Homeಮುಖಪುಟ’ಓ ಭರತವರ್ಷದ ನಾಯಕರೆ, ಅವಮಾನದಲ್ಲೇ ಮುಳುಗಿ ಸಾಯಿರಿ’; ಜಿಗ್ನೇಶ್ ಮೇವಾನಿ ಆಕ್ರೋಶ

’ಓ ಭರತವರ್ಷದ ನಾಯಕರೆ, ಅವಮಾನದಲ್ಲೇ ಮುಳುಗಿ ಸಾಯಿರಿ’; ಜಿಗ್ನೇಶ್ ಮೇವಾನಿ ಆಕ್ರೋಶ

ಪೊಲೀಸರು ತಮಗೆ ನ್ಯಾಯ ನಿರಾಕರಣೆ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ವಿಧಾನಸಭೆಯ ಬಳಿ ಮಹಿಳೆಯರಿಬ್ಬರು ಬೆಂಕಿ ಹಚ್ಚಿಕೊಂಡ ಘಟನೆ ನಡೆದಿದೆ.

- Advertisement -
- Advertisement -

ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ರಾಜ್ಯ ವಿಧಾನಸಭೆ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರ ಕಚೇರಿಯಿರುವ ಲೋಕ್‌ ಭವನದ ಬಳಿ ಮಹಿಳೆಯರಿಬ್ಬರು ಶುಕ್ರವಾರ ಸಂಜೆ ತಮಗೆ ತಾವೆ ಬೆಂಕಿ ಹಚ್ಚಿಕೊಂಡಿದ್ದಾರೆ.

ಉತ್ತರ ಪ್ರದೇಶದ ಅಮೆಥಿ ಜಿಲ್ಲೆಯ ಪ್ರಕರಣವೊಂದರಲ್ಲಿ ಪೊಲೀಸರು ನಿಷ್ಕ್ರಿಯರಾಗಿದ್ದಾರೆಂದು ಆರೋಪಿಸಿ ಮಹಿಳೆಯರು ಬೆಂಕಿ ಹಚ್ಚಿಕೊಂಡಿದ್ದು, ಒಬ್ಬನನ್ನು ಗುಡಿಯಾ ಎಂದು ಗುರುತಿಸಲಾಗಿದೆ. ಇಬ್ಬರಿಗೂ ಸುಟ್ಟ ಗಾಯಗಳಾಗಿದ್ದು ಲಕ್ನೋದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

“ಲೋಕ್ ಭವನ ಬಳಿ ಇಬ್ಬರು ಮಹಿಳೆಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಓರ್ವ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ, ಇನ್ನೊಬ್ಬ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದಾರೆ” ಎಂದು ಜಂಟಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ನವೀನ್ ಅರೋರಾ ತಿಳಿಸಿದ್ದಾರೆ.

ಅಮೆಥಿಯ ಜಾಮೋ ಪ್ರದೇಶದ ತಮ್ಮ ಹಳ್ಳಿಯಲ್ಲಿ ತಮ್ಮ ನೆರೆಹೊರೆಯವರು ಚರಂಡಿ ತ್ಯಾಜ್ಯದ ವಿವಾದದಲ್ಲಿ ಬೆದರಿಕೆ ಹಾಕುತ್ತಿದ್ದಾರೆ ಆದರೆ ಪೊಲೀಸರು ತಮ್ಮ ದೂರುಗಳ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಹಾಗೂ ಪೊಲೀಸರು ಕೂಡಾ ನೆರೆಹೊರೆಯವರೊಂದಿಗೆ ಸೇರಿ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

“ಮೇ 9 ರಂದು ಮಹಿಳೆ ಮತ್ತು ಆಕೆಯ ನೆರೆಹೊರೆಯವರು ಚರಂಡಿ ವಿವಾದದ ಬಗ್ಗೆ ಜಗಳವಾಡಿದ್ದರು. ಎರಡೂ ಪಕ್ಷಗಳು ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿವೆ. ನಾವು ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ. ವಿವರವಾದ ವಿಚಾರಣೆಗೆ ಆದೇಶಿಸಲಾಗಿದೆ” ಎಂದು ಅಮೇಥಿಯ ಪೊಲೀಸ್ ವರಿಷ್ಠಾಧಿಕಾರಿ ಖ್ಯಾತಿ ಗಾರ್ಗ್ ಹೇಳಿದ್ದಾರೆ.

ಪ್ರಕರಣದ ಬಗ್ಗೆ ವಿರೋಧ ಪಕ್ಷಗಳು ತೀವ್ರವಾಗಿ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ಪಡೆದಿದ್ದಾರಲ್ಲದೆ ರಾಜ್ಯವನ್ನು ಜಂಗಲ್ ರಾಜ್ ಎಂದು ಕರೆದಿದ್ದಾರೆ.

ಊನಾ ಚಳುವಳಿಯ ನಾಯಕ ಹಾಗೂ ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ, ಓ ಭರತವರ್ಷದ ಯಜಮಾನರೇ ಅವಮಾನದಲ್ಲಿ ಮುಳುಗಿ ಸಾಯಿರಿ, ಈ ಮಹಿಳೆ ಎಂತಹ ಭೀಕರ ಕಿರುಕುಳಕ್ಕೆ ಒಳಗಾಗಿರಬಹುದು. ತನ್ನ ಧ್ವನಿಯನ್ನು ಯುಪಿ ಆಡಳಿತಕ್ಕೆ ತಲುಪಿಸಲು ಜೀವಂತ ಸುಟ್ಟು ಹಾಕಬೇಕಾಗಿರುವುದು ಎಂತಹ ನೋವು ಇದ್ದಿರಬಹುದು. ಸ್ವಲ್ಪವಾದರೂ ನಾಚಿಕೆಯಿದ್ದರೆ ಆದಿತ್ಯನಾಥ್ ರಾಜಿನಾಮೆ ಕೊಡಲಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಯೋಗಿ ಆದಿತ್ಯನಾಥ್ ಸರ್ಕಾರವು ಬಡವರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ, ಯುಪಿಯಲ್ಲಿ ಸರ್ಕಾರ ಇನ್ನೂ ಇದೆಯೇ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಬಹುಜನ ಸಮಾಜ ಪಕ್ಷದ ಮುಖ್ಯಸ್ಥ ಮಾಯಾವತಿ ಆಗ್ರಹಿಸಿದ್ದಾರೆ.

“ಭೂ ವಿವಾದ ಪ್ರಕರಣದಲ್ಲಿ ತಾಯಿ ಮತ್ತು ಮಗಳು ಲಖನೌದ ಸಿಎಂ ಕಚೇರಿಯ ಮುಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಯಿತು. ಯುಪಿ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. ಅಂತಹ ಘಟನೆಗಳು ಮತ್ತೆ ಸಂಭವಿಸದಂತೆ ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ” ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.


ಓದಿ: ಉತ್ತರ ಪ್ರದೇಶವನ್ನು ಬಿಜೆಪಿ ’ಅಪರಾಧ ಪ್ರದೇಶ’ವನ್ನಾಗಿ ಮಾಡಿದೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...