Homeಮುಖಪುಟ’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

- Advertisement -
- Advertisement -

ಅಲಹಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ಅವರು ಪ್ರಯಾಗರಾಜ್‌ನ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಹತ್ತಿರದ ಮಸೀದಿಯಿಂದ ಕೇಳಿ ಬರುವ ಅಜಾನ್‌ನಿಂದಾಗಿ ನಿದ್ರಾಭಂಗವಾಗುತ್ತಿದೆ. ಅದರಿಂದ ದಿನವಿಡೀ ತಲೆನೋವು ಉಂಟು ಮಾಡುತ್ತದೆ. ಇದರಿಂದ ಕೆಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಮಾರ್ಚ್ 3 ರಂದು ಪ್ರಯಾಗರಾಜ್ ಡಿ.ಎಂ. ಭಾನು ಚಂದ್ರ ಗೋಸ್ವಾಮಿ ಅವರಿಗೆ ಬರೆದ ಪತ್ರದಲ್ಲಿ, ಸಿವಿಲ್ ಲೈಲ್ಸ್‌ನಲ್ಲಿನ ಶಬ್ದ ಮಾಲಿನ್ಯದ ಬಗ್ಗೆ ಬರೆದಿದ್ದಾರೆ. ಪ್ರತಿದಿನ ಬೆಳಿಗ್ಗೆ 5.30 ರ ಸುಮಾರಿಗೆ ನನ್ನ ನಿದ್ರೆಗೆ ತೊಂದರೆಯಾಗುತ್ತದೆ ಎಂದು ನಿಮ್ಮ ಗಮನಕ್ಕೆ ತರಬೇಕು. ಸುತ್ತಮುತ್ತಲಿನ ಮಸೀದಿಯಲ್ಲಿ ಮೌಲ್ವಿಗಳು ಮೈಕ್‌ನಲ್ಲಿ ಜೋರಾಗಿ ಅಜಾನ್ ಮಾಡುವುದರಿಂದ ನಿದ್ದೆಗೆ ತೊಂದರೆಯಾಗುತ್ತಿದೆ.  ಕಷ್ಟಪಟ್ಟು ಪ್ರಯತ್ನಿಸಿದ ನಂತರವೂ ನಿದ್ದೆ ಮಾಡಲಾಗುವುದಿಲ್ಲ. ಇದು ದಿನವಿಡೀ ತಲೆನೋವಿಗೆ ಕಾರಣವಾಗುತ್ತದೆ. ಇದರಿಂದ ಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಸಿವಿಲ್ ಲೈನ್ಸ್‌ನಲ್ಲಿರುವ ಉಪಕುಲಪತಿ ನಿವಾಸದಿಂದ ಸುಮಾರು 400 ಮೀ ದೂರದಲ್ಲಿರುವ ಮಸೀದಿಯನ್ನು ಲಾಲ್ ಮಸೀದಿ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಬಿಎಸ್‌ಪಿ ಶಾಸಕಿಯ ಪತಿಯನ್ನು ಹುಡುಕಿಕೊಟ್ಟವರಿಗೆ 30 ಸಾವಿರ ಬಹುಮಾನ!

’ನಾನು ಯಾವುದೇ ಜಾತಿ ಅಥವಾ ಧರ್ಮಕ್ಕೆ ವಿರೋಧಿಯಲ್ಲ, ಅವರು ಮೈಕ್ ಇಲ್ಲದೆ ಅಜಾನ್ ಮಾಡಬಹುದು, ಇದರಿಂದ ಇತರರಿಗೆ ತೊಂದರೆಯಾಗುವುದಿಲ್ಲ. ಈದ್‌ಗೆ ಮುಂಚೆಯೇ ಅವರು ಸೆಹರಿಯನ್ನು ಮೈಕ್‌ನಲ್ಲಿ ಬೆಳಿಗ್ಗೆ 4 ಗಂಟೆಗೆ ಶುರುಮಾಡುತ್ತಾರೆ. ಇದರಿಂದ ಇತರ ಜನರಿಗೆ ತೊಂದರೆಯಾಗುತ್ತದೆ ಎಂದು ಅಲಹಾಬಾದ್ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ತಮ್ಮ ಪತ್ರದಲ್ಲಿ ಸೇರಿಸಿದ್ದಾರೆ.

ಈ ಪತ್ರವನ್ನು ಪ್ರಯಾಗರಾಜ್ (ಶ್ರೇಣಿ) ಐ.ಜಿ.ಕವೀಂದ್ರ ಪ್ರತಾಪ್ ಸಿಂಗ್ ಮತ್ತು ಎಸ್‌ಎಸ್‌ಪಿ ಸರ್ವಶ್ರೇಶ್ ತ್ರಿಪಾಠಿ ಮತ್ತು ಪ್ರಯಾಗರಾಜ್ ವಿಭಾಗೀಯ ಆಯುಕ್ತ ಸಂಜಯ್ ಗೋಯೆಲ್ ಅವರಿಗೂ ಕಳುಹಿಸಲಾಗಿದೆ.

’ಪತ್ರವನ್ನು ಸ್ವೀಕರಿಸಲಾಗಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ ಎಂದು ಡಿಎಂ ಗೋಸ್ವಾಮಿ ಅವರನ್ನು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

ಇದನ್ನೂ ಓದಿ:  ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ

ಅಲಹಾಬಾದ್ ಉಪ ಕುಲಪತಿ ಪತ್ರಕ್ಕೆ ಪ್ರತಿಕ್ರಿಯಿಸಿರುವ ಲಕ್ನೋ ಮೂಲದ ಪ್ರಮುಖ ಸುನ್ನಿ ಧರ್ಮಗುರು ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಾಲಿ, ’ಅಲಹಾಬಾದ್ ವಿಶ್ವವಿದ್ಯಾಲಯದ ವಿಸಿ ಬರೆದ ಪತ್ರದಲ್ಲಿ ಅಜಾನ್ ಗಾಗಿ ಧ್ವನಿವರ್ಧಕವನ್ನು ಬಳಸುವುದನ್ನು ನಿರ್ಬಂಧಿಸುವ ಬಗ್ಗೆ ಮನವಿ ಮಾಡಿದೆ. ನಾವು ಅದನ್ನು ವಿರೋಧಿಸುತ್ತೇವೆ. ನಮ್ಮ ದೇಶವು ಗಂಗಾ-ಜಮುನಾ ತಹಜೀಬ್‌ಗೆ ಹೆಸರುವಾಸಿಯಾಗಿದೆ ಎಂದು ವಿಸಿ ತಿಳಿದಿರಬೇಕು’ ಎಂದಿದ್ದಾರೆ.

’ದೇಶದ ಜನರು ಇತರ ಧರ್ಮಗಳನ್ನು ಗೌರವಿಸುತ್ತಾರೆ ಮತ್ತು ಮಸೀದಿಗಳಿಂದ ಅಜಾನ್ ಶಬ್ದ ಮತ್ತು ದೇವಾಲಯಗಳಿಂದ ಭಜನೆ ಮತ್ತು ಕೀರ್ತನೆ ಸದಾ ಬೀಸುವ ಗಾಳಿಯಲ್ಲಿರುತ್ತದೆ. ಇದರಿಂದಾಗಿ ಯಾರೊಬ್ಬರ ನಿದ್ರೆಗೆ ತೊಂದರೆಯಾಗಿಲ್ಲ. ಆದ್ದರಿಂದ, ಈ ರೀತಿಯ ವಿಷಯಗಳನ್ನು ಹೇಳುವುದು ಅರ್ಥಹೀನ ಮತ್ತು ಮೊದಲಿನಿಂದಲೂ ಗೌರವಾನ್ವಿತ ಹೈಕೋರ್ಟ್‌ನ ಆದೇಶವನ್ನು ಮಸೀದಿಗಳಲ್ಲಿ ಅನುಸರಿಸಲಾಗುತ್ತಿದೆ’ ಎಂದಿದ್ದಾರೆ.

’ಪ್ರತಿಯೊಬ್ಬರ ಧರ್ಮವನ್ನು ಗೌರವಿಸುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಮತ್ತು ಅನಗತ್ಯ ಸಮಸ್ಯೆಗಳೊಂದಿಗೆ ಜನರನ್ನು ಗೊಂದಲಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.

ಪತ್ರ ಬರೆದಿರುವ ಅಲಹಾಬಾದ್ ಉಪ ಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ವೈಯಕ್ತಿಕ ಕಾರಣಗಳಿಗಾಗಿ ಒಂದು ವಾರ ರಜೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೂರು ಕೋಟಿ ಪಡಿತರ ಚೀಟಿ ರದ್ದು: ಗಂಭೀರ ವಿಷಯ ಎಂದು ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಡವನ ಗುಡಿಯಿರಲಿ,ಮಸೀದಿ ಇರಲಿ ,ಇವೆರಡರಿಂದಾಗುತ್ತಿರುವ ಗದ್ದಲದ ಕಿರಿಕಿರಿ ಕೊನೆಯಾಗಲಿ.

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...