Homeಮುಖಪುಟಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

- Advertisement -
- Advertisement -

ಸಂಸತ್ತಿನ ಭದ್ರತಾಲೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳ ಮೇಲೆ ಯುಎಪಿಎ ಕಾನೂನಿನಡಿ ಪ್ರಕರಣ ದಾಖಲಿಸಿರುವುದನ್ನು ಪಿಯುಸಿಎಲ್‌( PEOPLE’S UNION FOR CIVIL LIBERTIES) ಖಂಡಿಸಿದ್ದು, ಯುಎಪಿಎ ಪ್ರಕರಣವನ್ನು ಕೈಬಿಡುವಂತೆ ಆಗ್ರಹಿಸಿದೆ.

ಈ ಕುರಿತು ಪಿಯುಸಿಎಲ್‌ ಅಧ್ಯಕ್ಷರಾದ ಕವಿತಾ ಶ್ರೀವತ್ಸವ್‌ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿ,ಸುರೇಶ್‌ ಅವರು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಸಂಸತ್ತಿನಲ್ಲಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಡಬ್ಬಗಳಿಂದ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿ  ಇಂಕ್ವಿಲಾಬ್ ಜಿಂದಾಬಾದ್ ಮತ್ತು ಭಗತ್ ಸಿಗ್ ಅಮರ್‌ ರಹೇ ಎಂದು ಘೋಷಣೆಗಳನ್ನು ಕೂಗಿದ್ದಕ್ಕಾಗಿ ಲಕ್ನೋದ ಸಾಗರ್ ಶರ್ಮಾ(26) ಮತ್ತು ಬೆಂಗಳೂರಿನ ಇಂಜಿನಿಯರಿಂಗ್ ಪದವೀಧರ ಮನೋರಂಜನ್ ಡಿ(35) ಮತ್ತು ಸದನದ ಹೊರಗೆ ಗ್ಯಾಸ್ ಸ್ಪೇ ಮಾಡಿ ಸರ್ವಾಧಿಕಾರ, ನಿರುದ್ಯೋಗ, ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಹಾಗೂ ಜೈ ಭೀಮ್‌ ಘೋಷಣೆಗಳನ್ನು ಕೂಗಿದ ಅಮೋಲ್ ಶಿಂಧೆ (25) ಮತ್ತು ನೀಲಮ್ ದೇವಿ (42) ಮತ್ತು ವಿರುದ್ಧದ ಯುಎಪಿಎ ಪ್ರಕರಣವನ್ನು ಕೈಬಿಡಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ವಿಶಾಲ್‌ ಶರ್ಮಾ, ಲಲಿತ್‌ ಝಾ ಸೇರಿ ಬಂಧಿತ 6 ಮಂದಿ ‘ಭಗತ್ ಸಿಂಗ್ ಫ್ಯಾನ್ ಕ್ಲಬ್’ ಜೊತೆ ಸಂಬಂಧ ಹೊಂದಿದ್ದರು. ಅವರು ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಮತ್ತು ಶಿವರಾಮ ರಾಜಗುರು ಅವರ ಮೇಲಿನ ಅಭಿಮಾನ ಹೊಂದಿದ್ದರು ಎಂದು ಹೇಳಿದ್ದಾರೆ. ಎಲ್ಲಾ 6 ಆರೋಪಿಗಳ ವಿರುದ್ಧ ಸೆಕ್ಷನ್ 120B , 452 , 153 , 186, 353ರಡಿ ಪ್ರಕರಣ  ದಾಖಲಿಸಲಾಗಿದೆ. ಇದಲ್ಲದೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆಯ ಸೆಕ್ಷನ್ 16 ಮತ್ತು 18ರಡಿಯಲ್ಲಿ ಭಯೋತ್ಪಾದಕ ಕೃತ್ಯದ ಆರೋಪವನ್ನು ಹೊರಿಸಲಾಗಿದೆ. ಇದು ಸರಿಯಲ್ಲ ಎಂದು ಪಿಯುಸಿಎಲ್‌ ಹೇಳಿದೆ.

ಕಳೆದ 9 ವರ್ಷಗಳಿಂದ ನಿರುದ್ಯೋಗದ ಸಮಸ್ಯೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದೆ ಇರುವುದು ವಾಸ್ತವವಾಗಿ 6 ಯುವಕರ ಕೃತ್ಯಕ್ಕೆ ಪ್ರಚೋದನೆಯಂತೆ ಕಂಡು ಬರುತ್ತಿದೆ. 2023ರಲ್ಲಿ ನಿರುದ್ಯೋಗ ದರವು 7.6% ಆಗಿದೆ. ಇದು ಸಾಂಕ್ರಾಮಿಕದ ಪೂರ್ವ ದರಗಳಿಗಿಂತ ಹೆಚ್ಚಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳದೆ ಇರುವುದರಿಂದ ಭಗತ್ ಸಿಂಗ್ ಅವರಂತೆಯೇ ಅವರು ಕಿವುಡರನ್ನು ಕೇಳುವಂತೆ ಮಾಡಲು ಮತ್ತು ಅಜಾಗರೂಕರಿಗೆ ಎಚ್ಚರಿಕೆಯನ್ನು ನೀಡಲು ಪ್ರಯತ್ನಿಸಿದರು ಎಂದು ಪಿಯುಸಿಎಲ್‌ ಹೇಳಿದೆ.

ಬಂಧಿತ ಯುವಕರ ವಿರುದ್ಧ ಯುಎಪಿಎಯಂತಹ ಕಠೋರ ಕಾನೂನನ್ನು ಬಳಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಲ್ಲದೇ ಮತ್ತೇನೂ ಅಲ್ಲ. ಯುಎಪಿಎ ಸೆಕ್ಷನ್ 15ರ ಅಡಿಯಲ್ಲಿ ಒಂದು ಕೃತ್ಯವನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಬೇಕಾದರೆ ಭಾರತದ ಏಕತೆ ಮತ್ತು ಸಮಗ್ರತೆಗೆ ಬೆದರಿಕೆ ಹಾಕುವ ಭಯೋತ್ಪದಾಕ ಕೃತ್ಯವಾಗಿರಬೇಕು. ಬಾಂಬ್‌ಗಳು ಅಥವಾ ಇತರ ಸ್ಫೋಟಕ ವಸ್ತುಗಳ ಬಳಕೆ ಮತ್ತು ಸಾವು, ನೋವುಗಳು ಸಂಭವಿಸರಬೇಕು. ಅಂತಹ ಸಂದರ್ಭಗಳಲ್ಲಿ ಮಾತ್ರ ಕಠೋರ ಕಾನೂನನ್ನು ಬಳಸಬೇಕು ಎಂದಿದೆ ಎಂದು ಪಿಯುಸಿಎಲ್‌ ಹೇಳಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪಿಯುಸಿಎಲ್‌ ಕರ್ನಾಟಕ ರಾಜ್ಯಾಧ್ಯಕ್ಷರಾದ ಅರವಿಂದ್‌ ನಾರಾಯಣ್, ಯುವಕರ ಮೇಲೆ ಯುಎಪಿಎ ಕೇಸ್ ಹಾಕಲಾಗಿದೆ. ಯುಎಪಿಎ ನಿಯಮಾವಳಿಗಳನ್ನು ಓದಬೇಕು. ಉದ್ದೇಶ ಪೂರ್ವಕವಾಗಿ ಹಾನಿ ಮಾಡಿದರೆ ಮಾತ್ರ ಈ ಪ್ರಕರಣ ದಾಖಲಿಸಬೇಕು ಎಂದಿದೆ. ಇಲ್ಲಿ ಉದ್ದೇಶಪೂರ್ವಕ ಕೃತ್ಯವೆಂದು ಕಂಡು ಬಂದಿಲ್ಲ. ನಿರುದ್ಯೋಗ, ಸರ್ವಾಧಿಕಾರ, ಮಣಿಪುರ ವಿಚಾರದಲ್ಲಿ ಎಚ್ಚರಿಕೆ ನೀಡಲು ಈ ಕೃತ್ಯ ಮಾಡಿದ್ದಾರೆ. ಇನ್ನು ಕ್ರಿಯೆಯನ್ನು ನೋಡಿದಾಗ ಬಾಂಬ್‌ ಸ್ಪೋಟದಂತಹ ಕೃತ್ಯ ನಡೆದಿಲ್ಲ. ಖಾಲಿ ಹೊಗೆ ಮಾತ್ರ ಸ್ಪ್ರೇ ಮಾಡಿದ್ದಾರೆ. ಇದನ್ನು ನೋಡಿದಾಗ ಯುಎಪಿಎ ದಾಖಲಿಸಿರುವುದು ಕಾನೂನಿನ ದುರುಪಯೋಗ ಎಂದು ಹೇಳಿದ್ದಾರೆ.

ನಿರುದ್ಯೋಗ ಯುವಜನರಲ್ಲಿ ದೊಡ್ಡ ಸಮಸ್ಯೆಯಾಗಿದೆ. ಈ ಅಭಿಪ್ರಾಯವನ್ನು ಯುಎಪಿಎ ಬಳಸಿ ತಡೆಯಲು ಸಾಧ್ಯವಿಲ್ಲ. ಭಗತ್‌ ಸಿಂಗ್ ಅವರ ಮಾತನ್ನು ನಾವು ನೆನಪಿಸಬಹುದು. ಅವರು ಯುಎಪಿಎ ಕಾಯ್ದೆಯಂತಿದ್ದ ಪಬ್ಲಿಕ್‌ ಸೇಪ್ಟಿ ಮೂಲಕ ಸಮಸ್ಯೆಯ ಬಗ್ಗೆ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಯುಎಪಿಎ ದುರ್ಬಳಕೆ ಇದೊಂದೇ ಘಟನೆಯಲ್ಲ. ಇಂಡಿಯಾ- ಆಸ್ಟ್ರೇಲಿಯಾ ಫೈನಲ್‌ ಪಂದ್ಯದ ವೇಳೆ ಯುಎಪಿಎ ಕೇಸ್ ದಾಖಲಿಸಿದ್ದಾರೆ. ಭಾರತದ ಸೋಲನ್ನು ಸಂಭ್ರಮಿಸಿದರು ಎಂದು ವಿದ್ಯಾರ್ಥಿಗಳ ಮೇಲೆ ಈ ಕೇಸ್ ದಾಖಲು ಮಾಡಿದ್ದಾರೆ. ಇದು ಎಷ್ಟು ಸಮಂಜಸ? ಇತ್ತೀಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯುಎಪಿಎ ಕೇಸ್ ದಾಖಲು ಮಾಡಲಾಗುತ್ತಿದೆ. ಸರಕಾರ ಯುಎಪಿಎಯನ್ನು ಅಸ್ತ್ರವಾಗಿ ಬಳಸುತ್ತಿದೆ. ಆದ್ದರಿಂದ ಯುಎಪಿಎ ರದ್ದು ಮಾಡಬೇಕು. ಇಂತಹ ಕೇಸ್ ಎಲ್ಲರ ಮೇಲೂ ಫೈಲ್‌ ಮಾಡಬಾರದು. ಸಂಸತ್ತಿನ ಭದ್ರತಲೋಪದ ಪ್ರಕರಣದಲ್ಲಿನ ಆರೋಪಿಗಳ ಮೇಲಿನ ಯುಎಪಿಎ ಪ್ರಕರಣವನ್ನು ಕೈಬಿಡಬೇಕು ಮತ್ತು ಅವರನ್ನು ಬಂಧನದಿಂದ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...