Homeಮುಖಪುಟಬಿಸಿಲು, ಬರ ಅಂದ್ರೆ ಇವರಿಗೆ ವರ. ವಿಜಯಪುರ ಜನರ ವಿಶೇಷ ಸ್ಟೋರಿ ಓದಿ

ಬಿಸಿಲು, ಬರ ಅಂದ್ರೆ ಇವರಿಗೆ ವರ. ವಿಜಯಪುರ ಜನರ ವಿಶೇಷ ಸ್ಟೋರಿ ಓದಿ

ಬಿಸಿಲೆಂಬುದು ಕೆಂಡದ ಮಳೆಯಾದರೂ ದುಡಿದು ತಿನ್ನುವವರ ಪಾಲಿಗೆ ಕೆಂಡ ಸಂಪಿಗೆಯಾಗಿದೆ. ಅದರೊಳಗೆ ಹಿತವಾದ ಆರೋಗ್ಯಪೂರ್ಣವಾದ ಬಿಸಿಯಿದೆ.

- Advertisement -
- Advertisement -

| ಶಿವಾ |

ವಿಜಯಪುರ ಬಿಸಿಲು ಎಂದರೆ ಸಾಕು ರಾಜ್ಯದ ಜನರು ನಲುಗಿ ಹೋಗಿ, ಬೇಡವೇ ಬೇಡ ವಿಜಯಪುರ ಸಹವಾಸ ಎಂದು ದೂರವೇ ಸರಿಯುತ್ತಾರೆ. ಆದರೆ ಇದೇ ಕೆಂಡದ ಮಳೆಯಂತಹ ಬಿಸಿಲು ಮತ್ತು ಬರ ಕೆಲವರಿಗೆ ವರದಾನವಾಗಿ ಪರಿಣಮಿಸಿದೆ.

ಬಿಸಿಲು ಮನುಷ್ಯನ ಜೀವನಕ್ಕೆ, ಅಂಗಾಗಕ್ಕೆ ಅನ್ನಾಂಗ (ವಿಟಮಿನ್) ನೀಡುವುದು. ವಿಜಯಪುರ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾದರೆ ಭೂಮಿಯೊಳಗಿನ ಅಂತರ್ಜಲ ಕಡಿಮೆಯಾಗುತ್ತದೆ. ಜನ, ಜಾನುವಾರುಗಳಿಗೆ ಕುಡಿಯಲು ನೀರು ಸಿಗುವುದಿಲ್ಲ. ಬರಗಾಲ ಎದುರಿಸಲಾಗದವರು ಗುಳೆ ಹೋಗುತ್ತಾರೆ, ಮಳೆ ಇರುವ ಕಡೆಗೆ. ಆದರೆ, ಇದೇ ನಮ್ಮೂರು, ಇಲ್ಲೇ ನಮ್ಮ ಸೂರು, ಇಲ್ಲೆ ನಮ್ಮ ಬೇರು ಎಂದು ವಿಜಯಪುರದಲ್ಲಿ ಬಿಸಿಲು ಮತ್ತು ಬರದ ವಿರುದ್ಧ ಹೋರಾಡಿ, ಜೀವನದಲ್ಲಿ ಒಂದು ಹೊತ್ತಿನ ಗಂಜಿ ಸಂಪಾದಿಸುತ್ತ, ಕೃಷಿ ಸೇರಿದಂತೆ ಇತರೆ ಗುಡಿ ಕೈಗಾರಿಕೆ ಕಾರ್ಮಿಕರು ಇಲ್ಲಿದ್ದಾರೆ. ಬಿಸಿಲು ರೈತರ ಪಾಲಿಗೆ ಅತ್ಯಂತ ಆಪ್ತ ಮಿತ್ರವಾಗಿದೆ. ಅದರಲ್ಲೂ ರೈತ ಮಹಿಳೆಯರು ಈ ಬಿಸಿಲನ್ನು ಹೆಚ್ಚು ಉಪಯುಕ್ತವಾಗಿ ಬಳಸಿಕೊಳ್ಳುತ್ತಾರೆ. ರಾಶಿ ಮಾಡಿದ ಫಸಲನ್ನು ಸಂರಕ್ಷಿಸುವುದಕ್ಕೆ ಈ ಬಿಸಿಲು ನೆರವಾಗುವುದು.

ಹಗೆವುನಲ್ಲಿ ತುಂಬಿಟ್ಟ ದವಸ, ಧಾನ್ಯ, ಕಾಳು ಕಡ್ಡಿಗಳನ್ನು ಹೊರ ತೆಗೆದು, ಬಿಸಿಲಿಗೆ ಒಣ ಹಾಕುವರು. ಉಗ್ರಾಣದಲ್ಲಿರುವ ಆಹಾರ ಧಾನ್ಯಗಳಿಗೆ ಅಂಟಿರುವ ನುಶಿ ಪೀಡೆ, ಹೇನು ಪೀಡೆ, ಜಿಗಿ ಪೀಡೆ ಇತ್ಯಾದಿ ಹಾನಿಕಾರಕ ಕ್ರಿಮಿಕೀಟಗಳನ್ನು ನಾಶ ಮಾಡಲು ಈ ಬಿಸಿಲನ್ನೆ ರಾಮಬಾಣವಾಗಿ ಬಳಸುವರು.

ಗೋಣಿ ಚೀಲದಲ್ಲಿ ತುಂಬಿರುವ ಸಜ್ಜೆ, ಜೋಳ, ಶೇಂಗಾ, ಕಡಲೆ, ತೊಗರಿ ದ್ವಿದಳ ಧಾನ್ಯಗಳಿಗೆ ನುಶಿ ಪೀಡೆ ಅಂಟುವುದು ಬಲು ಬೇಗ. ಹಾಗೇ ಅವು ಕಾಳು ಕಡ್ಡಿಗಳನ್ನು ನಾಶ ಪಡಿಸುತ್ತವೆ. ಮುಂಬರುವ ಮಳೆಗಾಲದ ಹೊತ್ತಿಗೆ ಆಹಾರ ಧಾನ್ಯಕ್ಕೆ ಅಂಟುವ ಕ್ರಿಮಿಕೀಟಗಳು ಸಂಪೂರ್ಣವಾಗಿ ಎಲ್ಲ ಅನ್ನಸಂಪತ್ತನ್ನು ತಿಂದು ಹಾಕುತ್ತವೆ. ಆಗ ರೈತ ಕಂಗಾಲಾಗುತ್ತಾನೆ.
ಮುಂಬರುವ ಅಪಾಯವನ್ನು ಗಮನದಲ್ಲಿಟ್ಟುಕೊಂಡು, ಕ್ರಿಮಿಕೀಟಗಳ ನಾಶಕ್ಕಾಗಿ ದವಸ- ಧಾನ್ಯಗಳನ್ನು ಬಿಸಿಲಿಗೆ ಹಾಕುತ್ತಾರೆ. ತಿನ್ನುವ ಆಹಾರ ಧಾನ್ಯ ಸ್ವಚ್ಛವಾಗಿದ್ದರೆ, ಆರೋಗ್ಯವು ಸದೃಢವಾಗಿರುತ್ತದೆ.

ವಿಜಯಪುರದ ಬಿಸಿಲು ಕೇವಲ ಆಹಾರ ಧಾನ್ಯ ಸಂರಕ್ಷಿಸುವುದಕ್ಕೆ ಅಷ್ಟೆ ಅಲ್ಲ. ಅದು ಬರದಿಂದ ಗುಳೆ ಹೋಗುವವರ ಜನರಿಗೆ ಬದುಕಿನ ಪಾಠ ಹೇಳುವ ನೇಸರ ಗುರುವಾಗಿದೆ.

ಬಿಸಿಲು ದುಡುಮೆಯ ಟಿಸಿಲು:
ಬಹುತೇಕ ಜನ ಗೃಹಿಣಿಯರು ಈ ಬೇಸಿಗೆ ಕಾಲಕ್ಕೆ ಕಾಯ್ದು ಕುಳಿತಿರುತ್ತಾರೆ. ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು, ಹಾಗೇ ಅದರಿಂದ ದುಡಿಮೆಯ ದಾರಿಯನ್ನು ಕಂಡುಕೊಳ್ಳಲು.

ಶಾವಿಗೆ ಹೊಸೆದು, ಅದನ್ನು ಬಿಸಿಲಿಗೆ ಒಣ ಹಾಕಿ, ಸಂಜೆ ಹೊತ್ತಿಗೆ ಅದನ್ನು ಪ್ಯಾಕೇಟ್ ಮಾಡಿ, ಸ್ಥಳೀಯ ಸಗಟು ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಾರೆ. ಚಳಿಗಾಲ, ಮಳೆಗಾಲದಲ್ಲಿ ಬದುಕು ತಣ್ಣಗಿರಲೆಂದು ಬೇಸಿಗೆ ಬಿಸಿಲನ್ನು ಬಳಸಿಕೊಳ್ಳುತ್ತಾರೆ.

ಹಾಗೇ ಹಪ್ಪಳ, ಸಂಡಿಗೆ, ಉಪ್ಪಿನ ಕಾಯಿ ಸೇರಿದಂತೆ ಕುರುಕಲು ತಿಂಡಿ ಈ ಎಲ್ಲ ತಿನಿಸುಗಳು ಬಿಸಿಲಿನ ಬಿಸಿಗೆ ಸಿಲುಕಿ ಹದವಾಗಿ ತಿನ್ನುವುದಕ್ಕೆ ರೂಪುಗೊಂಡಿರುತ್ತವೆ. ಅದನ್ನು ರಾತ್ರಿ ಹೊತ್ತಿಗೆ ಕುಟುಂಬದವರೊಂದಿಗೆ ಊಟ ಮಾಡುವಾಗ, ಬಿಸಿಲನ್ನು ನೆನೆಯದೇ ಇರಲಾರರು.

ಬಿಸಿಲು ನಗರದಲ್ಲಿರುವ ಕ್ರಿಯಾಶೀಲ ಮಹಿಳೆಯರಿಗೆ ಇದು ಹೊಸ ಬೆಳದಿಂಗಳ ಬೆಳಕಾಗಿದೆ. ಮರದ ನೆರಳ ಕೆಳಗೆ ಕುಳಿತು ಕೌದಿಯನ್ನು ಹೊಲೆಯುವುದು, ಬಳೆ ತೊಡಿಸುವುದು, ಮದರಂಗಿ ಹಾಕುವುದು, ಬಟ್ಟೆಗಳ ಮೇಲೆ ಹೆಣಿಗೆ, ಸ್ವೇಟರ್ ಹೆಣೆಯುವುದು ಈ ಬಿಸಿಲು ಕಾಲದಲ್ಲಿಯೆ ರೂಪ ಪಡೆಯುತ್ತವೆ.

ಬಿಸಿಲು ಏಪ್ರಿಲ್, ಮೇ ತಿಂಗಳಲ್ಲಿ ಜನರನ್ನು ಕಂಗೆಡಿಸುವಂತಿರುತ್ತದೆ. ಈ ಎರಡು ತಿಂಗಳ ಬಿಸಿಲನ್ನು ಬಳಸಿಕೊಂಡು ಜಿಲ್ಲೆಯ ಬಹುತೇಕ ಮಹಿಳೆಯರು ತಮ್ಮಲ್ಲಿರುವ ಕೆಲಸ, ಕಾಯಕ, ಕಲೆಯ ಮೂಲಕ ಅನಾವರಣಗೊಳಿಸುತ್ತಾರೆ.

ಬಿಸಿಲೆಂಬುದು ಕೆಂಡದ ಮಳೆಯಾದರೂ ದುಡಿದು ತಿನ್ನುವವರ ಪಾಲಿಗೆ ಕೆಂಡ ಸಂಪಿಗೆಯಾಗಿದೆ. ಅದರೊಳಗೆ ಹಿತವಾದ ಆರೋಗ್ಯಪೂರ್ಣವಾದ ಬಿಸಿಯಿದೆ.

ಇನ್ನೇನು ಬೇಸಿಗೆ ಅಂತ್ಯಕ್ಕೆ ಬಂದಿದ್ದು, ಮಳೆಗಾಲ ಸನಿಹಗೊಂಡಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ವಿಜಯಪುರದಲ್ಲಿ ಜೋರಾದ ಗಾಳಿ, ಗುಡುಗು, ಸಿಡಿಲು ಮಿಶ್ರಿತ ಮಳೆಯಾಗಿದೆ. ಈ ಅಕಾಲಿಕ ಮಳೆ ಪ್ರತಿ ವರ್ಷ ಹೀಗೆ ಸುರಿಯುವುದು ವಾಡಿಕೆಯಾಗಿದೆ. ಪ್ರಸಕ್ತ ವರ್ಷದ ಬೇಸಿಗೆಯ ಮೇ ತಿಂಗಳಲ್ಲಿ 42.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾದರೆ, ಏಪ್ರಿಲ್‍ನಲ್ಲಿ 42.6 ರಷ್ಟು ಉಷ್ಣಾಂಶ ದಾಖಲಾಗಿತ್ತು. ಅಲ್ಲದೆ ರಾತ್ರಿಯಲ್ಲೂ 28 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲುಗೊಂಡು ಈ ಭಾಗದ ಜನರ ನಿದ್ರೆಗೆ ಕೊಳ್ಳಿಯಿಟ್ಟಂತಾಗಿ, ಸಾರ್ವಜನಿಕರು ನಿದ್ರೆಯಿಲ್ಲದೆ ಪರದಾಡಿರುವುದು ಸುಳ್ಳಲ್ಲ. ಹೀಗೆ ಸೂರ್ಯ ಪುತ್ರರು ಬಿಸಿಲು, ಬರವನ್ನು ತಮ್ಮ ವರವಾಗಿ ಬಳಸಿಕೊಂಡು, ಸುಡು ಬಿಸಿಲಿನಲ್ಲಿಯೇ ಗರಮ್ ಮರಮ್ ಚಹಾ, ಚೋಡಾ, ಮಿರ್ಚಿ ಭಜ್ಜಿ ತಿಂದು, ಬಿಸಿಲ ಬದುಕಿನ ಸುಖ ಅನುಭವಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....