Homeಕರ್ನಾಟಕರಾಜ್ಯ ಸರಕಾರ ಕೇಳಿದ ಬರ ಪರಿಹಾರದಲ್ಲಿ ಶೇ.20ಕ್ಕಿಂತ ಕಡಿಮೆ ಬಿಡುಗಡೆ: ಕೇಂದ್ರ ಸರ್ಕಾರದ ವಿರುದ್ಧ ಕೃಷ್ಣ...

ರಾಜ್ಯ ಸರಕಾರ ಕೇಳಿದ ಬರ ಪರಿಹಾರದಲ್ಲಿ ಶೇ.20ಕ್ಕಿಂತ ಕಡಿಮೆ ಬಿಡುಗಡೆ: ಕೇಂದ್ರ ಸರ್ಕಾರದ ವಿರುದ್ಧ ಕೃಷ್ಣ ಬೈರೇಗೌಡ ವಾಗ್ಧಾಳಿ

- Advertisement -
- Advertisement -

ರಾಜ್ಯಕ್ಕೆ 18,171.44 ಕೋಟಿ ರೂ.ಬರ ಪರಿಹಾರ ಬಿಡಗಡೆಗೆ ಆಗ್ರಹಿಸಿ ಕರ್ನಾಟಕ ಸರಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಈ ಬಗ್ಗೆ ಸಮಸ್ಯೆಯನ್ನು ಸೌಹಾರ್ಧಯುತವಾಗಿ ಪರಿಹರಿಸಿ ಎಂದು ಬರ ಪರಿಹಾರ ಬಿಡುಗಡೆಗೆ ಸುಪ್ರೀಂಕೋರ್ಟ್‌ ಸೂಚಿಸಿತ್ತು. ಆದರೆ ಕೇಂದ್ರ ಸರಕಾರ ಬರೀ 3,498 ಕೋಟಿ ಮಾತ್ರ ಬಿಡುಗಡೆ ಮಾಡಿದ್ದು, ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಮುಂದುವರಿದಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಚಿವ ಕೃಷ್ಣ ಬೈರೇಗೌಡ, ಕೇಂದ್ರದ ಎನ್‌ಡಿಆರ್‌ಆಫ್ ನಿಯಮಗಳ ಪ್ರಕಾರ ರಾಜ್ಯಕ್ಕೆ 18,171.44 ಕೋಟಿ ಬರ ಪರಿಹಾರ ಹಣ ನೀಡಬೇಕು. ಆದರೆ, ಕೇಂದ್ರ ಸರ್ಕಾರ ಕೇವಲ 3,498 ಕೋಟಿ ರೂ. ಮಾತ್ರ ಮಂಜೂರು ಮಾಡಿದೆ. ಈ ಹಣದ ಪ್ರಮಾಣ ನಾವು ಕೇಳಿದ್ದ ಪರಿಹಾರದ ಹಣಕ್ಕಿಂತ ಶೇ.20ಕ್ಕಿಂತ ಕಡಿಮೆ. ಕರ್ನಾಟಕ ಪ್ರಸ್ತುತ ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದೆ. 240 ತಾಲೂಕುಗಳಲ್ಲಿ 223 ತಾಲೂಕುಗಳು ಭೀಕರ ಬರಗಾಲದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಬೆನ್ನಿಗೆ ನಿಲ್ಲಬೇಕಿದ್ದ ಕೇಂದ್ರ ಸರ್ಕಾರದಿಂದ ಕೇವಲ ಶೇ.20 ರಷ್ಟು ಹಣವನ್ನು ಮಾತ್ರ  ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಕಾನೂನಾತ್ಮಕವಾಗಿ ಕೇಂದ್ರ ಸರಕಾರ ಹಣ ನೀಡಬೇಕು. ರಾಜ್ಯಕ್ಕೆ ಬರಬೇಕಿರುವ ಹಣವನ್ನು ಬಿಡುಗಡೆ ಮಾಡಬೇಕು. ಸುಪ್ರೀಂಕೋರ್ಟ್‌ಗೆ ಹೋದ ಕಾರಣ ಕೇಂದ್ರ ಹಣ ನೀಡಿದೆ. ಇಲ್ಲವಾದಲ್ಲಿ ಹಣ ನೀಡುತ್ತಿರಲಿಲ್ಲ. ಇದರ ಸಂಪೂರ್ಣ ಹಣವನ್ನು ರೈತರಿಗೆ ಹಸ್ತಾಂತರಿಸುತ್ತೇವೆ. ನಮಗೆ ಇನ್ನೂ ಹಣ ಬಂದಿಲ್ಲ. ವಾರದೊಳಗೆ ಹಣ ಬಂದ ತಕ್ಷಣ ರೈತರಿಗೆ ತಲುಪಿಸುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್‌ಗೆ ಧನ್ಯವಾದಗಳು. ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ, ರಾಜ್ಯಕ್ಕೆ ರೂ.18,171 ಕೋಟಿ ರೂ. ನೀಡಬೇಕಾಗಿದೆ, ಆದರೆ ಕೇಂದ್ರ ಸರ್ಕಾರ ಕೇವಲ ರೂ. 3498.98 ಕೋಟಿ ನೀಡಿದೆ. ಬರ ಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ಕೇಂದ್ರ ಸರ್ಕಾರ ಕರ್ನಾಟಕದ ಮೇಲಿನ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್‌ನಲ್ಲಿ ಬರಸ್ಥಿತಿ ಬಗ್ಗೆ ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ಗೆ  ಕೇಂದ್ರ ಸರಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆ ಪರಿಹಾರ ನೀಡಲಾಗಿದೆ ಎಂದು ಹೇಳಿದ್ದಾರೆ.

ಪರಿಹಾರ ಬಿಡುಗಡೆ ವಿಚಾರದಲ್ಲಿ ಬಿಜೆಪಿಯ ನಾಯಕರದ್ದಾಗಲಿ, ಕೇಂದ್ರ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲವಾಗಿದೆ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನತೆ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಸಿಎಂ ಸಿದ್ದರಾಮಯ್ಯ, ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು. ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ರೂ. 3498.98 ಕೋಟಿಗೆ ಅನುಮೋದನೆ ನೀಡಿ, 3,454 ಕೋಟಿ ರೂ.ಬಿಡುಗಡೆ ಮಾಡಿದೆ. ಬರ ಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...