Homeಮುಖಪುಟಬಿಸಿಲು, ಬರ ಅಂದ್ರೆ ಇವರಿಗೆ ವರ. ವಿಜಯಪುರ ಜನರ ವಿಶೇಷ ಸ್ಟೋರಿ ಓದಿ

ಬಿಸಿಲು, ಬರ ಅಂದ್ರೆ ಇವರಿಗೆ ವರ. ವಿಜಯಪುರ ಜನರ ವಿಶೇಷ ಸ್ಟೋರಿ ಓದಿ

ಬಿಸಿಲೆಂಬುದು ಕೆಂಡದ ಮಳೆಯಾದರೂ ದುಡಿದು ತಿನ್ನುವವರ ಪಾಲಿಗೆ ಕೆಂಡ ಸಂಪಿಗೆಯಾಗಿದೆ. ಅದರೊಳಗೆ ಹಿತವಾದ ಆರೋಗ್ಯಪೂರ್ಣವಾದ ಬಿಸಿಯಿದೆ.

- Advertisement -
- Advertisement -

| ಶಿವಾ |

ವಿಜಯಪುರ ಬಿಸಿಲು ಎಂದರೆ ಸಾಕು ರಾಜ್ಯದ ಜನರು ನಲುಗಿ ಹೋಗಿ, ಬೇಡವೇ ಬೇಡ ವಿಜಯಪುರ ಸಹವಾಸ ಎಂದು ದೂರವೇ ಸರಿಯುತ್ತಾರೆ. ಆದರೆ ಇದೇ ಕೆಂಡದ ಮಳೆಯಂತಹ ಬಿಸಿಲು ಮತ್ತು ಬರ ಕೆಲವರಿಗೆ ವರದಾನವಾಗಿ ಪರಿಣಮಿಸಿದೆ.

ಬಿಸಿಲು ಮನುಷ್ಯನ ಜೀವನಕ್ಕೆ, ಅಂಗಾಗಕ್ಕೆ ಅನ್ನಾಂಗ (ವಿಟಮಿನ್) ನೀಡುವುದು. ವಿಜಯಪುರ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾದರೆ ಭೂಮಿಯೊಳಗಿನ ಅಂತರ್ಜಲ ಕಡಿಮೆಯಾಗುತ್ತದೆ. ಜನ, ಜಾನುವಾರುಗಳಿಗೆ ಕುಡಿಯಲು ನೀರು ಸಿಗುವುದಿಲ್ಲ. ಬರಗಾಲ ಎದುರಿಸಲಾಗದವರು ಗುಳೆ ಹೋಗುತ್ತಾರೆ, ಮಳೆ ಇರುವ ಕಡೆಗೆ. ಆದರೆ, ಇದೇ ನಮ್ಮೂರು, ಇಲ್ಲೇ ನಮ್ಮ ಸೂರು, ಇಲ್ಲೆ ನಮ್ಮ ಬೇರು ಎಂದು ವಿಜಯಪುರದಲ್ಲಿ ಬಿಸಿಲು ಮತ್ತು ಬರದ ವಿರುದ್ಧ ಹೋರಾಡಿ, ಜೀವನದಲ್ಲಿ ಒಂದು ಹೊತ್ತಿನ ಗಂಜಿ ಸಂಪಾದಿಸುತ್ತ, ಕೃಷಿ ಸೇರಿದಂತೆ ಇತರೆ ಗುಡಿ ಕೈಗಾರಿಕೆ ಕಾರ್ಮಿಕರು ಇಲ್ಲಿದ್ದಾರೆ. ಬಿಸಿಲು ರೈತರ ಪಾಲಿಗೆ ಅತ್ಯಂತ ಆಪ್ತ ಮಿತ್ರವಾಗಿದೆ. ಅದರಲ್ಲೂ ರೈತ ಮಹಿಳೆಯರು ಈ ಬಿಸಿಲನ್ನು ಹೆಚ್ಚು ಉಪಯುಕ್ತವಾಗಿ ಬಳಸಿಕೊಳ್ಳುತ್ತಾರೆ. ರಾಶಿ ಮಾಡಿದ ಫಸಲನ್ನು ಸಂರಕ್ಷಿಸುವುದಕ್ಕೆ ಈ ಬಿಸಿಲು ನೆರವಾಗುವುದು.

ಹಗೆವುನಲ್ಲಿ ತುಂಬಿಟ್ಟ ದವಸ, ಧಾನ್ಯ, ಕಾಳು ಕಡ್ಡಿಗಳನ್ನು ಹೊರ ತೆಗೆದು, ಬಿಸಿಲಿಗೆ ಒಣ ಹಾಕುವರು. ಉಗ್ರಾಣದಲ್ಲಿರುವ ಆಹಾರ ಧಾನ್ಯಗಳಿಗೆ ಅಂಟಿರುವ ನುಶಿ ಪೀಡೆ, ಹೇನು ಪೀಡೆ, ಜಿಗಿ ಪೀಡೆ ಇತ್ಯಾದಿ ಹಾನಿಕಾರಕ ಕ್ರಿಮಿಕೀಟಗಳನ್ನು ನಾಶ ಮಾಡಲು ಈ ಬಿಸಿಲನ್ನೆ ರಾಮಬಾಣವಾಗಿ ಬಳಸುವರು.

ಗೋಣಿ ಚೀಲದಲ್ಲಿ ತುಂಬಿರುವ ಸಜ್ಜೆ, ಜೋಳ, ಶೇಂಗಾ, ಕಡಲೆ, ತೊಗರಿ ದ್ವಿದಳ ಧಾನ್ಯಗಳಿಗೆ ನುಶಿ ಪೀಡೆ ಅಂಟುವುದು ಬಲು ಬೇಗ. ಹಾಗೇ ಅವು ಕಾಳು ಕಡ್ಡಿಗಳನ್ನು ನಾಶ ಪಡಿಸುತ್ತವೆ. ಮುಂಬರುವ ಮಳೆಗಾಲದ ಹೊತ್ತಿಗೆ ಆಹಾರ ಧಾನ್ಯಕ್ಕೆ ಅಂಟುವ ಕ್ರಿಮಿಕೀಟಗಳು ಸಂಪೂರ್ಣವಾಗಿ ಎಲ್ಲ ಅನ್ನಸಂಪತ್ತನ್ನು ತಿಂದು ಹಾಕುತ್ತವೆ. ಆಗ ರೈತ ಕಂಗಾಲಾಗುತ್ತಾನೆ.
ಮುಂಬರುವ ಅಪಾಯವನ್ನು ಗಮನದಲ್ಲಿಟ್ಟುಕೊಂಡು, ಕ್ರಿಮಿಕೀಟಗಳ ನಾಶಕ್ಕಾಗಿ ದವಸ- ಧಾನ್ಯಗಳನ್ನು ಬಿಸಿಲಿಗೆ ಹಾಕುತ್ತಾರೆ. ತಿನ್ನುವ ಆಹಾರ ಧಾನ್ಯ ಸ್ವಚ್ಛವಾಗಿದ್ದರೆ, ಆರೋಗ್ಯವು ಸದೃಢವಾಗಿರುತ್ತದೆ.

ವಿಜಯಪುರದ ಬಿಸಿಲು ಕೇವಲ ಆಹಾರ ಧಾನ್ಯ ಸಂರಕ್ಷಿಸುವುದಕ್ಕೆ ಅಷ್ಟೆ ಅಲ್ಲ. ಅದು ಬರದಿಂದ ಗುಳೆ ಹೋಗುವವರ ಜನರಿಗೆ ಬದುಕಿನ ಪಾಠ ಹೇಳುವ ನೇಸರ ಗುರುವಾಗಿದೆ.

ಬಿಸಿಲು ದುಡುಮೆಯ ಟಿಸಿಲು:
ಬಹುತೇಕ ಜನ ಗೃಹಿಣಿಯರು ಈ ಬೇಸಿಗೆ ಕಾಲಕ್ಕೆ ಕಾಯ್ದು ಕುಳಿತಿರುತ್ತಾರೆ. ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು, ಹಾಗೇ ಅದರಿಂದ ದುಡಿಮೆಯ ದಾರಿಯನ್ನು ಕಂಡುಕೊಳ್ಳಲು.

ಶಾವಿಗೆ ಹೊಸೆದು, ಅದನ್ನು ಬಿಸಿಲಿಗೆ ಒಣ ಹಾಕಿ, ಸಂಜೆ ಹೊತ್ತಿಗೆ ಅದನ್ನು ಪ್ಯಾಕೇಟ್ ಮಾಡಿ, ಸ್ಥಳೀಯ ಸಗಟು ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಾರೆ. ಚಳಿಗಾಲ, ಮಳೆಗಾಲದಲ್ಲಿ ಬದುಕು ತಣ್ಣಗಿರಲೆಂದು ಬೇಸಿಗೆ ಬಿಸಿಲನ್ನು ಬಳಸಿಕೊಳ್ಳುತ್ತಾರೆ.

ಹಾಗೇ ಹಪ್ಪಳ, ಸಂಡಿಗೆ, ಉಪ್ಪಿನ ಕಾಯಿ ಸೇರಿದಂತೆ ಕುರುಕಲು ತಿಂಡಿ ಈ ಎಲ್ಲ ತಿನಿಸುಗಳು ಬಿಸಿಲಿನ ಬಿಸಿಗೆ ಸಿಲುಕಿ ಹದವಾಗಿ ತಿನ್ನುವುದಕ್ಕೆ ರೂಪುಗೊಂಡಿರುತ್ತವೆ. ಅದನ್ನು ರಾತ್ರಿ ಹೊತ್ತಿಗೆ ಕುಟುಂಬದವರೊಂದಿಗೆ ಊಟ ಮಾಡುವಾಗ, ಬಿಸಿಲನ್ನು ನೆನೆಯದೇ ಇರಲಾರರು.

ಬಿಸಿಲು ನಗರದಲ್ಲಿರುವ ಕ್ರಿಯಾಶೀಲ ಮಹಿಳೆಯರಿಗೆ ಇದು ಹೊಸ ಬೆಳದಿಂಗಳ ಬೆಳಕಾಗಿದೆ. ಮರದ ನೆರಳ ಕೆಳಗೆ ಕುಳಿತು ಕೌದಿಯನ್ನು ಹೊಲೆಯುವುದು, ಬಳೆ ತೊಡಿಸುವುದು, ಮದರಂಗಿ ಹಾಕುವುದು, ಬಟ್ಟೆಗಳ ಮೇಲೆ ಹೆಣಿಗೆ, ಸ್ವೇಟರ್ ಹೆಣೆಯುವುದು ಈ ಬಿಸಿಲು ಕಾಲದಲ್ಲಿಯೆ ರೂಪ ಪಡೆಯುತ್ತವೆ.

ಬಿಸಿಲು ಏಪ್ರಿಲ್, ಮೇ ತಿಂಗಳಲ್ಲಿ ಜನರನ್ನು ಕಂಗೆಡಿಸುವಂತಿರುತ್ತದೆ. ಈ ಎರಡು ತಿಂಗಳ ಬಿಸಿಲನ್ನು ಬಳಸಿಕೊಂಡು ಜಿಲ್ಲೆಯ ಬಹುತೇಕ ಮಹಿಳೆಯರು ತಮ್ಮಲ್ಲಿರುವ ಕೆಲಸ, ಕಾಯಕ, ಕಲೆಯ ಮೂಲಕ ಅನಾವರಣಗೊಳಿಸುತ್ತಾರೆ.

ಬಿಸಿಲೆಂಬುದು ಕೆಂಡದ ಮಳೆಯಾದರೂ ದುಡಿದು ತಿನ್ನುವವರ ಪಾಲಿಗೆ ಕೆಂಡ ಸಂಪಿಗೆಯಾಗಿದೆ. ಅದರೊಳಗೆ ಹಿತವಾದ ಆರೋಗ್ಯಪೂರ್ಣವಾದ ಬಿಸಿಯಿದೆ.

ಇನ್ನೇನು ಬೇಸಿಗೆ ಅಂತ್ಯಕ್ಕೆ ಬಂದಿದ್ದು, ಮಳೆಗಾಲ ಸನಿಹಗೊಂಡಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ವಿಜಯಪುರದಲ್ಲಿ ಜೋರಾದ ಗಾಳಿ, ಗುಡುಗು, ಸಿಡಿಲು ಮಿಶ್ರಿತ ಮಳೆಯಾಗಿದೆ. ಈ ಅಕಾಲಿಕ ಮಳೆ ಪ್ರತಿ ವರ್ಷ ಹೀಗೆ ಸುರಿಯುವುದು ವಾಡಿಕೆಯಾಗಿದೆ. ಪ್ರಸಕ್ತ ವರ್ಷದ ಬೇಸಿಗೆಯ ಮೇ ತಿಂಗಳಲ್ಲಿ 42.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾದರೆ, ಏಪ್ರಿಲ್‍ನಲ್ಲಿ 42.6 ರಷ್ಟು ಉಷ್ಣಾಂಶ ದಾಖಲಾಗಿತ್ತು. ಅಲ್ಲದೆ ರಾತ್ರಿಯಲ್ಲೂ 28 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲುಗೊಂಡು ಈ ಭಾಗದ ಜನರ ನಿದ್ರೆಗೆ ಕೊಳ್ಳಿಯಿಟ್ಟಂತಾಗಿ, ಸಾರ್ವಜನಿಕರು ನಿದ್ರೆಯಿಲ್ಲದೆ ಪರದಾಡಿರುವುದು ಸುಳ್ಳಲ್ಲ. ಹೀಗೆ ಸೂರ್ಯ ಪುತ್ರರು ಬಿಸಿಲು, ಬರವನ್ನು ತಮ್ಮ ವರವಾಗಿ ಬಳಸಿಕೊಂಡು, ಸುಡು ಬಿಸಿಲಿನಲ್ಲಿಯೇ ಗರಮ್ ಮರಮ್ ಚಹಾ, ಚೋಡಾ, ಮಿರ್ಚಿ ಭಜ್ಜಿ ತಿಂದು, ಬಿಸಿಲ ಬದುಕಿನ ಸುಖ ಅನುಭವಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...