Homeಮುಖಪುಟ’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

- Advertisement -
- Advertisement -

ಅಲಹಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ಅವರು ಪ್ರಯಾಗರಾಜ್‌ನ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಹತ್ತಿರದ ಮಸೀದಿಯಿಂದ ಕೇಳಿ ಬರುವ ಅಜಾನ್‌ನಿಂದಾಗಿ ನಿದ್ರಾಭಂಗವಾಗುತ್ತಿದೆ. ಅದರಿಂದ ದಿನವಿಡೀ ತಲೆನೋವು ಉಂಟು ಮಾಡುತ್ತದೆ. ಇದರಿಂದ ಕೆಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಮಾರ್ಚ್ 3 ರಂದು ಪ್ರಯಾಗರಾಜ್ ಡಿ.ಎಂ. ಭಾನು ಚಂದ್ರ ಗೋಸ್ವಾಮಿ ಅವರಿಗೆ ಬರೆದ ಪತ್ರದಲ್ಲಿ, ಸಿವಿಲ್ ಲೈಲ್ಸ್‌ನಲ್ಲಿನ ಶಬ್ದ ಮಾಲಿನ್ಯದ ಬಗ್ಗೆ ಬರೆದಿದ್ದಾರೆ. ಪ್ರತಿದಿನ ಬೆಳಿಗ್ಗೆ 5.30 ರ ಸುಮಾರಿಗೆ ನನ್ನ ನಿದ್ರೆಗೆ ತೊಂದರೆಯಾಗುತ್ತದೆ ಎಂದು ನಿಮ್ಮ ಗಮನಕ್ಕೆ ತರಬೇಕು. ಸುತ್ತಮುತ್ತಲಿನ ಮಸೀದಿಯಲ್ಲಿ ಮೌಲ್ವಿಗಳು ಮೈಕ್‌ನಲ್ಲಿ ಜೋರಾಗಿ ಅಜಾನ್ ಮಾಡುವುದರಿಂದ ನಿದ್ದೆಗೆ ತೊಂದರೆಯಾಗುತ್ತಿದೆ.  ಕಷ್ಟಪಟ್ಟು ಪ್ರಯತ್ನಿಸಿದ ನಂತರವೂ ನಿದ್ದೆ ಮಾಡಲಾಗುವುದಿಲ್ಲ. ಇದು ದಿನವಿಡೀ ತಲೆನೋವಿಗೆ ಕಾರಣವಾಗುತ್ತದೆ. ಇದರಿಂದ ಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಸಿವಿಲ್ ಲೈನ್ಸ್‌ನಲ್ಲಿರುವ ಉಪಕುಲಪತಿ ನಿವಾಸದಿಂದ ಸುಮಾರು 400 ಮೀ ದೂರದಲ್ಲಿರುವ ಮಸೀದಿಯನ್ನು ಲಾಲ್ ಮಸೀದಿ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಬಿಎಸ್‌ಪಿ ಶಾಸಕಿಯ ಪತಿಯನ್ನು ಹುಡುಕಿಕೊಟ್ಟವರಿಗೆ 30 ಸಾವಿರ ಬಹುಮಾನ!

’ನಾನು ಯಾವುದೇ ಜಾತಿ ಅಥವಾ ಧರ್ಮಕ್ಕೆ ವಿರೋಧಿಯಲ್ಲ, ಅವರು ಮೈಕ್ ಇಲ್ಲದೆ ಅಜಾನ್ ಮಾಡಬಹುದು, ಇದರಿಂದ ಇತರರಿಗೆ ತೊಂದರೆಯಾಗುವುದಿಲ್ಲ. ಈದ್‌ಗೆ ಮುಂಚೆಯೇ ಅವರು ಸೆಹರಿಯನ್ನು ಮೈಕ್‌ನಲ್ಲಿ ಬೆಳಿಗ್ಗೆ 4 ಗಂಟೆಗೆ ಶುರುಮಾಡುತ್ತಾರೆ. ಇದರಿಂದ ಇತರ ಜನರಿಗೆ ತೊಂದರೆಯಾಗುತ್ತದೆ ಎಂದು ಅಲಹಾಬಾದ್ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ತಮ್ಮ ಪತ್ರದಲ್ಲಿ ಸೇರಿಸಿದ್ದಾರೆ.

ಈ ಪತ್ರವನ್ನು ಪ್ರಯಾಗರಾಜ್ (ಶ್ರೇಣಿ) ಐ.ಜಿ.ಕವೀಂದ್ರ ಪ್ರತಾಪ್ ಸಿಂಗ್ ಮತ್ತು ಎಸ್‌ಎಸ್‌ಪಿ ಸರ್ವಶ್ರೇಶ್ ತ್ರಿಪಾಠಿ ಮತ್ತು ಪ್ರಯಾಗರಾಜ್ ವಿಭಾಗೀಯ ಆಯುಕ್ತ ಸಂಜಯ್ ಗೋಯೆಲ್ ಅವರಿಗೂ ಕಳುಹಿಸಲಾಗಿದೆ.

’ಪತ್ರವನ್ನು ಸ್ವೀಕರಿಸಲಾಗಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ ಎಂದು ಡಿಎಂ ಗೋಸ್ವಾಮಿ ಅವರನ್ನು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

ಇದನ್ನೂ ಓದಿ:  ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ

ಅಲಹಾಬಾದ್ ಉಪ ಕುಲಪತಿ ಪತ್ರಕ್ಕೆ ಪ್ರತಿಕ್ರಿಯಿಸಿರುವ ಲಕ್ನೋ ಮೂಲದ ಪ್ರಮುಖ ಸುನ್ನಿ ಧರ್ಮಗುರು ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಾಲಿ, ’ಅಲಹಾಬಾದ್ ವಿಶ್ವವಿದ್ಯಾಲಯದ ವಿಸಿ ಬರೆದ ಪತ್ರದಲ್ಲಿ ಅಜಾನ್ ಗಾಗಿ ಧ್ವನಿವರ್ಧಕವನ್ನು ಬಳಸುವುದನ್ನು ನಿರ್ಬಂಧಿಸುವ ಬಗ್ಗೆ ಮನವಿ ಮಾಡಿದೆ. ನಾವು ಅದನ್ನು ವಿರೋಧಿಸುತ್ತೇವೆ. ನಮ್ಮ ದೇಶವು ಗಂಗಾ-ಜಮುನಾ ತಹಜೀಬ್‌ಗೆ ಹೆಸರುವಾಸಿಯಾಗಿದೆ ಎಂದು ವಿಸಿ ತಿಳಿದಿರಬೇಕು’ ಎಂದಿದ್ದಾರೆ.

’ದೇಶದ ಜನರು ಇತರ ಧರ್ಮಗಳನ್ನು ಗೌರವಿಸುತ್ತಾರೆ ಮತ್ತು ಮಸೀದಿಗಳಿಂದ ಅಜಾನ್ ಶಬ್ದ ಮತ್ತು ದೇವಾಲಯಗಳಿಂದ ಭಜನೆ ಮತ್ತು ಕೀರ್ತನೆ ಸದಾ ಬೀಸುವ ಗಾಳಿಯಲ್ಲಿರುತ್ತದೆ. ಇದರಿಂದಾಗಿ ಯಾರೊಬ್ಬರ ನಿದ್ರೆಗೆ ತೊಂದರೆಯಾಗಿಲ್ಲ. ಆದ್ದರಿಂದ, ಈ ರೀತಿಯ ವಿಷಯಗಳನ್ನು ಹೇಳುವುದು ಅರ್ಥಹೀನ ಮತ್ತು ಮೊದಲಿನಿಂದಲೂ ಗೌರವಾನ್ವಿತ ಹೈಕೋರ್ಟ್‌ನ ಆದೇಶವನ್ನು ಮಸೀದಿಗಳಲ್ಲಿ ಅನುಸರಿಸಲಾಗುತ್ತಿದೆ’ ಎಂದಿದ್ದಾರೆ.

’ಪ್ರತಿಯೊಬ್ಬರ ಧರ್ಮವನ್ನು ಗೌರವಿಸುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಮತ್ತು ಅನಗತ್ಯ ಸಮಸ್ಯೆಗಳೊಂದಿಗೆ ಜನರನ್ನು ಗೊಂದಲಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.

ಪತ್ರ ಬರೆದಿರುವ ಅಲಹಾಬಾದ್ ಉಪ ಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ವೈಯಕ್ತಿಕ ಕಾರಣಗಳಿಗಾಗಿ ಒಂದು ವಾರ ರಜೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೂರು ಕೋಟಿ ಪಡಿತರ ಚೀಟಿ ರದ್ದು: ಗಂಭೀರ ವಿಷಯ ಎಂದು ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಡವನ ಗುಡಿಯಿರಲಿ,ಮಸೀದಿ ಇರಲಿ ,ಇವೆರಡರಿಂದಾಗುತ್ತಿರುವ ಗದ್ದಲದ ಕಿರಿಕಿರಿ ಕೊನೆಯಾಗಲಿ.

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...