Homeಕರ್ನಾಟಕರಾಜ್ಯ ಸರಕಾರ ಕೇಳಿದ ಬರ ಪರಿಹಾರದಲ್ಲಿ ಶೇ.20ಕ್ಕಿಂತ ಕಡಿಮೆ ಬಿಡುಗಡೆ: ಕೇಂದ್ರ ಸರ್ಕಾರದ ವಿರುದ್ಧ ಕೃಷ್ಣ...

ರಾಜ್ಯ ಸರಕಾರ ಕೇಳಿದ ಬರ ಪರಿಹಾರದಲ್ಲಿ ಶೇ.20ಕ್ಕಿಂತ ಕಡಿಮೆ ಬಿಡುಗಡೆ: ಕೇಂದ್ರ ಸರ್ಕಾರದ ವಿರುದ್ಧ ಕೃಷ್ಣ ಬೈರೇಗೌಡ ವಾಗ್ಧಾಳಿ

- Advertisement -
- Advertisement -

ರಾಜ್ಯಕ್ಕೆ 18,171.44 ಕೋಟಿ ರೂ.ಬರ ಪರಿಹಾರ ಬಿಡಗಡೆಗೆ ಆಗ್ರಹಿಸಿ ಕರ್ನಾಟಕ ಸರಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಈ ಬಗ್ಗೆ ಸಮಸ್ಯೆಯನ್ನು ಸೌಹಾರ್ಧಯುತವಾಗಿ ಪರಿಹರಿಸಿ ಎಂದು ಬರ ಪರಿಹಾರ ಬಿಡುಗಡೆಗೆ ಸುಪ್ರೀಂಕೋರ್ಟ್‌ ಸೂಚಿಸಿತ್ತು. ಆದರೆ ಕೇಂದ್ರ ಸರಕಾರ ಬರೀ 3,498 ಕೋಟಿ ಮಾತ್ರ ಬಿಡುಗಡೆ ಮಾಡಿದ್ದು, ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಮುಂದುವರಿದಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಚಿವ ಕೃಷ್ಣ ಬೈರೇಗೌಡ, ಕೇಂದ್ರದ ಎನ್‌ಡಿಆರ್‌ಆಫ್ ನಿಯಮಗಳ ಪ್ರಕಾರ ರಾಜ್ಯಕ್ಕೆ 18,171.44 ಕೋಟಿ ಬರ ಪರಿಹಾರ ಹಣ ನೀಡಬೇಕು. ಆದರೆ, ಕೇಂದ್ರ ಸರ್ಕಾರ ಕೇವಲ 3,498 ಕೋಟಿ ರೂ. ಮಾತ್ರ ಮಂಜೂರು ಮಾಡಿದೆ. ಈ ಹಣದ ಪ್ರಮಾಣ ನಾವು ಕೇಳಿದ್ದ ಪರಿಹಾರದ ಹಣಕ್ಕಿಂತ ಶೇ.20ಕ್ಕಿಂತ ಕಡಿಮೆ. ಕರ್ನಾಟಕ ಪ್ರಸ್ತುತ ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದೆ. 240 ತಾಲೂಕುಗಳಲ್ಲಿ 223 ತಾಲೂಕುಗಳು ಭೀಕರ ಬರಗಾಲದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಬೆನ್ನಿಗೆ ನಿಲ್ಲಬೇಕಿದ್ದ ಕೇಂದ್ರ ಸರ್ಕಾರದಿಂದ ಕೇವಲ ಶೇ.20 ರಷ್ಟು ಹಣವನ್ನು ಮಾತ್ರ  ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಕಾನೂನಾತ್ಮಕವಾಗಿ ಕೇಂದ್ರ ಸರಕಾರ ಹಣ ನೀಡಬೇಕು. ರಾಜ್ಯಕ್ಕೆ ಬರಬೇಕಿರುವ ಹಣವನ್ನು ಬಿಡುಗಡೆ ಮಾಡಬೇಕು. ಸುಪ್ರೀಂಕೋರ್ಟ್‌ಗೆ ಹೋದ ಕಾರಣ ಕೇಂದ್ರ ಹಣ ನೀಡಿದೆ. ಇಲ್ಲವಾದಲ್ಲಿ ಹಣ ನೀಡುತ್ತಿರಲಿಲ್ಲ. ಇದರ ಸಂಪೂರ್ಣ ಹಣವನ್ನು ರೈತರಿಗೆ ಹಸ್ತಾಂತರಿಸುತ್ತೇವೆ. ನಮಗೆ ಇನ್ನೂ ಹಣ ಬಂದಿಲ್ಲ. ವಾರದೊಳಗೆ ಹಣ ಬಂದ ತಕ್ಷಣ ರೈತರಿಗೆ ತಲುಪಿಸುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್‌ಗೆ ಧನ್ಯವಾದಗಳು. ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ, ರಾಜ್ಯಕ್ಕೆ ರೂ.18,171 ಕೋಟಿ ರೂ. ನೀಡಬೇಕಾಗಿದೆ, ಆದರೆ ಕೇಂದ್ರ ಸರ್ಕಾರ ಕೇವಲ ರೂ. 3498.98 ಕೋಟಿ ನೀಡಿದೆ. ಬರ ಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ಕೇಂದ್ರ ಸರ್ಕಾರ ಕರ್ನಾಟಕದ ಮೇಲಿನ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್‌ನಲ್ಲಿ ಬರಸ್ಥಿತಿ ಬಗ್ಗೆ ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ಗೆ  ಕೇಂದ್ರ ಸರಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆ ಪರಿಹಾರ ನೀಡಲಾಗಿದೆ ಎಂದು ಹೇಳಿದ್ದಾರೆ.

ಪರಿಹಾರ ಬಿಡುಗಡೆ ವಿಚಾರದಲ್ಲಿ ಬಿಜೆಪಿಯ ನಾಯಕರದ್ದಾಗಲಿ, ಕೇಂದ್ರ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲವಾಗಿದೆ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನತೆ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಸಿಎಂ ಸಿದ್ದರಾಮಯ್ಯ, ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು. ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ರೂ. 3498.98 ಕೋಟಿಗೆ ಅನುಮೋದನೆ ನೀಡಿ, 3,454 ಕೋಟಿ ರೂ.ಬಿಡುಗಡೆ ಮಾಡಿದೆ. ಬರ ಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...