Homeಕರ್ನಾಟಕಡ್ರಗ್ ಕೇಸ್: ದಿವಂಗತ ಮುತ್ತಪ್ಪ ರೈ ಮನೆ ಮೇಲೆ ಸಿಸಿಬಿ ದಾಳಿ

ಡ್ರಗ್ ಕೇಸ್: ದಿವಂಗತ ಮುತ್ತಪ್ಪ ರೈ ಮನೆ ಮೇಲೆ ಸಿಸಿಬಿ ದಾಳಿ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಡ್ರಗ್ಸ್‌ ಜಾಲದಲ್ಲಿನ ಆರೋಪಿಗಳು ತಲೆಮರೆಸಿಕೊಳ್ಳಲು ನೆರವು ನೀಡಿದ್ದರೆಂಬ ಸಂಶಯವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ಡ್ರಗ್ ಜಾಲದ ನಂಟು ಚಿತ್ರರಂಗ, ರಾಜಕೀಯ ರಂಗಗಳ ಜೊತೆಗೆ ಮಾಜಿ ಭೂಗತ ದೊರೆ ದಿವಂಗತ ಮುತ್ತಪ್ಪ ರೈ ಮನೆತನಕ ಬಂದು ನಿಂತಿದೆ. ಡ್ರಗ್ಸ್ ಜಾಲ ಪ್ರಕರಣದಲ್ಲಿ ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಅವರ ಹೆಸರು ಕೇಳಿಬಂದಿದ್ದು, ರೈ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸದಾಶಿವನಗರದ ಮನೆ ಮತ್ತು ರಾಮನಗರ ಬಿಡದಿಯ ಮುತ್ತಪ್ಪ ರೈ ಅವರ ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ. ರಿಕ್ಕಿ ರೈ ಅವರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಡ್ರಗ್ ಪ್ರಕರಣ ಸಂಬಂಧ ವಿಚಾರಣೆ ಎದುರಿಸಿದ್ದ ಕೆಲವರು ರಿಕ್ಕಿ ರೈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಸಿಸಿಬಿ ಪೊಲೀಸರ ತಂಡ, ಬಿಡದಿಯಲ್ಲಿರುವ ಮನೆ ಮೇಲೆ ದಾಳಿ ಮಾಡಿ ಶೋಧ ನಡೆಸುತ್ತಿದೆ.

ಇದನ್ನೂ ಓದಿ: ಡ್ರಗ್ಸ್‌ ಜಾಲ: ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್‌ಗೆ ನೋಟಿಸ್‌ ಜಾರಿ

ರಿಕ್ಕಿ ರೈ ಡ್ರಗ್ಸ್ ಪೆಡ್ಲರ್ಸ್‍ಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿ  ಸಿಸಿಬಿ ಅಧಿಕಾರಿಗಳಿಗೆ ದೊರೆತ ಹಿನ್ನಲೆಯಲ್ಲಿ ನ್ಯಾಯಾಲಯದ ಸರ್ಚ್ ವಾರಂಟ್‍ನೊಂದಿಗೆ ಎಸಿಬಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳು ಹಾಗೂ ತಲೆಮರೆಸಿಕೊಂಡಿರುವ ಆರೋಪಿಗಳ ಜೊತೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಒಡನಾಟವಿಟ್ಟುಕೊಂಡಿದ್ದರು. ಆರೋಪಿಗಳು ತಲೆಮರೆಸಿಕೊಳ್ಳಲು ರಿಕ್ಕಿ ರೈ ನೆರವು ನೀಡಿದ್ದರೆಂಬ ಸಂಶಯವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ರಿಕ್ಕಿ ರೈ ಆಶ್ರಯ ಕೊಟ್ಟಿರುವ ಮಾಹಿತಿ ಇತ್ತು. ಹೀಗಾಗಿ, ನ್ಯಾಯಾಲಯದ ಸರ್ಚ್ ವಾರಂಟ್ ಪಡೆದು ಮನೆ ಮೇಲೆ ದಾಳಿ ಮಾಡಲಾಗಿದೆ’ ಎಂದು ಸಿಸಿಬಿಯ ಜಂಟಿ ಆಯುಕ್ತ ಸಂದೀಪ್ ಪಾಟೀಲ ಹೇಳಿ‌ದ್ದಾರೆ.


ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...