Homeಮುಖಪುಟಡ್ರಗ್ ಕೇಸ್:‍ ನಟಿ ಶ್ರದ್ಧಾ‌ ಕಪೂರ್‌, ಸಾರಾ ಅಲಿ ಖಾನ್‌ಗೆ ಎನ್‌ಸಿ‌ಬಿ ಸಮನ್ಸ್ ಸಾಧ್ಯತೆ

ಡ್ರಗ್ ಕೇಸ್:‍ ನಟಿ ಶ್ರದ್ಧಾ‌ ಕಪೂರ್‌, ಸಾರಾ ಅಲಿ ಖಾನ್‌ಗೆ ಎನ್‌ಸಿ‌ಬಿ ಸಮನ್ಸ್ ಸಾಧ್ಯತೆ

ರಿಯಾ ಚಕ್ರವರ್ತಿಯ ಪ್ರಾಥಮಿಕ ತನಿಖೆಯ ಸಮಯದಲ್ಲಿ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಸೇರಿದಂತೆ ಇತರ ಕೆಲವು ನಟರ ಹೆಸರುಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಸಹಜ ಸಾವಿನ ತನಿಖೆ ಜೊತೆಗೆ ಡ್ರಗ್ಸ್ ಕೇಸ್ ಕೂಡ ಸೇರಿಕೊಂಡಿದ್ದು, ಈ ಸಂಬಂಧ ನಟಿ ಶ್ರದ್ಧಾ ಕಪೂರ್‌, ಸಾರಾ ಅಲಿ ಖಾನ್‌ರನ್ನು ಈ ವಾರ ವಿಚಾರಣೆಗೆ ಕರೆಯಬಹುದು ಎಂದು ಎನ್‌ಸಿಬಿ ಮೂಲಗಳು ತಿಳಿಸಿವೆ. ತನ್ನ ಗೆಳೆಯ ಸುಶಾಂತ್ ಸಿಂಗ್ ರಜಪೂತ್‌ಗೆ ಡ್ರಗ್ಸ್ ಒದಗಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟಿ ರಿಯಾ ಚಕ್ರವರ್ತಿಯನ್ನು ಪ್ರಶ್ನಿಸುವಾಗ ಅವರ ಇವರ ಹೆಸರುಗಳು ಕೇಳಿಬಂದಿವೆ ಎಂದು ವರದಿಯಾಗಿದೆ.

ನಟಿ ರಿಯಾ ಚಕ್ರವರ್ತಿಯ ಮೊಬೈಲ್ ಫೋನ್‌ನಿಂದ ಮರುಪಡೆಯಲಾದ ವಾಟ್ಸಾಪ್ ಸಂದೇಶದ ಆಧಾರದ ಮೇಲೆ ಫೆಡರಲ್ ಏಜೆನ್ಸಿ ಮೊದಲ ಪ್ರಕರಣ ನೋಂದಾಯಿಸಿತ್ತು. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಈ ನಟಿಯರಿಗೆ ಸಮನ್ಸ್ ನೀಡಬಹುದು ಎಂದು ಮೂಲಗಳು ತಿಳಿಸಿವೆ.

PC: Hindustan Times

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಇನ್ನು 59 ಗ್ರಾಂ ಗಾಂಜಾ ವಶಪಡಿಸಿಕೊಂಡ ಆಧಾರದ ಮೇಲೆ ಏಜೆನ್ಸಿ ಎರಡನೇ ಪ್ರಕರಣವನ್ನು ದಾಖಲಿಸಿದೆ. ಇದರಲ್ಲಿ ರಿಯಾ ಚಕ್ರವರ್ತಿ ಸೇರಿದಂತೆ 15ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ರಿಯಾ ಚಕ್ರವರ್ತಿಯಲ್ಲದೆ, ಈ ತಿಂಗಳ ಆರಂಭದಲ್ಲಿ ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ, ಸುಶಾಂತ್ ಸಿಂಗ್ ರಜಪೂತ್ ಅವರ ಇಬ್ಬರು ಉದ್ಯೋಗಿಗಳು ಮತ್ತು ಬಾಲಿವುಡ್ ಜೊತೆ ಸಂಬಂಧ ಹೊಂದಿರುವ ಡ್ರಗ್ಸ್ ಮಾರಾಟಗಾರರನ್ನು ಬಂಧಿಸಲಾಗಿದೆ. ರಿಯಾ ಚಕ್ರವರ್ತಿಗೆ ಸೆ.22ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಬೈಕುಲಾ ಜೈಲಿನಲ್ಲಿ ಇರಿಸಲಾಗಿದೆ.

“ರಿಯಾ ಚಕ್ರವರ್ತಿಯ ಮೊಬೈಲ್‌ನಿಂದ ಮರುಪಡೆಯಲಾದ ವಾಟ್ಸಾಪ್ ಸಂದೇಶಗಳ ಆಧಾರದ ಮೇಲೆ ನೋಂದಾಯಿಸಲಾದ ಮೊದಲ ಪ್ರಕರಣದ ಪ್ರಾಥಮಿಕ ತನಿಖೆಯ ಸಮಯದಲ್ಲಿ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಸೇರಿದಂತೆ ಇತರ ಕೆಲವು ನಟರ ಹೆಸರುಗಳು ಬಂದಿವೆ. ಇಬ್ಬರೂ ಈ ವಾರ ತನಿಖೆಗೆ ಬರಲು ಶೀಘ್ರದಲ್ಲೇ ಸಮನ್ಸ್ ನೀಡಲಾಗುವುದು  ಎಂದು ತನಿಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ನಟಿ ಶ್ರದ್ಧಾ ಕಪೂರ್,‌ ‍ಸುಶಾಂತ್‌ ಸಿಂಗ್ ರಜಪೂತ್ ಅವರ ಲೋನಾವ್ಲಾ ಫಾರ್ಮ್ ಹೌಸ್‌ನಲ್ಲಿ ನಡೆದ ಚಿಚ್ಚೋರೆ ಚಿತ್ರದ ಯಶಸ್ಸಿನ ಪಾಟಿಯಲ್ಲಿ ಭಾಗವಹಿಸಿದ್ದರು. ಪ್ರಕರಣದಲ್ಲಿ ನಟಿ ರಾಕುಲ್ ಪ್ರೀತ್ ಹೆಸರು ಕೂಡ ಕೇಳಿಬಂದಿತ್ತು.

PC: Hamara Photo

34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14 ರಂದು ಮುಂಬೈನ ತನ್ನ ಅಪಾರ್ಟ್ಮೆಂಟ್‌ನಲ್ಲಿ  ಶವವಾಗಿ ಪತ್ತೆಯಾಗಿದ್ದರು. ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯಗಳು ನಡೆಸುತ್ತಿವೆ. ಅಸಹಜ ಸಾವು ಪ್ರಕರಣಕ್ಕೆ ಡ್ರಗ್ಸ್ ಕೇಸ್ ಕೂಡ ಸೇರ್ಪಡೆಯಾಗಿದೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...