Homeಮುಖಪುಟ’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

- Advertisement -
- Advertisement -

ಅಲಹಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ಅವರು ಪ್ರಯಾಗರಾಜ್‌ನ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಹತ್ತಿರದ ಮಸೀದಿಯಿಂದ ಕೇಳಿ ಬರುವ ಅಜಾನ್‌ನಿಂದಾಗಿ ನಿದ್ರಾಭಂಗವಾಗುತ್ತಿದೆ. ಅದರಿಂದ ದಿನವಿಡೀ ತಲೆನೋವು ಉಂಟು ಮಾಡುತ್ತದೆ. ಇದರಿಂದ ಕೆಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಮಾರ್ಚ್ 3 ರಂದು ಪ್ರಯಾಗರಾಜ್ ಡಿ.ಎಂ. ಭಾನು ಚಂದ್ರ ಗೋಸ್ವಾಮಿ ಅವರಿಗೆ ಬರೆದ ಪತ್ರದಲ್ಲಿ, ಸಿವಿಲ್ ಲೈಲ್ಸ್‌ನಲ್ಲಿನ ಶಬ್ದ ಮಾಲಿನ್ಯದ ಬಗ್ಗೆ ಬರೆದಿದ್ದಾರೆ. ಪ್ರತಿದಿನ ಬೆಳಿಗ್ಗೆ 5.30 ರ ಸುಮಾರಿಗೆ ನನ್ನ ನಿದ್ರೆಗೆ ತೊಂದರೆಯಾಗುತ್ತದೆ ಎಂದು ನಿಮ್ಮ ಗಮನಕ್ಕೆ ತರಬೇಕು. ಸುತ್ತಮುತ್ತಲಿನ ಮಸೀದಿಯಲ್ಲಿ ಮೌಲ್ವಿಗಳು ಮೈಕ್‌ನಲ್ಲಿ ಜೋರಾಗಿ ಅಜಾನ್ ಮಾಡುವುದರಿಂದ ನಿದ್ದೆಗೆ ತೊಂದರೆಯಾಗುತ್ತಿದೆ.  ಕಷ್ಟಪಟ್ಟು ಪ್ರಯತ್ನಿಸಿದ ನಂತರವೂ ನಿದ್ದೆ ಮಾಡಲಾಗುವುದಿಲ್ಲ. ಇದು ದಿನವಿಡೀ ತಲೆನೋವಿಗೆ ಕಾರಣವಾಗುತ್ತದೆ. ಇದರಿಂದ ಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಸಿವಿಲ್ ಲೈನ್ಸ್‌ನಲ್ಲಿರುವ ಉಪಕುಲಪತಿ ನಿವಾಸದಿಂದ ಸುಮಾರು 400 ಮೀ ದೂರದಲ್ಲಿರುವ ಮಸೀದಿಯನ್ನು ಲಾಲ್ ಮಸೀದಿ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಬಿಎಸ್‌ಪಿ ಶಾಸಕಿಯ ಪತಿಯನ್ನು ಹುಡುಕಿಕೊಟ್ಟವರಿಗೆ 30 ಸಾವಿರ ಬಹುಮಾನ!

’ನಾನು ಯಾವುದೇ ಜಾತಿ ಅಥವಾ ಧರ್ಮಕ್ಕೆ ವಿರೋಧಿಯಲ್ಲ, ಅವರು ಮೈಕ್ ಇಲ್ಲದೆ ಅಜಾನ್ ಮಾಡಬಹುದು, ಇದರಿಂದ ಇತರರಿಗೆ ತೊಂದರೆಯಾಗುವುದಿಲ್ಲ. ಈದ್‌ಗೆ ಮುಂಚೆಯೇ ಅವರು ಸೆಹರಿಯನ್ನು ಮೈಕ್‌ನಲ್ಲಿ ಬೆಳಿಗ್ಗೆ 4 ಗಂಟೆಗೆ ಶುರುಮಾಡುತ್ತಾರೆ. ಇದರಿಂದ ಇತರ ಜನರಿಗೆ ತೊಂದರೆಯಾಗುತ್ತದೆ ಎಂದು ಅಲಹಾಬಾದ್ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ತಮ್ಮ ಪತ್ರದಲ್ಲಿ ಸೇರಿಸಿದ್ದಾರೆ.

ಈ ಪತ್ರವನ್ನು ಪ್ರಯಾಗರಾಜ್ (ಶ್ರೇಣಿ) ಐ.ಜಿ.ಕವೀಂದ್ರ ಪ್ರತಾಪ್ ಸಿಂಗ್ ಮತ್ತು ಎಸ್‌ಎಸ್‌ಪಿ ಸರ್ವಶ್ರೇಶ್ ತ್ರಿಪಾಠಿ ಮತ್ತು ಪ್ರಯಾಗರಾಜ್ ವಿಭಾಗೀಯ ಆಯುಕ್ತ ಸಂಜಯ್ ಗೋಯೆಲ್ ಅವರಿಗೂ ಕಳುಹಿಸಲಾಗಿದೆ.

’ಪತ್ರವನ್ನು ಸ್ವೀಕರಿಸಲಾಗಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ ಎಂದು ಡಿಎಂ ಗೋಸ್ವಾಮಿ ಅವರನ್ನು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

ಇದನ್ನೂ ಓದಿ:  ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ

ಅಲಹಾಬಾದ್ ಉಪ ಕುಲಪತಿ ಪತ್ರಕ್ಕೆ ಪ್ರತಿಕ್ರಿಯಿಸಿರುವ ಲಕ್ನೋ ಮೂಲದ ಪ್ರಮುಖ ಸುನ್ನಿ ಧರ್ಮಗುರು ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಾಲಿ, ’ಅಲಹಾಬಾದ್ ವಿಶ್ವವಿದ್ಯಾಲಯದ ವಿಸಿ ಬರೆದ ಪತ್ರದಲ್ಲಿ ಅಜಾನ್ ಗಾಗಿ ಧ್ವನಿವರ್ಧಕವನ್ನು ಬಳಸುವುದನ್ನು ನಿರ್ಬಂಧಿಸುವ ಬಗ್ಗೆ ಮನವಿ ಮಾಡಿದೆ. ನಾವು ಅದನ್ನು ವಿರೋಧಿಸುತ್ತೇವೆ. ನಮ್ಮ ದೇಶವು ಗಂಗಾ-ಜಮುನಾ ತಹಜೀಬ್‌ಗೆ ಹೆಸರುವಾಸಿಯಾಗಿದೆ ಎಂದು ವಿಸಿ ತಿಳಿದಿರಬೇಕು’ ಎಂದಿದ್ದಾರೆ.

’ದೇಶದ ಜನರು ಇತರ ಧರ್ಮಗಳನ್ನು ಗೌರವಿಸುತ್ತಾರೆ ಮತ್ತು ಮಸೀದಿಗಳಿಂದ ಅಜಾನ್ ಶಬ್ದ ಮತ್ತು ದೇವಾಲಯಗಳಿಂದ ಭಜನೆ ಮತ್ತು ಕೀರ್ತನೆ ಸದಾ ಬೀಸುವ ಗಾಳಿಯಲ್ಲಿರುತ್ತದೆ. ಇದರಿಂದಾಗಿ ಯಾರೊಬ್ಬರ ನಿದ್ರೆಗೆ ತೊಂದರೆಯಾಗಿಲ್ಲ. ಆದ್ದರಿಂದ, ಈ ರೀತಿಯ ವಿಷಯಗಳನ್ನು ಹೇಳುವುದು ಅರ್ಥಹೀನ ಮತ್ತು ಮೊದಲಿನಿಂದಲೂ ಗೌರವಾನ್ವಿತ ಹೈಕೋರ್ಟ್‌ನ ಆದೇಶವನ್ನು ಮಸೀದಿಗಳಲ್ಲಿ ಅನುಸರಿಸಲಾಗುತ್ತಿದೆ’ ಎಂದಿದ್ದಾರೆ.

’ಪ್ರತಿಯೊಬ್ಬರ ಧರ್ಮವನ್ನು ಗೌರವಿಸುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಮತ್ತು ಅನಗತ್ಯ ಸಮಸ್ಯೆಗಳೊಂದಿಗೆ ಜನರನ್ನು ಗೊಂದಲಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.

ಪತ್ರ ಬರೆದಿರುವ ಅಲಹಾಬಾದ್ ಉಪ ಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ವೈಯಕ್ತಿಕ ಕಾರಣಗಳಿಗಾಗಿ ಒಂದು ವಾರ ರಜೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೂರು ಕೋಟಿ ಪಡಿತರ ಚೀಟಿ ರದ್ದು: ಗಂಭೀರ ವಿಷಯ ಎಂದು ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಡವನ ಗುಡಿಯಿರಲಿ,ಮಸೀದಿ ಇರಲಿ ,ಇವೆರಡರಿಂದಾಗುತ್ತಿರುವ ಗದ್ದಲದ ಕಿರಿಕಿರಿ ಕೊನೆಯಾಗಲಿ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...