Homeಮುಖಪುಟ’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

’ಮಸೀದಿ ಅಜಾನ್‌ನಿಂದ ನಿದ್ರಾಭಂಗ, ತಲೆನೋವು’: ಅಲಹಾಬಾದ್ ವಿವಿ ಉಪಕುಲಪತಿ ದೂರು!

- Advertisement -
- Advertisement -

ಅಲಹಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ಅವರು ಪ್ರಯಾಗರಾಜ್‌ನ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಹತ್ತಿರದ ಮಸೀದಿಯಿಂದ ಕೇಳಿ ಬರುವ ಅಜಾನ್‌ನಿಂದಾಗಿ ನಿದ್ರಾಭಂಗವಾಗುತ್ತಿದೆ. ಅದರಿಂದ ದಿನವಿಡೀ ತಲೆನೋವು ಉಂಟು ಮಾಡುತ್ತದೆ. ಇದರಿಂದ ಕೆಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಮಾರ್ಚ್ 3 ರಂದು ಪ್ರಯಾಗರಾಜ್ ಡಿ.ಎಂ. ಭಾನು ಚಂದ್ರ ಗೋಸ್ವಾಮಿ ಅವರಿಗೆ ಬರೆದ ಪತ್ರದಲ್ಲಿ, ಸಿವಿಲ್ ಲೈಲ್ಸ್‌ನಲ್ಲಿನ ಶಬ್ದ ಮಾಲಿನ್ಯದ ಬಗ್ಗೆ ಬರೆದಿದ್ದಾರೆ. ಪ್ರತಿದಿನ ಬೆಳಿಗ್ಗೆ 5.30 ರ ಸುಮಾರಿಗೆ ನನ್ನ ನಿದ್ರೆಗೆ ತೊಂದರೆಯಾಗುತ್ತದೆ ಎಂದು ನಿಮ್ಮ ಗಮನಕ್ಕೆ ತರಬೇಕು. ಸುತ್ತಮುತ್ತಲಿನ ಮಸೀದಿಯಲ್ಲಿ ಮೌಲ್ವಿಗಳು ಮೈಕ್‌ನಲ್ಲಿ ಜೋರಾಗಿ ಅಜಾನ್ ಮಾಡುವುದರಿಂದ ನಿದ್ದೆಗೆ ತೊಂದರೆಯಾಗುತ್ತಿದೆ.  ಕಷ್ಟಪಟ್ಟು ಪ್ರಯತ್ನಿಸಿದ ನಂತರವೂ ನಿದ್ದೆ ಮಾಡಲಾಗುವುದಿಲ್ಲ. ಇದು ದಿನವಿಡೀ ತಲೆನೋವಿಗೆ ಕಾರಣವಾಗುತ್ತದೆ. ಇದರಿಂದ ಲಸದ ಸಮಯದಲ್ಲಿ ಕಷ್ಟವಾಗುತ್ತದೆ ಎಂದು ದೂರಿದ್ದಾರೆ.

ಸಿವಿಲ್ ಲೈನ್ಸ್‌ನಲ್ಲಿರುವ ಉಪಕುಲಪತಿ ನಿವಾಸದಿಂದ ಸುಮಾರು 400 ಮೀ ದೂರದಲ್ಲಿರುವ ಮಸೀದಿಯನ್ನು ಲಾಲ್ ಮಸೀದಿ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ಬಿಎಸ್‌ಪಿ ಶಾಸಕಿಯ ಪತಿಯನ್ನು ಹುಡುಕಿಕೊಟ್ಟವರಿಗೆ 30 ಸಾವಿರ ಬಹುಮಾನ!

’ನಾನು ಯಾವುದೇ ಜಾತಿ ಅಥವಾ ಧರ್ಮಕ್ಕೆ ವಿರೋಧಿಯಲ್ಲ, ಅವರು ಮೈಕ್ ಇಲ್ಲದೆ ಅಜಾನ್ ಮಾಡಬಹುದು, ಇದರಿಂದ ಇತರರಿಗೆ ತೊಂದರೆಯಾಗುವುದಿಲ್ಲ. ಈದ್‌ಗೆ ಮುಂಚೆಯೇ ಅವರು ಸೆಹರಿಯನ್ನು ಮೈಕ್‌ನಲ್ಲಿ ಬೆಳಿಗ್ಗೆ 4 ಗಂಟೆಗೆ ಶುರುಮಾಡುತ್ತಾರೆ. ಇದರಿಂದ ಇತರ ಜನರಿಗೆ ತೊಂದರೆಯಾಗುತ್ತದೆ ಎಂದು ಅಲಹಾಬಾದ್ ಉಪಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ತಮ್ಮ ಪತ್ರದಲ್ಲಿ ಸೇರಿಸಿದ್ದಾರೆ.

ಈ ಪತ್ರವನ್ನು ಪ್ರಯಾಗರಾಜ್ (ಶ್ರೇಣಿ) ಐ.ಜಿ.ಕವೀಂದ್ರ ಪ್ರತಾಪ್ ಸಿಂಗ್ ಮತ್ತು ಎಸ್‌ಎಸ್‌ಪಿ ಸರ್ವಶ್ರೇಶ್ ತ್ರಿಪಾಠಿ ಮತ್ತು ಪ್ರಯಾಗರಾಜ್ ವಿಭಾಗೀಯ ಆಯುಕ್ತ ಸಂಜಯ್ ಗೋಯೆಲ್ ಅವರಿಗೂ ಕಳುಹಿಸಲಾಗಿದೆ.

’ಪತ್ರವನ್ನು ಸ್ವೀಕರಿಸಲಾಗಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ ಎಂದು ಡಿಎಂ ಗೋಸ್ವಾಮಿ ಅವರನ್ನು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಉಲ್ಲೇಖಿಸಿದೆ.

ಇದನ್ನೂ ಓದಿ:  ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ

ಅಲಹಾಬಾದ್ ಉಪ ಕುಲಪತಿ ಪತ್ರಕ್ಕೆ ಪ್ರತಿಕ್ರಿಯಿಸಿರುವ ಲಕ್ನೋ ಮೂಲದ ಪ್ರಮುಖ ಸುನ್ನಿ ಧರ್ಮಗುರು ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಾಲಿ, ’ಅಲಹಾಬಾದ್ ವಿಶ್ವವಿದ್ಯಾಲಯದ ವಿಸಿ ಬರೆದ ಪತ್ರದಲ್ಲಿ ಅಜಾನ್ ಗಾಗಿ ಧ್ವನಿವರ್ಧಕವನ್ನು ಬಳಸುವುದನ್ನು ನಿರ್ಬಂಧಿಸುವ ಬಗ್ಗೆ ಮನವಿ ಮಾಡಿದೆ. ನಾವು ಅದನ್ನು ವಿರೋಧಿಸುತ್ತೇವೆ. ನಮ್ಮ ದೇಶವು ಗಂಗಾ-ಜಮುನಾ ತಹಜೀಬ್‌ಗೆ ಹೆಸರುವಾಸಿಯಾಗಿದೆ ಎಂದು ವಿಸಿ ತಿಳಿದಿರಬೇಕು’ ಎಂದಿದ್ದಾರೆ.

’ದೇಶದ ಜನರು ಇತರ ಧರ್ಮಗಳನ್ನು ಗೌರವಿಸುತ್ತಾರೆ ಮತ್ತು ಮಸೀದಿಗಳಿಂದ ಅಜಾನ್ ಶಬ್ದ ಮತ್ತು ದೇವಾಲಯಗಳಿಂದ ಭಜನೆ ಮತ್ತು ಕೀರ್ತನೆ ಸದಾ ಬೀಸುವ ಗಾಳಿಯಲ್ಲಿರುತ್ತದೆ. ಇದರಿಂದಾಗಿ ಯಾರೊಬ್ಬರ ನಿದ್ರೆಗೆ ತೊಂದರೆಯಾಗಿಲ್ಲ. ಆದ್ದರಿಂದ, ಈ ರೀತಿಯ ವಿಷಯಗಳನ್ನು ಹೇಳುವುದು ಅರ್ಥಹೀನ ಮತ್ತು ಮೊದಲಿನಿಂದಲೂ ಗೌರವಾನ್ವಿತ ಹೈಕೋರ್ಟ್‌ನ ಆದೇಶವನ್ನು ಮಸೀದಿಗಳಲ್ಲಿ ಅನುಸರಿಸಲಾಗುತ್ತಿದೆ’ ಎಂದಿದ್ದಾರೆ.

’ಪ್ರತಿಯೊಬ್ಬರ ಧರ್ಮವನ್ನು ಗೌರವಿಸುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಮತ್ತು ಅನಗತ್ಯ ಸಮಸ್ಯೆಗಳೊಂದಿಗೆ ಜನರನ್ನು ಗೊಂದಲಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.

ಪತ್ರ ಬರೆದಿರುವ ಅಲಹಾಬಾದ್ ಉಪ ಕುಲಪತಿ ಪ್ರೊ.ಸಂಗಿತಾ ಶ್ರೀವಾಸ್ತವ ವೈಯಕ್ತಿಕ ಕಾರಣಗಳಿಗಾಗಿ ಒಂದು ವಾರ ರಜೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೂರು ಕೋಟಿ ಪಡಿತರ ಚೀಟಿ ರದ್ದು: ಗಂಭೀರ ವಿಷಯ ಎಂದು ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಡವನ ಗುಡಿಯಿರಲಿ,ಮಸೀದಿ ಇರಲಿ ,ಇವೆರಡರಿಂದಾಗುತ್ತಿರುವ ಗದ್ದಲದ ಕಿರಿಕಿರಿ ಕೊನೆಯಾಗಲಿ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...