Homeಮುಖಪುಟ’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

- Advertisement -
- Advertisement -

ಅಲಹಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ಅವರು ಪ್ರಯಾಗರಾಜ್‌ನ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಹತ್ತಿರದ ಮಸೀದಿಯಿಂದ ಕೇಳಿ ಬರುವ ಅಜಾನ್‌ನಿಂದಾಗಿ ನಿದ್ರಾಭಂಗವಾಗುತ್ತಿದೆ. ಅದರಿಂದ ದಿನವಿಡೀ ತಲೆನೋವು ಉಂಟು ಮಾಡುತ್ತದೆ. ಇದರಿಂದ ಕೆಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಮಾರ್ಚ್ 3 ರಂದು ಪ್ರಯಾಗರಾಜ್ ಡಿ.ಎಂ. ಭಾನು ಚಂದ್ರ ಗೋಸ್ವಾಮಿ ಅವರಿಗೆ ಬರೆದ ಪತ್ರದಲ್ಲಿ, ಸಿವಿಲ್ ಲೈಲ್ಸ್‌ನಲ್ಲಿನ ಶಬ್ದ ಮಾಲಿನ್ಯದ ಬಗ್ಗೆ ಬರೆದಿದ್ದಾರೆ. ಪ್ರತಿದಿನ ಬೆಳಿಗ್ಗೆ 5.30 ರ ಸುಮಾರಿಗೆ ನನ್ನ ನಿದ್ರೆಗೆ ತೊಂದರೆಯಾಗುತ್ತದೆ ಎಂದು ನಿಮ್ಮ ಗಮನಕ್ಕೆ ತರಬೇಕು. ಸುತ್ತಮುತ್ತಲಿನ ಮಸೀದಿಯಲ್ಲಿ ಮೌಲ್ವಿಗಳು ಮೈಕ್‌ನಲ್ಲಿ ಜೋರಾಗಿ ಅಜಾನ್ ಮಾಡುವುದರಿಂದ ನಿದ್ದೆಗೆ ತೊಂದರೆಯಾಗುತ್ತಿದೆ.  ಕಷ್ಟಪಟ್ಟು ಪ್ರಯತ್ನಿಸಿದ ನಂತರವೂ ನಿದ್ದೆ ಮಾಡಲಾಗುವುದಿಲ್ಲ. ಇದು ದಿನವಿಡೀ ತಲೆನೋವಿಗೆ ಕಾರಣವಾಗುತ್ತದೆ. ಇದರಿಂದ ಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಸಿವಿಲ್ ಲೈನ್ಸ್‌ನಲ್ಲಿರುವ ಉಪಕುಲಪತಿ ನಿವಾಸದಿಂದ ಸುಮಾರು 400 ಮೀ ದೂರದಲ್ಲಿರುವ ಮಸೀದಿಯನ್ನು ಲಾಲ್ ಮಸೀದಿ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಬಿಎಸ್‌ಪಿ ಶಾಸಕಿಯ ಪತಿಯನ್ನು ಹುಡುಕಿಕೊಟ್ಟವರಿಗೆ 30 ಸಾವಿರ ಬಹುಮಾನ!

’ನಾನು ಯಾವುದೇ ಜಾತಿ ಅಥವಾ ಧರ್ಮಕ್ಕೆ ವಿರೋಧಿಯಲ್ಲ, ಅವರು ಮೈಕ್ ಇಲ್ಲದೆ ಅಜಾನ್ ಮಾಡಬಹುದು, ಇದರಿಂದ ಇತರರಿಗೆ ತೊಂದರೆಯಾಗುವುದಿಲ್ಲ. ಈದ್‌ಗೆ ಮುಂಚೆಯೇ ಅವರು ಸೆಹರಿಯನ್ನು ಮೈಕ್‌ನಲ್ಲಿ ಬೆಳಿಗ್ಗೆ 4 ಗಂಟೆಗೆ ಶುರುಮಾಡುತ್ತಾರೆ. ಇದರಿಂದ ಇತರ ಜನರಿಗೆ ತೊಂದರೆಯಾಗುತ್ತದೆ ಎಂದು ಅಲಹಾಬಾದ್ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ತಮ್ಮ ಪತ್ರದಲ್ಲಿ ಸೇರಿಸಿದ್ದಾರೆ.

ಈ ಪತ್ರವನ್ನು ಪ್ರಯಾಗರಾಜ್ (ಶ್ರೇಣಿ) ಐ.ಜಿ.ಕವೀಂದ್ರ ಪ್ರತಾಪ್ ಸಿಂಗ್ ಮತ್ತು ಎಸ್‌ಎಸ್‌ಪಿ ಸರ್ವಶ್ರೇಶ್ ತ್ರಿಪಾಠಿ ಮತ್ತು ಪ್ರಯಾಗರಾಜ್ ವಿಭಾಗೀಯ ಆಯುಕ್ತ ಸಂಜಯ್ ಗೋಯೆಲ್ ಅವರಿಗೂ ಕಳುಹಿಸಲಾಗಿದೆ.

’ಪತ್ರವನ್ನು ಸ್ವೀಕರಿಸಲಾಗಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ ಎಂದು ಡಿಎಂ ಗೋಸ್ವಾಮಿ ಅವರನ್ನು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

ಇದನ್ನೂ ಓದಿ:  ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ

ಅಲಹಾಬಾದ್ ಉಪ ಕುಲಪತಿ ಪತ್ರಕ್ಕೆ ಪ್ರತಿಕ್ರಿಯಿಸಿರುವ ಲಕ್ನೋ ಮೂಲದ ಪ್ರಮುಖ ಸುನ್ನಿ ಧರ್ಮಗುರು ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಾಲಿ, ’ಅಲಹಾಬಾದ್ ವಿಶ್ವವಿದ್ಯಾಲಯದ ವಿಸಿ ಬರೆದ ಪತ್ರದಲ್ಲಿ ಅಜಾನ್ ಗಾಗಿ ಧ್ವನಿವರ್ಧಕವನ್ನು ಬಳಸುವುದನ್ನು ನಿರ್ಬಂಧಿಸುವ ಬಗ್ಗೆ ಮನವಿ ಮಾಡಿದೆ. ನಾವು ಅದನ್ನು ವಿರೋಧಿಸುತ್ತೇವೆ. ನಮ್ಮ ದೇಶವು ಗಂಗಾ-ಜಮುನಾ ತಹಜೀಬ್‌ಗೆ ಹೆಸರುವಾಸಿಯಾಗಿದೆ ಎಂದು ವಿಸಿ ತಿಳಿದಿರಬೇಕು’ ಎಂದಿದ್ದಾರೆ.

’ದೇಶದ ಜನರು ಇತರ ಧರ್ಮಗಳನ್ನು ಗೌರವಿಸುತ್ತಾರೆ ಮತ್ತು ಮಸೀದಿಗಳಿಂದ ಅಜಾನ್ ಶಬ್ದ ಮತ್ತು ದೇವಾಲಯಗಳಿಂದ ಭಜನೆ ಮತ್ತು ಕೀರ್ತನೆ ಸದಾ ಬೀಸುವ ಗಾಳಿಯಲ್ಲಿರುತ್ತದೆ. ಇದರಿಂದಾಗಿ ಯಾರೊಬ್ಬರ ನಿದ್ರೆಗೆ ತೊಂದರೆಯಾಗಿಲ್ಲ. ಆದ್ದರಿಂದ, ಈ ರೀತಿಯ ವಿಷಯಗಳನ್ನು ಹೇಳುವುದು ಅರ್ಥಹೀನ ಮತ್ತು ಮೊದಲಿನಿಂದಲೂ ಗೌರವಾನ್ವಿತ ಹೈಕೋರ್ಟ್‌ನ ಆದೇಶವನ್ನು ಮಸೀದಿಗಳಲ್ಲಿ ಅನುಸರಿಸಲಾಗುತ್ತಿದೆ’ ಎಂದಿದ್ದಾರೆ.

’ಪ್ರತಿಯೊಬ್ಬರ ಧರ್ಮವನ್ನು ಗೌರವಿಸುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಮತ್ತು ಅನಗತ್ಯ ಸಮಸ್ಯೆಗಳೊಂದಿಗೆ ಜನರನ್ನು ಗೊಂದಲಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.

ಪತ್ರ ಬರೆದಿರುವ ಅಲಹಾಬಾದ್ ಉಪ ಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ವೈಯಕ್ತಿಕ ಕಾರಣಗಳಿಗಾಗಿ ಒಂದು ವಾರ ರಜೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೂರು ಕೋಟಿ ಪಡಿತರ ಚೀಟಿ ರದ್ದು: ಗಂಭೀರ ವಿಷಯ ಎಂದು ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಡವನ ಗುಡಿಯಿರಲಿ,ಮಸೀದಿ ಇರಲಿ ,ಇವೆರಡರಿಂದಾಗುತ್ತಿರುವ ಗದ್ದಲದ ಕಿರಿಕಿರಿ ಕೊನೆಯಾಗಲಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...