Homeಮುಖಪುಟಬಿಸಿಲು, ಬರ ಅಂದ್ರೆ ಇವರಿಗೆ ವರ. ವಿಜಯಪುರ ಜನರ ವಿಶೇಷ ಸ್ಟೋರಿ ಓದಿ

ಬಿಸಿಲು, ಬರ ಅಂದ್ರೆ ಇವರಿಗೆ ವರ. ವಿಜಯಪುರ ಜನರ ವಿಶೇಷ ಸ್ಟೋರಿ ಓದಿ

ಬಿಸಿಲೆಂಬುದು ಕೆಂಡದ ಮಳೆಯಾದರೂ ದುಡಿದು ತಿನ್ನುವವರ ಪಾಲಿಗೆ ಕೆಂಡ ಸಂಪಿಗೆಯಾಗಿದೆ. ಅದರೊಳಗೆ ಹಿತವಾದ ಆರೋಗ್ಯಪೂರ್ಣವಾದ ಬಿಸಿಯಿದೆ.

- Advertisement -
- Advertisement -

| ಶಿವಾ |

ವಿಜಯಪುರ ಬಿಸಿಲು ಎಂದರೆ ಸಾಕು ರಾಜ್ಯದ ಜನರು ನಲುಗಿ ಹೋಗಿ, ಬೇಡವೇ ಬೇಡ ವಿಜಯಪುರ ಸಹವಾಸ ಎಂದು ದೂರವೇ ಸರಿಯುತ್ತಾರೆ. ಆದರೆ ಇದೇ ಕೆಂಡದ ಮಳೆಯಂತಹ ಬಿಸಿಲು ಮತ್ತು ಬರ ಕೆಲವರಿಗೆ ವರದಾನವಾಗಿ ಪರಿಣಮಿಸಿದೆ.

ಬಿಸಿಲು ಮನುಷ್ಯನ ಜೀವನಕ್ಕೆ, ಅಂಗಾಗಕ್ಕೆ ಅನ್ನಾಂಗ (ವಿಟಮಿನ್) ನೀಡುವುದು. ವಿಜಯಪುರ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾದರೆ ಭೂಮಿಯೊಳಗಿನ ಅಂತರ್ಜಲ ಕಡಿಮೆಯಾಗುತ್ತದೆ. ಜನ, ಜಾನುವಾರುಗಳಿಗೆ ಕುಡಿಯಲು ನೀರು ಸಿಗುವುದಿಲ್ಲ. ಬರಗಾಲ ಎದುರಿಸಲಾಗದವರು ಗುಳೆ ಹೋಗುತ್ತಾರೆ, ಮಳೆ ಇರುವ ಕಡೆಗೆ. ಆದರೆ, ಇದೇ ನಮ್ಮೂರು, ಇಲ್ಲೇ ನಮ್ಮ ಸೂರು, ಇಲ್ಲೆ ನಮ್ಮ ಬೇರು ಎಂದು ವಿಜಯಪುರದಲ್ಲಿ ಬಿಸಿಲು ಮತ್ತು ಬರದ ವಿರುದ್ಧ ಹೋರಾಡಿ, ಜೀವನದಲ್ಲಿ ಒಂದು ಹೊತ್ತಿನ ಗಂಜಿ ಸಂಪಾದಿಸುತ್ತ, ಕೃಷಿ ಸೇರಿದಂತೆ ಇತರೆ ಗುಡಿ ಕೈಗಾರಿಕೆ ಕಾರ್ಮಿಕರು ಇಲ್ಲಿದ್ದಾರೆ. ಬಿಸಿಲು ರೈತರ ಪಾಲಿಗೆ ಅತ್ಯಂತ ಆಪ್ತ ಮಿತ್ರವಾಗಿದೆ. ಅದರಲ್ಲೂ ರೈತ ಮಹಿಳೆಯರು ಈ ಬಿಸಿಲನ್ನು ಹೆಚ್ಚು ಉಪಯುಕ್ತವಾಗಿ ಬಳಸಿಕೊಳ್ಳುತ್ತಾರೆ. ರಾಶಿ ಮಾಡಿದ ಫಸಲನ್ನು ಸಂರಕ್ಷಿಸುವುದಕ್ಕೆ ಈ ಬಿಸಿಲು ನೆರವಾಗುವುದು.

ಹಗೆವುನಲ್ಲಿ ತುಂಬಿಟ್ಟ ದವಸ, ಧಾನ್ಯ, ಕಾಳು ಕಡ್ಡಿಗಳನ್ನು ಹೊರ ತೆಗೆದು, ಬಿಸಿಲಿಗೆ ಒಣ ಹಾಕುವರು. ಉಗ್ರಾಣದಲ್ಲಿರುವ ಆಹಾರ ಧಾನ್ಯಗಳಿಗೆ ಅಂಟಿರುವ ನುಶಿ ಪೀಡೆ, ಹೇನು ಪೀಡೆ, ಜಿಗಿ ಪೀಡೆ ಇತ್ಯಾದಿ ಹಾನಿಕಾರಕ ಕ್ರಿಮಿಕೀಟಗಳನ್ನು ನಾಶ ಮಾಡಲು ಈ ಬಿಸಿಲನ್ನೆ ರಾಮಬಾಣವಾಗಿ ಬಳಸುವರು.

ಗೋಣಿ ಚೀಲದಲ್ಲಿ ತುಂಬಿರುವ ಸಜ್ಜೆ, ಜೋಳ, ಶೇಂಗಾ, ಕಡಲೆ, ತೊಗರಿ ದ್ವಿದಳ ಧಾನ್ಯಗಳಿಗೆ ನುಶಿ ಪೀಡೆ ಅಂಟುವುದು ಬಲು ಬೇಗ. ಹಾಗೇ ಅವು ಕಾಳು ಕಡ್ಡಿಗಳನ್ನು ನಾಶ ಪಡಿಸುತ್ತವೆ. ಮುಂಬರುವ ಮಳೆಗಾಲದ ಹೊತ್ತಿಗೆ ಆಹಾರ ಧಾನ್ಯಕ್ಕೆ ಅಂಟುವ ಕ್ರಿಮಿಕೀಟಗಳು ಸಂಪೂರ್ಣವಾಗಿ ಎಲ್ಲ ಅನ್ನಸಂಪತ್ತನ್ನು ತಿಂದು ಹಾಕುತ್ತವೆ. ಆಗ ರೈತ ಕಂಗಾಲಾಗುತ್ತಾನೆ.
ಮುಂಬರುವ ಅಪಾಯವನ್ನು ಗಮನದಲ್ಲಿಟ್ಟುಕೊಂಡು, ಕ್ರಿಮಿಕೀಟಗಳ ನಾಶಕ್ಕಾಗಿ ದವಸ- ಧಾನ್ಯಗಳನ್ನು ಬಿಸಿಲಿಗೆ ಹಾಕುತ್ತಾರೆ. ತಿನ್ನುವ ಆಹಾರ ಧಾನ್ಯ ಸ್ವಚ್ಛವಾಗಿದ್ದರೆ, ಆರೋಗ್ಯವು ಸದೃಢವಾಗಿರುತ್ತದೆ.

ವಿಜಯಪುರದ ಬಿಸಿಲು ಕೇವಲ ಆಹಾರ ಧಾನ್ಯ ಸಂರಕ್ಷಿಸುವುದಕ್ಕೆ ಅಷ್ಟೆ ಅಲ್ಲ. ಅದು ಬರದಿಂದ ಗುಳೆ ಹೋಗುವವರ ಜನರಿಗೆ ಬದುಕಿನ ಪಾಠ ಹೇಳುವ ನೇಸರ ಗುರುವಾಗಿದೆ.

ಬಿಸಿಲು ದುಡುಮೆಯ ಟಿಸಿಲು:
ಬಹುತೇಕ ಜನ ಗೃಹಿಣಿಯರು ಈ ಬೇಸಿಗೆ ಕಾಲಕ್ಕೆ ಕಾಯ್ದು ಕುಳಿತಿರುತ್ತಾರೆ. ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು, ಹಾಗೇ ಅದರಿಂದ ದುಡಿಮೆಯ ದಾರಿಯನ್ನು ಕಂಡುಕೊಳ್ಳಲು.

ಶಾವಿಗೆ ಹೊಸೆದು, ಅದನ್ನು ಬಿಸಿಲಿಗೆ ಒಣ ಹಾಕಿ, ಸಂಜೆ ಹೊತ್ತಿಗೆ ಅದನ್ನು ಪ್ಯಾಕೇಟ್ ಮಾಡಿ, ಸ್ಥಳೀಯ ಸಗಟು ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಾರೆ. ಚಳಿಗಾಲ, ಮಳೆಗಾಲದಲ್ಲಿ ಬದುಕು ತಣ್ಣಗಿರಲೆಂದು ಬೇಸಿಗೆ ಬಿಸಿಲನ್ನು ಬಳಸಿಕೊಳ್ಳುತ್ತಾರೆ.

ಹಾಗೇ ಹಪ್ಪಳ, ಸಂಡಿಗೆ, ಉಪ್ಪಿನ ಕಾಯಿ ಸೇರಿದಂತೆ ಕುರುಕಲು ತಿಂಡಿ ಈ ಎಲ್ಲ ತಿನಿಸುಗಳು ಬಿಸಿಲಿನ ಬಿಸಿಗೆ ಸಿಲುಕಿ ಹದವಾಗಿ ತಿನ್ನುವುದಕ್ಕೆ ರೂಪುಗೊಂಡಿರುತ್ತವೆ. ಅದನ್ನು ರಾತ್ರಿ ಹೊತ್ತಿಗೆ ಕುಟುಂಬದವರೊಂದಿಗೆ ಊಟ ಮಾಡುವಾಗ, ಬಿಸಿಲನ್ನು ನೆನೆಯದೇ ಇರಲಾರರು.

ಬಿಸಿಲು ನಗರದಲ್ಲಿರುವ ಕ್ರಿಯಾಶೀಲ ಮಹಿಳೆಯರಿಗೆ ಇದು ಹೊಸ ಬೆಳದಿಂಗಳ ಬೆಳಕಾಗಿದೆ. ಮರದ ನೆರಳ ಕೆಳಗೆ ಕುಳಿತು ಕೌದಿಯನ್ನು ಹೊಲೆಯುವುದು, ಬಳೆ ತೊಡಿಸುವುದು, ಮದರಂಗಿ ಹಾಕುವುದು, ಬಟ್ಟೆಗಳ ಮೇಲೆ ಹೆಣಿಗೆ, ಸ್ವೇಟರ್ ಹೆಣೆಯುವುದು ಈ ಬಿಸಿಲು ಕಾಲದಲ್ಲಿಯೆ ರೂಪ ಪಡೆಯುತ್ತವೆ.

ಬಿಸಿಲು ಏಪ್ರಿಲ್, ಮೇ ತಿಂಗಳಲ್ಲಿ ಜನರನ್ನು ಕಂಗೆಡಿಸುವಂತಿರುತ್ತದೆ. ಈ ಎರಡು ತಿಂಗಳ ಬಿಸಿಲನ್ನು ಬಳಸಿಕೊಂಡು ಜಿಲ್ಲೆಯ ಬಹುತೇಕ ಮಹಿಳೆಯರು ತಮ್ಮಲ್ಲಿರುವ ಕೆಲಸ, ಕಾಯಕ, ಕಲೆಯ ಮೂಲಕ ಅನಾವರಣಗೊಳಿಸುತ್ತಾರೆ.

ಬಿಸಿಲೆಂಬುದು ಕೆಂಡದ ಮಳೆಯಾದರೂ ದುಡಿದು ತಿನ್ನುವವರ ಪಾಲಿಗೆ ಕೆಂಡ ಸಂಪಿಗೆಯಾಗಿದೆ. ಅದರೊಳಗೆ ಹಿತವಾದ ಆರೋಗ್ಯಪೂರ್ಣವಾದ ಬಿಸಿಯಿದೆ.

ಇನ್ನೇನು ಬೇಸಿಗೆ ಅಂತ್ಯಕ್ಕೆ ಬಂದಿದ್ದು, ಮಳೆಗಾಲ ಸನಿಹಗೊಂಡಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ವಿಜಯಪುರದಲ್ಲಿ ಜೋರಾದ ಗಾಳಿ, ಗುಡುಗು, ಸಿಡಿಲು ಮಿಶ್ರಿತ ಮಳೆಯಾಗಿದೆ. ಈ ಅಕಾಲಿಕ ಮಳೆ ಪ್ರತಿ ವರ್ಷ ಹೀಗೆ ಸುರಿಯುವುದು ವಾಡಿಕೆಯಾಗಿದೆ. ಪ್ರಸಕ್ತ ವರ್ಷದ ಬೇಸಿಗೆಯ ಮೇ ತಿಂಗಳಲ್ಲಿ 42.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾದರೆ, ಏಪ್ರಿಲ್‍ನಲ್ಲಿ 42.6 ರಷ್ಟು ಉಷ್ಣಾಂಶ ದಾಖಲಾಗಿತ್ತು. ಅಲ್ಲದೆ ರಾತ್ರಿಯಲ್ಲೂ 28 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲುಗೊಂಡು ಈ ಭಾಗದ ಜನರ ನಿದ್ರೆಗೆ ಕೊಳ್ಳಿಯಿಟ್ಟಂತಾಗಿ, ಸಾರ್ವಜನಿಕರು ನಿದ್ರೆಯಿಲ್ಲದೆ ಪರದಾಡಿರುವುದು ಸುಳ್ಳಲ್ಲ. ಹೀಗೆ ಸೂರ್ಯ ಪುತ್ರರು ಬಿಸಿಲು, ಬರವನ್ನು ತಮ್ಮ ವರವಾಗಿ ಬಳಸಿಕೊಂಡು, ಸುಡು ಬಿಸಿಲಿನಲ್ಲಿಯೇ ಗರಮ್ ಮರಮ್ ಚಹಾ, ಚೋಡಾ, ಮಿರ್ಚಿ ಭಜ್ಜಿ ತಿಂದು, ಬಿಸಿಲ ಬದುಕಿನ ಸುಖ ಅನುಭವಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...