Homeಮುಖಪುಟಬಿಸಿಲು, ಬರ ಅಂದ್ರೆ ಇವರಿಗೆ ವರ. ವಿಜಯಪುರ ಜನರ ವಿಶೇಷ ಸ್ಟೋರಿ ಓದಿ

ಬಿಸಿಲು, ಬರ ಅಂದ್ರೆ ಇವರಿಗೆ ವರ. ವಿಜಯಪುರ ಜನರ ವಿಶೇಷ ಸ್ಟೋರಿ ಓದಿ

ಬಿಸಿಲೆಂಬುದು ಕೆಂಡದ ಮಳೆಯಾದರೂ ದುಡಿದು ತಿನ್ನುವವರ ಪಾಲಿಗೆ ಕೆಂಡ ಸಂಪಿಗೆಯಾಗಿದೆ. ಅದರೊಳಗೆ ಹಿತವಾದ ಆರೋಗ್ಯಪೂರ್ಣವಾದ ಬಿಸಿಯಿದೆ.

- Advertisement -
- Advertisement -

| ಶಿವಾ |

ವಿಜಯಪುರ ಬಿಸಿಲು ಎಂದರೆ ಸಾಕು ರಾಜ್ಯದ ಜನರು ನಲುಗಿ ಹೋಗಿ, ಬೇಡವೇ ಬೇಡ ವಿಜಯಪುರ ಸಹವಾಸ ಎಂದು ದೂರವೇ ಸರಿಯುತ್ತಾರೆ. ಆದರೆ ಇದೇ ಕೆಂಡದ ಮಳೆಯಂತಹ ಬಿಸಿಲು ಮತ್ತು ಬರ ಕೆಲವರಿಗೆ ವರದಾನವಾಗಿ ಪರಿಣಮಿಸಿದೆ.

ಬಿಸಿಲು ಮನುಷ್ಯನ ಜೀವನಕ್ಕೆ, ಅಂಗಾಗಕ್ಕೆ ಅನ್ನಾಂಗ (ವಿಟಮಿನ್) ನೀಡುವುದು. ವಿಜಯಪುರ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾದರೆ ಭೂಮಿಯೊಳಗಿನ ಅಂತರ್ಜಲ ಕಡಿಮೆಯಾಗುತ್ತದೆ. ಜನ, ಜಾನುವಾರುಗಳಿಗೆ ಕುಡಿಯಲು ನೀರು ಸಿಗುವುದಿಲ್ಲ. ಬರಗಾಲ ಎದುರಿಸಲಾಗದವರು ಗುಳೆ ಹೋಗುತ್ತಾರೆ, ಮಳೆ ಇರುವ ಕಡೆಗೆ. ಆದರೆ, ಇದೇ ನಮ್ಮೂರು, ಇಲ್ಲೇ ನಮ್ಮ ಸೂರು, ಇಲ್ಲೆ ನಮ್ಮ ಬೇರು ಎಂದು ವಿಜಯಪುರದಲ್ಲಿ ಬಿಸಿಲು ಮತ್ತು ಬರದ ವಿರುದ್ಧ ಹೋರಾಡಿ, ಜೀವನದಲ್ಲಿ ಒಂದು ಹೊತ್ತಿನ ಗಂಜಿ ಸಂಪಾದಿಸುತ್ತ, ಕೃಷಿ ಸೇರಿದಂತೆ ಇತರೆ ಗುಡಿ ಕೈಗಾರಿಕೆ ಕಾರ್ಮಿಕರು ಇಲ್ಲಿದ್ದಾರೆ. ಬಿಸಿಲು ರೈತರ ಪಾಲಿಗೆ ಅತ್ಯಂತ ಆಪ್ತ ಮಿತ್ರವಾಗಿದೆ. ಅದರಲ್ಲೂ ರೈತ ಮಹಿಳೆಯರು ಈ ಬಿಸಿಲನ್ನು ಹೆಚ್ಚು ಉಪಯುಕ್ತವಾಗಿ ಬಳಸಿಕೊಳ್ಳುತ್ತಾರೆ. ರಾಶಿ ಮಾಡಿದ ಫಸಲನ್ನು ಸಂರಕ್ಷಿಸುವುದಕ್ಕೆ ಈ ಬಿಸಿಲು ನೆರವಾಗುವುದು.

ಹಗೆವುನಲ್ಲಿ ತುಂಬಿಟ್ಟ ದವಸ, ಧಾನ್ಯ, ಕಾಳು ಕಡ್ಡಿಗಳನ್ನು ಹೊರ ತೆಗೆದು, ಬಿಸಿಲಿಗೆ ಒಣ ಹಾಕುವರು. ಉಗ್ರಾಣದಲ್ಲಿರುವ ಆಹಾರ ಧಾನ್ಯಗಳಿಗೆ ಅಂಟಿರುವ ನುಶಿ ಪೀಡೆ, ಹೇನು ಪೀಡೆ, ಜಿಗಿ ಪೀಡೆ ಇತ್ಯಾದಿ ಹಾನಿಕಾರಕ ಕ್ರಿಮಿಕೀಟಗಳನ್ನು ನಾಶ ಮಾಡಲು ಈ ಬಿಸಿಲನ್ನೆ ರಾಮಬಾಣವಾಗಿ ಬಳಸುವರು.

ಗೋಣಿ ಚೀಲದಲ್ಲಿ ತುಂಬಿರುವ ಸಜ್ಜೆ, ಜೋಳ, ಶೇಂಗಾ, ಕಡಲೆ, ತೊಗರಿ ದ್ವಿದಳ ಧಾನ್ಯಗಳಿಗೆ ನುಶಿ ಪೀಡೆ ಅಂಟುವುದು ಬಲು ಬೇಗ. ಹಾಗೇ ಅವು ಕಾಳು ಕಡ್ಡಿಗಳನ್ನು ನಾಶ ಪಡಿಸುತ್ತವೆ. ಮುಂಬರುವ ಮಳೆಗಾಲದ ಹೊತ್ತಿಗೆ ಆಹಾರ ಧಾನ್ಯಕ್ಕೆ ಅಂಟುವ ಕ್ರಿಮಿಕೀಟಗಳು ಸಂಪೂರ್ಣವಾಗಿ ಎಲ್ಲ ಅನ್ನಸಂಪತ್ತನ್ನು ತಿಂದು ಹಾಕುತ್ತವೆ. ಆಗ ರೈತ ಕಂಗಾಲಾಗುತ್ತಾನೆ.
ಮುಂಬರುವ ಅಪಾಯವನ್ನು ಗಮನದಲ್ಲಿಟ್ಟುಕೊಂಡು, ಕ್ರಿಮಿಕೀಟಗಳ ನಾಶಕ್ಕಾಗಿ ದವಸ- ಧಾನ್ಯಗಳನ್ನು ಬಿಸಿಲಿಗೆ ಹಾಕುತ್ತಾರೆ. ತಿನ್ನುವ ಆಹಾರ ಧಾನ್ಯ ಸ್ವಚ್ಛವಾಗಿದ್ದರೆ, ಆರೋಗ್ಯವು ಸದೃಢವಾಗಿರುತ್ತದೆ.

ವಿಜಯಪುರದ ಬಿಸಿಲು ಕೇವಲ ಆಹಾರ ಧಾನ್ಯ ಸಂರಕ್ಷಿಸುವುದಕ್ಕೆ ಅಷ್ಟೆ ಅಲ್ಲ. ಅದು ಬರದಿಂದ ಗುಳೆ ಹೋಗುವವರ ಜನರಿಗೆ ಬದುಕಿನ ಪಾಠ ಹೇಳುವ ನೇಸರ ಗುರುವಾಗಿದೆ.

ಬಿಸಿಲು ದುಡುಮೆಯ ಟಿಸಿಲು:
ಬಹುತೇಕ ಜನ ಗೃಹಿಣಿಯರು ಈ ಬೇಸಿಗೆ ಕಾಲಕ್ಕೆ ಕಾಯ್ದು ಕುಳಿತಿರುತ್ತಾರೆ. ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು, ಹಾಗೇ ಅದರಿಂದ ದುಡಿಮೆಯ ದಾರಿಯನ್ನು ಕಂಡುಕೊಳ್ಳಲು.

ಶಾವಿಗೆ ಹೊಸೆದು, ಅದನ್ನು ಬಿಸಿಲಿಗೆ ಒಣ ಹಾಕಿ, ಸಂಜೆ ಹೊತ್ತಿಗೆ ಅದನ್ನು ಪ್ಯಾಕೇಟ್ ಮಾಡಿ, ಸ್ಥಳೀಯ ಸಗಟು ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಾರೆ. ಚಳಿಗಾಲ, ಮಳೆಗಾಲದಲ್ಲಿ ಬದುಕು ತಣ್ಣಗಿರಲೆಂದು ಬೇಸಿಗೆ ಬಿಸಿಲನ್ನು ಬಳಸಿಕೊಳ್ಳುತ್ತಾರೆ.

ಹಾಗೇ ಹಪ್ಪಳ, ಸಂಡಿಗೆ, ಉಪ್ಪಿನ ಕಾಯಿ ಸೇರಿದಂತೆ ಕುರುಕಲು ತಿಂಡಿ ಈ ಎಲ್ಲ ತಿನಿಸುಗಳು ಬಿಸಿಲಿನ ಬಿಸಿಗೆ ಸಿಲುಕಿ ಹದವಾಗಿ ತಿನ್ನುವುದಕ್ಕೆ ರೂಪುಗೊಂಡಿರುತ್ತವೆ. ಅದನ್ನು ರಾತ್ರಿ ಹೊತ್ತಿಗೆ ಕುಟುಂಬದವರೊಂದಿಗೆ ಊಟ ಮಾಡುವಾಗ, ಬಿಸಿಲನ್ನು ನೆನೆಯದೇ ಇರಲಾರರು.

ಬಿಸಿಲು ನಗರದಲ್ಲಿರುವ ಕ್ರಿಯಾಶೀಲ ಮಹಿಳೆಯರಿಗೆ ಇದು ಹೊಸ ಬೆಳದಿಂಗಳ ಬೆಳಕಾಗಿದೆ. ಮರದ ನೆರಳ ಕೆಳಗೆ ಕುಳಿತು ಕೌದಿಯನ್ನು ಹೊಲೆಯುವುದು, ಬಳೆ ತೊಡಿಸುವುದು, ಮದರಂಗಿ ಹಾಕುವುದು, ಬಟ್ಟೆಗಳ ಮೇಲೆ ಹೆಣಿಗೆ, ಸ್ವೇಟರ್ ಹೆಣೆಯುವುದು ಈ ಬಿಸಿಲು ಕಾಲದಲ್ಲಿಯೆ ರೂಪ ಪಡೆಯುತ್ತವೆ.

ಬಿಸಿಲು ಏಪ್ರಿಲ್, ಮೇ ತಿಂಗಳಲ್ಲಿ ಜನರನ್ನು ಕಂಗೆಡಿಸುವಂತಿರುತ್ತದೆ. ಈ ಎರಡು ತಿಂಗಳ ಬಿಸಿಲನ್ನು ಬಳಸಿಕೊಂಡು ಜಿಲ್ಲೆಯ ಬಹುತೇಕ ಮಹಿಳೆಯರು ತಮ್ಮಲ್ಲಿರುವ ಕೆಲಸ, ಕಾಯಕ, ಕಲೆಯ ಮೂಲಕ ಅನಾವರಣಗೊಳಿಸುತ್ತಾರೆ.

ಬಿಸಿಲೆಂಬುದು ಕೆಂಡದ ಮಳೆಯಾದರೂ ದುಡಿದು ತಿನ್ನುವವರ ಪಾಲಿಗೆ ಕೆಂಡ ಸಂಪಿಗೆಯಾಗಿದೆ. ಅದರೊಳಗೆ ಹಿತವಾದ ಆರೋಗ್ಯಪೂರ್ಣವಾದ ಬಿಸಿಯಿದೆ.

ಇನ್ನೇನು ಬೇಸಿಗೆ ಅಂತ್ಯಕ್ಕೆ ಬಂದಿದ್ದು, ಮಳೆಗಾಲ ಸನಿಹಗೊಂಡಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ವಿಜಯಪುರದಲ್ಲಿ ಜೋರಾದ ಗಾಳಿ, ಗುಡುಗು, ಸಿಡಿಲು ಮಿಶ್ರಿತ ಮಳೆಯಾಗಿದೆ. ಈ ಅಕಾಲಿಕ ಮಳೆ ಪ್ರತಿ ವರ್ಷ ಹೀಗೆ ಸುರಿಯುವುದು ವಾಡಿಕೆಯಾಗಿದೆ. ಪ್ರಸಕ್ತ ವರ್ಷದ ಬೇಸಿಗೆಯ ಮೇ ತಿಂಗಳಲ್ಲಿ 42.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾದರೆ, ಏಪ್ರಿಲ್‍ನಲ್ಲಿ 42.6 ರಷ್ಟು ಉಷ್ಣಾಂಶ ದಾಖಲಾಗಿತ್ತು. ಅಲ್ಲದೆ ರಾತ್ರಿಯಲ್ಲೂ 28 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲುಗೊಂಡು ಈ ಭಾಗದ ಜನರ ನಿದ್ರೆಗೆ ಕೊಳ್ಳಿಯಿಟ್ಟಂತಾಗಿ, ಸಾರ್ವಜನಿಕರು ನಿದ್ರೆಯಿಲ್ಲದೆ ಪರದಾಡಿರುವುದು ಸುಳ್ಳಲ್ಲ. ಹೀಗೆ ಸೂರ್ಯ ಪುತ್ರರು ಬಿಸಿಲು, ಬರವನ್ನು ತಮ್ಮ ವರವಾಗಿ ಬಳಸಿಕೊಂಡು, ಸುಡು ಬಿಸಿಲಿನಲ್ಲಿಯೇ ಗರಮ್ ಮರಮ್ ಚಹಾ, ಚೋಡಾ, ಮಿರ್ಚಿ ಭಜ್ಜಿ ತಿಂದು, ಬಿಸಿಲ ಬದುಕಿನ ಸುಖ ಅನುಭವಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...