Homeಕರ್ನಾಟಕಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯಕ್ಕೆ ಅನ್ಯಾಯ: ವಿಧಾನಸೌಧದ ಆವರಣದಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯಕ್ಕೆ ಅನ್ಯಾಯ: ವಿಧಾನಸೌಧದ ಆವರಣದಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರಕಾರದ ಬರ ಪರಿಹಾರ ನೀಡಿಕೆ ಅನ್ಯಾಯದ ವಿರುದ್ಧ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ ಡಿಕೆ ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ವಿಧಾನಸೌಧದ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ, ರಾಜ್ಯಕ್ಕೆ 18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ₹3,498 ಕೋಟಿಗೆ ಅನುಮೋದನೆ ನೀಡಿ,  3,454 ಕೋಟಿ ಬಿಡುಗಡೆ ಮಾಡಿದೆ. ಇದು ಒಟ್ಟು ಬಾಕಿ ಮೊತ್ತದ ಶೇ.20ಕ್ಕಿಂತ ಕಡಿಮೆಯಾಗಿದ್ದು, ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇದಲ್ಲದೆ ಇಂದು ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಪ್ರತಿಭಟನಾಕಾರರು ಗೋ-ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಕ್ಕೂಟ ವ್ಯವಸ್ಥೆಯಲ್ಲಿ ನಾವಿದ್ದೇವೆ, ಈ ವ್ಯವಸ್ಥೆಯಲ್ಲಿ ಬರ ಬಂದಾಗ ಪರಿಹಾರ ನೀಡುವುದು ಕೇಂದ್ರದ ಕರ್ತವ್ಯ, ನಾವು ಭಿಕ್ಷೆ ಬೇಡುತ್ತಿಲ್ಲ, 223 ತಾಲೂಕುಗಳಲ್ಲಿ ಬರಗಳ ಇದೆ, 100ವರ್ಷಗಳಲ್ಲಿ ಇದು ಭೀಕರ ಬರಗಾಲವಾಗಿದೆ. ನಾನೇ ಕುದ್ದು ಪ್ರಧಾನಿ, ಅಮಿತ್‌ ಶಾಗೆ ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಆಗ್ರಹಿಸಿದ್ದೆವು, ಆದರೆ ಅವರು ಪರಿಹಾರ ಕೊಟ್ಟಿಲ್ಲ, ಅದಕ್ಕೆ ನಾವು ಅನಿವಾರ್ಯವಾಗಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದೇವೆ. 35,000ಕೋಟಿಗೂ ಹೆಚ್ಚು ಮೌಲ್ಯದ ಬೆಳೆ ನಷ್ಟವಾಗಿದೆ. ಎನ್‌ಡಿಆರ್‌ಎಫ್ ಪ್ರಕಾರ, 18,172 ಕೋಟಿ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಲಾಗಿತ್ತು. ಈಗ 19%ಕ್ಕಿಂತ ಕಡಿಮೆ ಪರಿಹಾರ ನೀಡಿದ್ದಾರೆ, ಇದು ಬಹಳ ಕಡಿಮೆಯಾಗಿದೆ. ಇದರಿಂದ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಕರ್ನಾಟಕಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಜನರಿಗೆ ಖಾಲಿ ಚೊಂಬು ತಂದಿದ್ದಾರೆ. ಕರ್ನಾಟಕ ಕೇಳಿದ್ದ 18,172 ಕೋಟಿ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ಸೆಪ್ರೆಂಬರ್ 2023ರಿಂದಲೂ ನಿರಾಕರಿಸುತ್ತಲೇ ಬಂದಿದೆ. ಸುಪ್ರೀಂ ಕೋರ್ಟ್ ಹೇಳಿದ ಬಳಿಕವೂ ಇವರು ರಾಜ್ಯದ ರೈತರ ಕೈಗೆ ಕೊಟ್ಟಿದ್ದು ಲಾಲಿಪಾಪ್ ಅಷ್ಟೇ! ನಾವೇನು ಭಿಕ್ಷೆ ಕೇಳುತ್ತಿಲ್ಲ, ಬರ ಪರಿಹಾರ ರೈತರ ಹಕ್ಕು ಎಂದು ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್‌, ಬರಗಾಲದಿಂದ ಸಂಕಷ್ಟದಲ್ಲಿರುವ ರೈತರು, ಕಾರ್ಮಿಕರು, ಕೂಲಿ ಕೆಲಸಗಾರರಿಗಾಗಿ ನಾವು ಕೇಳುತ್ತಿದ್ದೇವೆ. ರಾಜ್ಯ ಸರ್ಕಾರದಿಂದ ನಾವು ಎಷ್ಟು ಸಾಧ್ಯವೋ ಅಷ್ಟು ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ 7 ತಿಂಗಳು ಕಳೆದ ಬಳಿಕ ಕೇವಲ 3,454 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಬರ ಪರಿಹಾರಕ್ಕಾಗಿ ಆಗ್ರಹಿಸಿ ನಮ್ಮ ಹೋರಾಟ ನ್ಯಾಯಾಲಯದಲ್ಲಿ ಹಾಗೂ ಜನರ ನಡುವೆಯೂ ಮುಂದುವರೆಯಲಿದೆ. ನಾವು ಅವರ ಮನೆಯ ಹಣ ಕೇಳುತ್ತಿಲ್ಲ, ನನಗೆ ಕೊಡಿ, ಸಿದ್ದರಾಮಯ್ಯ ಅವರಿಗೆ ಕೊಡಿ ಎಂದು ಕೇಳ್ತಿದ್ದೀವಾ? ರಾಜ್ಯಕ್ಕೆ ಭಿಕ್ಷೆ ಬೇಡ, ಇದು ನಮ್ಮ ಹಕ್ಕು, ಅದನ್ನು ನಾವು ಕೇಳುತ್ತಿದ್ದೇವೆ, ನಮಗೆ ಸೆಪ್ಟಂಬರ್‌ನಿಂದ ಇಲ್ಲಿಯವರೆಗೆ ಆಗುತ್ತಿರುವ ನಷ್ಟವನ್ನು ಸೇರಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಚಿವರಾದ ಡಾ.ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಎನ್‌. ಚಲುವರಾಯಸ್ವಾಮಿ, ದಿನೇಶ್ ಗುಂಡೂರಾವ್, ಕೆ. ಎಚ್. ಮುನಿಯಪ್ಪ, ಶಾಸಕರಾದ ಎಚ್. ಸಿ. ಬಾಲಕೃಷ್ಣ, ರಿಜ್ವಾನ್ ಅರ್ಷದ್ ಮತ್ತಿತರರು ಭಾಗವಹಿಸಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....