Homeಮುಖಪುಟ’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

- Advertisement -
- Advertisement -

ಅಲಹಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ಅವರು ಪ್ರಯಾಗರಾಜ್‌ನ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಹತ್ತಿರದ ಮಸೀದಿಯಿಂದ ಕೇಳಿ ಬರುವ ಅಜಾನ್‌ನಿಂದಾಗಿ ನಿದ್ರಾಭಂಗವಾಗುತ್ತಿದೆ. ಅದರಿಂದ ದಿನವಿಡೀ ತಲೆನೋವು ಉಂಟು ಮಾಡುತ್ತದೆ. ಇದರಿಂದ ಕೆಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಮಾರ್ಚ್ 3 ರಂದು ಪ್ರಯಾಗರಾಜ್ ಡಿ.ಎಂ. ಭಾನು ಚಂದ್ರ ಗೋಸ್ವಾಮಿ ಅವರಿಗೆ ಬರೆದ ಪತ್ರದಲ್ಲಿ, ಸಿವಿಲ್ ಲೈಲ್ಸ್‌ನಲ್ಲಿನ ಶಬ್ದ ಮಾಲಿನ್ಯದ ಬಗ್ಗೆ ಬರೆದಿದ್ದಾರೆ. ಪ್ರತಿದಿನ ಬೆಳಿಗ್ಗೆ 5.30 ರ ಸುಮಾರಿಗೆ ನನ್ನ ನಿದ್ರೆಗೆ ತೊಂದರೆಯಾಗುತ್ತದೆ ಎಂದು ನಿಮ್ಮ ಗಮನಕ್ಕೆ ತರಬೇಕು. ಸುತ್ತಮುತ್ತಲಿನ ಮಸೀದಿಯಲ್ಲಿ ಮೌಲ್ವಿಗಳು ಮೈಕ್‌ನಲ್ಲಿ ಜೋರಾಗಿ ಅಜಾನ್ ಮಾಡುವುದರಿಂದ ನಿದ್ದೆಗೆ ತೊಂದರೆಯಾಗುತ್ತಿದೆ.  ಕಷ್ಟಪಟ್ಟು ಪ್ರಯತ್ನಿಸಿದ ನಂತರವೂ ನಿದ್ದೆ ಮಾಡಲಾಗುವುದಿಲ್ಲ. ಇದು ದಿನವಿಡೀ ತಲೆನೋವಿಗೆ ಕಾರಣವಾಗುತ್ತದೆ. ಇದರಿಂದ ಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಸಿವಿಲ್ ಲೈನ್ಸ್‌ನಲ್ಲಿರುವ ಉಪಕುಲಪತಿ ನಿವಾಸದಿಂದ ಸುಮಾರು 400 ಮೀ ದೂರದಲ್ಲಿರುವ ಮಸೀದಿಯನ್ನು ಲಾಲ್ ಮಸೀದಿ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಬಿಎಸ್‌ಪಿ ಶಾಸಕಿಯ ಪತಿಯನ್ನು ಹುಡುಕಿಕೊಟ್ಟವರಿಗೆ 30 ಸಾವಿರ ಬಹುಮಾನ!

’ನಾನು ಯಾವುದೇ ಜಾತಿ ಅಥವಾ ಧರ್ಮಕ್ಕೆ ವಿರೋಧಿಯಲ್ಲ, ಅವರು ಮೈಕ್ ಇಲ್ಲದೆ ಅಜಾನ್ ಮಾಡಬಹುದು, ಇದರಿಂದ ಇತರರಿಗೆ ತೊಂದರೆಯಾಗುವುದಿಲ್ಲ. ಈದ್‌ಗೆ ಮುಂಚೆಯೇ ಅವರು ಸೆಹರಿಯನ್ನು ಮೈಕ್‌ನಲ್ಲಿ ಬೆಳಿಗ್ಗೆ 4 ಗಂಟೆಗೆ ಶುರುಮಾಡುತ್ತಾರೆ. ಇದರಿಂದ ಇತರ ಜನರಿಗೆ ತೊಂದರೆಯಾಗುತ್ತದೆ ಎಂದು ಅಲಹಾಬಾದ್ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ತಮ್ಮ ಪತ್ರದಲ್ಲಿ ಸೇರಿಸಿದ್ದಾರೆ.

ಈ ಪತ್ರವನ್ನು ಪ್ರಯಾಗರಾಜ್ (ಶ್ರೇಣಿ) ಐ.ಜಿ.ಕವೀಂದ್ರ ಪ್ರತಾಪ್ ಸಿಂಗ್ ಮತ್ತು ಎಸ್‌ಎಸ್‌ಪಿ ಸರ್ವಶ್ರೇಶ್ ತ್ರಿಪಾಠಿ ಮತ್ತು ಪ್ರಯಾಗರಾಜ್ ವಿಭಾಗೀಯ ಆಯುಕ್ತ ಸಂಜಯ್ ಗೋಯೆಲ್ ಅವರಿಗೂ ಕಳುಹಿಸಲಾಗಿದೆ.

’ಪತ್ರವನ್ನು ಸ್ವೀಕರಿಸಲಾಗಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ ಎಂದು ಡಿಎಂ ಗೋಸ್ವಾಮಿ ಅವರನ್ನು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

ಇದನ್ನೂ ಓದಿ:  ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ

ಅಲಹಾಬಾದ್ ಉಪ ಕುಲಪತಿ ಪತ್ರಕ್ಕೆ ಪ್ರತಿಕ್ರಿಯಿಸಿರುವ ಲಕ್ನೋ ಮೂಲದ ಪ್ರಮುಖ ಸುನ್ನಿ ಧರ್ಮಗುರು ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಾಲಿ, ’ಅಲಹಾಬಾದ್ ವಿಶ್ವವಿದ್ಯಾಲಯದ ವಿಸಿ ಬರೆದ ಪತ್ರದಲ್ಲಿ ಅಜಾನ್ ಗಾಗಿ ಧ್ವನಿವರ್ಧಕವನ್ನು ಬಳಸುವುದನ್ನು ನಿರ್ಬಂಧಿಸುವ ಬಗ್ಗೆ ಮನವಿ ಮಾಡಿದೆ. ನಾವು ಅದನ್ನು ವಿರೋಧಿಸುತ್ತೇವೆ. ನಮ್ಮ ದೇಶವು ಗಂಗಾ-ಜಮುನಾ ತಹಜೀಬ್‌ಗೆ ಹೆಸರುವಾಸಿಯಾಗಿದೆ ಎಂದು ವಿಸಿ ತಿಳಿದಿರಬೇಕು’ ಎಂದಿದ್ದಾರೆ.

’ದೇಶದ ಜನರು ಇತರ ಧರ್ಮಗಳನ್ನು ಗೌರವಿಸುತ್ತಾರೆ ಮತ್ತು ಮಸೀದಿಗಳಿಂದ ಅಜಾನ್ ಶಬ್ದ ಮತ್ತು ದೇವಾಲಯಗಳಿಂದ ಭಜನೆ ಮತ್ತು ಕೀರ್ತನೆ ಸದಾ ಬೀಸುವ ಗಾಳಿಯಲ್ಲಿರುತ್ತದೆ. ಇದರಿಂದಾಗಿ ಯಾರೊಬ್ಬರ ನಿದ್ರೆಗೆ ತೊಂದರೆಯಾಗಿಲ್ಲ. ಆದ್ದರಿಂದ, ಈ ರೀತಿಯ ವಿಷಯಗಳನ್ನು ಹೇಳುವುದು ಅರ್ಥಹೀನ ಮತ್ತು ಮೊದಲಿನಿಂದಲೂ ಗೌರವಾನ್ವಿತ ಹೈಕೋರ್ಟ್‌ನ ಆದೇಶವನ್ನು ಮಸೀದಿಗಳಲ್ಲಿ ಅನುಸರಿಸಲಾಗುತ್ತಿದೆ’ ಎಂದಿದ್ದಾರೆ.

’ಪ್ರತಿಯೊಬ್ಬರ ಧರ್ಮವನ್ನು ಗೌರವಿಸುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಮತ್ತು ಅನಗತ್ಯ ಸಮಸ್ಯೆಗಳೊಂದಿಗೆ ಜನರನ್ನು ಗೊಂದಲಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.

ಪತ್ರ ಬರೆದಿರುವ ಅಲಹಾಬಾದ್ ಉಪ ಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ವೈಯಕ್ತಿಕ ಕಾರಣಗಳಿಗಾಗಿ ಒಂದು ವಾರ ರಜೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೂರು ಕೋಟಿ ಪಡಿತರ ಚೀಟಿ ರದ್ದು: ಗಂಭೀರ ವಿಷಯ ಎಂದು ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಡವನ ಗುಡಿಯಿರಲಿ,ಮಸೀದಿ ಇರಲಿ ,ಇವೆರಡರಿಂದಾಗುತ್ತಿರುವ ಗದ್ದಲದ ಕಿರಿಕಿರಿ ಕೊನೆಯಾಗಲಿ.

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...