Homeಕರ್ನಾಟಕಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯಕ್ಕೆ ಅನ್ಯಾಯ: ವಿಧಾನಸೌಧದ ಆವರಣದಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯಕ್ಕೆ ಅನ್ಯಾಯ: ವಿಧಾನಸೌಧದ ಆವರಣದಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರಕಾರದ ಬರ ಪರಿಹಾರ ನೀಡಿಕೆ ಅನ್ಯಾಯದ ವಿರುದ್ಧ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ ಡಿಕೆ ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ವಿಧಾನಸೌಧದ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ, ರಾಜ್ಯಕ್ಕೆ 18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ₹3,498 ಕೋಟಿಗೆ ಅನುಮೋದನೆ ನೀಡಿ,  3,454 ಕೋಟಿ ಬಿಡುಗಡೆ ಮಾಡಿದೆ. ಇದು ಒಟ್ಟು ಬಾಕಿ ಮೊತ್ತದ ಶೇ.20ಕ್ಕಿಂತ ಕಡಿಮೆಯಾಗಿದ್ದು, ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇದಲ್ಲದೆ ಇಂದು ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಪ್ರತಿಭಟನಾಕಾರರು ಗೋ-ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಕ್ಕೂಟ ವ್ಯವಸ್ಥೆಯಲ್ಲಿ ನಾವಿದ್ದೇವೆ, ಈ ವ್ಯವಸ್ಥೆಯಲ್ಲಿ ಬರ ಬಂದಾಗ ಪರಿಹಾರ ನೀಡುವುದು ಕೇಂದ್ರದ ಕರ್ತವ್ಯ, ನಾವು ಭಿಕ್ಷೆ ಬೇಡುತ್ತಿಲ್ಲ, 223 ತಾಲೂಕುಗಳಲ್ಲಿ ಬರಗಳ ಇದೆ, 100ವರ್ಷಗಳಲ್ಲಿ ಇದು ಭೀಕರ ಬರಗಾಲವಾಗಿದೆ. ನಾನೇ ಕುದ್ದು ಪ್ರಧಾನಿ, ಅಮಿತ್‌ ಶಾಗೆ ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಆಗ್ರಹಿಸಿದ್ದೆವು, ಆದರೆ ಅವರು ಪರಿಹಾರ ಕೊಟ್ಟಿಲ್ಲ, ಅದಕ್ಕೆ ನಾವು ಅನಿವಾರ್ಯವಾಗಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದೇವೆ. 35,000ಕೋಟಿಗೂ ಹೆಚ್ಚು ಮೌಲ್ಯದ ಬೆಳೆ ನಷ್ಟವಾಗಿದೆ. ಎನ್‌ಡಿಆರ್‌ಎಫ್ ಪ್ರಕಾರ, 18,172 ಕೋಟಿ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಲಾಗಿತ್ತು. ಈಗ 19%ಕ್ಕಿಂತ ಕಡಿಮೆ ಪರಿಹಾರ ನೀಡಿದ್ದಾರೆ, ಇದು ಬಹಳ ಕಡಿಮೆಯಾಗಿದೆ. ಇದರಿಂದ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಕರ್ನಾಟಕಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಜನರಿಗೆ ಖಾಲಿ ಚೊಂಬು ತಂದಿದ್ದಾರೆ. ಕರ್ನಾಟಕ ಕೇಳಿದ್ದ 18,172 ಕೋಟಿ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ಸೆಪ್ರೆಂಬರ್ 2023ರಿಂದಲೂ ನಿರಾಕರಿಸುತ್ತಲೇ ಬಂದಿದೆ. ಸುಪ್ರೀಂ ಕೋರ್ಟ್ ಹೇಳಿದ ಬಳಿಕವೂ ಇವರು ರಾಜ್ಯದ ರೈತರ ಕೈಗೆ ಕೊಟ್ಟಿದ್ದು ಲಾಲಿಪಾಪ್ ಅಷ್ಟೇ! ನಾವೇನು ಭಿಕ್ಷೆ ಕೇಳುತ್ತಿಲ್ಲ, ಬರ ಪರಿಹಾರ ರೈತರ ಹಕ್ಕು ಎಂದು ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್‌, ಬರಗಾಲದಿಂದ ಸಂಕಷ್ಟದಲ್ಲಿರುವ ರೈತರು, ಕಾರ್ಮಿಕರು, ಕೂಲಿ ಕೆಲಸಗಾರರಿಗಾಗಿ ನಾವು ಕೇಳುತ್ತಿದ್ದೇವೆ. ರಾಜ್ಯ ಸರ್ಕಾರದಿಂದ ನಾವು ಎಷ್ಟು ಸಾಧ್ಯವೋ ಅಷ್ಟು ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ 7 ತಿಂಗಳು ಕಳೆದ ಬಳಿಕ ಕೇವಲ 3,454 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಬರ ಪರಿಹಾರಕ್ಕಾಗಿ ಆಗ್ರಹಿಸಿ ನಮ್ಮ ಹೋರಾಟ ನ್ಯಾಯಾಲಯದಲ್ಲಿ ಹಾಗೂ ಜನರ ನಡುವೆಯೂ ಮುಂದುವರೆಯಲಿದೆ. ನಾವು ಅವರ ಮನೆಯ ಹಣ ಕೇಳುತ್ತಿಲ್ಲ, ನನಗೆ ಕೊಡಿ, ಸಿದ್ದರಾಮಯ್ಯ ಅವರಿಗೆ ಕೊಡಿ ಎಂದು ಕೇಳ್ತಿದ್ದೀವಾ? ರಾಜ್ಯಕ್ಕೆ ಭಿಕ್ಷೆ ಬೇಡ, ಇದು ನಮ್ಮ ಹಕ್ಕು, ಅದನ್ನು ನಾವು ಕೇಳುತ್ತಿದ್ದೇವೆ, ನಮಗೆ ಸೆಪ್ಟಂಬರ್‌ನಿಂದ ಇಲ್ಲಿಯವರೆಗೆ ಆಗುತ್ತಿರುವ ನಷ್ಟವನ್ನು ಸೇರಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಚಿವರಾದ ಡಾ.ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಎನ್‌. ಚಲುವರಾಯಸ್ವಾಮಿ, ದಿನೇಶ್ ಗುಂಡೂರಾವ್, ಕೆ. ಎಚ್. ಮುನಿಯಪ್ಪ, ಶಾಸಕರಾದ ಎಚ್. ಸಿ. ಬಾಲಕೃಷ್ಣ, ರಿಜ್ವಾನ್ ಅರ್ಷದ್ ಮತ್ತಿತರರು ಭಾಗವಹಿಸಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...