Homeಮುಖಪುಟ’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

- Advertisement -
- Advertisement -

ಅಲಹಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ಅವರು ಪ್ರಯಾಗರಾಜ್‌ನ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಹತ್ತಿರದ ಮಸೀದಿಯಿಂದ ಕೇಳಿ ಬರುವ ಅಜಾನ್‌ನಿಂದಾಗಿ ನಿದ್ರಾಭಂಗವಾಗುತ್ತಿದೆ. ಅದರಿಂದ ದಿನವಿಡೀ ತಲೆನೋವು ಉಂಟು ಮಾಡುತ್ತದೆ. ಇದರಿಂದ ಕೆಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಮಾರ್ಚ್ 3 ರಂದು ಪ್ರಯಾಗರಾಜ್ ಡಿ.ಎಂ. ಭಾನು ಚಂದ್ರ ಗೋಸ್ವಾಮಿ ಅವರಿಗೆ ಬರೆದ ಪತ್ರದಲ್ಲಿ, ಸಿವಿಲ್ ಲೈಲ್ಸ್‌ನಲ್ಲಿನ ಶಬ್ದ ಮಾಲಿನ್ಯದ ಬಗ್ಗೆ ಬರೆದಿದ್ದಾರೆ. ಪ್ರತಿದಿನ ಬೆಳಿಗ್ಗೆ 5.30 ರ ಸುಮಾರಿಗೆ ನನ್ನ ನಿದ್ರೆಗೆ ತೊಂದರೆಯಾಗುತ್ತದೆ ಎಂದು ನಿಮ್ಮ ಗಮನಕ್ಕೆ ತರಬೇಕು. ಸುತ್ತಮುತ್ತಲಿನ ಮಸೀದಿಯಲ್ಲಿ ಮೌಲ್ವಿಗಳು ಮೈಕ್‌ನಲ್ಲಿ ಜೋರಾಗಿ ಅಜಾನ್ ಮಾಡುವುದರಿಂದ ನಿದ್ದೆಗೆ ತೊಂದರೆಯಾಗುತ್ತಿದೆ.  ಕಷ್ಟಪಟ್ಟು ಪ್ರಯತ್ನಿಸಿದ ನಂತರವೂ ನಿದ್ದೆ ಮಾಡಲಾಗುವುದಿಲ್ಲ. ಇದು ದಿನವಿಡೀ ತಲೆನೋವಿಗೆ ಕಾರಣವಾಗುತ್ತದೆ. ಇದರಿಂದ ಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಸಿವಿಲ್ ಲೈನ್ಸ್‌ನಲ್ಲಿರುವ ಉಪಕುಲಪತಿ ನಿವಾಸದಿಂದ ಸುಮಾರು 400 ಮೀ ದೂರದಲ್ಲಿರುವ ಮಸೀದಿಯನ್ನು ಲಾಲ್ ಮಸೀದಿ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಬಿಎಸ್‌ಪಿ ಶಾಸಕಿಯ ಪತಿಯನ್ನು ಹುಡುಕಿಕೊಟ್ಟವರಿಗೆ 30 ಸಾವಿರ ಬಹುಮಾನ!

’ನಾನು ಯಾವುದೇ ಜಾತಿ ಅಥವಾ ಧರ್ಮಕ್ಕೆ ವಿರೋಧಿಯಲ್ಲ, ಅವರು ಮೈಕ್ ಇಲ್ಲದೆ ಅಜಾನ್ ಮಾಡಬಹುದು, ಇದರಿಂದ ಇತರರಿಗೆ ತೊಂದರೆಯಾಗುವುದಿಲ್ಲ. ಈದ್‌ಗೆ ಮುಂಚೆಯೇ ಅವರು ಸೆಹರಿಯನ್ನು ಮೈಕ್‌ನಲ್ಲಿ ಬೆಳಿಗ್ಗೆ 4 ಗಂಟೆಗೆ ಶುರುಮಾಡುತ್ತಾರೆ. ಇದರಿಂದ ಇತರ ಜನರಿಗೆ ತೊಂದರೆಯಾಗುತ್ತದೆ ಎಂದು ಅಲಹಾಬಾದ್ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ತಮ್ಮ ಪತ್ರದಲ್ಲಿ ಸೇರಿಸಿದ್ದಾರೆ.

ಈ ಪತ್ರವನ್ನು ಪ್ರಯಾಗರಾಜ್ (ಶ್ರೇಣಿ) ಐ.ಜಿ.ಕವೀಂದ್ರ ಪ್ರತಾಪ್ ಸಿಂಗ್ ಮತ್ತು ಎಸ್‌ಎಸ್‌ಪಿ ಸರ್ವಶ್ರೇಶ್ ತ್ರಿಪಾಠಿ ಮತ್ತು ಪ್ರಯಾಗರಾಜ್ ವಿಭಾಗೀಯ ಆಯುಕ್ತ ಸಂಜಯ್ ಗೋಯೆಲ್ ಅವರಿಗೂ ಕಳುಹಿಸಲಾಗಿದೆ.

’ಪತ್ರವನ್ನು ಸ್ವೀಕರಿಸಲಾಗಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ ಎಂದು ಡಿಎಂ ಗೋಸ್ವಾಮಿ ಅವರನ್ನು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

ಇದನ್ನೂ ಓದಿ:  ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ

ಅಲಹಾಬಾದ್ ಉಪ ಕುಲಪತಿ ಪತ್ರಕ್ಕೆ ಪ್ರತಿಕ್ರಿಯಿಸಿರುವ ಲಕ್ನೋ ಮೂಲದ ಪ್ರಮುಖ ಸುನ್ನಿ ಧರ್ಮಗುರು ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಾಲಿ, ’ಅಲಹಾಬಾದ್ ವಿಶ್ವವಿದ್ಯಾಲಯದ ವಿಸಿ ಬರೆದ ಪತ್ರದಲ್ಲಿ ಅಜಾನ್ ಗಾಗಿ ಧ್ವನಿವರ್ಧಕವನ್ನು ಬಳಸುವುದನ್ನು ನಿರ್ಬಂಧಿಸುವ ಬಗ್ಗೆ ಮನವಿ ಮಾಡಿದೆ. ನಾವು ಅದನ್ನು ವಿರೋಧಿಸುತ್ತೇವೆ. ನಮ್ಮ ದೇಶವು ಗಂಗಾ-ಜಮುನಾ ತಹಜೀಬ್‌ಗೆ ಹೆಸರುವಾಸಿಯಾಗಿದೆ ಎಂದು ವಿಸಿ ತಿಳಿದಿರಬೇಕು’ ಎಂದಿದ್ದಾರೆ.

’ದೇಶದ ಜನರು ಇತರ ಧರ್ಮಗಳನ್ನು ಗೌರವಿಸುತ್ತಾರೆ ಮತ್ತು ಮಸೀದಿಗಳಿಂದ ಅಜಾನ್ ಶಬ್ದ ಮತ್ತು ದೇವಾಲಯಗಳಿಂದ ಭಜನೆ ಮತ್ತು ಕೀರ್ತನೆ ಸದಾ ಬೀಸುವ ಗಾಳಿಯಲ್ಲಿರುತ್ತದೆ. ಇದರಿಂದಾಗಿ ಯಾರೊಬ್ಬರ ನಿದ್ರೆಗೆ ತೊಂದರೆಯಾಗಿಲ್ಲ. ಆದ್ದರಿಂದ, ಈ ರೀತಿಯ ವಿಷಯಗಳನ್ನು ಹೇಳುವುದು ಅರ್ಥಹೀನ ಮತ್ತು ಮೊದಲಿನಿಂದಲೂ ಗೌರವಾನ್ವಿತ ಹೈಕೋರ್ಟ್‌ನ ಆದೇಶವನ್ನು ಮಸೀದಿಗಳಲ್ಲಿ ಅನುಸರಿಸಲಾಗುತ್ತಿದೆ’ ಎಂದಿದ್ದಾರೆ.

’ಪ್ರತಿಯೊಬ್ಬರ ಧರ್ಮವನ್ನು ಗೌರವಿಸುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಮತ್ತು ಅನಗತ್ಯ ಸಮಸ್ಯೆಗಳೊಂದಿಗೆ ಜನರನ್ನು ಗೊಂದಲಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.

ಪತ್ರ ಬರೆದಿರುವ ಅಲಹಾಬಾದ್ ಉಪ ಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ವೈಯಕ್ತಿಕ ಕಾರಣಗಳಿಗಾಗಿ ಒಂದು ವಾರ ರಜೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೂರು ಕೋಟಿ ಪಡಿತರ ಚೀಟಿ ರದ್ದು: ಗಂಭೀರ ವಿಷಯ ಎಂದು ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಡವನ ಗುಡಿಯಿರಲಿ,ಮಸೀದಿ ಇರಲಿ ,ಇವೆರಡರಿಂದಾಗುತ್ತಿರುವ ಗದ್ದಲದ ಕಿರಿಕಿರಿ ಕೊನೆಯಾಗಲಿ.

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...