Homeಮುಖಪುಟಡ್ರಗ್ ಕೇಸ್:‍ ನಟಿ ಶ್ರದ್ಧಾ‌ ಕಪೂರ್‌, ಸಾರಾ ಅಲಿ ಖಾನ್‌ಗೆ ಎನ್‌ಸಿ‌ಬಿ ಸಮನ್ಸ್ ಸಾಧ್ಯತೆ

ಡ್ರಗ್ ಕೇಸ್:‍ ನಟಿ ಶ್ರದ್ಧಾ‌ ಕಪೂರ್‌, ಸಾರಾ ಅಲಿ ಖಾನ್‌ಗೆ ಎನ್‌ಸಿ‌ಬಿ ಸಮನ್ಸ್ ಸಾಧ್ಯತೆ

ರಿಯಾ ಚಕ್ರವರ್ತಿಯ ಪ್ರಾಥಮಿಕ ತನಿಖೆಯ ಸಮಯದಲ್ಲಿ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಸೇರಿದಂತೆ ಇತರ ಕೆಲವು ನಟರ ಹೆಸರುಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಸಹಜ ಸಾವಿನ ತನಿಖೆ ಜೊತೆಗೆ ಡ್ರಗ್ಸ್ ಕೇಸ್ ಕೂಡ ಸೇರಿಕೊಂಡಿದ್ದು, ಈ ಸಂಬಂಧ ನಟಿ ಶ್ರದ್ಧಾ ಕಪೂರ್‌, ಸಾರಾ ಅಲಿ ಖಾನ್‌ರನ್ನು ಈ ವಾರ ವಿಚಾರಣೆಗೆ ಕರೆಯಬಹುದು ಎಂದು ಎನ್‌ಸಿಬಿ ಮೂಲಗಳು ತಿಳಿಸಿವೆ. ತನ್ನ ಗೆಳೆಯ ಸುಶಾಂತ್ ಸಿಂಗ್ ರಜಪೂತ್‌ಗೆ ಡ್ರಗ್ಸ್ ಒದಗಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟಿ ರಿಯಾ ಚಕ್ರವರ್ತಿಯನ್ನು ಪ್ರಶ್ನಿಸುವಾಗ ಅವರ ಇವರ ಹೆಸರುಗಳು ಕೇಳಿಬಂದಿವೆ ಎಂದು ವರದಿಯಾಗಿದೆ.

ನಟಿ ರಿಯಾ ಚಕ್ರವರ್ತಿಯ ಮೊಬೈಲ್ ಫೋನ್‌ನಿಂದ ಮರುಪಡೆಯಲಾದ ವಾಟ್ಸಾಪ್ ಸಂದೇಶದ ಆಧಾರದ ಮೇಲೆ ಫೆಡರಲ್ ಏಜೆನ್ಸಿ ಮೊದಲ ಪ್ರಕರಣ ನೋಂದಾಯಿಸಿತ್ತು. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಈ ನಟಿಯರಿಗೆ ಸಮನ್ಸ್ ನೀಡಬಹುದು ಎಂದು ಮೂಲಗಳು ತಿಳಿಸಿವೆ.

PC: Hindustan Times

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಇನ್ನು 59 ಗ್ರಾಂ ಗಾಂಜಾ ವಶಪಡಿಸಿಕೊಂಡ ಆಧಾರದ ಮೇಲೆ ಏಜೆನ್ಸಿ ಎರಡನೇ ಪ್ರಕರಣವನ್ನು ದಾಖಲಿಸಿದೆ. ಇದರಲ್ಲಿ ರಿಯಾ ಚಕ್ರವರ್ತಿ ಸೇರಿದಂತೆ 15ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ರಿಯಾ ಚಕ್ರವರ್ತಿಯಲ್ಲದೆ, ಈ ತಿಂಗಳ ಆರಂಭದಲ್ಲಿ ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ, ಸುಶಾಂತ್ ಸಿಂಗ್ ರಜಪೂತ್ ಅವರ ಇಬ್ಬರು ಉದ್ಯೋಗಿಗಳು ಮತ್ತು ಬಾಲಿವುಡ್ ಜೊತೆ ಸಂಬಂಧ ಹೊಂದಿರುವ ಡ್ರಗ್ಸ್ ಮಾರಾಟಗಾರರನ್ನು ಬಂಧಿಸಲಾಗಿದೆ. ರಿಯಾ ಚಕ್ರವರ್ತಿಗೆ ಸೆ.22ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಬೈಕುಲಾ ಜೈಲಿನಲ್ಲಿ ಇರಿಸಲಾಗಿದೆ.

“ರಿಯಾ ಚಕ್ರವರ್ತಿಯ ಮೊಬೈಲ್‌ನಿಂದ ಮರುಪಡೆಯಲಾದ ವಾಟ್ಸಾಪ್ ಸಂದೇಶಗಳ ಆಧಾರದ ಮೇಲೆ ನೋಂದಾಯಿಸಲಾದ ಮೊದಲ ಪ್ರಕರಣದ ಪ್ರಾಥಮಿಕ ತನಿಖೆಯ ಸಮಯದಲ್ಲಿ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಸೇರಿದಂತೆ ಇತರ ಕೆಲವು ನಟರ ಹೆಸರುಗಳು ಬಂದಿವೆ. ಇಬ್ಬರೂ ಈ ವಾರ ತನಿಖೆಗೆ ಬರಲು ಶೀಘ್ರದಲ್ಲೇ ಸಮನ್ಸ್ ನೀಡಲಾಗುವುದು  ಎಂದು ತನಿಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ನಟಿ ಶ್ರದ್ಧಾ ಕಪೂರ್,‌ ‍ಸುಶಾಂತ್‌ ಸಿಂಗ್ ರಜಪೂತ್ ಅವರ ಲೋನಾವ್ಲಾ ಫಾರ್ಮ್ ಹೌಸ್‌ನಲ್ಲಿ ನಡೆದ ಚಿಚ್ಚೋರೆ ಚಿತ್ರದ ಯಶಸ್ಸಿನ ಪಾಟಿಯಲ್ಲಿ ಭಾಗವಹಿಸಿದ್ದರು. ಪ್ರಕರಣದಲ್ಲಿ ನಟಿ ರಾಕುಲ್ ಪ್ರೀತ್ ಹೆಸರು ಕೂಡ ಕೇಳಿಬಂದಿತ್ತು.

PC: Hamara Photo

34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14 ರಂದು ಮುಂಬೈನ ತನ್ನ ಅಪಾರ್ಟ್ಮೆಂಟ್‌ನಲ್ಲಿ  ಶವವಾಗಿ ಪತ್ತೆಯಾಗಿದ್ದರು. ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯಗಳು ನಡೆಸುತ್ತಿವೆ. ಅಸಹಜ ಸಾವು ಪ್ರಕರಣಕ್ಕೆ ಡ್ರಗ್ಸ್ ಕೇಸ್ ಕೂಡ ಸೇರ್ಪಡೆಯಾಗಿದೆ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...