Homeಮುಖಪುಟ"ಡಾ.ಸಿಂಗ್‌ ಇಸ್‌ ಎಕಾನಮಿ ಕಿಂಗ್‌" DrSinghEconomyKing ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

“ಡಾ.ಸಿಂಗ್‌ ಇಸ್‌ ಎಕಾನಮಿ ಕಿಂಗ್‌” DrSinghEconomyKing ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ಕುಸಿಯುತ್ತಿರುವ ಆರ್ಥಿಕತೆಯ ಸಂದರ್ಭದಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರ ಸಲಹೆಗಳು ಅತ್ಯಮೂಲ್ಯ ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿವೆ. ವಿತ್ತಸಚಿವೆ ನಿರ್ಮಲಾ ಸೀತಾರಾಮನ್‌ ಪಿಎಂಸಿ ಬ್ಯಾಂಕ್‌ ಅವ್ಯವಹಾರಕ್ಕೆ ಡಾ. ಮನಮೋಹನ್‌ ಸಿಂಗ್‌ ಕಾರಣವೆಂದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು ಇಂದು ಡಾ.ಸಿಂಗ್‌ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ್ದಾರೆ. ಆನಂತರ ಟ್ವಿಟ್ಟರ್‌ನಲ್ಲಿ “ಡಾ.ಸಿಂಗ್‌ ಇಸ್‌ ಎಕಾನಮಿ ಕಿಂಗ್‌” DrSinghEconomyKing ಎಂಬ ಹ್ಯಾಷ್‌ ಟ್ಯಾಗ್‌ ಟ್ರೆಂಡ್‌ ಆಗಿದೆ.

ಡಾ. ಮನಮೋಹನ್‌ ಸಿಂಗ್‌ರವರ ಯುಪಿಎ ಸರ್ಕಾರದ ಅಡಿಯಲ್ಲಿ ಸುಮಾರು 28ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ.

ಡಾ. ಮನಮೋಹನ್‌ ಸಿಂಗ್‌ ಆಡಳಿತದಲ್ಲಿದ್ದಾಗ ಜಾಗಿತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತ 55 ನೇ ಸ್ಥಾನದಲ್ಲಿದ್ದರೆ ಇಂದು ಮೋದಿ ಆಡಳಿತದಲ್ಲಿ ಹೋಲಿಕೆ ಮಾಡಲಾಗದ ರೀತಿ ಭಾರತ 102 ನೇ ಸ್ಥಾನಕ್ಕೆ ಕುಸಿದಿದೆ.

ಮೋದಿ ಸಂಪೂರ್ಣ ವೈಫಲ್ಯ ಕಂಡಿದ್ದು ಡಾ. ಮನಮೋಹನ್‌ ಸಿಂಗ್‌ ನಿರ್ವಿವಾದವಾಗಿ ಯಶಸ್ಸು ಸಾಧಿಸಿದ್ದಾರೆ ಎಂದು ಸಂಘಮಿತ್ರ ಎಂಬುವವರು ಟ್ವೀಟ್ ಮಾಡಿದ್ದಾರೆ.

ಇಂದಿನ ಸಮಾರಂಭದಲ್ಲಿ “ಪ್ರೇಕ್ಷಕರೊಬ್ಬರು ಡಾ. ಮನಮೋಹನ್‌ ಸಿಂಗ್ ಅವರಿಗೆ “ನೀವು ದೇಶವು ಹೊಂದಿದ್ದ ಅತ್ಯುತ್ತಮ ಅರ್ಥಶಾಸ್ತ್ರಜ್ಞರು” ಎಂದು ಹೇಳಿದರು ಮತ್ತು ಜನರ ಸಂಕಷ್ಟವನ್ನು ನಿವಾರಿಸಲು ಆರ್‌ಬಿಐ ಗವರ್ನರ್, ಮತ್ತು ಭಾರತ ಸರ್ಕಾರದೊಂದಿಗೆ ಮಾತನಾಡಿ ಎಂದು ಸಿಂಗ್‌ ಬಳಿ ವಿನಂತಿಸಿದರು. ಎಂದು ರುಚಿರ ಚರ್ತುವೇದಿಯವರು ಟ್ವೀಟ್‌ ಮಾಡಿದ್ದಾರೆ.

“ರಕ್ಷಣಾ ಮಂತ್ರಿ ಮತ್ತು ಭಾರತದ ಹಣಕಾಸು ಮಂತ್ರಿಯಾಗಿ ನಿರ್ಮಲಾ ಸೀತಾರಾಮನ್‌ರವರ ಅಸಾಧಾರಣ ಕರುಣಾಜನಕ ಕಾರ್ಯಕ್ಷಮತೆಯು, ಭಾರತ ಮತ್ತು ಭಾರತದ ಜನರ ಮೇಲೆ ಬಹಳ ಕೆಟ್ಟದಾಗಿ ಪರಿಣಾಮ ಬೀರಿದೆ. ಹಾಗಾಗಿ ದಯವಿಟ್ಟು ಅವರನ್ನು ಬಿಜೆಪಿ ಪಕ್ಷದ ಅಧ್ಯಕ್ಷ ಹುದ್ದೆಗೆ ನೇಮಿಸಿ ಮತ್ತು ಭಾರತವನ್ನು ಉಳಿಸಿ ಎಂದು ನಾನು ಶಿಫಾರಸು ಮಾಡುತ್ತೇನೆ” ಎಂದು ಸ್ಪರ್ತನ್‌ ಎಂಬುವವರು ಟ್ವೀಟ್ ಮಾಡಿ ಚಾಟಿಯೇಟು ನೀಡಿದ್ದಾರೆ.

ಸರ್ಕಾರದಿಂದ ಯಾವುದೇ ಭರವಸೆ ಸಿಗದ ನಂತರ, ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್ ಖಾತೆದಾರರು ಈಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮನೆ ಬಾಗಿಲು ಬಡಿದಿದ್ದಾರೆ. ಮನಮೋಹನ್‌ ಸಿಂಗ್‌ರವರು ಮಧ್ಯಪ್ರವೇಶಿಸಿ ಅವರಿಗೆ ಸಹಾಯ ಮಾಡಬೇಕೆಂದು ಅವರು ಬಯಸುತ್ತಿದ್ದಾರೆ ಎಂದು ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...