Homeಮುಖಪುಟಬಿಸಿಲು, ಬರ ಅಂದ್ರೆ ಇವರಿಗೆ ವರ. ವಿಜಯಪುರ ಜನರ ವಿಶೇಷ ಸ್ಟೋರಿ ಓದಿ

ಬಿಸಿಲು, ಬರ ಅಂದ್ರೆ ಇವರಿಗೆ ವರ. ವಿಜಯಪುರ ಜನರ ವಿಶೇಷ ಸ್ಟೋರಿ ಓದಿ

ಬಿಸಿಲೆಂಬುದು ಕೆಂಡದ ಮಳೆಯಾದರೂ ದುಡಿದು ತಿನ್ನುವವರ ಪಾಲಿಗೆ ಕೆಂಡ ಸಂಪಿಗೆಯಾಗಿದೆ. ಅದರೊಳಗೆ ಹಿತವಾದ ಆರೋಗ್ಯಪೂರ್ಣವಾದ ಬಿಸಿಯಿದೆ.

- Advertisement -
- Advertisement -

| ಶಿವಾ |

ವಿಜಯಪುರ ಬಿಸಿಲು ಎಂದರೆ ಸಾಕು ರಾಜ್ಯದ ಜನರು ನಲುಗಿ ಹೋಗಿ, ಬೇಡವೇ ಬೇಡ ವಿಜಯಪುರ ಸಹವಾಸ ಎಂದು ದೂರವೇ ಸರಿಯುತ್ತಾರೆ. ಆದರೆ ಇದೇ ಕೆಂಡದ ಮಳೆಯಂತಹ ಬಿಸಿಲು ಮತ್ತು ಬರ ಕೆಲವರಿಗೆ ವರದಾನವಾಗಿ ಪರಿಣಮಿಸಿದೆ.

ಬಿಸಿಲು ಮನುಷ್ಯನ ಜೀವನಕ್ಕೆ, ಅಂಗಾಗಕ್ಕೆ ಅನ್ನಾಂಗ (ವಿಟಮಿನ್) ನೀಡುವುದು. ವಿಜಯಪುರ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾದರೆ ಭೂಮಿಯೊಳಗಿನ ಅಂತರ್ಜಲ ಕಡಿಮೆಯಾಗುತ್ತದೆ. ಜನ, ಜಾನುವಾರುಗಳಿಗೆ ಕುಡಿಯಲು ನೀರು ಸಿಗುವುದಿಲ್ಲ. ಬರಗಾಲ ಎದುರಿಸಲಾಗದವರು ಗುಳೆ ಹೋಗುತ್ತಾರೆ, ಮಳೆ ಇರುವ ಕಡೆಗೆ. ಆದರೆ, ಇದೇ ನಮ್ಮೂರು, ಇಲ್ಲೇ ನಮ್ಮ ಸೂರು, ಇಲ್ಲೆ ನಮ್ಮ ಬೇರು ಎಂದು ವಿಜಯಪುರದಲ್ಲಿ ಬಿಸಿಲು ಮತ್ತು ಬರದ ವಿರುದ್ಧ ಹೋರಾಡಿ, ಜೀವನದಲ್ಲಿ ಒಂದು ಹೊತ್ತಿನ ಗಂಜಿ ಸಂಪಾದಿಸುತ್ತ, ಕೃಷಿ ಸೇರಿದಂತೆ ಇತರೆ ಗುಡಿ ಕೈಗಾರಿಕೆ ಕಾರ್ಮಿಕರು ಇಲ್ಲಿದ್ದಾರೆ. ಬಿಸಿಲು ರೈತರ ಪಾಲಿಗೆ ಅತ್ಯಂತ ಆಪ್ತ ಮಿತ್ರವಾಗಿದೆ. ಅದರಲ್ಲೂ ರೈತ ಮಹಿಳೆಯರು ಈ ಬಿಸಿಲನ್ನು ಹೆಚ್ಚು ಉಪಯುಕ್ತವಾಗಿ ಬಳಸಿಕೊಳ್ಳುತ್ತಾರೆ. ರಾಶಿ ಮಾಡಿದ ಫಸಲನ್ನು ಸಂರಕ್ಷಿಸುವುದಕ್ಕೆ ಈ ಬಿಸಿಲು ನೆರವಾಗುವುದು.

ಹಗೆವುನಲ್ಲಿ ತುಂಬಿಟ್ಟ ದವಸ, ಧಾನ್ಯ, ಕಾಳು ಕಡ್ಡಿಗಳನ್ನು ಹೊರ ತೆಗೆದು, ಬಿಸಿಲಿಗೆ ಒಣ ಹಾಕುವರು. ಉಗ್ರಾಣದಲ್ಲಿರುವ ಆಹಾರ ಧಾನ್ಯಗಳಿಗೆ ಅಂಟಿರುವ ನುಶಿ ಪೀಡೆ, ಹೇನು ಪೀಡೆ, ಜಿಗಿ ಪೀಡೆ ಇತ್ಯಾದಿ ಹಾನಿಕಾರಕ ಕ್ರಿಮಿಕೀಟಗಳನ್ನು ನಾಶ ಮಾಡಲು ಈ ಬಿಸಿಲನ್ನೆ ರಾಮಬಾಣವಾಗಿ ಬಳಸುವರು.

ಗೋಣಿ ಚೀಲದಲ್ಲಿ ತುಂಬಿರುವ ಸಜ್ಜೆ, ಜೋಳ, ಶೇಂಗಾ, ಕಡಲೆ, ತೊಗರಿ ದ್ವಿದಳ ಧಾನ್ಯಗಳಿಗೆ ನುಶಿ ಪೀಡೆ ಅಂಟುವುದು ಬಲು ಬೇಗ. ಹಾಗೇ ಅವು ಕಾಳು ಕಡ್ಡಿಗಳನ್ನು ನಾಶ ಪಡಿಸುತ್ತವೆ. ಮುಂಬರುವ ಮಳೆಗಾಲದ ಹೊತ್ತಿಗೆ ಆಹಾರ ಧಾನ್ಯಕ್ಕೆ ಅಂಟುವ ಕ್ರಿಮಿಕೀಟಗಳು ಸಂಪೂರ್ಣವಾಗಿ ಎಲ್ಲ ಅನ್ನಸಂಪತ್ತನ್ನು ತಿಂದು ಹಾಕುತ್ತವೆ. ಆಗ ರೈತ ಕಂಗಾಲಾಗುತ್ತಾನೆ.
ಮುಂಬರುವ ಅಪಾಯವನ್ನು ಗಮನದಲ್ಲಿಟ್ಟುಕೊಂಡು, ಕ್ರಿಮಿಕೀಟಗಳ ನಾಶಕ್ಕಾಗಿ ದವಸ- ಧಾನ್ಯಗಳನ್ನು ಬಿಸಿಲಿಗೆ ಹಾಕುತ್ತಾರೆ. ತಿನ್ನುವ ಆಹಾರ ಧಾನ್ಯ ಸ್ವಚ್ಛವಾಗಿದ್ದರೆ, ಆರೋಗ್ಯವು ಸದೃಢವಾಗಿರುತ್ತದೆ.

ವಿಜಯಪುರದ ಬಿಸಿಲು ಕೇವಲ ಆಹಾರ ಧಾನ್ಯ ಸಂರಕ್ಷಿಸುವುದಕ್ಕೆ ಅಷ್ಟೆ ಅಲ್ಲ. ಅದು ಬರದಿಂದ ಗುಳೆ ಹೋಗುವವರ ಜನರಿಗೆ ಬದುಕಿನ ಪಾಠ ಹೇಳುವ ನೇಸರ ಗುರುವಾಗಿದೆ.

ಬಿಸಿಲು ದುಡುಮೆಯ ಟಿಸಿಲು:
ಬಹುತೇಕ ಜನ ಗೃಹಿಣಿಯರು ಈ ಬೇಸಿಗೆ ಕಾಲಕ್ಕೆ ಕಾಯ್ದು ಕುಳಿತಿರುತ್ತಾರೆ. ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು, ಹಾಗೇ ಅದರಿಂದ ದುಡಿಮೆಯ ದಾರಿಯನ್ನು ಕಂಡುಕೊಳ್ಳಲು.

ಶಾವಿಗೆ ಹೊಸೆದು, ಅದನ್ನು ಬಿಸಿಲಿಗೆ ಒಣ ಹಾಕಿ, ಸಂಜೆ ಹೊತ್ತಿಗೆ ಅದನ್ನು ಪ್ಯಾಕೇಟ್ ಮಾಡಿ, ಸ್ಥಳೀಯ ಸಗಟು ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಾರೆ. ಚಳಿಗಾಲ, ಮಳೆಗಾಲದಲ್ಲಿ ಬದುಕು ತಣ್ಣಗಿರಲೆಂದು ಬೇಸಿಗೆ ಬಿಸಿಲನ್ನು ಬಳಸಿಕೊಳ್ಳುತ್ತಾರೆ.

ಹಾಗೇ ಹಪ್ಪಳ, ಸಂಡಿಗೆ, ಉಪ್ಪಿನ ಕಾಯಿ ಸೇರಿದಂತೆ ಕುರುಕಲು ತಿಂಡಿ ಈ ಎಲ್ಲ ತಿನಿಸುಗಳು ಬಿಸಿಲಿನ ಬಿಸಿಗೆ ಸಿಲುಕಿ ಹದವಾಗಿ ತಿನ್ನುವುದಕ್ಕೆ ರೂಪುಗೊಂಡಿರುತ್ತವೆ. ಅದನ್ನು ರಾತ್ರಿ ಹೊತ್ತಿಗೆ ಕುಟುಂಬದವರೊಂದಿಗೆ ಊಟ ಮಾಡುವಾಗ, ಬಿಸಿಲನ್ನು ನೆನೆಯದೇ ಇರಲಾರರು.

ಬಿಸಿಲು ನಗರದಲ್ಲಿರುವ ಕ್ರಿಯಾಶೀಲ ಮಹಿಳೆಯರಿಗೆ ಇದು ಹೊಸ ಬೆಳದಿಂಗಳ ಬೆಳಕಾಗಿದೆ. ಮರದ ನೆರಳ ಕೆಳಗೆ ಕುಳಿತು ಕೌದಿಯನ್ನು ಹೊಲೆಯುವುದು, ಬಳೆ ತೊಡಿಸುವುದು, ಮದರಂಗಿ ಹಾಕುವುದು, ಬಟ್ಟೆಗಳ ಮೇಲೆ ಹೆಣಿಗೆ, ಸ್ವೇಟರ್ ಹೆಣೆಯುವುದು ಈ ಬಿಸಿಲು ಕಾಲದಲ್ಲಿಯೆ ರೂಪ ಪಡೆಯುತ್ತವೆ.

ಬಿಸಿಲು ಏಪ್ರಿಲ್, ಮೇ ತಿಂಗಳಲ್ಲಿ ಜನರನ್ನು ಕಂಗೆಡಿಸುವಂತಿರುತ್ತದೆ. ಈ ಎರಡು ತಿಂಗಳ ಬಿಸಿಲನ್ನು ಬಳಸಿಕೊಂಡು ಜಿಲ್ಲೆಯ ಬಹುತೇಕ ಮಹಿಳೆಯರು ತಮ್ಮಲ್ಲಿರುವ ಕೆಲಸ, ಕಾಯಕ, ಕಲೆಯ ಮೂಲಕ ಅನಾವರಣಗೊಳಿಸುತ್ತಾರೆ.

ಬಿಸಿಲೆಂಬುದು ಕೆಂಡದ ಮಳೆಯಾದರೂ ದುಡಿದು ತಿನ್ನುವವರ ಪಾಲಿಗೆ ಕೆಂಡ ಸಂಪಿಗೆಯಾಗಿದೆ. ಅದರೊಳಗೆ ಹಿತವಾದ ಆರೋಗ್ಯಪೂರ್ಣವಾದ ಬಿಸಿಯಿದೆ.

ಇನ್ನೇನು ಬೇಸಿಗೆ ಅಂತ್ಯಕ್ಕೆ ಬಂದಿದ್ದು, ಮಳೆಗಾಲ ಸನಿಹಗೊಂಡಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ವಿಜಯಪುರದಲ್ಲಿ ಜೋರಾದ ಗಾಳಿ, ಗುಡುಗು, ಸಿಡಿಲು ಮಿಶ್ರಿತ ಮಳೆಯಾಗಿದೆ. ಈ ಅಕಾಲಿಕ ಮಳೆ ಪ್ರತಿ ವರ್ಷ ಹೀಗೆ ಸುರಿಯುವುದು ವಾಡಿಕೆಯಾಗಿದೆ. ಪ್ರಸಕ್ತ ವರ್ಷದ ಬೇಸಿಗೆಯ ಮೇ ತಿಂಗಳಲ್ಲಿ 42.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾದರೆ, ಏಪ್ರಿಲ್‍ನಲ್ಲಿ 42.6 ರಷ್ಟು ಉಷ್ಣಾಂಶ ದಾಖಲಾಗಿತ್ತು. ಅಲ್ಲದೆ ರಾತ್ರಿಯಲ್ಲೂ 28 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲುಗೊಂಡು ಈ ಭಾಗದ ಜನರ ನಿದ್ರೆಗೆ ಕೊಳ್ಳಿಯಿಟ್ಟಂತಾಗಿ, ಸಾರ್ವಜನಿಕರು ನಿದ್ರೆಯಿಲ್ಲದೆ ಪರದಾಡಿರುವುದು ಸುಳ್ಳಲ್ಲ. ಹೀಗೆ ಸೂರ್ಯ ಪುತ್ರರು ಬಿಸಿಲು, ಬರವನ್ನು ತಮ್ಮ ವರವಾಗಿ ಬಳಸಿಕೊಂಡು, ಸುಡು ಬಿಸಿಲಿನಲ್ಲಿಯೇ ಗರಮ್ ಮರಮ್ ಚಹಾ, ಚೋಡಾ, ಮಿರ್ಚಿ ಭಜ್ಜಿ ತಿಂದು, ಬಿಸಿಲ ಬದುಕಿನ ಸುಖ ಅನುಭವಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....