Homeಮುಖಪುಟಬಿಸಿಲು, ಬರ ಅಂದ್ರೆ ಇವರಿಗೆ ವರ. ವಿಜಯಪುರ ಜನರ ವಿಶೇಷ ಸ್ಟೋರಿ ಓದಿ

ಬಿಸಿಲು, ಬರ ಅಂದ್ರೆ ಇವರಿಗೆ ವರ. ವಿಜಯಪುರ ಜನರ ವಿಶೇಷ ಸ್ಟೋರಿ ಓದಿ

ಬಿಸಿಲೆಂಬುದು ಕೆಂಡದ ಮಳೆಯಾದರೂ ದುಡಿದು ತಿನ್ನುವವರ ಪಾಲಿಗೆ ಕೆಂಡ ಸಂಪಿಗೆಯಾಗಿದೆ. ಅದರೊಳಗೆ ಹಿತವಾದ ಆರೋಗ್ಯಪೂರ್ಣವಾದ ಬಿಸಿಯಿದೆ.

- Advertisement -
- Advertisement -

| ಶಿವಾ |

ವಿಜಯಪುರ ಬಿಸಿಲು ಎಂದರೆ ಸಾಕು ರಾಜ್ಯದ ಜನರು ನಲುಗಿ ಹೋಗಿ, ಬೇಡವೇ ಬೇಡ ವಿಜಯಪುರ ಸಹವಾಸ ಎಂದು ದೂರವೇ ಸರಿಯುತ್ತಾರೆ. ಆದರೆ ಇದೇ ಕೆಂಡದ ಮಳೆಯಂತಹ ಬಿಸಿಲು ಮತ್ತು ಬರ ಕೆಲವರಿಗೆ ವರದಾನವಾಗಿ ಪರಿಣಮಿಸಿದೆ.

ಬಿಸಿಲು ಮನುಷ್ಯನ ಜೀವನಕ್ಕೆ, ಅಂಗಾಗಕ್ಕೆ ಅನ್ನಾಂಗ (ವಿಟಮಿನ್) ನೀಡುವುದು. ವಿಜಯಪುರ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾದರೆ ಭೂಮಿಯೊಳಗಿನ ಅಂತರ್ಜಲ ಕಡಿಮೆಯಾಗುತ್ತದೆ. ಜನ, ಜಾನುವಾರುಗಳಿಗೆ ಕುಡಿಯಲು ನೀರು ಸಿಗುವುದಿಲ್ಲ. ಬರಗಾಲ ಎದುರಿಸಲಾಗದವರು ಗುಳೆ ಹೋಗುತ್ತಾರೆ, ಮಳೆ ಇರುವ ಕಡೆಗೆ. ಆದರೆ, ಇದೇ ನಮ್ಮೂರು, ಇಲ್ಲೇ ನಮ್ಮ ಸೂರು, ಇಲ್ಲೆ ನಮ್ಮ ಬೇರು ಎಂದು ವಿಜಯಪುರದಲ್ಲಿ ಬಿಸಿಲು ಮತ್ತು ಬರದ ವಿರುದ್ಧ ಹೋರಾಡಿ, ಜೀವನದಲ್ಲಿ ಒಂದು ಹೊತ್ತಿನ ಗಂಜಿ ಸಂಪಾದಿಸುತ್ತ, ಕೃಷಿ ಸೇರಿದಂತೆ ಇತರೆ ಗುಡಿ ಕೈಗಾರಿಕೆ ಕಾರ್ಮಿಕರು ಇಲ್ಲಿದ್ದಾರೆ. ಬಿಸಿಲು ರೈತರ ಪಾಲಿಗೆ ಅತ್ಯಂತ ಆಪ್ತ ಮಿತ್ರವಾಗಿದೆ. ಅದರಲ್ಲೂ ರೈತ ಮಹಿಳೆಯರು ಈ ಬಿಸಿಲನ್ನು ಹೆಚ್ಚು ಉಪಯುಕ್ತವಾಗಿ ಬಳಸಿಕೊಳ್ಳುತ್ತಾರೆ. ರಾಶಿ ಮಾಡಿದ ಫಸಲನ್ನು ಸಂರಕ್ಷಿಸುವುದಕ್ಕೆ ಈ ಬಿಸಿಲು ನೆರವಾಗುವುದು.

ಹಗೆವುನಲ್ಲಿ ತುಂಬಿಟ್ಟ ದವಸ, ಧಾನ್ಯ, ಕಾಳು ಕಡ್ಡಿಗಳನ್ನು ಹೊರ ತೆಗೆದು, ಬಿಸಿಲಿಗೆ ಒಣ ಹಾಕುವರು. ಉಗ್ರಾಣದಲ್ಲಿರುವ ಆಹಾರ ಧಾನ್ಯಗಳಿಗೆ ಅಂಟಿರುವ ನುಶಿ ಪೀಡೆ, ಹೇನು ಪೀಡೆ, ಜಿಗಿ ಪೀಡೆ ಇತ್ಯಾದಿ ಹಾನಿಕಾರಕ ಕ್ರಿಮಿಕೀಟಗಳನ್ನು ನಾಶ ಮಾಡಲು ಈ ಬಿಸಿಲನ್ನೆ ರಾಮಬಾಣವಾಗಿ ಬಳಸುವರು.

ಗೋಣಿ ಚೀಲದಲ್ಲಿ ತುಂಬಿರುವ ಸಜ್ಜೆ, ಜೋಳ, ಶೇಂಗಾ, ಕಡಲೆ, ತೊಗರಿ ದ್ವಿದಳ ಧಾನ್ಯಗಳಿಗೆ ನುಶಿ ಪೀಡೆ ಅಂಟುವುದು ಬಲು ಬೇಗ. ಹಾಗೇ ಅವು ಕಾಳು ಕಡ್ಡಿಗಳನ್ನು ನಾಶ ಪಡಿಸುತ್ತವೆ. ಮುಂಬರುವ ಮಳೆಗಾಲದ ಹೊತ್ತಿಗೆ ಆಹಾರ ಧಾನ್ಯಕ್ಕೆ ಅಂಟುವ ಕ್ರಿಮಿಕೀಟಗಳು ಸಂಪೂರ್ಣವಾಗಿ ಎಲ್ಲ ಅನ್ನಸಂಪತ್ತನ್ನು ತಿಂದು ಹಾಕುತ್ತವೆ. ಆಗ ರೈತ ಕಂಗಾಲಾಗುತ್ತಾನೆ.
ಮುಂಬರುವ ಅಪಾಯವನ್ನು ಗಮನದಲ್ಲಿಟ್ಟುಕೊಂಡು, ಕ್ರಿಮಿಕೀಟಗಳ ನಾಶಕ್ಕಾಗಿ ದವಸ- ಧಾನ್ಯಗಳನ್ನು ಬಿಸಿಲಿಗೆ ಹಾಕುತ್ತಾರೆ. ತಿನ್ನುವ ಆಹಾರ ಧಾನ್ಯ ಸ್ವಚ್ಛವಾಗಿದ್ದರೆ, ಆರೋಗ್ಯವು ಸದೃಢವಾಗಿರುತ್ತದೆ.

ವಿಜಯಪುರದ ಬಿಸಿಲು ಕೇವಲ ಆಹಾರ ಧಾನ್ಯ ಸಂರಕ್ಷಿಸುವುದಕ್ಕೆ ಅಷ್ಟೆ ಅಲ್ಲ. ಅದು ಬರದಿಂದ ಗುಳೆ ಹೋಗುವವರ ಜನರಿಗೆ ಬದುಕಿನ ಪಾಠ ಹೇಳುವ ನೇಸರ ಗುರುವಾಗಿದೆ.

ಬಿಸಿಲು ದುಡುಮೆಯ ಟಿಸಿಲು:
ಬಹುತೇಕ ಜನ ಗೃಹಿಣಿಯರು ಈ ಬೇಸಿಗೆ ಕಾಲಕ್ಕೆ ಕಾಯ್ದು ಕುಳಿತಿರುತ್ತಾರೆ. ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು, ಹಾಗೇ ಅದರಿಂದ ದುಡಿಮೆಯ ದಾರಿಯನ್ನು ಕಂಡುಕೊಳ್ಳಲು.

ಶಾವಿಗೆ ಹೊಸೆದು, ಅದನ್ನು ಬಿಸಿಲಿಗೆ ಒಣ ಹಾಕಿ, ಸಂಜೆ ಹೊತ್ತಿಗೆ ಅದನ್ನು ಪ್ಯಾಕೇಟ್ ಮಾಡಿ, ಸ್ಥಳೀಯ ಸಗಟು ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಾರೆ. ಚಳಿಗಾಲ, ಮಳೆಗಾಲದಲ್ಲಿ ಬದುಕು ತಣ್ಣಗಿರಲೆಂದು ಬೇಸಿಗೆ ಬಿಸಿಲನ್ನು ಬಳಸಿಕೊಳ್ಳುತ್ತಾರೆ.

ಹಾಗೇ ಹಪ್ಪಳ, ಸಂಡಿಗೆ, ಉಪ್ಪಿನ ಕಾಯಿ ಸೇರಿದಂತೆ ಕುರುಕಲು ತಿಂಡಿ ಈ ಎಲ್ಲ ತಿನಿಸುಗಳು ಬಿಸಿಲಿನ ಬಿಸಿಗೆ ಸಿಲುಕಿ ಹದವಾಗಿ ತಿನ್ನುವುದಕ್ಕೆ ರೂಪುಗೊಂಡಿರುತ್ತವೆ. ಅದನ್ನು ರಾತ್ರಿ ಹೊತ್ತಿಗೆ ಕುಟುಂಬದವರೊಂದಿಗೆ ಊಟ ಮಾಡುವಾಗ, ಬಿಸಿಲನ್ನು ನೆನೆಯದೇ ಇರಲಾರರು.

ಬಿಸಿಲು ನಗರದಲ್ಲಿರುವ ಕ್ರಿಯಾಶೀಲ ಮಹಿಳೆಯರಿಗೆ ಇದು ಹೊಸ ಬೆಳದಿಂಗಳ ಬೆಳಕಾಗಿದೆ. ಮರದ ನೆರಳ ಕೆಳಗೆ ಕುಳಿತು ಕೌದಿಯನ್ನು ಹೊಲೆಯುವುದು, ಬಳೆ ತೊಡಿಸುವುದು, ಮದರಂಗಿ ಹಾಕುವುದು, ಬಟ್ಟೆಗಳ ಮೇಲೆ ಹೆಣಿಗೆ, ಸ್ವೇಟರ್ ಹೆಣೆಯುವುದು ಈ ಬಿಸಿಲು ಕಾಲದಲ್ಲಿಯೆ ರೂಪ ಪಡೆಯುತ್ತವೆ.

ಬಿಸಿಲು ಏಪ್ರಿಲ್, ಮೇ ತಿಂಗಳಲ್ಲಿ ಜನರನ್ನು ಕಂಗೆಡಿಸುವಂತಿರುತ್ತದೆ. ಈ ಎರಡು ತಿಂಗಳ ಬಿಸಿಲನ್ನು ಬಳಸಿಕೊಂಡು ಜಿಲ್ಲೆಯ ಬಹುತೇಕ ಮಹಿಳೆಯರು ತಮ್ಮಲ್ಲಿರುವ ಕೆಲಸ, ಕಾಯಕ, ಕಲೆಯ ಮೂಲಕ ಅನಾವರಣಗೊಳಿಸುತ್ತಾರೆ.

ಬಿಸಿಲೆಂಬುದು ಕೆಂಡದ ಮಳೆಯಾದರೂ ದುಡಿದು ತಿನ್ನುವವರ ಪಾಲಿಗೆ ಕೆಂಡ ಸಂಪಿಗೆಯಾಗಿದೆ. ಅದರೊಳಗೆ ಹಿತವಾದ ಆರೋಗ್ಯಪೂರ್ಣವಾದ ಬಿಸಿಯಿದೆ.

ಇನ್ನೇನು ಬೇಸಿಗೆ ಅಂತ್ಯಕ್ಕೆ ಬಂದಿದ್ದು, ಮಳೆಗಾಲ ಸನಿಹಗೊಂಡಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ವಿಜಯಪುರದಲ್ಲಿ ಜೋರಾದ ಗಾಳಿ, ಗುಡುಗು, ಸಿಡಿಲು ಮಿಶ್ರಿತ ಮಳೆಯಾಗಿದೆ. ಈ ಅಕಾಲಿಕ ಮಳೆ ಪ್ರತಿ ವರ್ಷ ಹೀಗೆ ಸುರಿಯುವುದು ವಾಡಿಕೆಯಾಗಿದೆ. ಪ್ರಸಕ್ತ ವರ್ಷದ ಬೇಸಿಗೆಯ ಮೇ ತಿಂಗಳಲ್ಲಿ 42.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾದರೆ, ಏಪ್ರಿಲ್‍ನಲ್ಲಿ 42.6 ರಷ್ಟು ಉಷ್ಣಾಂಶ ದಾಖಲಾಗಿತ್ತು. ಅಲ್ಲದೆ ರಾತ್ರಿಯಲ್ಲೂ 28 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲುಗೊಂಡು ಈ ಭಾಗದ ಜನರ ನಿದ್ರೆಗೆ ಕೊಳ್ಳಿಯಿಟ್ಟಂತಾಗಿ, ಸಾರ್ವಜನಿಕರು ನಿದ್ರೆಯಿಲ್ಲದೆ ಪರದಾಡಿರುವುದು ಸುಳ್ಳಲ್ಲ. ಹೀಗೆ ಸೂರ್ಯ ಪುತ್ರರು ಬಿಸಿಲು, ಬರವನ್ನು ತಮ್ಮ ವರವಾಗಿ ಬಳಸಿಕೊಂಡು, ಸುಡು ಬಿಸಿಲಿನಲ್ಲಿಯೇ ಗರಮ್ ಮರಮ್ ಚಹಾ, ಚೋಡಾ, ಮಿರ್ಚಿ ಭಜ್ಜಿ ತಿಂದು, ಬಿಸಿಲ ಬದುಕಿನ ಸುಖ ಅನುಭವಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...