Homeಮುಖಪುಟಡ್ರಗ್ ಕೇಸ್:‍ ನಟಿ ಶ್ರದ್ಧಾ‌ ಕಪೂರ್‌, ಸಾರಾ ಅಲಿ ಖಾನ್‌ಗೆ ಎನ್‌ಸಿ‌ಬಿ ಸಮನ್ಸ್ ಸಾಧ್ಯತೆ

ಡ್ರಗ್ ಕೇಸ್:‍ ನಟಿ ಶ್ರದ್ಧಾ‌ ಕಪೂರ್‌, ಸಾರಾ ಅಲಿ ಖಾನ್‌ಗೆ ಎನ್‌ಸಿ‌ಬಿ ಸಮನ್ಸ್ ಸಾಧ್ಯತೆ

ರಿಯಾ ಚಕ್ರವರ್ತಿಯ ಪ್ರಾಥಮಿಕ ತನಿಖೆಯ ಸಮಯದಲ್ಲಿ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಸೇರಿದಂತೆ ಇತರ ಕೆಲವು ನಟರ ಹೆಸರುಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಸಹಜ ಸಾವಿನ ತನಿಖೆ ಜೊತೆಗೆ ಡ್ರಗ್ಸ್ ಕೇಸ್ ಕೂಡ ಸೇರಿಕೊಂಡಿದ್ದು, ಈ ಸಂಬಂಧ ನಟಿ ಶ್ರದ್ಧಾ ಕಪೂರ್‌, ಸಾರಾ ಅಲಿ ಖಾನ್‌ರನ್ನು ಈ ವಾರ ವಿಚಾರಣೆಗೆ ಕರೆಯಬಹುದು ಎಂದು ಎನ್‌ಸಿಬಿ ಮೂಲಗಳು ತಿಳಿಸಿವೆ. ತನ್ನ ಗೆಳೆಯ ಸುಶಾಂತ್ ಸಿಂಗ್ ರಜಪೂತ್‌ಗೆ ಡ್ರಗ್ಸ್ ಒದಗಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟಿ ರಿಯಾ ಚಕ್ರವರ್ತಿಯನ್ನು ಪ್ರಶ್ನಿಸುವಾಗ ಅವರ ಇವರ ಹೆಸರುಗಳು ಕೇಳಿಬಂದಿವೆ ಎಂದು ವರದಿಯಾಗಿದೆ.

ನಟಿ ರಿಯಾ ಚಕ್ರವರ್ತಿಯ ಮೊಬೈಲ್ ಫೋನ್‌ನಿಂದ ಮರುಪಡೆಯಲಾದ ವಾಟ್ಸಾಪ್ ಸಂದೇಶದ ಆಧಾರದ ಮೇಲೆ ಫೆಡರಲ್ ಏಜೆನ್ಸಿ ಮೊದಲ ಪ್ರಕರಣ ನೋಂದಾಯಿಸಿತ್ತು. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಈ ನಟಿಯರಿಗೆ ಸಮನ್ಸ್ ನೀಡಬಹುದು ಎಂದು ಮೂಲಗಳು ತಿಳಿಸಿವೆ.

PC: Hindustan Times

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಇನ್ನು 59 ಗ್ರಾಂ ಗಾಂಜಾ ವಶಪಡಿಸಿಕೊಂಡ ಆಧಾರದ ಮೇಲೆ ಏಜೆನ್ಸಿ ಎರಡನೇ ಪ್ರಕರಣವನ್ನು ದಾಖಲಿಸಿದೆ. ಇದರಲ್ಲಿ ರಿಯಾ ಚಕ್ರವರ್ತಿ ಸೇರಿದಂತೆ 15ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ರಿಯಾ ಚಕ್ರವರ್ತಿಯಲ್ಲದೆ, ಈ ತಿಂಗಳ ಆರಂಭದಲ್ಲಿ ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ, ಸುಶಾಂತ್ ಸಿಂಗ್ ರಜಪೂತ್ ಅವರ ಇಬ್ಬರು ಉದ್ಯೋಗಿಗಳು ಮತ್ತು ಬಾಲಿವುಡ್ ಜೊತೆ ಸಂಬಂಧ ಹೊಂದಿರುವ ಡ್ರಗ್ಸ್ ಮಾರಾಟಗಾರರನ್ನು ಬಂಧಿಸಲಾಗಿದೆ. ರಿಯಾ ಚಕ್ರವರ್ತಿಗೆ ಸೆ.22ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಬೈಕುಲಾ ಜೈಲಿನಲ್ಲಿ ಇರಿಸಲಾಗಿದೆ.

“ರಿಯಾ ಚಕ್ರವರ್ತಿಯ ಮೊಬೈಲ್‌ನಿಂದ ಮರುಪಡೆಯಲಾದ ವಾಟ್ಸಾಪ್ ಸಂದೇಶಗಳ ಆಧಾರದ ಮೇಲೆ ನೋಂದಾಯಿಸಲಾದ ಮೊದಲ ಪ್ರಕರಣದ ಪ್ರಾಥಮಿಕ ತನಿಖೆಯ ಸಮಯದಲ್ಲಿ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಸೇರಿದಂತೆ ಇತರ ಕೆಲವು ನಟರ ಹೆಸರುಗಳು ಬಂದಿವೆ. ಇಬ್ಬರೂ ಈ ವಾರ ತನಿಖೆಗೆ ಬರಲು ಶೀಘ್ರದಲ್ಲೇ ಸಮನ್ಸ್ ನೀಡಲಾಗುವುದು  ಎಂದು ತನಿಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ನಟಿ ಶ್ರದ್ಧಾ ಕಪೂರ್,‌ ‍ಸುಶಾಂತ್‌ ಸಿಂಗ್ ರಜಪೂತ್ ಅವರ ಲೋನಾವ್ಲಾ ಫಾರ್ಮ್ ಹೌಸ್‌ನಲ್ಲಿ ನಡೆದ ಚಿಚ್ಚೋರೆ ಚಿತ್ರದ ಯಶಸ್ಸಿನ ಪಾಟಿಯಲ್ಲಿ ಭಾಗವಹಿಸಿದ್ದರು. ಪ್ರಕರಣದಲ್ಲಿ ನಟಿ ರಾಕುಲ್ ಪ್ರೀತ್ ಹೆಸರು ಕೂಡ ಕೇಳಿಬಂದಿತ್ತು.

PC: Hamara Photo

34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14 ರಂದು ಮುಂಬೈನ ತನ್ನ ಅಪಾರ್ಟ್ಮೆಂಟ್‌ನಲ್ಲಿ  ಶವವಾಗಿ ಪತ್ತೆಯಾಗಿದ್ದರು. ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯಗಳು ನಡೆಸುತ್ತಿವೆ. ಅಸಹಜ ಸಾವು ಪ್ರಕರಣಕ್ಕೆ ಡ್ರಗ್ಸ್ ಕೇಸ್ ಕೂಡ ಸೇರ್ಪಡೆಯಾಗಿದೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...