Homeಮುಖಪುಟ’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

- Advertisement -
- Advertisement -

ಅಲಹಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ಅವರು ಪ್ರಯಾಗರಾಜ್‌ನ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಹತ್ತಿರದ ಮಸೀದಿಯಿಂದ ಕೇಳಿ ಬರುವ ಅಜಾನ್‌ನಿಂದಾಗಿ ನಿದ್ರಾಭಂಗವಾಗುತ್ತಿದೆ. ಅದರಿಂದ ದಿನವಿಡೀ ತಲೆನೋವು ಉಂಟು ಮಾಡುತ್ತದೆ. ಇದರಿಂದ ಕೆಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಮಾರ್ಚ್ 3 ರಂದು ಪ್ರಯಾಗರಾಜ್ ಡಿ.ಎಂ. ಭಾನು ಚಂದ್ರ ಗೋಸ್ವಾಮಿ ಅವರಿಗೆ ಬರೆದ ಪತ್ರದಲ್ಲಿ, ಸಿವಿಲ್ ಲೈಲ್ಸ್‌ನಲ್ಲಿನ ಶಬ್ದ ಮಾಲಿನ್ಯದ ಬಗ್ಗೆ ಬರೆದಿದ್ದಾರೆ. ಪ್ರತಿದಿನ ಬೆಳಿಗ್ಗೆ 5.30 ರ ಸುಮಾರಿಗೆ ನನ್ನ ನಿದ್ರೆಗೆ ತೊಂದರೆಯಾಗುತ್ತದೆ ಎಂದು ನಿಮ್ಮ ಗಮನಕ್ಕೆ ತರಬೇಕು. ಸುತ್ತಮುತ್ತಲಿನ ಮಸೀದಿಯಲ್ಲಿ ಮೌಲ್ವಿಗಳು ಮೈಕ್‌ನಲ್ಲಿ ಜೋರಾಗಿ ಅಜಾನ್ ಮಾಡುವುದರಿಂದ ನಿದ್ದೆಗೆ ತೊಂದರೆಯಾಗುತ್ತಿದೆ.  ಕಷ್ಟಪಟ್ಟು ಪ್ರಯತ್ನಿಸಿದ ನಂತರವೂ ನಿದ್ದೆ ಮಾಡಲಾಗುವುದಿಲ್ಲ. ಇದು ದಿನವಿಡೀ ತಲೆನೋವಿಗೆ ಕಾರಣವಾಗುತ್ತದೆ. ಇದರಿಂದ ಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಸಿವಿಲ್ ಲೈನ್ಸ್‌ನಲ್ಲಿರುವ ಉಪಕುಲಪತಿ ನಿವಾಸದಿಂದ ಸುಮಾರು 400 ಮೀ ದೂರದಲ್ಲಿರುವ ಮಸೀದಿಯನ್ನು ಲಾಲ್ ಮಸೀದಿ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಬಿಎಸ್‌ಪಿ ಶಾಸಕಿಯ ಪತಿಯನ್ನು ಹುಡುಕಿಕೊಟ್ಟವರಿಗೆ 30 ಸಾವಿರ ಬಹುಮಾನ!

’ನಾನು ಯಾವುದೇ ಜಾತಿ ಅಥವಾ ಧರ್ಮಕ್ಕೆ ವಿರೋಧಿಯಲ್ಲ, ಅವರು ಮೈಕ್ ಇಲ್ಲದೆ ಅಜಾನ್ ಮಾಡಬಹುದು, ಇದರಿಂದ ಇತರರಿಗೆ ತೊಂದರೆಯಾಗುವುದಿಲ್ಲ. ಈದ್‌ಗೆ ಮುಂಚೆಯೇ ಅವರು ಸೆಹರಿಯನ್ನು ಮೈಕ್‌ನಲ್ಲಿ ಬೆಳಿಗ್ಗೆ 4 ಗಂಟೆಗೆ ಶುರುಮಾಡುತ್ತಾರೆ. ಇದರಿಂದ ಇತರ ಜನರಿಗೆ ತೊಂದರೆಯಾಗುತ್ತದೆ ಎಂದು ಅಲಹಾಬಾದ್ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ತಮ್ಮ ಪತ್ರದಲ್ಲಿ ಸೇರಿಸಿದ್ದಾರೆ.

ಈ ಪತ್ರವನ್ನು ಪ್ರಯಾಗರಾಜ್ (ಶ್ರೇಣಿ) ಐ.ಜಿ.ಕವೀಂದ್ರ ಪ್ರತಾಪ್ ಸಿಂಗ್ ಮತ್ತು ಎಸ್‌ಎಸ್‌ಪಿ ಸರ್ವಶ್ರೇಶ್ ತ್ರಿಪಾಠಿ ಮತ್ತು ಪ್ರಯಾಗರಾಜ್ ವಿಭಾಗೀಯ ಆಯುಕ್ತ ಸಂಜಯ್ ಗೋಯೆಲ್ ಅವರಿಗೂ ಕಳುಹಿಸಲಾಗಿದೆ.

’ಪತ್ರವನ್ನು ಸ್ವೀಕರಿಸಲಾಗಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ ಎಂದು ಡಿಎಂ ಗೋಸ್ವಾಮಿ ಅವರನ್ನು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

ಇದನ್ನೂ ಓದಿ:  ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ

ಅಲಹಾಬಾದ್ ಉಪ ಕುಲಪತಿ ಪತ್ರಕ್ಕೆ ಪ್ರತಿಕ್ರಿಯಿಸಿರುವ ಲಕ್ನೋ ಮೂಲದ ಪ್ರಮುಖ ಸುನ್ನಿ ಧರ್ಮಗುರು ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಾಲಿ, ’ಅಲಹಾಬಾದ್ ವಿಶ್ವವಿದ್ಯಾಲಯದ ವಿಸಿ ಬರೆದ ಪತ್ರದಲ್ಲಿ ಅಜಾನ್ ಗಾಗಿ ಧ್ವನಿವರ್ಧಕವನ್ನು ಬಳಸುವುದನ್ನು ನಿರ್ಬಂಧಿಸುವ ಬಗ್ಗೆ ಮನವಿ ಮಾಡಿದೆ. ನಾವು ಅದನ್ನು ವಿರೋಧಿಸುತ್ತೇವೆ. ನಮ್ಮ ದೇಶವು ಗಂಗಾ-ಜಮುನಾ ತಹಜೀಬ್‌ಗೆ ಹೆಸರುವಾಸಿಯಾಗಿದೆ ಎಂದು ವಿಸಿ ತಿಳಿದಿರಬೇಕು’ ಎಂದಿದ್ದಾರೆ.

’ದೇಶದ ಜನರು ಇತರ ಧರ್ಮಗಳನ್ನು ಗೌರವಿಸುತ್ತಾರೆ ಮತ್ತು ಮಸೀದಿಗಳಿಂದ ಅಜಾನ್ ಶಬ್ದ ಮತ್ತು ದೇವಾಲಯಗಳಿಂದ ಭಜನೆ ಮತ್ತು ಕೀರ್ತನೆ ಸದಾ ಬೀಸುವ ಗಾಳಿಯಲ್ಲಿರುತ್ತದೆ. ಇದರಿಂದಾಗಿ ಯಾರೊಬ್ಬರ ನಿದ್ರೆಗೆ ತೊಂದರೆಯಾಗಿಲ್ಲ. ಆದ್ದರಿಂದ, ಈ ರೀತಿಯ ವಿಷಯಗಳನ್ನು ಹೇಳುವುದು ಅರ್ಥಹೀನ ಮತ್ತು ಮೊದಲಿನಿಂದಲೂ ಗೌರವಾನ್ವಿತ ಹೈಕೋರ್ಟ್‌ನ ಆದೇಶವನ್ನು ಮಸೀದಿಗಳಲ್ಲಿ ಅನುಸರಿಸಲಾಗುತ್ತಿದೆ’ ಎಂದಿದ್ದಾರೆ.

’ಪ್ರತಿಯೊಬ್ಬರ ಧರ್ಮವನ್ನು ಗೌರವಿಸುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಮತ್ತು ಅನಗತ್ಯ ಸಮಸ್ಯೆಗಳೊಂದಿಗೆ ಜನರನ್ನು ಗೊಂದಲಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.

ಪತ್ರ ಬರೆದಿರುವ ಅಲಹಾಬಾದ್ ಉಪ ಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ವೈಯಕ್ತಿಕ ಕಾರಣಗಳಿಗಾಗಿ ಒಂದು ವಾರ ರಜೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೂರು ಕೋಟಿ ಪಡಿತರ ಚೀಟಿ ರದ್ದು: ಗಂಭೀರ ವಿಷಯ ಎಂದು ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಡವನ ಗುಡಿಯಿರಲಿ,ಮಸೀದಿ ಇರಲಿ ,ಇವೆರಡರಿಂದಾಗುತ್ತಿರುವ ಗದ್ದಲದ ಕಿರಿಕಿರಿ ಕೊನೆಯಾಗಲಿ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...