Homeಮುಖಪುಟ"ಡಾ.ಸಿಂಗ್‌ ಇಸ್‌ ಎಕಾನಮಿ ಕಿಂಗ್‌" DrSinghEconomyKing ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

“ಡಾ.ಸಿಂಗ್‌ ಇಸ್‌ ಎಕಾನಮಿ ಕಿಂಗ್‌” DrSinghEconomyKing ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ಕುಸಿಯುತ್ತಿರುವ ಆರ್ಥಿಕತೆಯ ಸಂದರ್ಭದಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರ ಸಲಹೆಗಳು ಅತ್ಯಮೂಲ್ಯ ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿವೆ. ವಿತ್ತಸಚಿವೆ ನಿರ್ಮಲಾ ಸೀತಾರಾಮನ್‌ ಪಿಎಂಸಿ ಬ್ಯಾಂಕ್‌ ಅವ್ಯವಹಾರಕ್ಕೆ ಡಾ. ಮನಮೋಹನ್‌ ಸಿಂಗ್‌ ಕಾರಣವೆಂದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು ಇಂದು ಡಾ.ಸಿಂಗ್‌ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ್ದಾರೆ. ಆನಂತರ ಟ್ವಿಟ್ಟರ್‌ನಲ್ಲಿ “ಡಾ.ಸಿಂಗ್‌ ಇಸ್‌ ಎಕಾನಮಿ ಕಿಂಗ್‌” DrSinghEconomyKing ಎಂಬ ಹ್ಯಾಷ್‌ ಟ್ಯಾಗ್‌ ಟ್ರೆಂಡ್‌ ಆಗಿದೆ.

ಡಾ. ಮನಮೋಹನ್‌ ಸಿಂಗ್‌ರವರ ಯುಪಿಎ ಸರ್ಕಾರದ ಅಡಿಯಲ್ಲಿ ಸುಮಾರು 28ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ.

ಡಾ. ಮನಮೋಹನ್‌ ಸಿಂಗ್‌ ಆಡಳಿತದಲ್ಲಿದ್ದಾಗ ಜಾಗಿತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತ 55 ನೇ ಸ್ಥಾನದಲ್ಲಿದ್ದರೆ ಇಂದು ಮೋದಿ ಆಡಳಿತದಲ್ಲಿ ಹೋಲಿಕೆ ಮಾಡಲಾಗದ ರೀತಿ ಭಾರತ 102 ನೇ ಸ್ಥಾನಕ್ಕೆ ಕುಸಿದಿದೆ.

ಮೋದಿ ಸಂಪೂರ್ಣ ವೈಫಲ್ಯ ಕಂಡಿದ್ದು ಡಾ. ಮನಮೋಹನ್‌ ಸಿಂಗ್‌ ನಿರ್ವಿವಾದವಾಗಿ ಯಶಸ್ಸು ಸಾಧಿಸಿದ್ದಾರೆ ಎಂದು ಸಂಘಮಿತ್ರ ಎಂಬುವವರು ಟ್ವೀಟ್ ಮಾಡಿದ್ದಾರೆ.

ಇಂದಿನ ಸಮಾರಂಭದಲ್ಲಿ “ಪ್ರೇಕ್ಷಕರೊಬ್ಬರು ಡಾ. ಮನಮೋಹನ್‌ ಸಿಂಗ್ ಅವರಿಗೆ “ನೀವು ದೇಶವು ಹೊಂದಿದ್ದ ಅತ್ಯುತ್ತಮ ಅರ್ಥಶಾಸ್ತ್ರಜ್ಞರು” ಎಂದು ಹೇಳಿದರು ಮತ್ತು ಜನರ ಸಂಕಷ್ಟವನ್ನು ನಿವಾರಿಸಲು ಆರ್‌ಬಿಐ ಗವರ್ನರ್, ಮತ್ತು ಭಾರತ ಸರ್ಕಾರದೊಂದಿಗೆ ಮಾತನಾಡಿ ಎಂದು ಸಿಂಗ್‌ ಬಳಿ ವಿನಂತಿಸಿದರು. ಎಂದು ರುಚಿರ ಚರ್ತುವೇದಿಯವರು ಟ್ವೀಟ್‌ ಮಾಡಿದ್ದಾರೆ.

“ರಕ್ಷಣಾ ಮಂತ್ರಿ ಮತ್ತು ಭಾರತದ ಹಣಕಾಸು ಮಂತ್ರಿಯಾಗಿ ನಿರ್ಮಲಾ ಸೀತಾರಾಮನ್‌ರವರ ಅಸಾಧಾರಣ ಕರುಣಾಜನಕ ಕಾರ್ಯಕ್ಷಮತೆಯು, ಭಾರತ ಮತ್ತು ಭಾರತದ ಜನರ ಮೇಲೆ ಬಹಳ ಕೆಟ್ಟದಾಗಿ ಪರಿಣಾಮ ಬೀರಿದೆ. ಹಾಗಾಗಿ ದಯವಿಟ್ಟು ಅವರನ್ನು ಬಿಜೆಪಿ ಪಕ್ಷದ ಅಧ್ಯಕ್ಷ ಹುದ್ದೆಗೆ ನೇಮಿಸಿ ಮತ್ತು ಭಾರತವನ್ನು ಉಳಿಸಿ ಎಂದು ನಾನು ಶಿಫಾರಸು ಮಾಡುತ್ತೇನೆ” ಎಂದು ಸ್ಪರ್ತನ್‌ ಎಂಬುವವರು ಟ್ವೀಟ್ ಮಾಡಿ ಚಾಟಿಯೇಟು ನೀಡಿದ್ದಾರೆ.

ಸರ್ಕಾರದಿಂದ ಯಾವುದೇ ಭರವಸೆ ಸಿಗದ ನಂತರ, ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್ ಖಾತೆದಾರರು ಈಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮನೆ ಬಾಗಿಲು ಬಡಿದಿದ್ದಾರೆ. ಮನಮೋಹನ್‌ ಸಿಂಗ್‌ರವರು ಮಧ್ಯಪ್ರವೇಶಿಸಿ ಅವರಿಗೆ ಸಹಾಯ ಮಾಡಬೇಕೆಂದು ಅವರು ಬಯಸುತ್ತಿದ್ದಾರೆ ಎಂದು ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...