Homeಕರ್ನಾಟಕರಾಜ್ಯ ಸರಕಾರ ಕೇಳಿದ ಬರ ಪರಿಹಾರದಲ್ಲಿ ಶೇ.20ಕ್ಕಿಂತ ಕಡಿಮೆ ಬಿಡುಗಡೆ: ಕೇಂದ್ರ ಸರ್ಕಾರದ ವಿರುದ್ಧ ಕೃಷ್ಣ...

ರಾಜ್ಯ ಸರಕಾರ ಕೇಳಿದ ಬರ ಪರಿಹಾರದಲ್ಲಿ ಶೇ.20ಕ್ಕಿಂತ ಕಡಿಮೆ ಬಿಡುಗಡೆ: ಕೇಂದ್ರ ಸರ್ಕಾರದ ವಿರುದ್ಧ ಕೃಷ್ಣ ಬೈರೇಗೌಡ ವಾಗ್ಧಾಳಿ

- Advertisement -
- Advertisement -

ರಾಜ್ಯಕ್ಕೆ 18,171.44 ಕೋಟಿ ರೂ.ಬರ ಪರಿಹಾರ ಬಿಡಗಡೆಗೆ ಆಗ್ರಹಿಸಿ ಕರ್ನಾಟಕ ಸರಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಈ ಬಗ್ಗೆ ಸಮಸ್ಯೆಯನ್ನು ಸೌಹಾರ್ಧಯುತವಾಗಿ ಪರಿಹರಿಸಿ ಎಂದು ಬರ ಪರಿಹಾರ ಬಿಡುಗಡೆಗೆ ಸುಪ್ರೀಂಕೋರ್ಟ್‌ ಸೂಚಿಸಿತ್ತು. ಆದರೆ ಕೇಂದ್ರ ಸರಕಾರ ಬರೀ 3,498 ಕೋಟಿ ಮಾತ್ರ ಬಿಡುಗಡೆ ಮಾಡಿದ್ದು, ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಮುಂದುವರಿದಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಚಿವ ಕೃಷ್ಣ ಬೈರೇಗೌಡ, ಕೇಂದ್ರದ ಎನ್‌ಡಿಆರ್‌ಆಫ್ ನಿಯಮಗಳ ಪ್ರಕಾರ ರಾಜ್ಯಕ್ಕೆ 18,171.44 ಕೋಟಿ ಬರ ಪರಿಹಾರ ಹಣ ನೀಡಬೇಕು. ಆದರೆ, ಕೇಂದ್ರ ಸರ್ಕಾರ ಕೇವಲ 3,498 ಕೋಟಿ ರೂ. ಮಾತ್ರ ಮಂಜೂರು ಮಾಡಿದೆ. ಈ ಹಣದ ಪ್ರಮಾಣ ನಾವು ಕೇಳಿದ್ದ ಪರಿಹಾರದ ಹಣಕ್ಕಿಂತ ಶೇ.20ಕ್ಕಿಂತ ಕಡಿಮೆ. ಕರ್ನಾಟಕ ಪ್ರಸ್ತುತ ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದೆ. 240 ತಾಲೂಕುಗಳಲ್ಲಿ 223 ತಾಲೂಕುಗಳು ಭೀಕರ ಬರಗಾಲದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಬೆನ್ನಿಗೆ ನಿಲ್ಲಬೇಕಿದ್ದ ಕೇಂದ್ರ ಸರ್ಕಾರದಿಂದ ಕೇವಲ ಶೇ.20 ರಷ್ಟು ಹಣವನ್ನು ಮಾತ್ರ  ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಕಾನೂನಾತ್ಮಕವಾಗಿ ಕೇಂದ್ರ ಸರಕಾರ ಹಣ ನೀಡಬೇಕು. ರಾಜ್ಯಕ್ಕೆ ಬರಬೇಕಿರುವ ಹಣವನ್ನು ಬಿಡುಗಡೆ ಮಾಡಬೇಕು. ಸುಪ್ರೀಂಕೋರ್ಟ್‌ಗೆ ಹೋದ ಕಾರಣ ಕೇಂದ್ರ ಹಣ ನೀಡಿದೆ. ಇಲ್ಲವಾದಲ್ಲಿ ಹಣ ನೀಡುತ್ತಿರಲಿಲ್ಲ. ಇದರ ಸಂಪೂರ್ಣ ಹಣವನ್ನು ರೈತರಿಗೆ ಹಸ್ತಾಂತರಿಸುತ್ತೇವೆ. ನಮಗೆ ಇನ್ನೂ ಹಣ ಬಂದಿಲ್ಲ. ವಾರದೊಳಗೆ ಹಣ ಬಂದ ತಕ್ಷಣ ರೈತರಿಗೆ ತಲುಪಿಸುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್‌ಗೆ ಧನ್ಯವಾದಗಳು. ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ, ರಾಜ್ಯಕ್ಕೆ ರೂ.18,171 ಕೋಟಿ ರೂ. ನೀಡಬೇಕಾಗಿದೆ, ಆದರೆ ಕೇಂದ್ರ ಸರ್ಕಾರ ಕೇವಲ ರೂ. 3498.98 ಕೋಟಿ ನೀಡಿದೆ. ಬರ ಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ಕೇಂದ್ರ ಸರ್ಕಾರ ಕರ್ನಾಟಕದ ಮೇಲಿನ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್‌ನಲ್ಲಿ ಬರಸ್ಥಿತಿ ಬಗ್ಗೆ ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ಗೆ  ಕೇಂದ್ರ ಸರಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆ ಪರಿಹಾರ ನೀಡಲಾಗಿದೆ ಎಂದು ಹೇಳಿದ್ದಾರೆ.

ಪರಿಹಾರ ಬಿಡುಗಡೆ ವಿಚಾರದಲ್ಲಿ ಬಿಜೆಪಿಯ ನಾಯಕರದ್ದಾಗಲಿ, ಕೇಂದ್ರ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲವಾಗಿದೆ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನತೆ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಸಿಎಂ ಸಿದ್ದರಾಮಯ್ಯ, ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು. ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ರೂ. 3498.98 ಕೋಟಿಗೆ ಅನುಮೋದನೆ ನೀಡಿ, 3,454 ಕೋಟಿ ರೂ.ಬಿಡುಗಡೆ ಮಾಡಿದೆ. ಬರ ಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...