Homeಮುಖಪುಟಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

- Advertisement -
- Advertisement -

ಸಂಸತ್ತಿನ ಭದ್ರತಾಲೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳ ಮೇಲೆ ಯುಎಪಿಎ ಕಾನೂನಿನಡಿ ಪ್ರಕರಣ ದಾಖಲಿಸಿರುವುದನ್ನು ಪಿಯುಸಿಎಲ್‌( PEOPLE’S UNION FOR CIVIL LIBERTIES) ಖಂಡಿಸಿದ್ದು, ಯುಎಪಿಎ ಪ್ರಕರಣವನ್ನು ಕೈಬಿಡುವಂತೆ ಆಗ್ರಹಿಸಿದೆ.

ಈ ಕುರಿತು ಪಿಯುಸಿಎಲ್‌ ಅಧ್ಯಕ್ಷರಾದ ಕವಿತಾ ಶ್ರೀವತ್ಸವ್‌ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿ,ಸುರೇಶ್‌ ಅವರು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಸಂಸತ್ತಿನಲ್ಲಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಡಬ್ಬಗಳಿಂದ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿ  ಇಂಕ್ವಿಲಾಬ್ ಜಿಂದಾಬಾದ್ ಮತ್ತು ಭಗತ್ ಸಿಗ್ ಅಮರ್‌ ರಹೇ ಎಂದು ಘೋಷಣೆಗಳನ್ನು ಕೂಗಿದ್ದಕ್ಕಾಗಿ ಲಕ್ನೋದ ಸಾಗರ್ ಶರ್ಮಾ(26) ಮತ್ತು ಬೆಂಗಳೂರಿನ ಇಂಜಿನಿಯರಿಂಗ್ ಪದವೀಧರ ಮನೋರಂಜನ್ ಡಿ(35) ಮತ್ತು ಸದನದ ಹೊರಗೆ ಗ್ಯಾಸ್ ಸ್ಪೇ ಮಾಡಿ ಸರ್ವಾಧಿಕಾರ, ನಿರುದ್ಯೋಗ, ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಹಾಗೂ ಜೈ ಭೀಮ್‌ ಘೋಷಣೆಗಳನ್ನು ಕೂಗಿದ ಅಮೋಲ್ ಶಿಂಧೆ (25) ಮತ್ತು ನೀಲಮ್ ದೇವಿ (42) ಮತ್ತು ವಿರುದ್ಧದ ಯುಎಪಿಎ ಪ್ರಕರಣವನ್ನು ಕೈಬಿಡಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ವಿಶಾಲ್‌ ಶರ್ಮಾ, ಲಲಿತ್‌ ಝಾ ಸೇರಿ ಬಂಧಿತ 6 ಮಂದಿ ‘ಭಗತ್ ಸಿಂಗ್ ಫ್ಯಾನ್ ಕ್ಲಬ್’ ಜೊತೆ ಸಂಬಂಧ ಹೊಂದಿದ್ದರು. ಅವರು ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಮತ್ತು ಶಿವರಾಮ ರಾಜಗುರು ಅವರ ಮೇಲಿನ ಅಭಿಮಾನ ಹೊಂದಿದ್ದರು ಎಂದು ಹೇಳಿದ್ದಾರೆ. ಎಲ್ಲಾ 6 ಆರೋಪಿಗಳ ವಿರುದ್ಧ ಸೆಕ್ಷನ್ 120B , 452 , 153 , 186, 353ರಡಿ ಪ್ರಕರಣ  ದಾಖಲಿಸಲಾಗಿದೆ. ಇದಲ್ಲದೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆಯ ಸೆಕ್ಷನ್ 16 ಮತ್ತು 18ರಡಿಯಲ್ಲಿ ಭಯೋತ್ಪಾದಕ ಕೃತ್ಯದ ಆರೋಪವನ್ನು ಹೊರಿಸಲಾಗಿದೆ. ಇದು ಸರಿಯಲ್ಲ ಎಂದು ಪಿಯುಸಿಎಲ್‌ ಹೇಳಿದೆ.

ಕಳೆದ 9 ವರ್ಷಗಳಿಂದ ನಿರುದ್ಯೋಗದ ಸಮಸ್ಯೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದೆ ಇರುವುದು ವಾಸ್ತವವಾಗಿ 6 ಯುವಕರ ಕೃತ್ಯಕ್ಕೆ ಪ್ರಚೋದನೆಯಂತೆ ಕಂಡು ಬರುತ್ತಿದೆ. 2023ರಲ್ಲಿ ನಿರುದ್ಯೋಗ ದರವು 7.6% ಆಗಿದೆ. ಇದು ಸಾಂಕ್ರಾಮಿಕದ ಪೂರ್ವ ದರಗಳಿಗಿಂತ ಹೆಚ್ಚಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳದೆ ಇರುವುದರಿಂದ ಭಗತ್ ಸಿಂಗ್ ಅವರಂತೆಯೇ ಅವರು ಕಿವುಡರನ್ನು ಕೇಳುವಂತೆ ಮಾಡಲು ಮತ್ತು ಅಜಾಗರೂಕರಿಗೆ ಎಚ್ಚರಿಕೆಯನ್ನು ನೀಡಲು ಪ್ರಯತ್ನಿಸಿದರು ಎಂದು ಪಿಯುಸಿಎಲ್‌ ಹೇಳಿದೆ.

ಬಂಧಿತ ಯುವಕರ ವಿರುದ್ಧ ಯುಎಪಿಎಯಂತಹ ಕಠೋರ ಕಾನೂನನ್ನು ಬಳಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಲ್ಲದೇ ಮತ್ತೇನೂ ಅಲ್ಲ. ಯುಎಪಿಎ ಸೆಕ್ಷನ್ 15ರ ಅಡಿಯಲ್ಲಿ ಒಂದು ಕೃತ್ಯವನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಬೇಕಾದರೆ ಭಾರತದ ಏಕತೆ ಮತ್ತು ಸಮಗ್ರತೆಗೆ ಬೆದರಿಕೆ ಹಾಕುವ ಭಯೋತ್ಪದಾಕ ಕೃತ್ಯವಾಗಿರಬೇಕು. ಬಾಂಬ್‌ಗಳು ಅಥವಾ ಇತರ ಸ್ಫೋಟಕ ವಸ್ತುಗಳ ಬಳಕೆ ಮತ್ತು ಸಾವು, ನೋವುಗಳು ಸಂಭವಿಸರಬೇಕು. ಅಂತಹ ಸಂದರ್ಭಗಳಲ್ಲಿ ಮಾತ್ರ ಕಠೋರ ಕಾನೂನನ್ನು ಬಳಸಬೇಕು ಎಂದಿದೆ ಎಂದು ಪಿಯುಸಿಎಲ್‌ ಹೇಳಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪಿಯುಸಿಎಲ್‌ ಕರ್ನಾಟಕ ರಾಜ್ಯಾಧ್ಯಕ್ಷರಾದ ಅರವಿಂದ್‌ ನಾರಾಯಣ್, ಯುವಕರ ಮೇಲೆ ಯುಎಪಿಎ ಕೇಸ್ ಹಾಕಲಾಗಿದೆ. ಯುಎಪಿಎ ನಿಯಮಾವಳಿಗಳನ್ನು ಓದಬೇಕು. ಉದ್ದೇಶ ಪೂರ್ವಕವಾಗಿ ಹಾನಿ ಮಾಡಿದರೆ ಮಾತ್ರ ಈ ಪ್ರಕರಣ ದಾಖಲಿಸಬೇಕು ಎಂದಿದೆ. ಇಲ್ಲಿ ಉದ್ದೇಶಪೂರ್ವಕ ಕೃತ್ಯವೆಂದು ಕಂಡು ಬಂದಿಲ್ಲ. ನಿರುದ್ಯೋಗ, ಸರ್ವಾಧಿಕಾರ, ಮಣಿಪುರ ವಿಚಾರದಲ್ಲಿ ಎಚ್ಚರಿಕೆ ನೀಡಲು ಈ ಕೃತ್ಯ ಮಾಡಿದ್ದಾರೆ. ಇನ್ನು ಕ್ರಿಯೆಯನ್ನು ನೋಡಿದಾಗ ಬಾಂಬ್‌ ಸ್ಪೋಟದಂತಹ ಕೃತ್ಯ ನಡೆದಿಲ್ಲ. ಖಾಲಿ ಹೊಗೆ ಮಾತ್ರ ಸ್ಪ್ರೇ ಮಾಡಿದ್ದಾರೆ. ಇದನ್ನು ನೋಡಿದಾಗ ಯುಎಪಿಎ ದಾಖಲಿಸಿರುವುದು ಕಾನೂನಿನ ದುರುಪಯೋಗ ಎಂದು ಹೇಳಿದ್ದಾರೆ.

ನಿರುದ್ಯೋಗ ಯುವಜನರಲ್ಲಿ ದೊಡ್ಡ ಸಮಸ್ಯೆಯಾಗಿದೆ. ಈ ಅಭಿಪ್ರಾಯವನ್ನು ಯುಎಪಿಎ ಬಳಸಿ ತಡೆಯಲು ಸಾಧ್ಯವಿಲ್ಲ. ಭಗತ್‌ ಸಿಂಗ್ ಅವರ ಮಾತನ್ನು ನಾವು ನೆನಪಿಸಬಹುದು. ಅವರು ಯುಎಪಿಎ ಕಾಯ್ದೆಯಂತಿದ್ದ ಪಬ್ಲಿಕ್‌ ಸೇಪ್ಟಿ ಮೂಲಕ ಸಮಸ್ಯೆಯ ಬಗ್ಗೆ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಯುಎಪಿಎ ದುರ್ಬಳಕೆ ಇದೊಂದೇ ಘಟನೆಯಲ್ಲ. ಇಂಡಿಯಾ- ಆಸ್ಟ್ರೇಲಿಯಾ ಫೈನಲ್‌ ಪಂದ್ಯದ ವೇಳೆ ಯುಎಪಿಎ ಕೇಸ್ ದಾಖಲಿಸಿದ್ದಾರೆ. ಭಾರತದ ಸೋಲನ್ನು ಸಂಭ್ರಮಿಸಿದರು ಎಂದು ವಿದ್ಯಾರ್ಥಿಗಳ ಮೇಲೆ ಈ ಕೇಸ್ ದಾಖಲು ಮಾಡಿದ್ದಾರೆ. ಇದು ಎಷ್ಟು ಸಮಂಜಸ? ಇತ್ತೀಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯುಎಪಿಎ ಕೇಸ್ ದಾಖಲು ಮಾಡಲಾಗುತ್ತಿದೆ. ಸರಕಾರ ಯುಎಪಿಎಯನ್ನು ಅಸ್ತ್ರವಾಗಿ ಬಳಸುತ್ತಿದೆ. ಆದ್ದರಿಂದ ಯುಎಪಿಎ ರದ್ದು ಮಾಡಬೇಕು. ಇಂತಹ ಕೇಸ್ ಎಲ್ಲರ ಮೇಲೂ ಫೈಲ್‌ ಮಾಡಬಾರದು. ಸಂಸತ್ತಿನ ಭದ್ರತಲೋಪದ ಪ್ರಕರಣದಲ್ಲಿನ ಆರೋಪಿಗಳ ಮೇಲಿನ ಯುಎಪಿಎ ಪ್ರಕರಣವನ್ನು ಕೈಬಿಡಬೇಕು ಮತ್ತು ಅವರನ್ನು ಬಂಧನದಿಂದ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...