Homeಕರ್ನಾಟಕಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯಕ್ಕೆ ಅನ್ಯಾಯ: ವಿಧಾನಸೌಧದ ಆವರಣದಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬರ ಪರಿಹಾರ ಬಿಡುಗಡೆಯಲ್ಲಿ ರಾಜ್ಯಕ್ಕೆ ಅನ್ಯಾಯ: ವಿಧಾನಸೌಧದ ಆವರಣದಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರಕಾರದ ಬರ ಪರಿಹಾರ ನೀಡಿಕೆ ಅನ್ಯಾಯದ ವಿರುದ್ಧ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ ಡಿಕೆ ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ವಿಧಾನಸೌಧದ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ, ರಾಜ್ಯಕ್ಕೆ 18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ₹3,498 ಕೋಟಿಗೆ ಅನುಮೋದನೆ ನೀಡಿ,  3,454 ಕೋಟಿ ಬಿಡುಗಡೆ ಮಾಡಿದೆ. ಇದು ಒಟ್ಟು ಬಾಕಿ ಮೊತ್ತದ ಶೇ.20ಕ್ಕಿಂತ ಕಡಿಮೆಯಾಗಿದ್ದು, ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇದಲ್ಲದೆ ಇಂದು ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಪ್ರತಿಭಟನಾಕಾರರು ಗೋ-ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಕ್ಕೂಟ ವ್ಯವಸ್ಥೆಯಲ್ಲಿ ನಾವಿದ್ದೇವೆ, ಈ ವ್ಯವಸ್ಥೆಯಲ್ಲಿ ಬರ ಬಂದಾಗ ಪರಿಹಾರ ನೀಡುವುದು ಕೇಂದ್ರದ ಕರ್ತವ್ಯ, ನಾವು ಭಿಕ್ಷೆ ಬೇಡುತ್ತಿಲ್ಲ, 223 ತಾಲೂಕುಗಳಲ್ಲಿ ಬರಗಳ ಇದೆ, 100ವರ್ಷಗಳಲ್ಲಿ ಇದು ಭೀಕರ ಬರಗಾಲವಾಗಿದೆ. ನಾನೇ ಕುದ್ದು ಪ್ರಧಾನಿ, ಅಮಿತ್‌ ಶಾಗೆ ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಆಗ್ರಹಿಸಿದ್ದೆವು, ಆದರೆ ಅವರು ಪರಿಹಾರ ಕೊಟ್ಟಿಲ್ಲ, ಅದಕ್ಕೆ ನಾವು ಅನಿವಾರ್ಯವಾಗಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದೇವೆ. 35,000ಕೋಟಿಗೂ ಹೆಚ್ಚು ಮೌಲ್ಯದ ಬೆಳೆ ನಷ್ಟವಾಗಿದೆ. ಎನ್‌ಡಿಆರ್‌ಎಫ್ ಪ್ರಕಾರ, 18,172 ಕೋಟಿ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಲಾಗಿತ್ತು. ಈಗ 19%ಕ್ಕಿಂತ ಕಡಿಮೆ ಪರಿಹಾರ ನೀಡಿದ್ದಾರೆ, ಇದು ಬಹಳ ಕಡಿಮೆಯಾಗಿದೆ. ಇದರಿಂದ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಕರ್ನಾಟಕಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಜನರಿಗೆ ಖಾಲಿ ಚೊಂಬು ತಂದಿದ್ದಾರೆ. ಕರ್ನಾಟಕ ಕೇಳಿದ್ದ 18,172 ಕೋಟಿ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ಸೆಪ್ರೆಂಬರ್ 2023ರಿಂದಲೂ ನಿರಾಕರಿಸುತ್ತಲೇ ಬಂದಿದೆ. ಸುಪ್ರೀಂ ಕೋರ್ಟ್ ಹೇಳಿದ ಬಳಿಕವೂ ಇವರು ರಾಜ್ಯದ ರೈತರ ಕೈಗೆ ಕೊಟ್ಟಿದ್ದು ಲಾಲಿಪಾಪ್ ಅಷ್ಟೇ! ನಾವೇನು ಭಿಕ್ಷೆ ಕೇಳುತ್ತಿಲ್ಲ, ಬರ ಪರಿಹಾರ ರೈತರ ಹಕ್ಕು ಎಂದು ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್‌, ಬರಗಾಲದಿಂದ ಸಂಕಷ್ಟದಲ್ಲಿರುವ ರೈತರು, ಕಾರ್ಮಿಕರು, ಕೂಲಿ ಕೆಲಸಗಾರರಿಗಾಗಿ ನಾವು ಕೇಳುತ್ತಿದ್ದೇವೆ. ರಾಜ್ಯ ಸರ್ಕಾರದಿಂದ ನಾವು ಎಷ್ಟು ಸಾಧ್ಯವೋ ಅಷ್ಟು ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ 7 ತಿಂಗಳು ಕಳೆದ ಬಳಿಕ ಕೇವಲ 3,454 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಬರ ಪರಿಹಾರಕ್ಕಾಗಿ ಆಗ್ರಹಿಸಿ ನಮ್ಮ ಹೋರಾಟ ನ್ಯಾಯಾಲಯದಲ್ಲಿ ಹಾಗೂ ಜನರ ನಡುವೆಯೂ ಮುಂದುವರೆಯಲಿದೆ. ನಾವು ಅವರ ಮನೆಯ ಹಣ ಕೇಳುತ್ತಿಲ್ಲ, ನನಗೆ ಕೊಡಿ, ಸಿದ್ದರಾಮಯ್ಯ ಅವರಿಗೆ ಕೊಡಿ ಎಂದು ಕೇಳ್ತಿದ್ದೀವಾ? ರಾಜ್ಯಕ್ಕೆ ಭಿಕ್ಷೆ ಬೇಡ, ಇದು ನಮ್ಮ ಹಕ್ಕು, ಅದನ್ನು ನಾವು ಕೇಳುತ್ತಿದ್ದೇವೆ, ನಮಗೆ ಸೆಪ್ಟಂಬರ್‌ನಿಂದ ಇಲ್ಲಿಯವರೆಗೆ ಆಗುತ್ತಿರುವ ನಷ್ಟವನ್ನು ಸೇರಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಚಿವರಾದ ಡಾ.ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಎನ್‌. ಚಲುವರಾಯಸ್ವಾಮಿ, ದಿನೇಶ್ ಗುಂಡೂರಾವ್, ಕೆ. ಎಚ್. ಮುನಿಯಪ್ಪ, ಶಾಸಕರಾದ ಎಚ್. ಸಿ. ಬಾಲಕೃಷ್ಣ, ರಿಜ್ವಾನ್ ಅರ್ಷದ್ ಮತ್ತಿತರರು ಭಾಗವಹಿಸಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...