ್ ಸ್ಪೇ ಮಾಡಿ ಸರ್ವಾಧಿಕಾರ, ನಿರುದ್ಯೋಗ, ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಹಾಗೂ ಜೈ ಭೀಮ್‌ ಘೋಷಣೆಗಳನ್ನು ಕೂಗಿದ ಅಮೋಲ್ ಶಿಂಧೆ (25) ಮತ್ತು ನೀಲಮ್ ದೇವಿ (42) ಮತ್ತು ವಿರುದ್ಧದ ಯುಎಪಿಎ ಪ್ರಕರಣವನ್ನು ಕೈಬಿಡಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ವಿಶಾಲ್‌ ಶರ್ಮಾ, ಲಲಿತ್‌ ಝಾ ಸೇರಿ ಬಂಧಿತ 6 ಮಂದಿ ‘ಭಗತ್ ಸಿಂಗ್ ಫ್ಯಾನ್ ಕ್ಲಬ್’ ಜೊತೆ ಸಂಬಂಧ ಹೊಂದಿದ್ದರು. ಅವರು ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಮತ್ತು ಶಿವರಾಮ ರಾಜಗುರು ಅವರ ಮೇಲಿನ ಅಭಿಮಾನ ಹೊಂದಿದ್ದರು ಎಂದು ಹೇಳಿದ್ದಾರೆ. ಎಲ್ಲಾ 6 ಆರೋಪಿಗಳ ವಿರುದ್ಧ ಸೆಕ್ಷನ್ 120B , 452 , 153 , 186, 353ರಡಿ ಪ್ರಕರಣ  ದಾಖಲಿಸಲಾಗಿದೆ. ಇದಲ್ಲದೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆಯ ಸೆಕ್ಷನ್ 16 ಮತ್ತು 18ರಡಿಯಲ್ಲಿ ಭಯೋತ್ಪಾದಕ ಕೃತ್ಯದ ಆರೋಪವನ್ನು ಹೊರಿಸಲಾಗಿದೆ. ಇದು ಸರಿಯಲ್ಲ ಎಂದು ಪಿಯುಸಿಎಲ್‌ ಹೇಳಿದೆ.

ಕಳೆದ 9 ವರ್ಷಗಳಿಂದ ನಿರುದ್ಯೋಗದ ಸಮಸ್ಯೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದೆ ಇರುವುದು ವಾಸ್ತವವಾಗಿ 6 ಯುವಕರ ಕೃತ್ಯಕ್ಕೆ ಪ್ರಚೋದನೆಯಂತೆ ಕಂಡು ಬರುತ್ತಿದೆ. 2023ರಲ್ಲಿ ನಿರುದ್ಯೋಗ ದರವು 7.6% ಆಗಿದೆ. ಇದು ಸಾಂಕ್ರಾಮಿಕದ ಪೂರ್ವ ದರಗಳಿಗಿಂತ ಹೆಚ್ಚಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳದೆ ಇರುವುದರಿಂದ ಭಗತ್ ಸಿಂಗ್ ಅವರಂತೆಯೇ ಅವರು ಕಿವುಡರನ್ನು ಕೇಳುವಂತೆ ಮಾಡಲು ಮತ್ತು ಅಜಾಗರೂಕರಿಗೆ ಎಚ್ಚರಿಕೆಯನ್ನು ನೀಡಲು ಪ್ರಯತ್ನಿಸಿದರು ಎಂದು ಪಿಯುಸಿಎಲ್‌ ಹೇಳಿದೆ.

ಬಂಧಿತ ಯುವಕರ ವಿರುದ್ಧ ಯುಎಪಿಎಯಂತಹ ಕಠೋರ ಕಾನೂನನ್ನು ಬಳಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಲ್ಲದೇ ಮತ್ತೇನೂ ಅಲ್ಲ. ಯುಎಪಿಎ ಸೆಕ್ಷನ್ 15ರ ಅಡಿಯಲ್ಲಿ ಒಂದು ಕೃತ್ಯವನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಬೇಕಾದರೆ ಭಾರತದ ಏಕತೆ ಮತ್ತು ಸಮಗ್ರತೆಗೆ ಬೆದರಿಕೆ ಹಾಕುವ ಭಯೋತ್ಪದಾಕ ಕೃತ್ಯವಾಗಿರಬೇಕು. ಬಾಂಬ್‌ಗಳು ಅಥವಾ ಇತರ ಸ್ಫೋಟಕ ವಸ್ತುಗಳ ಬಳಕೆ ಮತ್ತು ಸಾವು, ನೋವುಗಳು ಸಂಭವಿಸರಬೇಕು. ಅಂತಹ ಸಂದರ್ಭಗಳಲ್ಲಿ ಮಾತ್ರ ಕಠೋರ ಕಾನೂನನ್ನು ಬಳಸಬೇಕು ಎಂದಿದೆ ಎಂದು ಪಿಯುಸಿಎಲ್‌ ಹೇಳಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪಿಯುಸಿಎಲ್‌ ಕರ್ನಾಟಕ ರಾಜ್ಯಾಧ್ಯಕ್ಷರಾದ ಅರವಿಂದ್‌ ನಾರಾಯಣ್, ಯುವಕರ ಮೇಲೆ ಯುಎಪಿಎ ಕೇಸ್ ಹಾಕಲಾಗಿದೆ. ಯುಎಪಿಎ ನಿಯಮಾವಳಿಗಳನ್ನು ಓದಬೇಕು. ಉದ್ದೇಶ ಪೂರ್ವಕವಾಗಿ ಹಾನಿ ಮಾಡಿದರೆ ಮಾತ್ರ ಈ ಪ್ರಕರಣ ದಾಖಲಿಸಬೇಕು ಎಂದಿದೆ. ಇಲ್ಲಿ ಉದ್ದೇಶಪೂರ್ವಕ ಕೃತ್ಯವೆಂದು ಕಂಡು ಬಂದಿಲ್ಲ. ನಿರುದ್ಯೋಗ, ಸರ್ವಾಧಿಕಾರ, ಮಣಿಪುರ ವಿಚಾರದಲ್ಲಿ ಎಚ್ಚರಿಕೆ ನೀಡಲು ಈ ಕೃತ್ಯ ಮಾಡಿದ್ದಾರೆ. ಇನ್ನು ಕ್ರಿಯೆಯನ್ನು ನೋಡಿದಾಗ ಬಾಂಬ್‌ ಸ್ಪೋಟದಂತಹ ಕೃತ್ಯ ನಡೆದಿಲ್ಲ. ಖಾಲಿ ಹೊಗೆ ಮಾತ್ರ ಸ್ಪ್ರೇ ಮಾಡಿದ್ದಾರೆ. ಇದನ್ನು ನೋಡಿದಾಗ ಯುಎಪಿಎ ದಾಖಲಿಸಿರುವುದು ಕಾನೂನಿನ ದುರುಪಯೋಗ ಎಂದು ಹೇಳಿದ್ದಾರೆ.

ನಿರುದ್ಯೋಗ ಯುವಜನರಲ್ಲಿ ದೊಡ್ಡ ಸಮಸ್ಯೆಯಾಗಿದೆ. ಈ ಅಭಿಪ್ರಾಯವನ್ನು ಯುಎಪಿಎ ಬಳಸಿ ತಡೆಯಲು ಸಾಧ್ಯವಿಲ್ಲ. ಭಗತ್‌ ಸಿಂಗ್ ಅವರ ಮಾತನ್ನು ನಾವು ನೆನಪಿಸಬಹುದು. ಅವರು ಯುಎಪಿಎ ಕಾಯ್ದೆಯಂತಿದ್ದ ಪಬ್ಲಿಕ್‌ ಸೇಪ್ಟಿ ಮೂಲಕ ಸಮಸ್ಯೆಯ ಬಗ್ಗೆ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಯುಎಪಿಎ ದುರ್ಬಳಕೆ ಇದೊಂದೇ ಘಟನೆಯಲ್ಲ. ಇಂಡಿಯಾ- ಆಸ್ಟ್ರೇಲಿಯಾ ಫೈನಲ್‌ ಪಂದ್ಯದ ವೇಳೆ ಯುಎಪಿಎ ಕೇಸ್ ದಾಖಲಿಸಿದ್ದಾರೆ. ಭಾರತದ ಸೋಲನ್ನು ಸಂಭ್ರಮಿಸಿದರು ಎಂದು ವಿದ್ಯಾರ್ಥಿಗಳ ಮೇಲೆ ಈ ಕೇಸ್ ದಾಖಲು ಮಾಡಿದ್ದಾರೆ. ಇದು ಎಷ್ಟು ಸಮಂಜಸ? ಇತ್ತೀಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯುಎಪಿಎ ಕೇಸ್ ದಾಖಲು ಮಾಡಲಾಗುತ್ತಿದೆ. ಸರಕಾರ ಯುಎಪಿಎಯನ್ನು ಅಸ್ತ್ರವಾಗಿ ಬಳಸುತ್ತಿದೆ. ಆದ್ದರಿಂದ ಯುಎಪಿಎ ರದ್ದು ಮಾಡಬೇಕು. ಇಂತಹ ಕೇಸ್ ಎಲ್ಲರ ಮೇಲೂ ಫೈಲ್‌ ಮಾಡಬಾರದು. ಸಂಸತ್ತಿನ ಭದ್ರತಲೋಪದ ಪ್ರಕರಣದಲ್ಲಿನ ಆರೋಪಿಗಳ ಮೇಲಿನ ಯುಎಪಿಎ ಪ್ರಕರಣವನ್ನು ಕೈಬಿಡಬೇಕು ಮತ್ತು ಅವರನ್ನು ಬಂಧನದಿಂದ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...