Homeಮುಖಪುಟಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

- Advertisement -
- Advertisement -

ಸಂಸತ್ತಿನ ಭದ್ರತಾಲೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳ ಮೇಲೆ ಯುಎಪಿಎ ಕಾನೂನಿನಡಿ ಪ್ರಕರಣ ದಾಖಲಿಸಿರುವುದನ್ನು ಪಿಯುಸಿಎಲ್‌( PEOPLE’S UNION FOR CIVIL LIBERTIES) ಖಂಡಿಸಿದ್ದು, ಯುಎಪಿಎ ಪ್ರಕರಣವನ್ನು ಕೈಬಿಡುವಂತೆ ಆಗ್ರಹಿಸಿದೆ.

ಈ ಕುರಿತು ಪಿಯುಸಿಎಲ್‌ ಅಧ್ಯಕ್ಷರಾದ ಕವಿತಾ ಶ್ರೀವತ್ಸವ್‌ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿ,ಸುರೇಶ್‌ ಅವರು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಸಂಸತ್ತಿನಲ್ಲಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಡಬ್ಬಗಳಿಂದ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿ  ಇಂಕ್ವಿಲಾಬ್ ಜಿಂದಾಬಾದ್ ಮತ್ತು ಭಗತ್ ಸಿಗ್ ಅಮರ್‌ ರಹೇ ಎಂದು ಘೋಷಣೆಗಳನ್ನು ಕೂಗಿದ್ದಕ್ಕಾಗಿ ಲಕ್ನೋದ ಸಾಗರ್ ಶರ್ಮಾ(26) ಮತ್ತು ಬೆಂಗಳೂರಿನ ಇಂಜಿನಿಯರಿಂಗ್ ಪದವೀಧರ ಮನೋರಂಜನ್ ಡಿ(35) ಮತ್ತು ಸದನದ ಹೊರಗೆ ಗ್ಯಾಸ್ ಸ್ಪೇ ಮಾಡಿ ಸರ್ವಾಧಿಕಾರ, ನಿರುದ್ಯೋಗ, ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಹಾಗೂ ಜೈ ಭೀಮ್‌ ಘೋಷಣೆಗಳನ್ನು ಕೂಗಿದ ಅಮೋಲ್ ಶಿಂಧೆ (25) ಮತ್ತು ನೀಲಮ್ ದೇವಿ (42) ಮತ್ತು ವಿರುದ್ಧದ ಯುಎಪಿಎ ಪ್ರಕರಣವನ್ನು ಕೈಬಿಡಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ವಿಶಾಲ್‌ ಶರ್ಮಾ, ಲಲಿತ್‌ ಝಾ ಸೇರಿ ಬಂಧಿತ 6 ಮಂದಿ ‘ಭಗತ್ ಸಿಂಗ್ ಫ್ಯಾನ್ ಕ್ಲಬ್’ ಜೊತೆ ಸಂಬಂಧ ಹೊಂದಿದ್ದರು. ಅವರು ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಮತ್ತು ಶಿವರಾಮ ರಾಜಗುರು ಅವರ ಮೇಲಿನ ಅಭಿಮಾನ ಹೊಂದಿದ್ದರು ಎಂದು ಹೇಳಿದ್ದಾರೆ. ಎಲ್ಲಾ 6 ಆರೋಪಿಗಳ ವಿರುದ್ಧ ಸೆಕ್ಷನ್ 120B , 452 , 153 , 186, 353ರಡಿ ಪ್ರಕರಣ  ದಾಖಲಿಸಲಾಗಿದೆ. ಇದಲ್ಲದೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆಯ ಸೆಕ್ಷನ್ 16 ಮತ್ತು 18ರಡಿಯಲ್ಲಿ ಭಯೋತ್ಪಾದಕ ಕೃತ್ಯದ ಆರೋಪವನ್ನು ಹೊರಿಸಲಾಗಿದೆ. ಇದು ಸರಿಯಲ್ಲ ಎಂದು ಪಿಯುಸಿಎಲ್‌ ಹೇಳಿದೆ.

ಕಳೆದ 9 ವರ್ಷಗಳಿಂದ ನಿರುದ್ಯೋಗದ ಸಮಸ್ಯೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದೆ ಇರುವುದು ವಾಸ್ತವವಾಗಿ 6 ಯುವಕರ ಕೃತ್ಯಕ್ಕೆ ಪ್ರಚೋದನೆಯಂತೆ ಕಂಡು ಬರುತ್ತಿದೆ. 2023ರಲ್ಲಿ ನಿರುದ್ಯೋಗ ದರವು 7.6% ಆಗಿದೆ. ಇದು ಸಾಂಕ್ರಾಮಿಕದ ಪೂರ್ವ ದರಗಳಿಗಿಂತ ಹೆಚ್ಚಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳದೆ ಇರುವುದರಿಂದ ಭಗತ್ ಸಿಂಗ್ ಅವರಂತೆಯೇ ಅವರು ಕಿವುಡರನ್ನು ಕೇಳುವಂತೆ ಮಾಡಲು ಮತ್ತು ಅಜಾಗರೂಕರಿಗೆ ಎಚ್ಚರಿಕೆಯನ್ನು ನೀಡಲು ಪ್ರಯತ್ನಿಸಿದರು ಎಂದು ಪಿಯುಸಿಎಲ್‌ ಹೇಳಿದೆ.

ಬಂಧಿತ ಯುವಕರ ವಿರುದ್ಧ ಯುಎಪಿಎಯಂತಹ ಕಠೋರ ಕಾನೂನನ್ನು ಬಳಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಲ್ಲದೇ ಮತ್ತೇನೂ ಅಲ್ಲ. ಯುಎಪಿಎ ಸೆಕ್ಷನ್ 15ರ ಅಡಿಯಲ್ಲಿ ಒಂದು ಕೃತ್ಯವನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಬೇಕಾದರೆ ಭಾರತದ ಏಕತೆ ಮತ್ತು ಸಮಗ್ರತೆಗೆ ಬೆದರಿಕೆ ಹಾಕುವ ಭಯೋತ್ಪದಾಕ ಕೃತ್ಯವಾಗಿರಬೇಕು. ಬಾಂಬ್‌ಗಳು ಅಥವಾ ಇತರ ಸ್ಫೋಟಕ ವಸ್ತುಗಳ ಬಳಕೆ ಮತ್ತು ಸಾವು, ನೋವುಗಳು ಸಂಭವಿಸರಬೇಕು. ಅಂತಹ ಸಂದರ್ಭಗಳಲ್ಲಿ ಮಾತ್ರ ಕಠೋರ ಕಾನೂನನ್ನು ಬಳಸಬೇಕು ಎಂದಿದೆ ಎಂದು ಪಿಯುಸಿಎಲ್‌ ಹೇಳಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪಿಯುಸಿಎಲ್‌ ಕರ್ನಾಟಕ ರಾಜ್ಯಾಧ್ಯಕ್ಷರಾದ ಅರವಿಂದ್‌ ನಾರಾಯಣ್, ಯುವಕರ ಮೇಲೆ ಯುಎಪಿಎ ಕೇಸ್ ಹಾಕಲಾಗಿದೆ. ಯುಎಪಿಎ ನಿಯಮಾವಳಿಗಳನ್ನು ಓದಬೇಕು. ಉದ್ದೇಶ ಪೂರ್ವಕವಾಗಿ ಹಾನಿ ಮಾಡಿದರೆ ಮಾತ್ರ ಈ ಪ್ರಕರಣ ದಾಖಲಿಸಬೇಕು ಎಂದಿದೆ. ಇಲ್ಲಿ ಉದ್ದೇಶಪೂರ್ವಕ ಕೃತ್ಯವೆಂದು ಕಂಡು ಬಂದಿಲ್ಲ. ನಿರುದ್ಯೋಗ, ಸರ್ವಾಧಿಕಾರ, ಮಣಿಪುರ ವಿಚಾರದಲ್ಲಿ ಎಚ್ಚರಿಕೆ ನೀಡಲು ಈ ಕೃತ್ಯ ಮಾಡಿದ್ದಾರೆ. ಇನ್ನು ಕ್ರಿಯೆಯನ್ನು ನೋಡಿದಾಗ ಬಾಂಬ್‌ ಸ್ಪೋಟದಂತಹ ಕೃತ್ಯ ನಡೆದಿಲ್ಲ. ಖಾಲಿ ಹೊಗೆ ಮಾತ್ರ ಸ್ಪ್ರೇ ಮಾಡಿದ್ದಾರೆ. ಇದನ್ನು ನೋಡಿದಾಗ ಯುಎಪಿಎ ದಾಖಲಿಸಿರುವುದು ಕಾನೂನಿನ ದುರುಪಯೋಗ ಎಂದು ಹೇಳಿದ್ದಾರೆ.

ನಿರುದ್ಯೋಗ ಯುವಜನರಲ್ಲಿ ದೊಡ್ಡ ಸಮಸ್ಯೆಯಾಗಿದೆ. ಈ ಅಭಿಪ್ರಾಯವನ್ನು ಯುಎಪಿಎ ಬಳಸಿ ತಡೆಯಲು ಸಾಧ್ಯವಿಲ್ಲ. ಭಗತ್‌ ಸಿಂಗ್ ಅವರ ಮಾತನ್ನು ನಾವು ನೆನಪಿಸಬಹುದು. ಅವರು ಯುಎಪಿಎ ಕಾಯ್ದೆಯಂತಿದ್ದ ಪಬ್ಲಿಕ್‌ ಸೇಪ್ಟಿ ಮೂಲಕ ಸಮಸ್ಯೆಯ ಬಗ್ಗೆ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಯುಎಪಿಎ ದುರ್ಬಳಕೆ ಇದೊಂದೇ ಘಟನೆಯಲ್ಲ. ಇಂಡಿಯಾ- ಆಸ್ಟ್ರೇಲಿಯಾ ಫೈನಲ್‌ ಪಂದ್ಯದ ವೇಳೆ ಯುಎಪಿಎ ಕೇಸ್ ದಾಖಲಿಸಿದ್ದಾರೆ. ಭಾರತದ ಸೋಲನ್ನು ಸಂಭ್ರಮಿಸಿದರು ಎಂದು ವಿದ್ಯಾರ್ಥಿಗಳ ಮೇಲೆ ಈ ಕೇಸ್ ದಾಖಲು ಮಾಡಿದ್ದಾರೆ. ಇದು ಎಷ್ಟು ಸಮಂಜಸ? ಇತ್ತೀಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯುಎಪಿಎ ಕೇಸ್ ದಾಖಲು ಮಾಡಲಾಗುತ್ತಿದೆ. ಸರಕಾರ ಯುಎಪಿಎಯನ್ನು ಅಸ್ತ್ರವಾಗಿ ಬಳಸುತ್ತಿದೆ. ಆದ್ದರಿಂದ ಯುಎಪಿಎ ರದ್ದು ಮಾಡಬೇಕು. ಇಂತಹ ಕೇಸ್ ಎಲ್ಲರ ಮೇಲೂ ಫೈಲ್‌ ಮಾಡಬಾರದು. ಸಂಸತ್ತಿನ ಭದ್ರತಲೋಪದ ಪ್ರಕರಣದಲ್ಲಿನ ಆರೋಪಿಗಳ ಮೇಲಿನ ಯುಎಪಿಎ ಪ್ರಕರಣವನ್ನು ಕೈಬಿಡಬೇಕು ಮತ್ತು ಅವರನ್ನು ಬಂಧನದಿಂದ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...